323 ಕನ್ನಡಿಗರನ್ನು ಹೊತ್ತ ಮೊದಲ ವಿಮಾನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮನ..
323 ಕನ್ನಡಿಗರನ್ನು ಹೊತ್ತ ಮೊದಲ ವಿಮಾನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮನ..
ಬೆಂಗಳೂರು: ಈಗಾಗಲೇ ಹೊರ ಜಿಲ್ಲೆ ಹಾಗೂ ರಾಜ್ಯಗಳಲ್ಲಿ ಸಿಲುಕಿರುವವರನ್ನು ತವರಿಗೆ ವಾಪಸ್ ಕಳುಹಿಸುವ ಪ್ರಕ್ರಿಯೆ ಆರಂಭವಾಗಿದ್ದರೆ, ಅತ್ತ ಕೇಂದ್ರವೂ ವಿದೇಶದಲ್ಲಿ ಸಿಲುಕಿರುವವರನ್ನು ವಾಪಾಸ್ ಕರೆ ತರುತ್ತಿದೆ.
ಇದರ ಭಾಗವಾಗಿ ಮೊದಲ ಹಂತದಲ್ಲಿ ವಿದೇಶದಿಂದ 323 ಕನ್ನಡಿಗರನ್ನು ಕರೆದುಕೊಂಡು ಬರಲಾಗಿದೆ.
323 ಕನ್ನಡಿಗರನ್ನು ಹೊತ್ತ ಮೊದಲ ವಿಮಾನ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.
ರಾಜ್ಯ ಸರ್ಕಾರ ಮುಂಜಾಗೃತ ಕ್ರಮವಾಗಿ ವಿಮಾನ ನಿಲ್ದಾಣದಲ್ಲೇ ಎಲ್ಲರ ಆರೋಗ್ಯ ತಪಾಸಣೆಯನ್ನು ಮಾಡಿದೆ.
ಇನ್ನು ವಿದೇಶದಿಂದ ಬಂದ ಕನ್ನಡಿಗರನ್ನು ಕ್ವಾರಂಟೈನ್ ಗಾಗಿ ದೊಡ್ಡ ಹೋಟೆಲ್ ಗಳಿಗೆ ಕರೆದುಕೊಂಡು ಹೋಗಲಾಗಿದೆ.
ಕ್ವಾರಂಟೈನ್ ಮುಗಿಯುವ ತನಕ ಅವರವರ ವೆಚ್ಚವನ್ನು ಅವರೇ ಭರಿಸಬೇಕಾಗಿದೆ.
bangalore
ಐದು ವರ್ಷದಲ್ಲಿ ನಾಲ್ಕು ಪಟ್ಟು ಏರಿದ ಆಸ್ತಿ…! ಪ್ರಜ್ವಲ್ ರೇವಣ್ಣ ಘೋಷಿಸಿದ ಆಸ್ತಿ ವಿವರದಲ್ಲಿ ಬಹಿರಂಗ..!!
ಬೆಂಗಳೂರು: ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ಅವರು ನಿನ್ನೆ(ಮಾ.28) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಮಪತ್ರದಲ್ಲಿ ಪ್ರಜ್ವಲ್ ಅವರು ತಮ್ಮ ಆಸ್ತಿ ಮೌಲ್ಯಗಳನ್ನು ಘೋಷಿಸಿದ್ದಾರೆ. ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ಎಂದು ಘೋಷಿಸಿದ್ದಾರೆ. 2019ರ ಚುನಾವಣೆಯಲ್ಲಿ ಘೋಷಿಸಿದ ಆಸ್ತಿ ಮೌಲ್ಯಕ್ಕೆ ನಾಲ್ಕು ಪಟ್ಟು ಹೆಚ್ಚಳವಾಗಿದೆ. 2019 ರ ಲೋಕಸಭಾ ಚುನಾವಣೆ ವೇಳೆ ಸಲ್ಲಿಸಿದ್ದ ಅಫಿದವಿಟ್ನಲ್ಲಿ ಅವರು ತಮ್ಮ ಒಟ್ಟು ಆಸ್ತಿ ಮೌಲ್ಯ 9.78 ಕೋಟಿ ರೂಪಾಯಿ ಎಂದು ಘೋಷಿಸಿದ್ದರು. ಈ ಬಾರಿ ಪ್ರಜ್ವಲ್ ರೇವಣ್ಣ ಅವರು ಅಫಿಡವಿಟ್ನಲ್ಲಿ ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ರೂಪಾಯಿ ಎಂದು ಘೋಷಿಸಿದ್ದಾರೆ. ಈ ಪೈಕಿ 5.44 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿ, 35.40 ಕೋಟಿ ರೂಪಾಯಿ ಸ್ಥಿರಾಸ್ತಿ ಹೊಂದಿದ್ದಾರೆ. ಅಲ್ಲದೆ, 9.29 ಲಕ್ಷ ನಗದು ಹೊಂದಿರುವುದಾಗಿ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ವಿವಿಧ ಬ್ಯಾಂಕ್ಗಳ ಉಳಿತಾಯ ಖಾತೆಯಲ್ಲಿ 56 ಲಕ್ಷ ನಗದು ಇದ್ದು, 5 ವರ್ಷದಲ್ಲಿ ಕೃಷಿಯಿಂದ 2.75 ಕೋಟಿ ಆದಾಯ ಗಳಿಸಿದ್ದಾರೆ ಎಂದು ಅಫಿಡವಿಟ್ನಲ್ಲಿ ತಿಳಿಸಿದ್ದಾರೆ. ಕೃಷಿಯೇತರ ಮೂಲದಿಂದ 1.33 ಕೋಟಿ ಆದಾಯ ಗಳಿಸಿದ್ದು, 31 ಹಸುಗಳು, 4 ಎತ್ತುಗಳು, 1 ಟ್ರ್ಯಾಕ್ಟರ್ ಹೊಂದಿದ್ದಾರೆ.
ಪ್ರಜ್ವಲ್ ರೇವಣ್ಣ ಮಾಡಿದ ಸಾಲ
ಬೆಂಗಳೂರು ನಗರ, ಮೈಸೂರು ಸೇರಿದಂತೆ ವಿವಿಧೆಡೆ ವಾಣಿಜ್ಯ ಕಟ್ಟಡ, ಹೊಳೆನರಸೀಪುರ, ನೆಲಮಂಗಲದಲ್ಲಿ ಆಸ್ತಿ ಹೊಂದಿದ್ದಾರೆ. ಅತ್ತೆ ಅನುಸೂಯಾರಿಂದ 22 ಲಕ್ಷ, ಅತ್ತೆ ಶೈಲಜಾರಿಂದ 10 ಲಕ್ಷ ಸಾಲ ಪಡೆದಿದ್ದು, ತಂದೆ ರೇವಣ್ಣರಿಂದ 86 ಲಕ್ಷ, ಸೋದರ ಸೂರಜ್ರಿಂದ 1 ಕೋಟಿ ಸಾಲ ಮಾಡಿದ್ದಾರೆ. ಹೀಗೆ ಒಟ್ಟು 4.48 ಕೋಟಿ ಸಾಲ ಹೊಂದಿದ್ದಾರೆ.
ತೆರಿಗೆ ಬಾಕಿ ಉಳಿಸಿಕೊಂಡ ಪ್ರಜ್ವಲ್ ರೇವಣ್ಣ
ಸರ್ಕಾರಕ್ಕೆ 3.4 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಈ ಬಗ್ಗೆ ಕಾನೂನು ಹೋರಾಟ ನಡೆಸುತ್ತಿರುವ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ. 67 ಲಕ್ಷ ಮೌಲ್ಯದ 1 ಕೆ.ಜಿ. 100 ಗ್ರಾಂ ಚಿನ್ನ ಹೊಂದಿದ್ದಾರೆ. 17.48 ಲಕ್ಷ ಮೌಲ್ಯದ 23 ಕೆ.ಜಿ. ಬೆಳ್ಳಿ, 1.90 ಲಕ್ಷ ಮೌಲ್ಯದ ವಜ್ರಾಭರಣ ಹೊಂದಿದ್ದಾರೆ ಎಂದು ನಾಮಪತ್ರ ಸಲ್ಲಿಕೆ ವೇಳೆ ಘೋಷಿಸಿದ್ದಾರೆ.
LATEST NEWS
ಈ ದೇವಸ್ಥಾನದಲ್ಲಿ ಒಂದು ಲಿಂಬೆಹಣ್ಣಿಗೆ ಲಕ್ಷಾಂತರ ರೂ. ಬೇಡಿಕೆ..! ಅಂತದ್ದೇನಿದೆ ಈ ಲಿಂಬೆ ಹಣ್ಣಲ್ಲಿ?
ತಮಿಳುನಾಡು: ತಮಿಳುನಾಡಿನಲ್ಲಿರುವ ದೇವಸ್ಥಾನದಲ್ಲಿ ಒಂದು ಲಿಂಬೆ ಹಣ್ಣಿಗೆ ಲಕ್ಷಾಂತರ ರೂಪಾಯಿ ಬೇಡಿಕೆ ಇದ್ದು, ಲಿಂಬೆಹಣ್ಣಿಗಾಗಿ ಜನ ಮುಗಿ ಬೀಳುತ್ತಿದ್ದಾರೆ. ವಿಲ್ಲುಪುರಂ ಜಿಲ್ಲೆಯ ಮುರುಗನ್ ದೇವಸ್ಥಾನದ ಉತಿರಂ ಹಬ್ಬದ ಸಂದರ್ಭದಲ್ಲಿ ಒಟ್ಟು ಒಂಬತ್ತು ನಿಂಬೆ ಹಣ್ಣು ಬರೋಬ್ಬರಿ 2.36 ಲಕ್ಷ ರೂಪಾಯಿಗೆ ಹರಾಜಿನಲ್ಲಿ ಮಾರಾಟವಾಗಿದೆ. ಸಾಮಾನ್ಯವಾಗಿ ಅಂಗಡಿಗಳಲ್ಲಿ 10 ರೂಪಾಯಿಗೆ ಎರಡು ಮೂರು ನಿಂಬೆ ಹಣ್ಣು ಖರೀದಿಸಬಹುದು. ಆದ್ರೆ, ಇಲ್ಲಿನ ಲಿಂಬೆ ಹಣ್ಣು ಮಾತ್ರ ವಿಶೇಷವಾಗಿದೆ. ಹಾಗಾಗಿ ಭಾರೀ ಬೇಡಿಕೆ ಗಿಟ್ಟಿಸಿಕೊಂಡಿದೆ.
ಈ ಲಿಂಬೆಹಣ್ಣಿನಲ್ಲೇನಿದೆ?
ಮುರುಗನ್ ದೇವಸ್ಥಾನದಲ್ಲಿ ಪತ್ರೀ ವರ್ಷ ಅದ್ಧೂರಿಯಾಗಿ ಒಂಭತ್ತು ದಿನಗಳ ಕಾಲ ಉತಿರಂ ಹಬ್ಬವನ್ನು ಆಚರಿಸಲಾಗುತ್ತದೆ. ಒಂಭತ್ತು ದಿನಗಳ ದೇವರ ಪೂಜಾ ಸಮಯದಲ್ಲಿ ಒಂದೊಂದು ದಿನ ದೇವರ ತ್ರಿಶೂಲದ ಮೇಲೆ ಲಿಂಬೆ ಹಣ್ಣುಗಳನ್ನು ಇಟ್ಟು ಅರ್ಚಕರು ಪೂಜೆ ಸಲ್ಲಿಸುತ್ತಾರೆ.
ಈ ಲಿಂಬೆಹಣ್ಣಿನಲ್ಲಿ ವಿಶೇಷ ಶಕ್ತಿಯಿದೆ ಎಂದು ಸಾಕಷ್ಟು ವರ್ಷಗಳಿಂದ ಭಕ್ತರು ನಂಬಿಕೊಂಡು ಬಂದಿದ್ದಾರೆ. ಸಂತಾನದೋಷದಿಂದ ಬಳಲುತ್ತಿರುವ ದಂಪತಿಗಳಿಗೆ ಈ ಲಿಂಬೆಹಣ್ಣು ಸಿಕ್ಕಿದರೆ ಸಂತಾನ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ. ಈ ಲಿಂಬೆ ಹಣ್ಣನ್ನು ಪಡೆದವರಿಗೆ ಯಶಸ್ಸು ಹೆಗಲೇರಿ ಬರುತ್ತದೆ ಎಂಬ ಪ್ರತೀತಿ ಇದೆ.
LATEST NEWS
ತ್ರಿಬಲ್ ಮರ್ಡ*ರ್ ಪ್ರಕರಣ: ಏಳು ದಿನಗಳ ಬಳಿಕ ಮನೆಗಳಿಗೆ ತಲುಪಿದ ಮೃ*ತದೇಹ
ಬೆಳ್ತಂಗಡಿ: ತುಮಕೂರಿನಲ್ಲಿ ನಡೆದ ತ್ರಿಬಲ್ ಮರ್ಡ*ರ್ ಪ್ರಕರಣಕ್ಕೆ ಸಂಬಂಧಿಸಿ ಮೃ*ತಪಟ್ಟ ಮೂವರ ಮೃ*ತ ದೇಹವನ್ನು ಶುಕ್ರವಾರ (ಮಾ.29) ಮುಂಜಾನೆ ಬೆಳ್ತಂಗಡಿಗೆ ತರಲಾಗಿದೆ.
ನಿಧಿ ಆಸೆಗೆ ಮಾ.22ರಂದು ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಹಾಕಿ ಬೆಂಕಿ ಹಚ್ಚಿ ಸುಡಲಾಗಿತ್ತು. ತನಿಖೆ ಬಳಿಕ ಮೃತದೇಹವನ್ನು ಡಿಎನ್ಎ ಪರೀಕ್ಷೆ ಮೂಲಕ ಪತ್ತೆ ಹಚ್ಚಲಾಗಿದೆ. ಘಟನೆ ನಡೆದ ಏಳು ದಿನಗಳ ಬಳಿಕ ಸಂಬಂಧಪಟ್ಟವರಿಗೆ ಮೃತದೇಹವನ್ನು ತಲುಪಿಸಲಾಗಿದೆ.
ಮೃತಪಟ್ಟ ಶಾಹುಲ್ ಹಮೀದ್ ಹಾಗೂ ಇಸಾಕ್ ಅವರ ಮೃತದೇಹ ಮೊಯ್ಯುದ್ದೀನ್ ಜುಮಾ ಮಸೀದಿ ಹಳೆಪೇಟೆಗೆ ಮತ್ತು ಸಿದ್ದೀಕ್ ಅವರ ಮೃತದೇಹ ಶಿರ್ಲಾಲ್ ಮಸೀದಿಗೆ ತಲುಪಿದ್ದು, ಅಲ್ಲಿ ಅಂತಿಮ ದರ್ಶನ ಹಾಗೂ ವಿಧಿ ವಿಧಾನ ನೆರವೇರಲಿದೆ.
ಪ್ರಕರಣದ ಹಿನ್ನೆಲೆ:
ತುಮಕೂರು ಜಿಲ್ಲೆಯಲ್ಲಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶ*ವ ಪತ್ತೆಯಾಗಿತ್ತು. ಇದೊಂದು ವ್ಯವಸ್ಥಿತ ಕೊ*ಲೆ ಎಂಬುದು ತನಿಖೆಯಿಂದ ಹೊರಬಂದಿತ್ತು. ಈಗಾಗಲೇ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಈ ಪ್ರಕರಣದ ತನಿಖೆ ನಡೆಸಿದ ಕೋರಾ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಮುಖ ಆರೋಪಿ ಪಾತರಾಜ ಹಾಗೂ ಗಂಗರಾಜು ಎಂಬವರನ್ನು ಬಂಧಿಸಲಾಗಿದೆ. ನಿಧಿಯ ಆಸೆಗೆ ತುಮಕೂರಿಗೆ ಹೋಗಿದ್ದ ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಹಾಕಿ ಬೆಂಕಿ ಹಾಕಿ ಸುಡಲಾಗಿತ್ತು.
ಮೃತರಿಗೆ ಪಾತರಾಜ ಎಂಬಾತ ಆರು ತಿಂಗಳ ಹಿಂದೆ ಪರಿಚಿತವಾಗಿದ್ದು, ನಿಧಿ ವಿಚಾರವಾಗಿ ಮೃತರಿಂದ 6 ಲಕ್ಷ ಹಣ ಪಡೆದುಕೊಂಡಿದ್ದ. ಆದರೆ ಆರು ತಿಂಗಳಾದ್ರೂ ಹಣ ವಾಪಾಸು ನೀಡದ ಕಾರಣ ಮೂವರೂ ಕೂಡಾ ಆತನ ಹಿಂದೆ ಬಿದ್ದಿದ್ದರು. ಹೀಗಾಗಿ ಈ ಮೂವರನ್ನು ಮುಗಿಸಲು ಪ್ಲಾನ್ ರೂಪಿಸಿದ್ದ ಪಾತರಾಜ ಸತ್ಯಮಂಗಲ ನಿವಾಸಿ ಗಂಗರಾಜು ಎಂಬಾತನ ಸಹಾಯ ಪಡೆದಿದ್ದ. ಆತನಿಗೆ 3 ಕೆ.ಜಿ ಚಿನ್ನಕೊಡುವುದಾಗಿ ನಂಬಿಸಿ ತನ್ನ ಕೆಲಸ ಮಾಡಿಸಿದ್ದ.
ಗಂಗರಾಜು ಕೂಡಾ ಚಿನ್ನದ ಆಸೆಗೆ ತನ್ನ ಸಹಚರರ ಮೂಲಕ ಇಸಾಕ್, ಹಮೀದ್ ಹಾಗೂ ಸಿದ್ದಿಕ್ ಅವರನ್ನು ಕೊಲೆ ಮಾಡಿಸಿದ್ದ. ತುಮಕೂರಿನ ಬೀರನಕಲ್ಲು ಬೆಟ್ಟದ ಬಳಿ ಬರಲು ಹೇಳಿ ಅಲ್ಲಿ ಮಚ್ಚು ಲಾಂಗ್ನಿಂದ ಹಲ್ಲೆ ಮಾಡಿ ಮೂವರನ್ನು ಕೊಲೆ ಮಾಡಲಾಗಿತ್ತು. ಬಳಿಕ ಅಲ್ಲಿಂದ ಅವರದೇ ಕಾರಿನಲ್ಲಿ ಮೃತದೇಹ ಇರಿಸಿ ಕುಚ್ಚಂಗಿ ಕೆರೆ ಬಳಿ ತಂದು ಕಾರಿಗೆ ಬೆಂಕಿ ಹಚ್ಚಿದ್ದಾರೆ. ಇನ್ನು ಪ್ರಕರಣ ಸಂಬಂಧ ತಲೆ ಮರೆಸಿಕೊಂಡಿರುವ ಪ ಮಧುಸೂದನ್ ನವೀನ್, ಕೃಷ್ಣ, ಗಣೇಶ್, ಕಿರಣ್, ಸೈಮನ್ ಗಾಗಿ ಪೊಲೀಸರು ಬಲೆ ಬೀಸಿದ್ದಾರೆ..
- LATEST NEWS7 days ago
ಅಬ್ ಕೀ ಬಾರ್ 500 ಪಾರ್… ! ಪ್ರಚಾರ ಕಣಕ್ಕಿಳಿದ ಗ್ರೇಟ್ ಕಲಿ..!
- DAKSHINA KANNADA7 days ago
ಮಂಗಳೂರಿಗೆ ಹೆಮ್ಮೆಯ ಗರಿ; ಎಜೆ ಗ್ರ್ಯಾಂಡ್ ಎಲೈಟ್ ಹೊಟೇಲ್ ಲೋಕಾರ್ಪಣೆ
- FILM4 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ವರ್ಯ ರೈ- ಅಭಿಷೇಕ್ ಬಚ್ಚನ್ ಫೋಟೋ!
- DAKSHINA KANNADA3 days ago
ಖತರ್ನಾಕ್ ಲ್ಯಾಪ್ಟಾಪ್ ಕಳ್ಳಿ…! ಈಕೆ ಬ್ಯಾಂಕ್ ಉದ್ಯೋಗಿ… !