Connect with us

LATEST NEWS

ಮಧ್ಯರಾತ್ರಿ 2.30ಕ್ಕೆ ಫೋನ್ ಮಾಡಿದ ಹುಡುಗನ ಸಮಸ್ಯೆಗೆ ಸ್ಪಂದಿಸಿದ ಗೃಹ ಸಚಿವರು..!

Published

on

ದಿಕ್ಕು ತೋಚದ ಯುವಕ ಅಸಹಾಯಕ ಸ್ಥಿತಿಯಲ್ಲಿ ಕೊನೆ ಪ್ರಯತ್ನ ಎಂಬಂತೆ ನಡುರಾತ್ರಿ 2.30ಕ್ಕೆ ನೇರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರರ ಮೊಬೈಲಿಗೆ ಕಾಲ್ ಮಾಡಿದ್ದಾನೆ.

ಶಿವಮೊಗ್ಗ : ಆತ ತೀರ್ಥಹಳ್ಳಿಯಲ್ಲಿ ಮಾಂಸದ ವ್ಯಾಪಾರ ಮಾಡುವವನು, ಕಡೂರಿ ನಲ್ಲಿ ಯಾರೋ ಒಬ್ಬರು ಬಲಾಡ್ಯರ ಬಳಿ ಸಾಲ ಬಾಕಿ ಉಳಿಸಿಕೊಂಡಿದ್ದ.

ಅವರು ಒಂದಕ್ಕೆ ನಾಲ್ಕು ಪಟ್ಟು ಬಡ್ಡಿ ಲೆಕ್ಕ ಬರೆದು ಸಾಲ ವಸೂಲಾತಿಗೆ ಕಿರುಕುಳ ನೀಡುತ್ತಿದ್ದರು.

ಈತ ವ್ಯಾಪಾರದಲ್ಲಿ ಕೈ ಸುಟ್ಟುಕೊಂಡು ಸಾಲ ತೀರಿಸಲಾಗದ ಅಸ ಪಾಯಕ ಸ್ಥಿತಿಯಲ್ಲಿದ್ದ ಕಡೂರಿನ ಬಲಾಡ್ಯ ಅಲ್ಲಿನ ಪೋಲಿಸಿದ ನೊಬ್ಬನನ್ನು ಅಡಸ್ಟ್‌ ಮಾಡಿಕೊಂಡು ನಡುರಾತ್ರಿ 2.30ಕ್ಕೆ ತೀರ್ಥ ಹಳ್ಳಿಗೆ ಬಂದು ನಿಂತ ಜಾಗದಲ್ಲಿ 3 ಲಕ್ಷ ಕೊಡು ಎಂದು ಪೀಡಿಸ ಲಾರಂಭಿಸಿ ಗಲಾಟೆ ರಾದ್ಧಾಂತ ಶುರು ಮಾಡಿದ್ದಾನೆ.

ಅಷ್ಟೇ ಅಲ್ಲದೆ ಇದಕ್ಕೂ ಮೊದಲೇ ಇವನ ಕಾರನ್ನು ತನ್ನ ವಶದಲ್ಲಿ ಇಟ್ಟುಕೊಂಡಿದ್ದಾನೆ.

ದಿಕ್ಕು ತೋಚದ ಯುವಕ ಅಸಹಾಯಕ ಸ್ಥಿತಿಯಲ್ಲಿ ಕೊನೆ ಪ್ರಯತ್ನ ಎಂಬಂತೆ ನಡುರಾತ್ರಿ 2.30ಕ್ಕೆ ನೇರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರರ ಮೊಬೈಲಿಗೆ ಕಾಲ್ ಮಾಡಿದ್ದಾನೆ.

ಅವನ ಅದೃಪ್ಪ ಆ ಸರಿ ಹೊತ್ತಿನಲ್ಲಿ ಎರಡೇ ರಿಂಗಿಗೆ ಗೃಹ ಸಚಿವರು ಕಾಲ್ ರಿಸೀವ್ ಮಾಡಿದ್ದಾರೆ.

ಈತ ತನ್ನ ಸಮಸ್ಯೆ ಅವರ ಹೇಳಿಕೊಂಡು ರಕ್ಷಣೆಗೆ ಮನವಿ ಮಾಡಿದ್ದಾನೆ.

ಫೋನನ್ನು ಪೋಲೀಸನವನ ಕೈಗೆ ಕೊಡಲು ಆರಗರು ಹೇಳಿದ್ದಾರೆ. ನಡುರಾತ್ರಿ ಕಾನೂನು ಬಾಹಿರ ರೀತಿಯಲ್ಲಿ ಸಾಲ ವಸೂಲಾತಿಗೆ ಬಂದವರಿಗೆ ಛಳಿ ಜ್ವರ ಬರುವುದು ಒಂದೇ ಬಾಕಿ.

ಪಡೆದ ಸಾಲ ನ್ಯಾಯಯುತ ಬಡ್ಡಿಯೊಂದಿಗೆ ಸ್ವೀಕರಿಸಿ ಯುವಕನ ಕಾರು ಸಹ ಹಿಂದಿರುಗಿಸಹಬೇಕು. ಮತ್ತು ಆತನಿಗೆ ಮಾನಸಿಕ ಹಿಂಸೆ ನೀಡಬಾರದೆಂಬ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಅದಾಗಲೇ ಯುವಕನ ಸಮಸ್ಯೆ ಬಗೆಹರಿದಿದೆ.

ರಾಜ್ಯದ ಗೃಹ ಮಂತ್ರಿಯೇ ನಡುರಾತ್ರಿ ಒಬ್ಬ ಯುವಕನ ಸಂಕಷ್ಟಕ್ಕೆ ನೆರವಾಗಿದ್ದು ಬಹುಷ ಬೇರೆ ಉದಾಹರಣೆ ಸಿಗುವುದೇ ಕಷ್ಟ..!

DAKSHINA KANNADA

ಪಾವಂಜೆ ನದಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ..!

Published

on

ಮುಲ್ಕಿ: ಮಂಗಳೂರು ಹೊರವಲಯದ ಮುಲ್ಕಿಯ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪದ ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ನಂದಿನಿ ನದಿಯ ದಡದಲ್ಲಿ ಸುಮಾರು 19 ರಿಂದ 20 ವರ್ಷದ ಒಳಗಿನ ಪ್ರಾಯದ ಯುವಕನ ಶವ ಪತ್ತೆಯಾಗಿದೆ.

ಹಳೆಯಂಗಡಿ ಪೂಜಾ ಫ್ರೆಂಡ್ಸ್ ನ ಸದಸ್ಯರು ಸ್ಥಳಕ್ಕೆ ಧಾವಿಸಿ ಶವವನ್ನು ಆಂಬುಲೆನ್ಸ್ ಮೂಲಕ ಮೂಲ್ಕಿ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಯುವಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಕಳೆದ ದಿನಗಳ ಹಿಂದೆ ಇದೇ ಪರಿಸರದ ಚೇಳಾಯರು ಅಣೆಕಟ್ಟಿನ ಬಳಿ ಯುವಕನೊಬ್ಬ ನಾಪತ್ತೆಯಾಗಿದ್ದು, ಈ ಶವ ಆತನದ್ದೇ ಇರಬೇಕು ಇರಬೇಕೆಂಬ ಶಂಕೆ ವ್ಯಕ್ತವಾಗಿದೆ.

ಮುಲ್ಕಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

Continue Reading

DAKSHINA KANNADA

Kadaba: ಹಠಾತ್ ಕಾಡಾನೆ ದಾಳಿ- ವ್ಯಕ್ತಿ ಗಂಭೀರ..!

Published

on

ಕಡಬ: ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಸ್ಥಿತಿಗೊಂಡು ಆಸ್ಪತ್ರೆಯಲ್ಲಿ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು ಗ್ರಾಮದ ಮರ್ಧಾಳ-ಕೊಣಾಜೆಯಲ್ಲಿ ನಡೆದಿದೆ.

ಐತ್ತೂರು ಗ್ರಾಮದ ಗರ್ತಿಲ ನಿವಾಸಿ ಓಡಿ ಎಂಬವರ ಪುತ್ರ ಕೂಲಿ ಕಾರ್ಮಿಕ ಚೋಮ (56) ಗಾಯಗೊಂಡವರು.

ಚೋಮ ಅವರು ಸಂಜೆ ವೇಳೆ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ನೆಲ್ಯಡ್ಕ ಶಾಲೆಯ ಸಮೀಪ ಇರುವ ಕಾರ್ತಿಕೇಯ ಭಜನಾ ಮಂದಿರ ಬಳಿ ಆನೆಯೊಂದು ಹಠತ್ ದಾಳಿ ನಡೆಸಿದೆ.

ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ.

ಸದ್ಯ ಚೋಮ ಅವರ ಸ್ಥಿತಿಯು ಚಿಂತಾಜನಕವಾಗಿದ್ದು, ಕಡಬದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ಹಿಂದೆ ಆನೆ ದಾಳಿಯ ಘಟನೆಗಳು ನಡೆದಿದ್ದು, ಕೃಷಿ ನಾಶದಂತಹ ಘಟನೆಗಳು ದಿನಂಪ್ರತಿ ನಡೆಯುತ್ತಿದೆ ಎನ್ನಲಾಗಿದೆ.

 

 

Continue Reading

DAKSHINA KANNADA

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆ

Published

on

ಮಂಗಳೂರು: ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ನಡೆದ  ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯಲ್ಲಿ  ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ  ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.

ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.

ಈ ಚುನಾವಣಾ ಪ್ರಕ್ರಿಯೆಯನ್ನು ಎಸ್ ಕೆಪಿಎ ಯ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ಅವರು ನಡೆಸಿಕೊಟ್ಟರು.

 

Continue Reading

LATEST NEWS

Trending