DAKSHINA KANNADA
‘ಕೈ’ ಟಿಕೇಟ್ ಸಿಕ್ಕ ಪದ್ಮರಾಜ್ ಅವರು ಹೇಳಿದ್ದೇನು ..?
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಗೆ ಕಾಂಗ್ರೆಸ್ ಅಭ್ಯರ್ಥಿ ಯಾರು ಅನ್ನೋದನ್ನ ಹೈ ಕಮಾಂಡ್ ಇನ್ನೂ ಘೋಷಣೆ ಮಾಡಿಲ್ಲ. ಆದ್ರೆ ಲಿಸ್ಟ್ನಲ್ಲಿ ಬಿಲ್ಲವ ಸಮಾಜದ ಪ್ರಭಾವಿ ನಾಯಕ ಪದ್ಮರಾಜ್ ಅವರ ಹೆಸರು ಇರೋದು ಕನ್ಫರ್ಮ್ ಆಗಿದೆ. ಹೀಗಾಗಿ ಅಧಿಕೃತ ಘೋಷಣೆಗೂ ಮೊದಲೇ ಪದ್ಮರಾಜ್ ಅವರು ನಾರಾಯಣ ಗುರುಗಳ ಆಶೀರ್ವಾದ ಪಡೆಯಲು ಕುದ್ರೋಳಿ ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಬಳಿಕ ಮಾದ್ಯಮಗಳ ಜೊತೆ ಮಾತನಾಡಿ ತನ್ನ ಕನಸು ಏನಿದೆ ಅನ್ನೋದನ್ನು ಹಂಚಿಕೊಂಡಿದ್ದಾರೆ.
ಪದ್ಮರಾಜ್ ಹೇಳಿದ ವಿಚಾರಗಳು ಏನು..?
ದೇಶದ ಜನರ ಭಾವನೆಗೆ ಬೆಲೆ ಕೊಡುವ ಪಕ್ಷ ಇದ್ರೆ ಅದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ. ಈ ಬಾರಿ ನನಗೆ ಟಿಕೇಟ್ ಸಿಗುತ್ತದೆ ಅನ್ನೋ ನಿರೀಕ್ಷೆ ಇಟ್ಟುಕೊಂಡಿದ್ದೆ. ನನ್ನ ನಿರೀಕ್ಷೆಯಂತೆ ಕಾಂಗ್ರೆಸ್ ಪಕ್ಷ ನನಗೆ ಅವಕಾಶ ಕೊಟ್ಟಿದೆ ಎಂದು ಹೇಳಿದ್ದಾರೆ. ನಾರಾಯಣ ಗುರುಗಳ ತತ್ವ ಆಧರ್ಶದಂತೆ ನಡೆಯುವ ನನಗೆ, ಮಾನ್ಯ ಜನಾರ್ಧನ ಪೂಜಾರಿಗಳು ಮಾರ್ಗದರ್ಶಕರು. ನಾರಾಯಣ ಗುರುಗಳ ತತ್ವ ಆದರ್ಶದಂತೆ ಸಮಾಜದ ಶೋಷಿತರ , ಬಡವರ , ದೀನ ದುರ್ಬಲರ ಸಹಾಯ ಮಾಡುವುದು ನನ್ನ ಆಶಯ. ಜನಾರ್ಧನ ಪೂಜಾರಿಗಳ ಕನಸಿನ ಮಂಗಳೂರನ್ನು ಮತ್ತೆ ನಿರ್ಮಾಣ ಮಾಡಿ ಹಿಂದಿನಂತೆ ಭಾವೈಕ್ಯತೆಯನ್ನು ತರುವುದು ನನ್ನ ಗುರಿ ಎಂದು ಹೇಳಿದ್ದಾರೆ.
ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಕಳೆದ 27 ವರ್ಷಗಳಿಂದ ಸೇವೆ ಮಾಡಿಕೊಂಡು ಬಂದಿದ್ದೇನೆ. ಹೀಗಾಗಿ ಜನರ ಪ್ರೀತಿ ವಿಶ್ವಾಸ ಗಳಿಸಿಕೊಂಡಿದ್ದೇನೆ ಅನ್ನೋ ವಿಶ್ವಾಸ ನನಗೆ ಇದೆ. ಇಂದು ದೇವರಲ್ಲೂ ಕೂಡಾ ಜನರ ಪ್ರೀತಿ ವಿಶ್ವಾಸವನ್ನು ಹಾಗೇ ಉಳಿಸಿಕೊಡು ಅಂತ ಪ್ರಾರ್ಥನೆ ಮಾಡಿದ್ದೇನೆ. ಈಗಾಗಲೆ ಸಾಕಷ್ಟು ಸಾಮಾಜಿಕವಾಗಿ ಹಾಘೂ ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಮಾಡಿದ್ದೇನೆ. ರಾಜಕೀಯದಲ್ಲಿ ಅವಕಾಶ ಸಿಕ್ಕರೆ ಅದನ್ನು ಇನ್ನಷ್ಟು ವಿಸ್ತಾರ ಮಾಡುವ ಕನಸು ಇದೆ ಎಂದು ಹೇಳಿದ್ದಾರೆ. ಜಿಲ್ಲೆಯಲ್ಲಿ ಜಾತಿ ಧರ್ಮಗಳ ನಡುವೆ ಕಂದಕ ಸೃಷ್ಟಿಸುವಂತಹ ಕೆಲಸಗಳು ನಡೆದಿದೆ. ಆದ್ರೆ ಇಲ್ಲಿ ಯಾರೂ ಕೂಡಾ ಇಂತಹದೇ ಜಾತಿ,ಧರ್ಮದಲ್ಲಿ ಹುಟ್ಟಬೇಕು ಅಂತ ಅರ್ಜಿ ಹಾಕಿ ಹುಟ್ಟಿಲ್ಲ. ಹಾಗಾಗಿ ಜಾತಿ ಧರ್ಮಗಳ ನಡುವೆ ಇರುವ ಕಂದಕವನ್ನು ತೆಗೆದು ಹಾಕಬೇಕು. ಶಾಂತಿ ನೆಮ್ಮದಿಯ ಜಿಲ್ಲೆ ನಮ್ಮದಾಗಬೇಕು ಅನ್ನೋ ಕನಸು ಇರುವುದಾಗಿ ಹೇಳಿದ್ದಾರೆ.
ಚುನಾವಣೆ ಅನ್ನೋದು ಪ್ರಜಾಪ್ರಭುತ್ವದ ಹಬ್ಬ . ಯಾರಿಗೂ ಪ್ರಚೋದನೆ ಮಾಡುವುದು ದೂಷಿಸುವುದು ಮಾಡಬಾರದು. ತುಳುನಾಡಿಗೆ ಬುದ್ದಿವಂತರ ಜಿಲ್ಲೆ ಅಂತ ಹೆಸರಿದೆ. ಎಲ್ಲರಿಗೂ ದೈವ ದೇವರುಗಳ ಆಶೀರ್ವಾದ ಇದೆ. ಎಲ್ಲರಿಗೂ ದೈವ ದೇವರುಗಳು ಒಳ್ಳೆ ಬುದ್ದಿ ಕೊಟ್ಟಿದ್ದಾರೆ. ಅದನ್ನು ನಾವು ಬಳಸಿಕೊಂಡು ಯಾರೋ ಹೇಳಿದ ಮಾತಿಗೆ ಪ್ರಚೋದನೆಗೆ ಒಳಗಾಗದೆ ನಮ್ಮ ಸಂಸ್ಕೃತಿಗೆ ಪೆಟ್ಟುಕೊಡುವುದು ಬೇಡ. ದೇಶ ಕಂಡ ಪ್ರಾಮಾಣಿಕ ಹಾಗೂ ಪ್ರಬುದ್ಧ ರಾಜಕಾರಣಿ ಜನಾರ್ಧನ ಪೂಜಾರಿ ಅವರ ಕನಸುಕೂಡಾ ಇದೆ ಆಗಿತ್ತು. ಅವರ ಆಸೆಯನ್ನು ಈಡೇರಿಸುವ ಕೆಲಸ ಮಾಡುತ್ತೇನೆ ಎಂದು ಪದ್ಮರಾಜ್ ಮಾದ್ಯಮಗಳ ಜೊತೆ ಮನ ಬಿಚ್ಚಿ ಮಾತನಾಡಿದ್ದಾರೆ.
DAKSHINA KANNADA
ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ
ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್ ಹಾನಿಗೊಂಡಿದೆ.
ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!
ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.
DAKSHINA KANNADA
ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…
ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.
DAKSHINA KANNADA
ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
ನ್ಯೂಯಾರ್ಕ್ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್ಗಳನ್ನು ದಾಟಿ, ಹಂಪ್ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್ನ ಆನಂದ್ ಜಿಲ್ಲೆಯ ರೇಖಾಬೆನ್ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.
ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.
ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.
- FILM7 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM7 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- chikkamagaluru6 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!
- FILM6 days ago
ಶೋಬಿತಾ ಜೊತೆ ಕಾಡಿನಲ್ಲಿ ಕಾಣಿಸಿಕೊಂಡ್ರ ನಾಗಚೈತನ್ಯ..! ಫ್ಯಾನ್ಸ್ ಏನಂದ್ರು..?