ಕೊರೊನಾ ಬ್ರೇಕಿಂಗ್: ಪಡೀಲ್ ನಲ್ಲಿರುವ ಫಸ್ಟ್ ನ್ಯೂರೋ ಆಸ್ಪತ್ರೆ ಸೇರಿ 5 ಕಿ.ಮೀ. ವ್ಯಾಪ್ತಿ ಕಂಟೈನ್ಮೆಂಟ್ ಝೋನ್..! ಎಲ್ಲಾ ಚಟುವಟಿಕೆಗಳಿಗೆ ನಿಷೇಧ
ಕೊರೊನಾ ಬ್ರೇಕಿಂಗ್: ಪಡೀಲ್ನಲ್ಲಿರುವ ಫಸ್ಟ್ ನ್ಯೂರೋ ಆಸ್ಪತ್ರೆ ಸೇರಿ 5 ಕಿ.ಮೀ. ವ್ಯಾಪ್ತಿ ಕಂಟೈನ್ಮೆಂಟ್ ಝೋನ್..! ಎಲ್ಲಾ ಚಟುವಟಿಕೆಗಳಿಗೆ ನಿಷೇಧ
ಮಂಗಳೂರು : ಮಂಗಳೂರು : ಮಂಗಳೂರು ನಗರದ ಪಡೀಲ್ ನಲ್ಲಿರುವ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿದ್ದ 75 ವರ್ಷ ವಯಸ್ಸಿನ ವೃದ್ದೆಗೆ ಕೊರೊನ ಸೋಂಕು ಪ್ರಕರಣ ಧೃಡವಾದ ಹಿನ್ನೆಲೆಯಲ್ಲಿ ಆಸ್ಪತ್ರೆ ಸುತ್ತಾಮುತ್ತಲಿನ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಅಂತಾ ಘೋಷಣೆ ಮಾಡಲಾಗಿದೆ.
ಆಸ್ಪತ್ರೆಯ ಪೂರ್ವ ಭಾಗದಿಂದ ಕನ್ನಗುಡ್ಡೆ, ಪಶ್ಚಿಮದಿಂದ ರಮಾನಥ್ ಕೃಪಾ ರೈಸ್ ಮಿಲ್, ಉತ್ತರಕ್ಕೆ ರಾಷ್ಟ್ರೀಯ ಹೆದ್ದಾರಿ 73 ಮತ್ತು ದಕ್ಷಿಣಕ್ಕೆ ಸರ್ಕಾರಿ ಜಾಗದ ಸುತ್ತ ಕಂಟೋನ್ಮೆಂಟ್ ಪ್ರದೇಶ ಎಂದು ಜಿಲ್ಲಾಡಳಿತ ಘೋಷಣೆ ಮಾಡಿದೆ.
ಆಸ್ಪತ್ರೆ ಜೊತೆಗೆ ಎರಡು ಮನೆ, ಐದು ಅಂಗಡಿ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಉಳಿದಂತೆ 5 ಕಿಲೋಮೀಟರ್ ಸುತ್ತಾಮುತ್ತಾ ಪ್ರದೇಶವನ್ನು ಬಫರ್ ಝೋನಾಗಿ ಘೋಷಣೆ ಮಾಡಲಾಗಿದೆ.
ಸುತ್ತಾಮುತ್ತಾ 5 ಕಿಲೋಮೀಟರ್ ಬಫರ್ ಝೋನ್ ಆಗಿ ಮಾರ್ಪಾಟ್ಟಿದ್ದು ಎಲ್ಲವನ್ನು ನಿಷೇಧಿಸಲಾಗಿದೆ.
ಉಳ್ಳಾಲ ಸೇತುವೆಯಿಂದ ಕಲ್ಲಾಪು, ಕುಡುಪು, ಫರಂಗಿಪೇಟೆ, ಫಳ್ನೀರ್ ವರೆಗಿನ ಪ್ರದೇಶ ಇದರಲ್ಲಿ ಸೇರಿದೆ.
ಈ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಎಲ್ಲಾ ಚಟುವಟಿಕೆಗಳನ್ನು ನಿಷೇಧಿಸಿದ್ದಾರೆ. ಈ ವ್ಯಾಪ್ತಿಯಲ್ಲಿ 42 ಸಾವಿರ ಮನೆ, 1800 ಅಂಗಡಿ ಮತ್ತು ಕಚೇರಿ, 1.8 ಲಕ್ಷ ಜನರಿದ್ದು ಇವರೆಲ್ಲರೂ ಬಫರ್ ಝೋನ್ ಅಡಿಯಲ್ಲಿ ಬರುತ್ತಾರೆ.
Updated News:
ಇದೀಗ ಮುಂಜಾಗೃತಾ ಕ್ರಮವಾಗಿ ಫಸ್ಟ್ ನ್ಯೂರೋ ಆಸ್ಪತ್ರೆಯನ್ನು ಜಿಲ್ಲಾಡಳಿತ ವಶಕ್ಕೆ ಪಡೆದು ಸೀಲ್ ಡೌನ್ ಮಾಡಲಾಗಿದೆ. ಜೊತೆಗೆ ಆಸ್ಪತ್ರೆಯಲ್ಲಿನ ಎಲ್ಲಾ ರೋಗಿಗಳ ವಿವರವನ್ನು ಜಿಲ್ಲಾಡಳಿತ ಪಡೆಯುತ್ತಿದೆ. ಎಪ್ರಿಲ್ 2 ರಿಂದ ಆಸ್ಪತ್ರೆಗೆ ಬಂದ ಎಲ್ಲಾ ರೋಗಿಗಳ ವಿವರ ಪಡೆಯುವ ಪ್ರಕ್ರೀಯೆ ನಡೆಯುತ್ತಿದೆ. ಆಸ್ಪತ್ರೆಯ ಎಲ್ಲಾ ವೈದ್ಯ ಮತ್ತು ಸಿಬ್ಬಂದಿಗೂ ಕ್ವಾರೆಂಟೈನ್ ಗೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಪ್ರಸ್ತುತ ಪಾರ್ಶ್ವವಾಯು ಪೀಡಿತೆಯಾಗಿದ್ದ 75 ವರ್ಷದ ಇ ಮಹಿಳೆ ಎಪ್ರಿಲ್ 18ರಂದು ನಗರದ ಪಡೀಲ್ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇದೇ ಸಂದರ್ಭ ಮನೆಯ ಸೊಸೆ ಕೊರೊನಾ ಸೋಂಕು ಉಲ್ಭಣಗೊಂಡು ಕಳೆದ ಭಾನುವಾರ ಮಂಗಳೂರಿನ ಕೊರೊನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.
ಬಳಿಕ ಆಕೆಯ ಮನೆಯ ಪಕ್ಕದ 67 ವರ್ಷದ ಹಿರಿಯ ಮಹಿಳೆಯಲ್ಲೂ ಕೊರೊನಾ ಸೋಂಕು ಧೃಡಪಟ್ಟಿದ್ದು ಅವರೂ ಮಂಗಳೂರಿನ ವೆನ್ಲಾಕ್ ಕೊರೊನಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದಾರೆ.
ಈ ಹಿನ್ನೆಲೆಯಲ್ಲಿ ಮೃತಪಟ್ಟ ಮಹಿಳೆ ಯ ಪತಿ, ಮಗ,ಮತ್ತು ಸುತ್ತಮುತ್ತಲ 32 ಮಂದಿಯನ್ನು ಮೂಜಾಗೃತಾ ಕ್ರಮವಾಗಿ ಕ್ವಾರಂಟೈನ್ ಮಾಡಲಾಗಿತ್ತು.
ಮತ್ತು ಅವರ ಗಂಟಲು ದ್ರವವನ್ನು ಪರೀಕ್ಷೆಗಾಗಿ ರವಾನಿಸಲಾಗಿತ್ತು. ಆದರೆ ಇದೀಗ ಮಹಿಳೆಯ ಪತಿ ಮತ್ತು ಮಕ್ಕಳ ವರದಿ ನೆಗೆಟಿವ್ ಬಂದಿದೆ. ಇನ್ನು ಉಳಿದವರ ಪರೀಕ್ಷಾ ರಿಪೋರ್ಟ್ ನಿರೀಕ್ಷಿಸಲಾಗುತ್ತಿದೆ.
ಬಂಟ್ವಾಳ ಒಂದೇ ಪ್ರಧೇಶದಲ್ಲಿ ಮೂರು ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಇಡಿ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿ ಬಿದ್ದಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೊಂಕಿತ ಪ್ರಕರಣ 17 ಕ್ಕೇರಿಕೆಯಾಗಿದೆ.
DAKSHINA KANNADA
ಹಳ್ಳ ಹಿಡಿದ ಸ್ಮಾರ್ಟ್ ಸಿಟಿಯ ಕಾಮಗಾರಿ; ಕುಂಟುತ್ತಾ ಸಾಗಿದ ಮಹಾಕಾಳಿ ಪಡ್ಪು ಅಂಡರ್ ಪಾಸ್
ಮಂಗಳೂರು: ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಮಹಾಕಾಳಿ ಪಡ್ಪುವಿನ ರೈಲ್ವೇ ಅಂಡರ್ ಪಾಸ್ ಕಾಮಗಾರಿ ಸದ್ಯಕ್ಕಂತು ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಈ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದರೂ ಕಾಮಗಾರಿ ಮುಗಿಸಬೇಕು ಅನ್ನೋ ಇಚ್ಚೆ ಸ್ಮಾರ್ಟ್ ಸಿಟಿ ಯೋಜನೆಯವರಿಗೂ ಇದ್ದಂತಿಲ್ಲ.
ಕೆಲ ತಿಂಗಳ ಹಿಂದೆ ಕಳಪೆ ಕಾಮಗಾರಿಯಿಂದಾಗಿ ಇಲ್ಲಿ ಕಾಮಗಾರಿ ಕುಸಿತ ಕೂಡಾ ಉಂಟಾಗಿತ್ತು. ಇದೀಗ ಕೆಲ ದಿನಗಳಿಂದ ಯಾವುದೇ ಕಾಮಗಾರಿ ನಡೆಸದೆ ಕಾರ್ಮಿಕರು ಕೂಡಾ ಕೆಲಸ ಇಲ್ಲದೆ ಸುಮ್ಮನೆ ಕುಳಿತಿರುವ ದೃಶ್ಯ ಇಲ್ಲಿ ಮಾಮೂಲಾಗಿದೆ. ಮಾರ್ಗನ್ ಗೇಟ್ ಮೂಲಕವಾಗಿ ಜೆಪ್ಪಿನ ಮೊಗೆರು ಹೈವೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದೆ. ಸದ್ಯ ಈ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ದ್ವಿಚಕ್ರ ವಾಹನಕ್ಕಷ್ಟೇ ಓಡಾಡಲು ವ್ಯವಸ್ಥೆ ಮಾಡಲಾಗಿದೆ.
ಉಪ್ಪಳದಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶ; ಓರ್ವ ಬಂಧನ
ಹೀಗಾಗಿ ಈ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾಮಗಾರಿ ಯಾವಾಗ ಮುಗಿಸ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇಲ್ಲಿ ನಡಿಯುತ್ತಿರುವ ಕಾಮಗಾರಿಯ ವೇಗ ನೋಡಿದರೆ ಇದು 2024 ರಲ್ಲಿ ಪೂರ್ಣಗೊಳ್ಳುವ ಯಾವುದೇ ಲಕ್ಷಣ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಹೀಗಾಗಿ ತಕ್ಷಣ ಅಂಡರ್ ಪಾಸ್ ಕೆಲಸ ಮಗಿಸಿ ಅಂತ ಜನ ಒತ್ತಾಯಿಸಿದ್ದಾರೆ.
LATEST NEWS
11 ವರ್ಷದ ಬಾಲಕ ಹೃದಯಘಾ*ತಕ್ಕೆ ಬ*ಲಿ
ಹಾಸನ : ಹೃದಯಾಘಾ*ತ ಎಂಬುದು ಇತ್ತೀಚೆಗೆ ಸಾಮಾನ್ಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರೂ ಹೃದಯಾ*ಘಾತಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಕಳವಳಕಾರಿ ಘಟನೆ ನಡೆದಿದ್ದು, 11 ವರ್ಷದ ಬಾಲಕ ಹೃದಯಾ*ಘಾತಕ್ಕೆ ಬ*ಲಿಯಾಗಿದ್ದಾನೆ. ಈ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸಚಿನ್ ಮೃ*ತ ಬಾಲಕ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾ*ಘಾತವಾಗಿದೆ.
ಇದನ್ನೂ ಓದಿ : ಮನೆಯಲ್ಲಿ ಹಲ್ಲಿ ಕಾಟವೇ? ಈ ಸಿಂಪಲ್ ಮನೆಮದ್ದು ಟ್ರೈ ಮಾಡಿ
ಟಿವಿ ನೋಡುತ್ತಲೇ ಕುಸಿ*ದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾ*ವನ್ನಪ್ಪಿದ್ದ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.
FILM
ಕನ್ನಡದ ಸೀರಿಯಲ್ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ
ಬೆಂಗಳೂರು/ಮಂಗಳೂರು: ಸಿನೆಮಾದಲ್ಲಿ ನಟಿಸಬೇಕು ಅನ್ನೋದು ಎಲ್ಲರ ಕನಸು. ಆದರೆ ಇಲ್ಲೊಬ್ಬಾಕೆ ನಟಿಗೆ ಸೀರಿಯಲ್ನಲ್ಲಿ ನಟಿಸಬೇಕು ಎಂಬ ಆಸೆ. ಆದರೆ ಆಕೆಗೆ ಮಾತ್ರ ಮೊದಲು ಒಲಿದು ಬಂದಿದ್ದು ಸಿನೆಮಾದಲ್ಲಿ ನಟಿಸುವ ಅವಕಾಶ. ಇದೀಗ ಆ ನಟಿ ಸುರ್ವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅವನು ಮತ್ತು ಶ್ರಾವಣಿ’ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು, ಈ ಧಾರಾವಾಹಿಯಲ್ಲಿ ಶ್ರಾವಣಿಯಾಗಿ ಕಾಣಿಸಿಕೊಂಡಿರುವ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದಾರೆ.
ಶ್ರಾವಣಿ ಪಾತ್ರದ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಈಕೆ 9 ನೇ ತರಗತಿಯಲ್ಲಿದ್ದಅಗಲೇ ಸಿನೆಮಾ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಊರ್ವಿ, ಗರುಡ, ಮನದ ಮರೆಯಲಿ ಸೇರಿದಂತೆ ನಾಳ್ಕೈದು ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಳಿಕ ಕಾನೂನು ಪದವಿ ಮುಗಿಸಿರುವ ಇವರು ಸೀರಿಯಲ್ ನಲ್ಲಿ ಆಭಿನಯಿಸುವತ್ತ ಒಲವು ಮಾಡಿದ್ದಾರೆ. ಹೀಗಾಗಿ ಲುಕ್ ಟೆಸ್ಟ್ ಕೂಡಾ ಕೊಟ್ಟಿದ್ದಾರೆ.
ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!
ಇದೇ ವೇಳೆ ‘ಅವನು ಮತ್ತು ಶ್ರಾವಣಿ’ ಧಾರಾವಾಹಿಗೆ ರಿಪ್ಲೇಸ್ಮೆಂಟ್ ಪಾತ್ರಕ್ಕೆ ಕರೆ ಬರುತ್ತದೆ. ರಿಪ್ಲೇಸ್ಮೆಂಟ್ ಪಾತ್ರ ಆಗಿದ್ದರಿಂದ ಜನರಿಗೆ ಇಷ್ಟ ಆಗ್ಬೋದಾ ಅನ್ನುವ ಮೈಂಡ್ ಸೆಟ್ ನಲ್ಲಿ ಇವರು ಕೊನೆಗೂ ಪಾತ್ರಕ್ಕೆ ಸೈ ಎಂದು ಹೇಳಿದ್ದಾರೆ. ಇದೀಗ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಈ ಧಾರಾವಾಹಿಯಲ್ಲಿ ನಟನೆ ಆರಂಭಿಸಿದ ಮೇಲೆ ಆಫರ್ಗಳು ಬರುತ್ತಿದೆ ಎಂದು ಇಶಿಕಾ ಶೆಟ್ಟಿಗಾರ್ ಹೇಳಿದ್ದಾರೆ.