Thursday, March 23, 2023

ದಕ್ಷಿಣ ಅಮೇರಿಕದಲ್ಲಿ ಭಾರಿ ಬೆಂಕಿ ದುರಂತ : ಕಾಡ್ಗಿಚ್ಚಿಗೆ 13 ಬಲಿ – ಸಾವಿರಾರು ಎಕರೆ ಅರಣ್ಯ ಬೆಂಕಿಗೆ ಆಹುತಿ..!

ಚಿಲಿ : ದಕ್ಷಿಣ ಅಮೇರಿಕದ ಚಿಲಿ ರಾಜಧಾನಿಯ ಸ್ಯಾಂಟಿಯಾಗೋ ಸಮೀಪ ಭಾರಿ ಬೆಂಕಿ ಅನಾಹುತ ಸಂಭವಿಸಿದ್ದು, ಕಾಡ್ಗಿಚ್ಚಿನ ಕಾರಣದಿಂದ ಸಾವಿರಾರು ಎಕರೆ ಅರಣ್ಯ ಹೊತ್ತಿ ಉರಿದು, 13ಮಂದಿ ಸಾವನ್ನಪ್ಪಿದ್ದಾರೆ.

 

ಒಟ್ಟು 35,000 ಎಕರೆ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಅರಣ್ಯದ ಅಂಚಿನಲ್ಲಿರುವ ಸಾಂತಾ ಜುವಾನಾ ನಗರಕ್ಕೂ ಬೆಂಕಿ ವ್ಯಾಪಿಸಿದ್ದು ಈಗಾಗಲೇ ನೂರಾರು ಮನೆಗಳಿಗೆ ಹಾನಿಯಾಗಿದೆ.

ಇಲ್ಲಿನ ಲಾ ಅರೌಕಾನಿಯಾದ ದಕ್ಷಿಣ ಪ್ರದೇಶದಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಪೈಲಟ್ ಮತ್ತು ಮೆಕ್ಯಾನಿಕ್ ಸಾವನ್ನಪ್ಪಿದ್ದಾರೆ.

ಇದು ಹೆಚ್ಚಿನ ಕಾಡ್ಗಿಚ್ಚು ಅರಣ್ಯ ಪ್ರದೇಶವನ್ನು ಆವರಿಸಲು ಕಾರಣವಾಗಿದೆ ಎನ್ನಲಾಗಿದೆ.

ಇನ್ನು ಬಯೋಬಿಯೊ ಮತ್ತು ನೆರೆಯ ನುಬಲ್‌ನ ಕೃಷಿ ಮತ್ತು ಅರಣ್ಯ ಪ್ರದೇಶಗಳಲ್ಲಿ ಬೇಸಿಗೆ ಸಮಯದಲ್ಲಿ ಕಾಡ್ಗಿಚ್ಚು ಹೆಚ್ಚಾಗಿ ಕಂಡುಬರುತ್ತದೆ.

ಸದ್ಯ ದುರಂತ ನಡೆದಿರುವ ಸ್ಥಳದಲ್ಲಿ ಸೈನಿಕರನ್ನು ನಿಯೋಜಿಸಿ ರಕ್ಷಣಾ ಕಾರ್ಯಚರಣೆ ನಡೆಸಲಾಗುತ್ತಿದೆ.

ಈಗಾಗಲೇ ನೂರಾರು ಮನೆಗಳಿಗೆ ಹಾನಿಯಾಗಿದೆ ಅಲ್ಲಿನ ಜನರನ್ನು ಬೇರೆಡೆಗೆ ಶಿಫ್ಟ್ ಕೂಡ ಮಾಡಲಾಗುತ್ತಿದೆ.

ದುರಂತ ನಡೆದ ಸ್ಥಳದಲ್ಲಿ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದು, ಸ್ಥಳೀಯ ದೇಶಗಳಾದ ಬ್ರೆಜಿಲ್ ಮತ್ತು ಅರ್ಜೆಂಟಿನಾದೊಂದಿಗೆ ನೆರವಿನ ಹಸ್ತವನ್ನು ಚಿಲಿ ಕೇಳಿದೆ.

63 ವಿಮಾನಗಳ ಫ್ಲೀಟ್ ಅಗ್ನಿಶಾಮಕವನ್ನು ತರಿಸುವ ವ್ಯವಸ್ಥೆ ಮಾಡಲಾಗುತ್ತಿದೆ.

LEAVE A REPLY

Please enter your comment!
Please enter your name here

Hot Topics

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...

ಕಲಬುರಗಿಯಲ್ಲಿ ಹಾಡು ಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ..!

ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ ಮಾಡಲಾದ ಘಟನೆ ಕಲಬುರಗಿಯ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಮಜತ್ ಸುಲ್ತಾನ್ (35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಲಬುರಗಿ : ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ...

40 ವರ್ಷಗಳಿಂದ ಅದೇ ಪೊಳ್ಳು ಭರವಸೆ : ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಸುಳ್ಯ ಅರಮನೆಗಾಯದ ಜನತೆ..!

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಈ ಗ್ರಾಮದ ಜನ ಕಳೆದ 40 ವರ್ಷಗಳಿಂದ ಬಿದಿರಿನ ತೂಗು ಸೇತುವೆಯ ಮುಖಾಂತರ ಜೀವ ಭಯದಲ್ಲಿ ಜೀವನ ನಡೆಸುತಿದ್ದಾರೆ.ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ...