LATEST NEWS
200 ಅಡಿ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್; 30 ಕ್ಕೂ ಅಧಿಕ ಮಂದಿ ಸಾವು
ಮಂಗಳೂರು/ಉತ್ತರಾಖಂಡ: ಚಾಲಕನ ನಿಯಂತ್ರಣ ತಪ್ಪಿ ಮದುವೆ ದಿಬ್ಬಣದ ಬಸ್ಸೊಂದು 200 ಅಡಿ ಆಳದ ಕಂದಕಕ್ಕೆ ಬಿದ್ದು, 30 ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ಉತ್ತರಖಾಂಡ್ನ ಪೌರಿ ಜಿಲ್ಲೆಯಲ್ಲಿ ನಿನ್ನೆ (ಅ.4) ರಾತ್ರಿ ನಡೆದಿದೆ.
ಹರಿದ್ವಾರದ ಲಾಲ್ಧಾಂಗ್ನಿಂದ ಪೌರಿಯ ಬಿರೋನ್ಖಾಲ್ ಗ್ರಾಮಕ್ಕೆ ಮದುವೆ ಸಮಾರಂಭಕ್ಕೆ ಹೋಗುತ್ತಿದ್ದಾಗ, ಸುಮಾರು 8 ಗಂಟೆಯ ಸುಮಾರಿಗೆ ಸಿಮಂಡಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಕಂದಕಕ್ಕೆ ಬಿದ್ದಿದೆ. ಸುಮಾರು 40 ರಿಂದ 50 ಮಂದಿ ಇದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ರಕ್ಷಣಾ ತಂಡ ಧಾವಿಸಿದ್ದು, 30 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.
ಮದುಮಗಳ ಮನೆಯಿಂದ 2 ಕಿ.ಮೀ ಅಂತರದಲ್ಲಿ ಅಪಘಾತ:
ಮಧುಮಗಳ ಮನೆಯಿಂದ 2 ಕಿ.ಮೀ ಅಂತರದಲ್ಲಿ ಈ ಘಟನೆ ನಡೆದಿದ್ದು, ವಿಚಾರ ಗೊತ್ತಾಗುತ್ತಿದ್ದಂತೆ. ಅಕ್ಕಪಕ್ಕದ ಜನರು ರಕ್ಷಣೆಗಾಗಿ ಧಾವಿಸಿದ್ದಾರೆ. ಅಲ್ಲದೆ ಮಾಹಿತಿ ಪಡೆದ ಪೊಲೀಸರು ಮತ್ತು ಎಸ್ಡಿಆರ್ಎಫ್ ತಂಡವು ಸ್ಥಳಕ್ಕೆ ಬಂದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಪೌರಿ ಜಿಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
LATEST NEWS
ಮ್ಯಾನೇಜರ್ಗೆ ವಂಚನೆ; ಲಕ್ಷಾಂತರ ನಗದು ಸಹಿತ ವೈಟರ್ ಪರಾರಿ
ಮಣಿಪಾಲ: ಹೊಟೇಲ್ ಮ್ಯಾನೇಜರ್ಗೆ ವೈಟರ್ ವಂಚಿಸಿ ಲಕ್ಷಾಂತರ ನಗದಿನೊಂದಿಗೆ ಪರಾರಿಯಾದ ಘಟನೆ ಮಣಿಪಾಲದ ಈಶ್ವರನಗರ ಹೊಟೇಲ್ನಲ್ಲಿ ನಡೆದಿದೆ.
ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿರುವ ಗಿರೀಶ್ ವಂಚನೆಗೊಳಗಾದವರು.
ಹೊಟೇಲ್ನಲ್ಲಿ ವೈಟರ್ ಆಗಿ ಕೆಲಸ ಮಾಡಿಕೊಂಡಿದ್ದ ಜಯಮೋಹನ್ ಸೊಮೇಶ್ ಎಂಬಾತ ಗಿರೀಶ್ ಅವರೊಂದಿಗೆ ವಾಸವಾಗಿದ್ದನು. ಸೆ.29 ರಂದು ಗಿರೀಶ್ ಅವರು ಕೆಲಸ ಮುಗಿಸಿ ರೂಮಿಗೆ ಬಂದು 26,650 ರೂ. ನಗದು ಹಾಗೂ 10,000 ರೂ. ಬೆಲೆಬಾಳುವ ವಿವೋ ವೈ 18 ಮಾದರಿಯ ಮೊಬೈಲ್ ಫೋನ್ ಅನ್ನು ತನ್ನ ರೂಮಿನ ಡ್ರಾವರಲ್ಲಿಟ್ಟು ಮಲಗಿದ್ದರು.
ಮರುದಿನ ಬೆಳಿದ್ದೆ ನೋಡಿದಾಗ ಜಯಮೋಹನ್ ಸ್ಥಳದಲ್ಲಿರಲಿಲ್ಲ. ಡ್ರಾವರ್ನಲ್ಲಿ ಇಟ್ಟಿದ್ದ ನಗದು, ಮೊಬೈಲ್ ಹಾಗೂ ಹೊಟೇಲ್ ಹೆಸರಿನಲ್ಲಿರುವ ಎಚ್ಡಿಎಫ್ಸಿ ಖಾತೆಯಿಂದ 81,000 ರೂ. ಗಳನ್ನು ಗೂಗಲ್ ಪೇ ಮೂಲಕ ಆರೋಪಿ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾದ್ದು, ತನಿಖೆ ನಡೆಸುತ್ತಿದ್ದಾರೆ.
BIG BOSS
ಮಹಿಳೆಯರ ಒಳ ಉಡುಪಿನ ಬಗ್ಗೆ ಲಾಯರ್ ಜಗದೀಶ್ ಮಾತು.. ಏನಿದು ವಿವಾದ?
ಲಾಯರ್ ಜಗದೀಶ್ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಸದ್ಯ ಮಹಿಳೆಯರ ಒಳಉಡುಪಿನ ಬಗ್ಗೆ ಮಾತನಾಡಿ ವಿವಾದ ಸೃಷ್ಟಿ ಮಾಡಿದ್ದಾರೆ. ಈ ವಿಚಾರದ ಬಗ್ಗೆ ಸಖತ್ ಚರ್ಚೆ ಆಗುತ್ತಿದೆ.
ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕೆ ಅವಕಾಶ ನೀಡಲಾಗಿತ್ತು. ಇದರಲ್ಲಿ ಸ್ವರ್ಗ ನಿವಾಸಿಗಳು ಮಾತ್ರ ಭಾಗಿ ಆಗಲು ಅವಕಾಶ ಇತ್ತು. 10 ಮಂದಿಯಲ್ಲಿ ಆರು ಜನರು ಮಾತ್ರ ಕ್ಯಾಪ್ಟನ್ಸಿ ಟಾಸ್ಕಲ್ಲಿ ಇರಬಹುದು ಎಂದು ಬಿಗ್ ಬಾಸ್ ಆದೇಶ ಕೊಟ್ಟರು. ಇಷ್ಟೇ ಅಲ್ಲ, ಆರು ಮಂದಿಯನ್ನು ಸ್ವರ್ಗ ನಿವಾಸಿಗಳ ಒಮ್ಮತದ ನಿರ್ಧಾರದಿಂದ ಆಯ್ಕೆ ಮಾಡಬೇಕು ಎಂದು ಬಿಗ್ ಬಾಸ್ ಆದೇಶ ನೀಡಿದರು.
ವೋಟಿಂಗ್ ಆಧಾರದ ಮೇಲೆ ಸ್ಪರ್ಧಿಗಳನ್ನು ಆಯ್ಕೆ ಮಾಡೋಣ ಎನ್ನುವ ನಿರ್ಧಾರಕ್ಕೆ ಎಲ್ಲರೂ ಬಂದರು. ಇದು ಜಗದೀಶ್ ಅವರ ಕೋಪಕ್ಕೆ ಕಾರಣ ಆಯಿತು. ಅವರು ನೇರವಾಗಿ ಸ್ಪರ್ಧಿಗಳ ವಿರುದ್ಧ ಹರಿಹಾಯ್ದರು. ಅದರಲ್ಲೂ ಈ ಐಡಿಯಾ ನೀಡಿದ ಉಗ್ರಂ ಮಂಜು ವಿರುದ್ಧ ಸಿಡಿದೆದ್ದರು. ಮಾತು ಮಿತಿ ಮೀರುತ್ತಿತ್ತು. ‘ನೀನು ಸಿನಿಮಾದಲ್ಲಿ ಮಾತ್ರ ಉಗ್ರಂ ನಿಜ ಜೀವನದಲ್ಲಿ ನಾನು ನಿನಗೆ ಉಗ್ರಂ ತೋರಿಸುತ್ತೇನೆ’ ಎಂದು ಜಗದೀಶ್ ಹೇಳಲು ಆರಂಭಿಸಿದರು.
ಇದಕ್ಕೆ ಮಂಜು ಹೆಚ್ಚಿನ ಉತ್ತರ ಕೊಡೋಕೆ ಹೋಗಿಲ್ಲ.’ಬೋ..’ `ಬೋ..’ ಎಂದಷ್ಟೇ ಹೇಳಿದರು.’ಬೋ ಪ್ಯಾಂಟೀಸ್ ಎಲ್ಲ ನೋಡಿದೀನಿ.ನನ್ನ ಹೆಂಡತಿ ಹಾಕೋದು ಇದನ್ನೇ’ ಎಂದು ಜಗದೀಶ್ ಹೇಳಿದ್ದಾರೆ. ಇದು ಮನೆಯವರ ಅಸಮಾಧಾನಕ್ಕೆ ಕಾರಣ ಆಗಿದೆ. ಈ ವೇಳೆ ನಿಜವಗಾಲೂ ಇನ್ಸ್ಕ್ಯೂರ್ ಫೀಲ್ ಆಗ್ತಿದೆ ಎಂದು ಭವ್ಯಾ ಗೌಡ ಹೇಳಿದ್ದಾರೆ.
LATEST NEWS
ಗೆಳೆಯನ ಕತ್ತು ಹಿಸುಕಿ ಕೊ*ಲೆ; ಇಬ್ಬರು ಅರೆಸ್ಟ್
ಬೆಂಗಳೂರು : ಕೊಡಗಿನ ಕುಶಾಲನಗರದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಿನ್ನೆ(ಅ.4) ನಡೆದಿತ್ತು. ಸ್ನೇಹಿತರ ನಡುವೆ ನಡೆದಿದ್ದ ಹಣಕಾಸು ವ್ಯವಹಾರದ ಗಲಾಟೆ ಕೊ*ಲೆಯಲ್ಲಿ ಅಂತ್ಯವಾಗಿತ್ತು. ಇದೀಗ ಬೆಂಗಳೂರಿನಲ್ಲಿ ಪ್ರಕರಣವೊಂದು ವರದಿಯಾಗಿದ್ದು, ಕುಡಿದು ಬಂದು ಜಗಳಕ್ಕಿಳಿದಿದ್ದ ಯುವಕನೊಬ್ಬನನ್ನು ಆತನ ಸ್ನೇಹಿತರೇ ಕತ್ತು ಹಿಸುಕಿ ಹ*ತ್ಯೆ ಮಾಡಿದ್ದಾರೆ. ಮೈಕೋಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುಜಿತ್ (22) ಹ*ತ್ಯೆಯಾದ ಯುವಕ. ಈತ ಬಿಹಾರಿ ಮೂಲದವನಾಗಿದ್ದು, ಈ ಹಿಂದೆ ಬಿಳೇಕಲ್ಲಹಳ್ಳಿಯಲ್ಲಿರುವ ಪ್ಲೈವುಡ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಕೆಲಸದ ವೇಳೆ ಮದ್ಯಪಾನ ಮಾಡಿ ಬರುತ್ತಿದ್ದರಿಂದ ಮಾಲಕರು ಆತನನ್ನು ಕೆಲಸದಿಂದ ತೆಗೆದಿದ್ದರು. ಹಾಗಾಗಿ ಸುಜಿತ್ ಬೇರೆ ಕಡೆ ಕೆಲಸ ಮಾಡುತ್ತಿದ್ದ.
ಕೊ*ಲೆಯಲ್ಲಿ ಅಂತ್ಯವಾದ ಜಗಳ :
ಹ*ತ್ಯೆಯಾದ ದಿನ ಈ ಪ್ಲೈವುಡ್ ಅಂಗಡಿಯಲ್ಲಿ ನಾಲ್ವರು ಕೆಲಸಗಾರರು ಮರಗೆಲಸ ಮಾಡುತ್ತಿದ್ದರು. ರಾತ್ರಿ 8 ಗಂಟೆ ಸುಮಾರಿನಲ್ಲಿ ಇಬ್ಬರು ಕೆಲಸಗಾರರು ಹೊರಗೆ ಹೋಗಿದ್ದರು. ಆ ಸಂದರ್ಭದಲ್ಲಿ ಸುಜಿತ್ ಪ್ಲೈವುಡ್ ಅಂಗಡಿ ಬಳಿ ಕುಡಿದು ಬಂದು ಇಬ್ಬರು ಕೆಲಸಗಾರರ (ಮಾಜಿ ಸಹೋದ್ಯೋಗಿಗಳು, ಸ್ನೇಹಿತರು) ಜೊತೆ ಜಗಳಕ್ಕಿಳಿದಿದ್ದಾನೆ. ಜಗಳ ವಿಕೋಪಕ್ಕೆ ಹೋದಾಗ ರಿಪೀಸ್ ಪಟ್ಟಿಯಿಂದ ಕೆಲಸಗಾರರು ಸುಜಿತ್ ತಲೆಗೆ ಹೊಡೆದು, ಕುತ್ತಿಗೆ ಹಿಸುಕಿದ್ದು, ಉಸಿರುಗಟ್ಟಿ ಸುಜಿತ್ ಮೃ*ತಪಟ್ಟಿದ್ದಾನೆ.
ಇದರಿಂದ ಗಾಬರಿಯಾದ ಇಬ್ಬರೂ ಕೆಲಸಗಾರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಕೆಲ ಸಮಯದ ಬಳಿಕ ಹೊರಗೆ ಹೋಗಿದ್ದ ಇನ್ನಿಬ್ಬರು ಕೆಲಸಗಾರರು ಅಂಗಡಿಗೆ ಬಂದಾಗ ಸುಜಿತ್ ಕೊ*ಲೆಯಾಗಿರುವುದು ಗಮನಿಸಿ, ಮಾಲಕರಿಗೆ ತಿಳಿಸಿದ್ದಾರೆ.
ಇದನ್ನೂ ಓದಿ : BBK11: ಧನರಾಜ್ ಆಚಾರ್ಯ ಡೈಲಾಗ್ಗೆ ಬಿಗ್ಬಾಸ್ ಮನೆಮಂದಿ ಫುಲ್ ಖುಷ್
ಬಳಿಕ ಮಾಲಕರು ಪೊಲೀಸರಿಗೆ ತಿಳಿಸಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃ*ತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಆರೋಪಿಗಳನ್ನು ಬಂಧಿಸಲಾಗಿದೆ.
- BIG BOSS5 days ago
BBK11 ವೇದಿಕೆಗೆ ಬರುತ್ತಿದ್ದಂತೆ ರೀಲ್ಸ್ ಸ್ಟಾರ್ ಮೇಲೆ ಕೋಪಗೊಂಡ ಕಿಚ್ಚ: ಇಂತವರನ್ನ ಏಕೆ ಕರೆಸಿದ್ರಿ ಎಂದು ಗರಂ?
- BIG BOSS5 days ago
ಭ್ರಷ್ಟರ ವಿರುದ್ಧ ಗುಡುಗಿದ ಸ್ಪರ್ಧಿ ಲಾಯರ್ ಜಗದೀಶ್ಗೆ ಕಿಚ್ಚ ವಾರ್ನಿಂಗ್..!
- LATEST NEWS4 days ago
Watch Video: ಕೋಚಿಂಗ್ ಸೆಂಟರ್ನಲ್ಲಿ ವಿದ್ಯಾರ್ಥಿನಿಯೊಂದಿಗೆ ಬಯಾಲಜಿ ಶಿಕ್ಷಕನ ರೊಮ್ಯಾನ್ಸ್
- BIG BOSS5 days ago
ಚೈತ್ರಾ ಕುಂದಾಪುರಗೆ ಮೊದಲ ದಿನವೇ ಹೊಸ ಬಿರುದು ಕೊಟ್ಟ ಲಾಯರ್ ಜಗದೀಶ್