Connect with us

    chikkamagaluru

    ಗನ್ ಒರೆಸುತ್ತಿದ್ದ ವೇಳೆ ಮಿಸ್‌ ಫಯರ್; ವ್ಯಕ್ತಿ ಸಾ*ವು

    Published

    on

    ಚಿಕಮಗಳೂರು: ಮನೆಯಲ್ಲಿದ್ದ ಗನ್ ಒರೆಸುತ್ತಿದ್ದ ವೇಳೆ ಮಿಸ್‌ ಫಯರ್‌ ಆಗಿ ವ್ಯಕ್ತಿಯೊಬ್ಬ ಸಾವನಪ್ಪಿರುವ ಘಟನೆ ಚಿಕ್ಕಮಗಳೂರಿನ ಕಳವಾಸ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಕಳವಾಸೆ ಗ್ರಾಮದ ಅರುಣ್ (47 ವ) ಎಂದು ಹೇಳಲಾಗಿದೆ.

    ಅರುಣ್ ಎಂಬವರು ತನ್ನ ಮನೆಯ ಶೆಡ್‌ ನಲ್ಲಿದ್ದ ಗನ್‌ನನ್ನು ಶುಚಿಗೊಳಿಸುತ್ತಿದ್ದ ವೇಳೆ ಏಕಾಏಕಿ ಗುಂಡು ಹಾರಿ ಅರುಣ್‌ರವರ ಬಲಕಣ್ಣನ್ನು ಹೊಕ್ಕಿದೆ. ಘಟನೆಯಿಂದ ಗಂಭೀರ ಗಾಯಗೊಂಡ ಅರುಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಈ ಘಟನೆ ಸಂಭವಿಸಿದ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ. ಇದು ಆತ್ಮಹತ್ಯೆಯೋ ಅಥವಾ ಮಿಸ್ ಫಯರ್‌ ಆಗಿ ಗುಂಡು ತಗುಳಿದೆಯೋ ಅನ್ನೋದು ತನಿಖೆ ವೇಳೆ ಬಯಲಿಗೆ ಬರಬೇಕಿದೆ.

    ನಟಿಗೆ ಲೈಂಗಿಕ ಕಿರುಕುಳ ಆರೋಪ; ಮಲಯಾಳಂ ನಿರ್ದೇಶಕ ರಂಜಿತ್‌ ವಿರುದ್ದ ಎಫ್‌ಐಆರ್..!

    ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ. ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    chikkamagaluru

    ಚಿಕ್ಕಮಗಳೂರು ಹೋಮ್‌ಸ್ಟೇಗಳಿಗೆ ಅರಣ್ಯ ಇಲಾಖೆಯಿಂದ ನೋಟೀಸ್..!

    Published

    on

    ಚಿಕ್ಕಮಗಳೂರು/ಮಂಗಳೂರು: ಅಂಕೋಲಾದ ಶಿರೂರು, ಶಿರಾಡಿ ಘಾಟ್‌ ಭೂಕುಸಿತ ಹಾಗೂ ವಯನಾಡಿನ ದುರ್ಘಟನೆ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರ್ಮಿಸಲಾಗಿರುವ ರೆಸಾರ್ಟ್​​ ಅಥವಾ ಹೋಂಸ್ಟೇಗಳಿಗೆ ನೋಟಿಸ್ ನೀಡಿದೆ. ಅನಧಿಕೃತವಾಗಿ ನಡೆಯುತ್ತಿರುವ ಹೋಂಸ್ಟೇ ಅಥವಾ ರೆಸಾರ್ಟ್​ಗಳನ್ನು ಪತ್ತೆ ಹಚ್ಚಲು ಮುಂದಾಗಿದೆ.

    ಚಿಕ್ಕಮಗಳೂರು ಅರಣ್ಯ ವಲಯ  ವ್ಯಾಪ್ತಿಯಲ್ಲಿನ ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್​ಸ್ವಾಮಿ ದರ್ಗಾ, ಚಂದ್ರದ್ರೋಣ ಪರ್ವತದ ಸುತ್ತಮುತ್ತ ನಿರ್ಮಾಣವಾಗಿರುವ ಹೋಂಸ್ಟೇ, ರೆಸಾರ್ಟ್​ ಮಾಲಿಕರು ತಮ್ಮ ಹೋಂಸ್ಟೇಗೆ ಸಂಬಂಧಿಸಿದ ಕಂದಾಯ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸುವಂತೆ ಡಿಎಫ್​ಒ ರಮೇಶ್ ಬಾಬು ಅವರು ನೋಟಿಸ್ ಹೊರಡಿಸಿದ್ದಾರೆ.

    ಗಡಿನಾಡು ಹೊಸೂರಿನಲ್ಲಿ ಗಣೇಶನಿಗೆ ಹೈಕೋರ್ಟ್​ ಮಂಟಪ, ಗಣಪನೇ ಜಡ್ಜ್

    ಎಚ್ಚೆತ್ತ ಅರಣ್ಯ ಇಲಾಖೆ:
    ಸಾಲು ಸಾಲು ದುರ್ಘಟನೆ ಬಳಿಕ ಎಚ್ಚತ್ತ ಅರಣ್ಯ ಇಲಾಖೆ ಚಿಕ್ಕಮಗಳೂರು ಅರಣ್ಯ ವಲಯದಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಹೋಂಸ್ಟೇ ಅಥವಾ ರೆಸಾರ್ಟ್​​​ಗಳ ಸ್ಥಳ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿತ್ತು. ವರದಿ ಸಲ್ಲಿಕೆಯಾದ ಬಳಿಕ ಅರಣ್ಯ ಇಲಾಖೆ 2015ರ ನಂತರ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ರೆಸಾರ್ಟ್ ​​ಅಥವಾ ಹೋಂಸ್ಟೇ, ತೋಟ, ಬಡವಾಣೆಗಳನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡುವಂತೆ ಸೂಚನೆ ನೀಡಿತ್ತು.

    ಇದೀಗ, ಅನಧಿಕೃತವಾಗಿ ನಡೆಯುತ್ತಿರುವ ರೆಸಾರ್ಟ್​ ಅಥವಾ ಹೋಂಸ್ಟೇಗಳನ್ನು ಪತ್ತೆಹಚ್ಚಲು ಅರಣ್ಯ ಇಲಾಖೆ ಮುಂದಾಗಿದೆ. ಹೀಗಾಗಿ ಚಿಕ್ಕಮಗಳೂರು ಅರಣ್ಯ ವಲಯದಲ್ಲಿ ನಿರ್ಮಾಣ ಮಾಡಿರುವ ಎಲ್ಲ ಹೋಂಸ್ಟೇ ಮಾಲಿಕರು ಕಂದಾಯ ದಾಖಲಾತಿಗಳನ್ನು ಸಲ್ಲಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.

    Continue Reading

    chikkamagaluru

    ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸ್ಥಳದಲ್ಲೇ ಸಾ*ವು

    Published

    on

    ಚಿಕ್ಕಮಗಳೂರು/ಪುತ್ತೂರು: ಆಹಾರ ಅರಸಿ ನಾಡಿಗೆ ಬಂದ ಗಜರಾಜ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಳಗಾಮೆಯ ಆಶ್ರಯ ಎಸ್ಟೇಟ್ ಬಳಿ ನಡೆದಿದೆ. ಇಲ್ಲಿನ ಭದ್ರ ಅಭಯಾರಣ್ಯದಿಂದ ಆಹಾರ ಅರಸಿ ಬಂದ ಕಾಡಾನೆ ಬೇಲಿ ದಾಟುವ ವೇಳೆ, ಅಲ್ಲಿನ ತೋಟಕ್ಕೆ ಅಳವಡಿಸಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಆನೆ ಸ್ಥಳದಲ್ಲೇ ಮೃತಪಟ್ಟಿದೆ.

    ಇನ್ನು ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು ತೋಟದ ಮಾಲೀಕನ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ.

    Continue Reading

    chikkamagaluru

    ಆಸ್ತಿ ವಿಚಾರಕ್ಕಾಗಿ ತಮ್ಮನನ್ನೇ ಕೊಚ್ಚಿ ಕೊ*ಲೆಗೈದ ಅಕ್ಕಂದಿರು..!!

    Published

    on

    ಚಿಕ್ಕಮಗಳೂರು:  ಚಿಕ್ಕಮಗಳೂರು ತರೀಕೆರೆಯಲ್ಲಿ ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಮೂವರು ಸಹೋದರಿಯರೇ ಸೇರಿ ತಮ್ಮನನ್ನು ಕೊಚ್ಚಿ ಹ*ತ್ಯೆ ಮಾಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.

    ರಾಘವೇಂದ್ರ(43 ವ) ಕೊಲೇಗೀಡಾದವರು. ಮೂವರು ಅಕ್ಕಂದಿರು ಹಾಗೂ ತಮ್ಮನ ನಡುವೆ ಆಗಾಗ ಆಸ್ತಿ ವಿಚಾರಕ್ಕಾಗಿ ಜಗಳ ಉಂಟಾಗುತ್ತಿತ್ತು. ರಾಘವೇಂದ್ರ ಅವರು ಮನೆಯಲ್ಲಿದ್ದಾಗ ಮೂವರು ಅಕ್ಕಂದಿರು ಹಾಗೂ ಭಾವ ಸೇರಿಕೊಂಡು ಮೊದಲು ತಮ್ಮನ ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ಬಳಿಕ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

    ಇದ್ದಕ್ಕಿದ್ದಂತೆಯೇ ಸ್ಫೋ*ಟಗೊಂಡ ಗ್ಯಾಸ್​ ಸಿಲಿಂಡರ್.. ಕೂಲಿ ಕಾರ್ಮಿಕ ಸಾ*ವು, ಮತ್ತೋರ್ವ ಗಂಭೀ*ರ

    ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ. ಮೃತ ರಾಘವೇಂದ್ರರವರ ಅಕ್ಕಂದಿರಾದ ಸುಮಾ, ಸುಧಾ, ರೇಣುಕಾ, ಭಾವ ಸಿದ್ದರಾಮಪ್ಪ ಅವರನ್ನು ತರಿಕೇರೆ ಪೊಲೀಸರು ಬಂಧಿಸಿದ್ದಾರೆ.

    Continue Reading

    LATEST NEWS

    Trending