Connect with us

    DAKSHINA KANNADA

    ಅ*ಪಘಾತಕ್ಕೀಡಾದ ಯುವಕನ ಚಿಕಿತ್ಸೆಗೆ ಆಸ್ಪತ್ರೆ ನಿರಾಕರಣೆ : ಪ್ರಾ*ಣ ಉಳಿಸಿದ ಅಪರಿಚಿತ

    Published

    on

    ಉಡುಪಿ: ಒಡಿಶಾ ಮೂಲದ ಯುವಕನೊಬ್ಬ ಭಾನುವಾರ ಅ*ಪಘಾತಕ್ಕೀಡಾಗಿದ್ದು, ಸೂಕ್ತ ಚಿಕಿತ್ಸೆ ನೀಡಿ ಯುವಕನ ಪ್ರಾ*ಣ ಉಳಿಸಬೇಕಾದ ವೆನ್ಲಾಕ್ ಆಸ್ಪತ್ರೆ ಚಿಕಿತ್ಸೆಗೆ ನಿರ್ಲಕ್ಷ್ಯ ತೋರಿಸಿದ್ದು, ಸಮಾಜ ಸೇವಕ ವಿಶು ಶೆಟ್ಟಿ ಅವರ ಸಕಾಲಿಕ ಹಾಗೂ ಮಾನವೀಯ ನೆರವಿನಿಂದ ಯುವಕ ಪ್ರಾಣಾಪಾಯದಿಂದ ಪಾರಾಗಿರುವ ಪ್ರಕರಣ ಕೋಟ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

    ಅ*ಪಘಾತದಂತಹ ಗಂ*ಭೀರ ಪ್ರಕರಣಗಳಲ್ಲಿ ತುರ್ತು ಚಿಕಿತ್ಸೆ ನೀಡಿ ಜೀವ ಉಳಿಸಬೇಕಾದ ಸರಕಾರಿ ವ್ಯವಸ್ಥೆ, ದುರಸ್ತಿಯಲ್ಲಿದೆ ಎಂಬ ಕಾರಣ ನೀಡಿ ರೋ*ಗಿಗಳನ್ನು ಹಿಂದಕ್ಕೆ ಕಳುಹಿಸಿ ಅವರ ಪ್ರಾ*ಣದೊಡನೆ ಚೆಲ್ಲಾಟ ಮಾಡುತ್ತಿರುವುದು ಖಂಡನೀಯ ಎಂದು ಸಾರ್ವಜನಿಕ ವಲಯದಲ್ಲಿ ತೀ*ವ್ರ ಆಕ್ರೋಶ ವ್ಯಕ್ತವಾಗಿದೆ.

    ಘಟನೆಯ ಹಿನ್ನೆಲೆ:

    ಒಡಿಶಾ ಮೂಲದ ಕೂಲಿ ಕಾರ್ಮಿಕ ಕೃಷ್ಣ (27 ) ಎಂಬ ಯುವಕನಿಗೆ ಬೈಕೊಂದು ಡಿ*ಕ್ಕಿ ಹೊಡೆದು ಹೊಟ್ಟೆ ಭಾಗಕ್ಕೆ ತೀ*ವ್ರ ಪೆ*ಟ್ಟು ಬಿದ್ದು ಆಂತರಿಕ ಘಾ*ಸಿಯಾಗಿತ್ತು. ಯುವಕನನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ಪ್ರಥಮ ಚಿಕಿತ್ಸೆ ನೀಡಲಾಯಿತು. ಅ*ಪಘಾತದ ಗಂ*ಭೀರತೆ ಹಾಗೂ ಯುವಕನ ಆರ್ಥಿಕ ಪರಿಸ್ಥಿತಿಯನ್ನು ಅರಿತ ಆಸ್ಪತ್ರೆಯ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಶಿಫಾರಸ್ಸು ಮಾಡಿ ಆಂಬುಲೆನ್ಸ್ ಮೂಲಕ ರೋಗಿಯನ್ನು ಕಳುಹಿಸಿಕೊಟ್ಟಿದ್ದಾರೆ. ಆದರೆ ಅಲ್ಲಿ ಹೊಟ್ಟೆಗಾದ ಗಂ*ಭೀರ ಏ*ಟಿನಿಂದ ರೋಗಿ ನರಳುತ್ತಿದ್ದರೂ ಗಮನಿಸದೆ ಶಸ್ತ್ರ ಚಿಕಿತ್ಸಾ ವಿಭಾಗ ದುರಸ್ತಿಯಲ್ಲಿದೆ ಎಂದು ಹೇಳಿ ರೋಗಿಯನ್ನು ದಾಖಲಿಸಿ ಕೊಳ್ಳದೆ ಹಿಂದಕ್ಕೆ ಕಳುಹಿಸುವ ಮೂಲಕ ಅಮಾನವೀಯವಾಗಿ ನಡೆಸಿಕೊಳ್ಳಲಾಗಿದೆ.

    ಬ್ರಹ್ಮಾವರದಿಂದ ವೆನ್ಲಾಕ್ಗೆಗೆ ಪ್ರಯಾಣಿಸಲು ಒಂದೂವರೆ ಘಂಟೆ ಹಾಗೂ ಅಲ್ಲಿಂದ ಉಡುಪಿಗೆ ವಾಪಾಸ್ ಬರಲು ಒಂದೂವರೆ ಗಂಟೆ ಹೀಗೆ ಯುವಕನ ಪ್ರಾ*ಣ ಉಳಿಸುವ ಅಮೂಲ್ಯ ಸಮಯ ಪೋಲಾಗಿದೆ. ವೆನ್ಲಾಕನಿಂದ ಉಡುಪಿಗೆ ವಾಪಸ್ ಆದ ರೋ*ಗಿಯಆರೋಗ್ಯ ಸ್ಥಿತಿ ಚಿಂತಾಜನಕವಾಗುತ್ತಿದ್ದಂತೆ ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಯುವಕನ ನೆರವಿಗೆ ಧಾವಿಸಿದ್ದಾರೆ. ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಶಸ್ತ್ರ ಚಿಕಿತ್ಸೆ ದೊರೆಯುವಂತೆ ತಾನೇ ಮುತುವರ್ಜಿ ವಹಿಸಿಕೊಂಡು ಮಾನವೀಯತೆ ಮೆರೆದಿದ್ದಾರೆ. ಇದೀಗ ಯುವಕನನ್ನು ಶಸ್ತ್ರ ಚಿಕಿತ್ಸೆ ನಡೆಸಿ ಐಸಿಯುನಲ್ಲಿ ಇರಿಸಲಾಗಿದ್ದು, ರೋಗಿಯ ಸ್ಥಿತಿ ಗಂ*ಭೀರವಾಗಿದೆ. ರೋಗಿಗೆ ಹೆಚ್ಚಿನ ನೆರವಿನ ಅವಶ್ಯಕತೆ ಇದ್ದು ವಿಶು ಶೆಟ್ಟಿ ತಮ್ಮಿಂದ ಆದ ಸಹಾಯ ಮಾಡುವ ಮೂಲಕ ಯುವಕನ ಪ್ರಾಣ ಉಳಿಸುವ ಹೋರಾಟ ನಡೆಸುತ್ತಿದ್ದಾರೆ.

    ವೆನ್ಲಾಕ್ ನಿರ್ಲಕ್ಷ್ಯಕ್ಕೆ ಆಕ್ರೋಶ:

    ವೆನ್ಲಾಕ್ ಆಸ್ಪತ್ರೆಯ ಶಸ್ತ್ರ ಚಿಕಿತ್ಸೆಯ ವಿಭಾಗ ದುರಸ್ತಿಯಲ್ಲಿದ್ದರೆ ಅದಕ್ಕೆ ಬದಲಿ ವ್ಯವಸ್ಥೆ ಮಾಡುವ ಜವಾಬ್ದಾರಿ ಆಯಾ ಆಸ್ಪತ್ರೆಯ ಆಡಳಿತ ಮಂಡಳಿ ಹಾಗೂ ಆರೋಗ್ಯ ಇಲಾಖೆಯದ್ದಾಗಿದೆ. ಚಿಕಿತ್ಸೆ ನೀಡಲು ಸಾಧ್ಯವಿಲ್ಲ ಎಂದಾದರೆ ಈ ಬಗ್ಗೆ ತುರ್ತು ಪತ್ರಿಕಾ ಪ್ರಕಟಣೆ ನೀಡಿ ರೋಗಿಗಳ ಪ್ರಾ*ಣ ಉಳಿಸುವ ಮಾನವೀಯತೆಯನ್ನು ಅಸ್ಪತ್ರೆ ತೋರಿಸಬೇಕಾಗಿತ್ತು. ಆದರೆ ಅಷ್ಟು ದೂರದಿಂದ ಬಂದ ರೋಗಿಯು ಗಂಭೀರತೆಯನ್ನು ಅರಿಯದೆ ಅವರ ಪ್ರಾ*ಣದೊಡನೆ ಚೆ*ಲ್ಲಾಟವಾಡುವುದು ಸರಿಯಲ್ಲ ಎಂದು ವಿಶು ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

    ಯುವಕನನ್ನು ತುರ್ತಾಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರ ಚಿಕಿತ್ಸೆ ನಡೆಸದೆ ಇರುತ್ತಿದ್ದರೆ, ಆತನ ಪ್ರಾ*ಣಕ್ಕೆ ಅಪಾಯವಾಗುತಿತ್ತು. ಈ ಪ್ರಕರಣದಂತೆ ಇನ್ನೆಷ್ಟು ಪ್ರಕರಣಗಳು ನಡೆದು ದಾರಿಯಲ್ಲಿಯೇ ರೋಗಿಗಳು ಪ್ರಾ*ಣ ಬಿಟ್ಟಿರಬಹುದು ಎಂಬುದನ್ನು ಊಹಿಸಿಕೊಳ್ಳಲು ಭಯವಾಗುತ್ತದೆ. ನಮ್ಮ ಸರಕಾರಿ ಯಂತ್ರಗಳು ಮಾನವೀಯತೆಯನ್ನು ಬೆಳೆಸಿಕೊಳ್ಳುವುದು ಯಾವಾಗ ಎಂದು ಅವರು ಖಾರವಾಗಿ ಪ್ರಶ್ನಿಸಿದ್ದಾರೆ.

    ಆಯುಷ್ಮಾನ್ ಸಮಸ್ಯೆಗೆ ಪರಿಹಾರ ಎಂದು ? :

    “ಉಡುಪಿಗೆ ಕೂಲಿ ಕಾರ್ಮಿಕರಾಗಿ ಬಿಹಾರ. ಯುಪಿ, ಜಾರ್ಖಂಡ್, ಛತ್ತೀಸ್ ಘಡ ಮೊದಲಾದ ರಾಜ್ಯಗಳಿಂದ ಸಾವಿರಾರು ಕಾರ್ಮಿಕರು ಆಗಮಿಸುತ್ತಿದ್ದಾರೆ. ದುಡಿಯಲು ಇವರು ಬೇಕು. ಆದರೆ ಅ*ಪಘಾತದಂತಹ ತುರ್ತು ಸಂದರ್ಭದಲ್ಲಿ ಜೀವ ಉಳಿಸುವ ಆಯುಷ್ಮಾನ್ ಸೌಲಭ್ಯ ಲಭ್ಯವಾಗದಿರುವುದು ದೊಡ್ಡ ಸಮಸ್ಯೆಯಾಗಿದೆ. ರೇಷನ್ ಕಾರ್ಡ್ ಇಲ್ಲದ ಆಯುಷ್ಮಾನ್ ಸೌಲಭ್ಯ ಸಿಗದ ರೋಗಿಗಳ ಗತಿ ಏನು?” ಎಂದು ವಿಶು ಶೆಟ್ಟಿ ಪ್ರಶ್ನಿಸಿದ್ದಾರೆ. ಹೊರ ರಾಜ್ಯದ ಕೂಲಿ ಕಾರ್ಮಿಕರಿಗೆ ನಮ್ಮ ರಾಜ್ಯದಲ್ಲಿ ಆಯುಷ್ಮಾನ್ ನೋಂದಣಿ ಮಾಡಲು ತೊಡಕಾಗಿದೆ. ಆದರೆ ಕೇರಳದಲ್ಲಿ ಯಾವುದೇ ಸಮಸ್ಯೆ ಇಲ್ಲ. ಇದೊಂದು ತಾಂತ್ರಿಕ ದೋಷವಾಗಿದ್ದಾರೆ , ಇದನ್ನು ಬಗೆ ಹರಿಸಲು ಇಲಾಖೆ, ಸರಕಾರ ಪ್ರಯತ್ನ ಮಾಡಬೇಕು. ಇದೊಂದು ಜೀವ ಉಳಿಸುವ ಪ್ರಶ್ನೆ, ಇದರಲ್ಲಿ ನಿರ್ಲಕ್ಷ್ಯ ಮಾಡಬಾರದು ಎಂದು ಅವರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    BANTWAL

    ಬೈಕ್‌ಗಳು ಪರಸ್ಪರ ಮು*ಖಾಮು*ಖಿ ; ಬಾಲಕಿ ಸಾ*ವು

    Published

    on

    ಬಂಟ್ವಾಳ: ಬೈಕ್ ಗಳ ನಡುವೆ ಭೀ*ಕರ ಅ*ಪಘಾ*ತ ಸಂಭವಿಸಿ ಬೈಕ್ ನಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃ*ತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಿನ್ನೆ (ಜ.14) ರಾತ್ರಿ ನಡೆದಿದೆ.

    ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃ*ತ ಬಾಲಕಿ ಎಂದು ಗುರುತಿಸಲಾಗಿದೆ.

    ಬಾಲಕಿಯ ತಂದೆ ಬೈಕ್ ಚಾಲಕ ಅಬ್ದುಲ್ ರಹಮಾನ್ ಕೂಡ ಗಾ*ಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

     

    ಇದನ್ನೂ ಓದಿ : ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ

     

    ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ ರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿ*ಕ್ಕಿ ಹೊಡೆದಿದ್ದಾನೆ. ರಂಜಿತ್ ಗೆ ಕೂಡ ಗಾ*ಯವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.

    ಅ*ಪಘಾ*ತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜ*ಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್.ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    DAKSHINA KANNADA

    ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ

    Published

    on

    ಮಂಗಳೂರು : ನಗರದ ಜೈಲಿನಲ್ಲಿ ಕೈದಿಗಳು ಜೈಲು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹ*ಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

     

    ಮಂಗಳೂರಿನ ಜಿಲ್ಲಾ ಕಾರಾಗೃಹದ ‘ಎ’ ಬ್ಲಾಕ್‌ನ ಸೆಲ್‌ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಜೈಲು ಸಿಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ ವಿಚಾರಣಾಧೀನ ಕೈದಿಗಳು ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

     

    ಇದನ್ನೂ ಓದಿ : ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ

     

    ಜೈಲಿನಲ್ಲಿ ಮೊಬೈಲ್, ಗಾಂಜಾ ಮೊದಲಾದ ನಿಷೇಧಿತ ವಸ್ತುಗಳಿರುವ ಶಂಕೆಯಿಂದ ಜೈಲು ಅಧೀಕ್ಷಕ ಎಂ.ಎಚ್.ಆಶೇಖಾನ್ ನೇತೃತ್ವದಲ್ಲಿ ತಪಾಸಣೆಗೆ ಮುಂದಾಗಿದ್ದರು. ಆಗ ಪಾತ್ರೆ ಮತ್ತಿತರ ವಸ್ತುಗಳಿಂದ ವಿಚಾರಣಾ ಕೈದಿಗಳು ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅ*ವಾಚ್ಯ ಶಬ್ದಗಳಿಂದ ಬೈ*ದು ಬೆದರಿಕೆ ಒಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಬರ್ಕೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

    Continue Reading

    DAKSHINA KANNADA

    ರಾಜ್ಯದ 6 ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲಿ?

    Published

    on

    ಮಂಗಳೂರು/ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕನ್ನಡ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸಾಧಾರಣ ಮಳೆ ಆಗಿದ್ದು, ಇನ್ನೂ ಮುಂದಿನ 2 ದಿನ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಗಳಲ್ಲಿ ಚಂಡಮಾರುತದ ಪರಿಚಲನೆಯು ಈಗ ಅಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಸಮಭಾಜಕ ವೃತ್ತದ ಹಿಂದೂ ಮಹಾಸಾಗರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿದೆ. ಇದರಿಂದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

    ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ

    ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ?
    ಹಾಸನ, ಚಾಮರಾಜನಗರ, ಕೊಡಗು, ಮೈಸೂರು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ಇನ್ನು ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಂಜು ಬೀಳುವ ಸಾಧ್ಯತೆ ಇದೆ. ಜನವರಿ 20 ರವರೆಗೂ ಇದೇ ಹವಾಮಾನ ಮುಂದುವರಿಯಲಿದೆ.

    ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ಹಾಗೂ ನೆರೆಯ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿ.ಸೆ ಮತ್ತು 20 ಡಿ. ಸೆ ಇರುವ ಸಾಧ್ಯತೆ ಇದ್ದು, ನಾಳೆಯೂ ಹೀಗೆ ಇರಲಿದೆ.

    ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಹಗುರ ಮಳೆಯಾಗಿದೆ. ವಿಜಯಪುರದಲ್ಲಿ ಕನಿಷ್ಠ ತಾಪಮಾನ 14.6 ಡಿ. ಸೆ ಹಾಗೂ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಗರಿಷ್ಠ ತಾಪಮಾನ 32.8 ಡಿ. ಸೆ ದಾಖಲಾಗಿದೆ. ಇನ್ನು ಬೆಂಗಳೂರಿನಲ್ಲಿ ಇನ್ನೆರಡು ದಿನ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಮುಂದುವರಿಯುವ ಸಾಧ್ಯತೆ ಇದೆ.

    Continue Reading

    LATEST NEWS

    Trending