Connect with us

LATEST NEWS

ಉಡುಪಿಯಲ್ಲಿ  ಕೊಡಲಿ ಏಟಿನಿಂದ ರೋಧಿಸುತ್ತಿರುವ ಮರಗಳು; ಅರಣ್ಯಾಧಿಕಾರಿಗಳಿಂದಲೇ ಮರಗಳ ಮಾರಣಹೋಮ..! 

Published

on

ಉಡುಪಿಯಲ್ಲಿ  ಕೊಡಲಿ ಏಟಿನಿಂದ ರೋಧಿಸುತ್ತಿರುವ ಮರಗಳು; ಅರಣ್ಯಾಧಿಕಾರಿಗಳಿಂದಲೇ ಮರಗಳ ಮಾರಣಹೋಮ..!

ಉಡುಪಿ: ಬಿಸಿಲಿನ ಝಳದಿಂದ ತಪ್ಪಿಸಿಕೊಳ್ಳಲು ಮರವನ್ನು ಹುಡುಕುತ್ತಾರೆ. ಆದರೆ ಆ ಮರಗಳನ್ನೇ ನಿರ್ದಾಕ್ಷಿಣ್ಯವಾಗಿ ಕಡಿಯೋದಕ್ಕೆ ಮುಂದಾಗಿದ್ದಾರೆ ಅರಣ್ಯ ಇಲಾಖೆಯ ಅಧಿಕಾರಿಗಳು.

ಇಲ್ಲಿ ಮರ ಕಡಿಯುತ್ತಿರುವುದೇನೂ ಅಕ್ರಮವಲ್ಲ. ಎಲ್ಲವೂ ಸಕ್ರಮವೇ, ಆದರೆ ಮನುಷ್ಯನ ಅಭಿವೃದ್ಧಿಯ ನಾಗಾಲೋಟಕ್ಕೆ ಜಿಲ್ಲೆಯ ಹಸಿರುರಾಶಿ ಬಲಿಯಾಗುತ್ತಿರುವುದು ದುರಂತವೇ ಸರಿ

ಉಡುಪಿ ಜಿಲ್ಲೆಯ ಬ್ರಹ್ಮಾವರದಿಂದ ಪೇತ್ರಿಗೆ ಹೋಗುವ ಮಾರ್ಗದಲ್ಲಿ ಸಾಲು ಸಾಲು ಮರಗಳು ಧರೆಗುರುಳುತ್ತಿವೆ. ಒಂದಲ್ಲ ಎರಡಲ್ಲ ಬರೋಬ್ಬರಿ 1014 ಮರಗಳು ನೆಲಕ್ಕುರುಳಲಿವೆ.

.ಬ್ರಹ್ಮಾವರ ಮತ್ತು ಪೇತ್ರಿ ಪರಿಸರ ಉತ್ತಮ ಗ್ರಾಮೀಣ ಜೀವನ ಮತ್ತು ಹಸಿರು ರಾಶಿಯಿಂದ ಕಂಗೊಳಿಸುವ ಪ್ರದೇಶವಾಗಿದೆ. ಬದಲಾದ ಕಾಲಘಟ್ಟದಲ್ಲಿ ರಸ್ತೆಗಳ ಅಗಲೀಕರಣದ ಅಗತ್ಯವಿದೆ.

ಆದರೆ, ಮರಗಳನ್ನು ಉಳಿಸಿಕೊಂಡೇ ರಸ್ತೆ ಮಾಡೋದು ಯಾರಿಗೂ ಬೇಡ, ಹಾಗಾಗಿ ಮುಲಾಜಿಲ್ಲದೆ ಸಾವಿರಾರು ಮರಗಳನ್ನು ಕಡಿಯಲಾಗುತ್ತಿದೆ.

ಈ ದಾರುಣ ದೃಶ್ಯ ಕಂಡ ಕೆಲ ಸ್ಥಳೀಯ ಯುವಕರು ಮುಂದೆ ಬಂದು ವಿರೋಧಿಸಿದ್ದು ಬಿಟ್ಟರೆ, ಮರ ಕೆಡಹುವ ಕಾರ್ಯವಂತೂ ಸುಸೂತ್ರವಾಗಿಯೇ ಸಾಗಿದೆ.

ಬ್ರಹ್ಮಾವರ ತಾಲೂಕು ಕೇಂದ್ರದಿಂದ ಪೇತ್ರಿ ವರೆಗಿನ ಒಟ್ಟು 13 ಕಿಮೀ ರಸ್ತೆ ಅಗಲೀಕರಣವಾಗುತ್ತಿದೆ,. ಹಿರಿಯ ತಲೆಮಾರಿನಜನ ಓಡಾಡುವ ಜನರಿಗೆ ನೆರಳಿನ ಜೊತೆ ಫಲವಸ್ತುಗಳೂ ತಿನ್ನಲು ಸಿಗಲಿ ಎಂದು ಹೇರಳವಾಗಿ ಮಾವು, ಹಲಸಿನ ಮರಗಳನ್ನೇ ಇಲ್ಲಿ ಬೆಳೆಸಿದ್ದಾರೆ.

ಸಾಕಷ್ಟು ಔಷಧೀಯ ವೃಕ್ಷಗಳೂ ಇವೆ. ದಶಕಗಳಿಂದ ಜನರಿಗೆ ನೆಮ್ಮದಿಯ ನೆರಳುಕೊಟ್ಟ ಮರಗಳಿವು. ಆದರೆ ಮನುಷ್ಯನ ಕೃತಘ್ನತೆಗೆ ಏನು ಹೇಳಬೇಕೋ ಗೊತ್ತಿಲ್ಲ.

ವರ್ಷದ ಹಿಂದೆ ಪಬ್ಲಿಕ್ ಹಿಯರಿಂಗ್ ಆದಾಗಲೂ ನೋ ಅಬ್ಜೆಕ್ಷನ್, ಮರ ಕಡಿಯುವಾಗಲೂ ನೋ ಅಬ್ಜೆಕ್ಷನ್. ಕಣ್ಣೆದುರೇ ಸಾವಿರಾರು ಮರಗಳು ಬಿದ್ದರೂ ಒಂದಿಷ್ಟೂ ಬೇಸರವಿಲ್ಲ. ಮರಗಿಡ ಬೆಳೆಸುವ ಅರಣ್ಯ ಇಲಾಖೆಯವರೇ ಮುಂದೆ ನಿಂತು ಎಲ್ಲಾ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

ಇವರು ಒಂದು ಮರಕ್ಕೆ ಹತ್ತು ಗಿಡ ನೆಡ್ತಾರಂತೆ! ಅದಕ್ಕಂತಲೇ ಲೋಕೋಪಯೋಗಿ ಇಲಾಖೆ ಅರಣ್ಯ ಇಲಾಖೆಯ ಅಕೌಂಟ್ ಗೆ 60 ಲಕ್ಷ ರುಪಾಯಿ ಹಾಕಿದೆ.

ಒಂದು ಗಿಡಕ್ಕೆ ಮುನ್ನೂರು ರುಪಾಯಿಯಂತೆ ಪಡೆದು, ಅರಣ್ಯ ಬೆಳೆಸುವ ಮಹತ್ತರ ಜವಾಬ್ದಾರಿ ಅರಣ್ಯ ಇಲಾಖೆಗಿದೆ. ಇವರು ನೆಟ್ಟ ಎಲ್ಲಾ ಗಿಡಗಳು ಮರವಾಗಿದ್ದರೆ, ಉಡುಪಿ ಜಿಲ್ಲೆಗೆ ಜಿಲ್ಲೆಯೇ ಅರಣ್ಯವಾಗಬೇಕಿತ್ತು.

ಎರಡನೇ ಹಂತದಲ್ಲಿ ನೀಲಾವರದಿಂದ ಪೇತ್ರಿವರೆಗಿನ 500 ಕ್ಕೂ ಅಧಿಕ ಮರ ಕಡಿಯಲು ಬಾಕಿಯಿದೆ. ಲೋಕೋಪಯೋಗಿ ಇಲಾಖೆ ಮತ್ತೆ ಹಣ ಕೊಟ್ಟರೆ ಈ ಮರಗಳೂ ಶೀಘ್ರವೇ ಖತಂ ಆಗುತ್ತೆ.

ಕನಿಷ್ಟ ವಿರೋಧವೂ ಇಲ್ಲದೆ ಮರಗಳು ಧರಾಶಾಹಿಯಾಗುವ ದೃಶ್ಯ ಕಂಡಾಗ, ಪ್ರಕೃತಿ ಅದೆಷ್ಟು ನೊಂದಿರಬಹುದೋ ಏನೋ? ಪ್ರಕೃತಿಯ ಮುನಿಸಿಗೆ ಇನ್ನೆಷ್ಟು ಬೆಲೆ ತೆರಬೇಕಾಗಿದೆಯೋ..?   ನಿಜಕ್ಕೂ ಈ ಮೂಕ ಮರಗಳಿಗೆ ಬಾಯಿ ಬರುತ್ತಿದ್ದರೆ, ಅದೆಷ್ಟು ಬೊಬ್ಬಿಡುತ್ತಿದ್ದವೋ ಏನೋ! ಉತ್ತಮ ಪರಿಸರ ಉಡುಪಿಗೆ ಪ್ರಕೃತಿ ಕೊಟ್ಟ ವರ.

ಈ ಸುಂದರ ಕೊಡುಗೆಯನ್ನು ಉಳಿಸಿಕೊಳ್ಳೋದು ಬಿಡಿ, ಹಾಳುಗೆಡವೋದರಲ್ಲೇ ಜನರಿಗೆ ಖುಷಿ! ಜಿಲ್ಲೆಯ ಬ್ರಹ್ಮಾವರದಿಂದ ಪೇತ್ರಿವರೆಗಿನ ರಸ್ತೆಯ ಅಗಲೀಕರಣಕ್ಕೆ ಒಂದುವರೆ ಸಾವಿರಕ್ಕೂ ಅಧಿಕ ಮರಗಳನ್ನು ಕಡಿಯಲಾಗುತ್ತಿದೆ. ಅಭಿವೃದ್ಧಿಯ ಮುಂದೆ ಪರಿಸರ ಪ್ರೀತಿ ನಿಜಕ್ಕೂ ಇಲ್ಲಿ ಅರಣ್ಯರೋಧನವಾಗಿದೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

LATEST NEWS

ವಧು ಕೇಳಿದ ಆ ಒಂದು ಪ್ರಶ್ನೆ; ತಬ್ಬಿಬ್ಬಾದ ವರ..ಮದುವೆ ಕ್ಯಾನ್ಸಲ್!

Published

on

ಮಂಗಳೂರು : ಇತ್ತೀಚಿನ ದಿನಗಳಲ್ಲಿ ಮದುವೆ ಎಂಬುದರ ಸಂಭ್ರಮ ಹೇಳತೀರದು. ಅದ್ದೂರಿತನವೇ ಮೇಲುಗೈ ಸಾಧಿಸುತ್ತೆ. ಈ ನಡುವೆ ಮದುವೆ ಮುರಿದು ಬೀಳುವ ಘಟನೆಯೂ ಹೆಚ್ಚುತ್ತಲಿದೆ. ಕ್ಷುಲ್ಲಕ ಕಾರಣ ಇರಬಹುದು ಅಥವಾ ಇನ್ಯಾವುದೇ ಕಾರಣ ಇರಬಹುದು ಮದುವೆ ಮುರಿದು ಬೀಳುತ್ತಿದೆ.


ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು ಅನ್ನೋ ಗಾದೆ ಮಾತಿದೆ. ಅಂತೆಯೇ ಇಲ್ಲಿ ವರ ಸುಳ್ಳು ಹೇಳಿದ್ದಾನೆ. ಹಾಗಂತ ಮದುವೆ ಆಗಿಲ್ಲ. ಬದಲಿಗೆ ಸಿಕ್ಕಿ ಬಿದ್ದಿದ್ದಾನೆ. ವಧು ಕೇಳಿದ ಆ ಒಂದು ಪ್ರಶ್ನೆಯಿಂದ ಮದುವೆ ಮುರಿದು ಬಿದ್ದಿದೆ.

ಸುಳ್ಳು ಹೇಳಿ ತಗ್ಲಾಕ್ಕೊಂಡ!

ಸುಳ್ಳು ಹೇಳಿ ಮದುವೆಯಾಗಲು ಹೊರಟಿದ್ದ ವರನ ಅಸಲಿ ವಿಚಾರ ಗೊತ್ತಾಗಿದೆ. ಹೀಗಾಗಿ ಯುವತಿ ಮದುವೆ ನಿರಾಕರಿಸಿದ್ದಾಳೆ. ಅಂದಹಾಗೆ ಈ ಘಟನೆ ನಡೆದಿರೋದು ಉತ್ತರ ಪ್ರದೇಶದ ಪನ್ವಾರಿನಲ್ಲಿ. ಓದು, ಬರಹ ಏನೊಂದು ಬರದ ಅನಕ್ಷರಸ್ಥನೊಬ್ಬ ತಾನು ದೊಡ್ಡ ಸರ್ಕಾರಿ ಅಧಿಕಾರಿ ಎಂದು ಮದುವೆಯಾಗಲು ಹೊರಟಿದ್ದ.

ಆದರೆ, ಈ ಸತ್ಯ ಮದುವೆ ಮನೆಯಲ್ಲೇ ಬಯಲಾಗಿದೆ. ಸಂಶಯಗೊಂಡ ವಧು ವರನ ಬಳಿ, ಎರಡರ ಮಗ್ಗಿ ಹೇಳಲು ತಿಳಿಸಿದ್ದಾಳೆ. ಆಗ ಆತ ತಡವರಿಸಿದ್ದಾರೆ. ಹಾಗಾಗಿ, ಯುವತಿಗೆ ಸತ್ಯಾಂಶ ಗೊತ್ತಾಗಿದೆ. ಎರಡರ ಮಗ್ಗಿ ಬೇಸಿಕ್ ಗಣಿತವೂ ಗೊತ್ತಿಲ್ಲ, ನೀನು ಅಧಿಕಾರಿಯಾಗಲು ಹೇಗೆ ಸಾಧ್ಯ? ಎಂದು ಮದುವೆ ಮುರಿದುಕೊಂಡಿದ್ದಾಳೆ.

ಇದನ್ನೂ ಓದಿ : ಮತ್ತೆ ಬಾಯ್‌ ಫ್ರೆಂಡ್ ಬದಲಾಯಿಸಿದ ಶೃತಿ ಹಾಸನ್..!

ಇಷ್ಟಾದರೂ ಬಿಡದ ಕುಟುಂಬದವರು ವಧುವಿನ ಮನವೊಲಿಸುವ ಯತ್ನ ಮಾಡಿದ್ದಾರೆ. ಆದರೆ, ವಧು ಮಾತ್ರ ಇದಕ್ಕೆ ಒಪ್ಪಿಲ್ಲ. ಹೀಗಾಗಿ ವರದಕ್ಷಿಣೆಯನ್ನು ಹಿಂದಿರುಗಿಸಿದ್ದಾರೆ. ಪರಸ್ಪರ ನೀಡಿದ ಉಡುಗೊರೆ, ಆಭರಣಗಳನ್ನು ಹಿಂದಿರುಗಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

 

Continue Reading

LATEST NEWS

ಮತಗಟ್ಟೆಯನ್ನೇ ಧ್ವಂಸ ಮಾಡಿದ ಗ್ರಾಮಸ್ಥರು!

Published

on

ಚಾಮರಾಜನಗರ : ಲೋಕಸಭಾ ಚುನಾವಣೆಗೆ ನಡೆಯುತ್ತಿರುವ ಮತದಾನ ರಾಜ್ಯದೆಲ್ಲಡೆ ಸುಸೂತ್ರವಾಗಿಯೇ ನಡೆದಿದೆ. ಆದರೆ ಚಾಮರಾಜನಗರದಲ್ಲಿ ಮಾತ್ರ ಜನರು ಮತಗಟ್ಟೆಯನ್ನೇ ಪುಡಿ ಮಾಡಿ ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರೆ. ಚಾಮರಾಜನಗರದ ಲೋಕಸಭಾ ಕ್ಷೇತ್ರದ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿತ್ತು. ಈ ವೇಳೆ ಇಂಡಿಗನತ್ತ ಎಂಬ ಗ್ರಾಮದಲ್ಲಿ ಮತಗಟ್ಟೆಯನ್ನು ಗ್ರಾಮಸ್ಥರು ಧ್ವಂಸ ಮಾಡಿದ್ದಾರೆ.


ಚುನಾವಣೆ ಬಹಿಷ್ಕಾರಿಸಿದ್ದ 5 ಗ್ರಾಮ :

ಮೂಲ ಸೌಕರ್ಯದಿಂದ ವಂಚಿತರಾಗಿದ್ದ ಈ ಗ್ರಾಮದ ಜನರು ತಮ್ಮ ಹಕ್ಕಿಗಾಗಿ ಹಲವು ಹೋರಾಟ ನಡೆಸಿದ್ದರು. ಆದರೆ, ಚುನಾವಣೆಯಲ್ಲಿ ಆಶ್ವಾಸನೆ ನೀಡಿ ಹೋಗುವ ಜನ ಪ್ರತಿನಿಧಿಗಳು ಬಳಿಕ ಇತ್ತ ಸುಳಿಯುತ್ತಿರಲಿಲ್ಲ. ಹೀಗಾಗಿ ಐದು ಗ್ರಾಮಗಳ ಜನರು ಈ ಬಾರಿ ಮತ ಕೇಳಲು ಬರಬೇಡಿ, ನಾವು ಮತದಾನ ಮಾಡೋದಿಲ್ಲ ಎಂದಿದ್ದರು.

ಚುನಾವಣೆ ಬಹಿಷ್ಕಾರ ಮಾಡಿದ್ದರೂ ಕಾನೂನು ರೀತಿಯಲ್ಲಿ ಗ್ರಾಮದಲ್ಲಿ ಮತಗಟ್ಟೆಯನ್ನು ತೆರೆಯಲಾಗಿತ್ತು. ಇಂಡಿಗನತ್ತ, ತೇಕಣೆ, ಮೆಂದಾರೆ ಈ ಗ್ರಾಮದಲ್ಲಿ ಯಾವೊಬ್ಬ ಗ್ರಾಮಸ್ಥರೂ ಮತದಾನ ಮಾಡಿಲ್ಲ. ಇನ್ನು ಪಡಸಲನತ್ತ ಗ್ರಾಮದಲ್ಲಿ 85 ಮತದಾರು ಇದ್ದು ಇಬ್ಬರು ಮತದಾನ ಮಾಡಿದ್ದಾಗಿ ಮಾಹಿತಿ ಲಭ್ಯವಾಗಿದೆ.

ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ತೆರೆಯುವುದಕ್ಕೆ ಗ್ರಾಮಸ್ಥರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಆದಾಗ್ಯೂ, ಚುನಾವಣಾ ಆಯೋಗ ಇಲ್ಲಿ ಮತಗಟ್ಟೆ ತೆರೆದು ‘ಮತದಾನ ಮಾಡಲು ಬನ್ನಿ’ ಎಂದು ಜನರನ್ನು ಕರೆದಿದ್ದರು. ಆದ್ರೆ ರೊಚ್ಚಿಗೆದ್ದ ಜನರು ಮತದಾನ ಕೇಂದ್ರದ ಒಳಗೆ ನುಗ್ಗಿ ಇವಿಎಂ ಮೆಷಿನ್ ಸಹಿತ ಮೇಜು ಕುರ್ಚಿ ಎಲ್ಲವನ್ನೂ ಧ್ವಂಸ ಮಾಡಿದ್ದಾರೆ.

ಕನಿಷ್ಠ ಮೂಲಭೂತ ಸೌಕರ್ಯವಾದ ಕುಡಿಯುವ ನೀರು, ರಸ್ತೆ, ವಿದ್ಯುತ್, ಆರೋಗ್ಯ, ಶಿಕ್ಷಣ ಯಾವುದೂ ಇಲ್ಲದ ನಮ್ಮ ಗ್ರಾಮದ ಮತ ಯಾಕೆ ಬೇಕು? ಎಂದು ಜನ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ : ಸುಡುಬಿಸಿಲಿನಲ್ಲೂ ಮತದಾನ; ಇಹಲೋಕ ತ್ಯಜಿಸಿದ 6 ಮಂದಿ

ಪೊಲೀಸ್ ಲಾಠಿ ಚಾರ್ಜ್…ಕೆರಳಿದ ಗ್ರಾಮಸ್ಥರು!

ಜನರು ಮತಗಟ್ಟೆ ಧ್ವಂಸಕ್ಕೆ ಮುಂದಾಗುತ್ತಿದ್ದಂತೆ ಭದ್ರತೆಯಲ್ಲಿದ್ದ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ಹಲ್ಲೆ ಮಾಡಿದ ಜನರು ಬಳಿಕ ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಹಾಗೂ ಅಧಿಕಾರಿಗಳಿಗೆ ಗಾಯಗಳಾಗಿದೆ.

ಪೊಲೀಸರು ಮಹಿಳೆಯರು ಪುರುಷರು ಎಂದು ನೋಡದೆ ಎಲ್ಲರ ಮೇಲೂ ಲಾಠಿ ಚಾರ್ಚ್ ಮಾಡಿರುವುದು ಗ್ರಾಮಸ್ಥರನ್ನು ಕೆರಳಿಸಿದೆ. ಸದ್ಯಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಮತದಾನ ಕೇಂದ್ರವನ್ನು ಬಂದ್ ಮಾಡಲಾಗಿದೆ.

Continue Reading

LATEST NEWS

Trending