DAKSHINA KANNADA
ನರ್ಸ್ಗೆ ಶಾಕ್ ನೀಡಿದ ಅಂಬ್ಯುಲೆನ್ಸ್..! ಇದು ಮನಕಲಕುವ ಘಟನೆ..!
ನಿರಂಜಿನಿ… ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿರೋ ಆಸ್ಪತ್ರೆಯ ತುರ್ತು ಸೇವಾ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಯುವತಿ. ಮುಂಜಾನೆ ಆಸ್ಪತ್ರೆಗೆ ಬಂದ್ರೆ ಡ್ಯೂಟಿ ಮುಗಿಸಿ ಮತ್ತೆ ಮನೆಗೆ ವಾಪಾಸಾಗೋದು ಸಂಜೆಯ ವೇಳೆಗೆ. ಆಸ್ಪತ್ರೆಯಲ್ಲಿರೋ ಆಕೆಗೆ ಸಾವು ನೋವು ಎಲ್ಲವನ್ನೂ ನೋಡಿ ಅಭ್ಯಾಸ ಆಗಿದೆ. ಆದ್ರೆ ಇಂದು ಮಾತ್ರ ಅಂಬ್ಯುಲೆನ್ಸ್ನಲ್ಲಿ ಬಂದಿರೋ ಮೃತ ದೇಹ ನೋಡಿ ಆಕೆಯ ಆಕ್ರಂದನ ಮುಗಿಲು ಮುಟ್ಟಿದೆ. ಆಕೆಯ ಆಕ್ರಂದನ ನೋಡಿ ಶಾಕ್ ಆದ ಇತರ ಸಿಬ್ಬಂದಿ ವಿಚಾರ ತಿಳಿದ ಬಳಿಕ ತಾವೂ ಕಂಬನಿ ಮಿಡಿದಿದ್ದಾರೆ.
ಇಂದು ನಿರಂಜಿನಿ ಆಸ್ಪತ್ರೆಗೆ ಬಂದು ತುರ್ತು ಚಿಕಿತ್ಸಾ ವಿಭಾಗದಲ್ಲಿ ಡ್ಯೂಟಿಯಲ್ಲಿದ್ದ ವೇಳೆ ಅಂಬ್ಯುಲೆನ್ಸ್ ಒಂದು ವೇಗವಾಗಿ ಬಂದು ಗಂಭೀರವಾಗಿದ್ದ ಇಬ್ಬರನ್ನು ತುರ್ತು ಚಿಕಿತ್ಸಾ ವಿಭಾಗಕ್ಕೆ ಶಿಫ್ಟ್ ಮಾಡಿದೆ. ದೇಹ ಜರ್ಜರಿತವಾಗಿದ್ದ ಒಂದು ದೇಹವನ್ನು ಅಂಬ್ಯುಲೆನ್ಸ್ನಿಂದ ಇಳಿಸಿದಾಗ ಅದಾಗಲೇ ಆ ವ್ಯಕ್ತಿಯ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಮತ್ತೊಂದು ಮಹಿಳೆಯೂ ಗಂಭೀರವಾಗಿದ್ದು ತಕ್ಷಣ ಅವರನ್ನು ತುರ್ತು ಚಿಕಿತ್ಸೆಗೆ ದಾಖಲಿಸಲಾಗಿತ್ತು. ಈ ವೇಳೆ ಮೃತ ದೇಹವನ್ನು ನೋಡಿದ ನಿರಂಜನಿ ಇದ್ದಕ್ಕಿದ್ದಂತೆ ಜೋರಾಗಿ ಅಳಲು ಆರಂಭಿಸಿದ್ದಾಳೆ. ಆಕೆಯ ಅಳುವಿಗೆ ಕಾರಣವಾಗಿದ್ದು ಅಲ್ಲಿದ್ದ ಮೃತ ದೇಹ ಆಕೆಯ ತಂದೆಯದೇ ಆಗಿದ್ದು.
ಮುಂಜಾನೆ ತಂದೆ ತಾಯಿ ಇಬ್ಬರೂ ಅಜ್ಜಾವರ ಗ್ರಾಮದಲ್ಲಿನ ಕೆಎಫ್ಡಿಸಿಗೆ ಕೆಲಸಕ್ಕೆ ಹೋಗಿ ವಾಪಾಸಾಗುವಾಗ ಜೀಪ್ ಒಂದು ಇವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಜೀಪ್ ಅಡಿಗೆ ಬಿದ್ದಿದ್ದ ತಂದೆ ವಿನಾಯಕ ಮೂರ್ತಿ ಮೃ*ತ ಪಟ್ಟಿದ್ದರೆ, ತಾಯಿ ಮಂಜುಳ ಕೂಡಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಆದ್ರೆ ಇದ್ಯಾವುದು ವಿಚಾರ ಗೊತ್ತಿಲ್ಲದ ನಿರಂಜಿನಿ ಎಂದಿನಂತೆ ಇದೂ ಒಂದು ಅಕ್ಸಿಡೆಂಟ್ ಕೇಸ್ ಅಂತ ಅಟೆಂಡ್ ಮಾಡಲು ಹೋಗಿದ್ದಾಳೆ. ಅಂಬ್ಯುಲೆನ್ಸ್ನಲ್ಲಿ ತಂದೆಯ ಮೃತ ದೇಹ ಹಾಗೂ ಪ್ರಜ್ಞಾ ಹೀನ ಸ್ಥಿತಿಯಲ್ಲಿ ತಾಯಿಯನ್ನ ನೋಡಿದ್ರೆ ಮಗಳ ಪರಿಸ್ಥಿತಿ ಹೇಗಿರಬಹುದು ಅನ್ನೋದು ಊಹಿಸಲೂ ಅಸಾದ್ಯ. ತಾಯಿ ಮಂಜುಳ ಪರಿಸ್ಥಿತಿ ಕೂಡಾ ಗಂಭೀರವಾಗಿದ್ದು, ಬೆನ್ನು ಮೂಳೆಗೆ ಗಾಯವಾದ ಮಾಹಿತಿ ಇದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
DAKSHINA KANNADA
ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!
ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿರುವ ಘಟನೆ ನಡೆದಿದೆ.
ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ ಬಳಿಕ ಮಗು ಅಳಲು ಆರಂಭಿಸಿದೆ. ಅಜ್ಜಿಗೆ ಅನುಮಾನ ಬಂದು ತಾನು ಕುಡಿಸಿದ ಹಾಲಿನ ವಾಸನೆಯನ್ನು ತೆಗೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಆಲ್ಕೋಹಾಲ್ ಮಿಶ್ರಣ ಹಾಕಿರುವುದು ಬೆಳಕಿಗೆ ಬಂದಿದೆ. ಇದರಿಂದ ಆಘಾತಕ್ಕೊಳಗಾದ ವೃದ್ಧೆ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಮುಂದೆ ಓದಿ..; ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!
ಕೋಮಾಗೆ ಜಾರಿದ ಮಗು:
ಅದಾಗಲೇ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕೋಮ ಸ್ಥಿತಿಗೆ ಜಾರಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಮಗುವಿನ ಆರೋಗ್ಯವನ್ನು ಸಂಪೂರ್ಣ ಪರಿಶೀಲಿಸಿದ ಬಳಿಕ ಅಜ್ಜಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
DAKSHINA KANNADA
ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ
ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.
ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ
ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
DAKSHINA KANNADA
ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ
ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.
ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.
ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್ ಕೈ..!! ವೀಡಿಯೋ ವೈರಲ್
- DAKSHINA KANNADA2 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- FILM4 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- BELTHANGADY3 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು
- BANTWAL6 days ago
ಮೇ 3 ರಂದು ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವ; ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ!