DAKSHINA KANNADA
‘ಕೈ’ ಟಿಕೇಟ್ ಸಿಕ್ಕ ಪದ್ಮರಾಜ್ ಅವರು ಹೇಳಿದ್ದೇನು ..?
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಗೆ ಕಾಂಗ್ರೆಸ್ ಅಭ್ಯರ್ಥಿ ಯಾರು ಅನ್ನೋದನ್ನ ಹೈ ಕಮಾಂಡ್ ಇನ್ನೂ ಘೋಷಣೆ ಮಾಡಿಲ್ಲ. ಆದ್ರೆ ಲಿಸ್ಟ್ನಲ್ಲಿ ಬಿಲ್ಲವ ಸಮಾಜದ ಪ್ರಭಾವಿ ನಾಯಕ ಪದ್ಮರಾಜ್ ಅವರ ಹೆಸರು ಇರೋದು ಕನ್ಫರ್ಮ್ ಆಗಿದೆ. ಹೀಗಾಗಿ ಅಧಿಕೃತ ಘೋಷಣೆಗೂ ಮೊದಲೇ ಪದ್ಮರಾಜ್ ಅವರು ನಾರಾಯಣ ಗುರುಗಳ ಆಶೀರ್ವಾದ ಪಡೆಯಲು ಕುದ್ರೋಳಿ ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಬಳಿಕ ಮಾದ್ಯಮಗಳ ಜೊತೆ ಮಾತನಾಡಿ ತನ್ನ ಕನಸು ಏನಿದೆ ಅನ್ನೋದನ್ನು ಹಂಚಿಕೊಂಡಿದ್ದಾರೆ.
ಪದ್ಮರಾಜ್ ಹೇಳಿದ ವಿಚಾರಗಳು ಏನು..?
ದೇಶದ ಜನರ ಭಾವನೆಗೆ ಬೆಲೆ ಕೊಡುವ ಪಕ್ಷ ಇದ್ರೆ ಅದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ. ಈ ಬಾರಿ ನನಗೆ ಟಿಕೇಟ್ ಸಿಗುತ್ತದೆ ಅನ್ನೋ ನಿರೀಕ್ಷೆ ಇಟ್ಟುಕೊಂಡಿದ್ದೆ. ನನ್ನ ನಿರೀಕ್ಷೆಯಂತೆ ಕಾಂಗ್ರೆಸ್ ಪಕ್ಷ ನನಗೆ ಅವಕಾಶ ಕೊಟ್ಟಿದೆ ಎಂದು ಹೇಳಿದ್ದಾರೆ. ನಾರಾಯಣ ಗುರುಗಳ ತತ್ವ ಆಧರ್ಶದಂತೆ ನಡೆಯುವ ನನಗೆ, ಮಾನ್ಯ ಜನಾರ್ಧನ ಪೂಜಾರಿಗಳು ಮಾರ್ಗದರ್ಶಕರು. ನಾರಾಯಣ ಗುರುಗಳ ತತ್ವ ಆದರ್ಶದಂತೆ ಸಮಾಜದ ಶೋಷಿತರ , ಬಡವರ , ದೀನ ದುರ್ಬಲರ ಸಹಾಯ ಮಾಡುವುದು ನನ್ನ ಆಶಯ. ಜನಾರ್ಧನ ಪೂಜಾರಿಗಳ ಕನಸಿನ ಮಂಗಳೂರನ್ನು ಮತ್ತೆ ನಿರ್ಮಾಣ ಮಾಡಿ ಹಿಂದಿನಂತೆ ಭಾವೈಕ್ಯತೆಯನ್ನು ತರುವುದು ನನ್ನ ಗುರಿ ಎಂದು ಹೇಳಿದ್ದಾರೆ.
ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಕಳೆದ 27 ವರ್ಷಗಳಿಂದ ಸೇವೆ ಮಾಡಿಕೊಂಡು ಬಂದಿದ್ದೇನೆ. ಹೀಗಾಗಿ ಜನರ ಪ್ರೀತಿ ವಿಶ್ವಾಸ ಗಳಿಸಿಕೊಂಡಿದ್ದೇನೆ ಅನ್ನೋ ವಿಶ್ವಾಸ ನನಗೆ ಇದೆ. ಇಂದು ದೇವರಲ್ಲೂ ಕೂಡಾ ಜನರ ಪ್ರೀತಿ ವಿಶ್ವಾಸವನ್ನು ಹಾಗೇ ಉಳಿಸಿಕೊಡು ಅಂತ ಪ್ರಾರ್ಥನೆ ಮಾಡಿದ್ದೇನೆ. ಈಗಾಗಲೆ ಸಾಕಷ್ಟು ಸಾಮಾಜಿಕವಾಗಿ ಹಾಘೂ ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಮಾಡಿದ್ದೇನೆ. ರಾಜಕೀಯದಲ್ಲಿ ಅವಕಾಶ ಸಿಕ್ಕರೆ ಅದನ್ನು ಇನ್ನಷ್ಟು ವಿಸ್ತಾರ ಮಾಡುವ ಕನಸು ಇದೆ ಎಂದು ಹೇಳಿದ್ದಾರೆ. ಜಿಲ್ಲೆಯಲ್ಲಿ ಜಾತಿ ಧರ್ಮಗಳ ನಡುವೆ ಕಂದಕ ಸೃಷ್ಟಿಸುವಂತಹ ಕೆಲಸಗಳು ನಡೆದಿದೆ. ಆದ್ರೆ ಇಲ್ಲಿ ಯಾರೂ ಕೂಡಾ ಇಂತಹದೇ ಜಾತಿ,ಧರ್ಮದಲ್ಲಿ ಹುಟ್ಟಬೇಕು ಅಂತ ಅರ್ಜಿ ಹಾಕಿ ಹುಟ್ಟಿಲ್ಲ. ಹಾಗಾಗಿ ಜಾತಿ ಧರ್ಮಗಳ ನಡುವೆ ಇರುವ ಕಂದಕವನ್ನು ತೆಗೆದು ಹಾಕಬೇಕು. ಶಾಂತಿ ನೆಮ್ಮದಿಯ ಜಿಲ್ಲೆ ನಮ್ಮದಾಗಬೇಕು ಅನ್ನೋ ಕನಸು ಇರುವುದಾಗಿ ಹೇಳಿದ್ದಾರೆ.
ಚುನಾವಣೆ ಅನ್ನೋದು ಪ್ರಜಾಪ್ರಭುತ್ವದ ಹಬ್ಬ . ಯಾರಿಗೂ ಪ್ರಚೋದನೆ ಮಾಡುವುದು ದೂಷಿಸುವುದು ಮಾಡಬಾರದು. ತುಳುನಾಡಿಗೆ ಬುದ್ದಿವಂತರ ಜಿಲ್ಲೆ ಅಂತ ಹೆಸರಿದೆ. ಎಲ್ಲರಿಗೂ ದೈವ ದೇವರುಗಳ ಆಶೀರ್ವಾದ ಇದೆ. ಎಲ್ಲರಿಗೂ ದೈವ ದೇವರುಗಳು ಒಳ್ಳೆ ಬುದ್ದಿ ಕೊಟ್ಟಿದ್ದಾರೆ. ಅದನ್ನು ನಾವು ಬಳಸಿಕೊಂಡು ಯಾರೋ ಹೇಳಿದ ಮಾತಿಗೆ ಪ್ರಚೋದನೆಗೆ ಒಳಗಾಗದೆ ನಮ್ಮ ಸಂಸ್ಕೃತಿಗೆ ಪೆಟ್ಟುಕೊಡುವುದು ಬೇಡ. ದೇಶ ಕಂಡ ಪ್ರಾಮಾಣಿಕ ಹಾಗೂ ಪ್ರಬುದ್ಧ ರಾಜಕಾರಣಿ ಜನಾರ್ಧನ ಪೂಜಾರಿ ಅವರ ಕನಸುಕೂಡಾ ಇದೆ ಆಗಿತ್ತು. ಅವರ ಆಸೆಯನ್ನು ಈಡೇರಿಸುವ ಕೆಲಸ ಮಾಡುತ್ತೇನೆ ಎಂದು ಪದ್ಮರಾಜ್ ಮಾದ್ಯಮಗಳ ಜೊತೆ ಮನ ಬಿಚ್ಚಿ ಮಾತನಾಡಿದ್ದಾರೆ.
DAKSHINA KANNADA
ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವು
ತೆಲಂಗಾಣ: ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವನ್ನಪ್ಪಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ಶುಕ್ರವಾರ ನಡೆದಿದೆ.
ಅಂಜಲಿ ಕಾರ್ತಿಕಾ (9) ಮೃ*ತ ಬಾಲಕಿ. ಮೊಬೈಲ್ನಲ್ಲಿ ಆಟವಾಡುತ್ತಿರುವ ವೇಳೆ ಚಾರ್ಜ್ ಖಾಲಿಯಾಗಿದ್ದು, ಅಂಜಲಿ ಮೊಬೈಲ್ ಚಾರ್ಜ್ ಮಾಡಲು ಹೋಗಿದ್ದಾಳೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಬಾಲಕಿ ಕುಸಿದು ಬಿದ್ದಿದ್ದಾಳೆ.
ಕುಸಿದು ಬಿದ್ದು ಒದ್ದಾಡುತ್ತಿರುವ ಬಾಲಕಿಯನ್ನು ಗಮನಿಸಿದ ಆಕೆಯ ಪೋಷಕರು ತಕ್ಷಣ ಗ್ರಾಮದ ಖಾಸಗಿ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಅದಾಗಲೇ ಮೃ*ತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಬಾಲಕಿ ಆಟವಾಡುತ್ತಿದ್ದಂತೆ ಒದ್ದೆ ಕೈಯಲ್ಲಿ ಹೋಗಿ ವಿದ್ಯುತ್ ಸ್ಪರ್ಶಿಸಿರುವುದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಕೆಲ ಹೊತ್ತಿನ ಹಿಂದೆ ಮನೆಯಲ್ಲಿ ಕುಣಿದು ಕುಪ್ಪಳಿಸುತ್ತಾ ಆಟವಾಡುತ್ತಿದ್ದ ಬಾಲಕಿ ಏಕಾಏಕಿ ಪ್ರಾ*ಣ ಕಳೆದುಕೊಂಡಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಮೃ*ತ ಬಾಲಕಿ ಅಂಜಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ. ತಂದೆ ರಾಮಕೃಷ್ಣ ದೂರಿನ ಮೇರೆಗೆ ಎಸ್ಎಸ್ಐ ನಾಗುಲ್ಮೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
DAKSHINA KANNADA
ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ
ಚಾರ್ಮಾಡಿ: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಆದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಚಾರ್ಮಾಡಿಘಾಟ್ನ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್ನಿಂದ ಕೊಟ್ಟಿಗೆಹಾರದವರೆಗೂ ವಾಹನಗಳು ನಿಂತಲ್ಲೇ ನಿಂತಿದ್ದವು. ಬಳಿಕ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯ್ತು.
ಅತ್ತ ಮಂಗಳೂರಿಗೆ ತೆರಳುವವರನ್ನು ಪೊಲೀಸರು ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲೇ ವಾಹನಗಳನ್ನು ತಡೆದು ವಾಪಸ್ ಕಳಿಸಿದ್ದಾರೆ. ಅತ್ತ ಉಜಿರೆ ಬಳಿಯೂ ಚಾರ್ಮಾಡಿ ಘಾಟ್ ಪ್ರವೇಶ ನಿರ್ಬಂಧಿಸಲಾಗಿತ್ತು.
DAKSHINA KANNADA
ಅರ್ಜುನ್ ಪತ್ತೆಗೆ ಸೇನೆಗೆ ಸಹಾಯ..! ಶಿರೂರಿಗೆ ಈಶ್ವರ ಮಲ್ಪೆಗೆ ಬುಲಾವ್..!
ಅಂಕೋಲ: ಶಿರೂರು ಗುಡ್ಡ ಕುಸಿತ ಪ್ರಕರಣ ಸಂಭವಿಸಿ ಇಂದಿಗೆ 12 ದಿನವಾಗಿದೆ. ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನದಿಯ ದಡದಲ್ಲಿ ಈಗಾಗಲೇ ಹುಡುಕಾಟ ಮುಗಿದಿದ್ದು, ಲಾರಿ ಮತ್ತು ಚಾಲಕ ಅರ್ಜುನ್ ನದಿಯೊಳಗೆ ಇದ್ದಾರೆ ಎಂದು ಹೇಳಲಾಗುತ್ತಿದೆ. ಅತ್ತ ಗೋಕಾಕ್ ನಿಂದ ಬಂದ ಪೋಕ್ಲೈನ್ ತನ್ನ ಕೆಲಸ ಮುಗಿಸಿದ್ದು, ವಾಪಾಸ್ ಆಗುತ್ತಿದೆ.
ಇಂದು ಅರ್ಜುನ್ಗಾಗಿ ಮುಳುಗು ತಜ್ಞರಿಂದ ಹುಡುಕಾಟ ನಡೆಯಲಿದೆ. ಈಶ್ವರ್ ಮಲ್ಪೆ ತಂಡ ಇಂದು ಶಿರೂರಿಗೆ ಬರಲಿದ್ದು, ಅರ್ಜುನ್ಗಾಗಿ ಹುಡುಕಾಡಲಿದ್ದಾರೆ. ಜಿಲ್ಲಾಡಳಿತದ ಮನವಿ ಮೇರೆಗೆ ಮುಳುಗು ತಜ್ಞರ ತಂಡ ಶಿರೂರಿಗೆ ಆಗಮಿಸಲಿದ್ದಾರೆ.
ಗಂಗಾವಳಿ ನದಿಯಲ್ಲಿ ನೀರಿನ ವೇಗ ಹೆಚ್ಚಿರುವ ಹಿನ್ನಲೆಯಲ್ಲಿ, ನೀರಿನೊಳಗೆ ಹೋಗಲು ನೌಕಾದಳದ ಮುಳುಗು ತಜ್ಞರು ಹಿಂದೇಟು ಹಾಕಿದ್ದಾರೆ. ಈ ವೇಳೆ ಶಾಸಕ ಸತೀಶ್ ಸೈಲ್ ಸ್ಥಳೀಯ ಮೀನುಗಾರ ಹಾಗೂ ಈಶ್ವರ್ ಮಲ್ಪೆ ಸಹಾಯ ಕೇಳಿದ್ದಾರೆ.
ಇಂದು ಅರ್ಜುನ್ ಮತ್ತು ಲಾರಿ ಪತ್ತೆಯಾದರೆ ನದಿಯ ಕೆಳಗೆ ಸುಮಾರು 20 ಅಡಿ ಆಳದಲ್ಲಿರುವ ಲಾರಿ ಮೇಲಕ್ಕೆ ಎತ್ತಲು ಪ್ರಯತ್ನ ನಡೆಯಲಿದೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ
- DAKSHINA KANNADA6 days ago
PUTTUR : ನಾಪತ್ತೆಯಾಗಿದ್ದ ಯುವಕನ ಮೃ*ತದೇಹ ಗೌರಿ ಹೊಳೆಯಲ್ಲಿ ಪತ್ತೆ