Connect with us

BELTHANGADY

ಬದಲಾಯಿತು ತಲೆಸುತ್ತಿ ಬಿದ್ದ ವ್ಯಕ್ತಿಯ ಬದುಕು; 26ವರ್ಷಗಳ ಬಳಿಕ ಮರಳಿದ ಪುತ್ರ:ಸಂತಸಗೊಂಡ ಕುಟುಂಬಿಕರು..

Published

on

ಬೆಳ್ತಂಗಡಿ:ಮನೆ ಬಿಟ್ಟು ಹೋಗಿದ್ದ ವ್ಯಕ್ತಿಯೊಬ್ಬ 26 ವರ್ಷಗಳ ಬಳಿಕ ಕುಟುಂಬವನ್ನು ಸೇರಿದ್ದಾರೆ. ಈ ಮೂಲಕ ಕುಟುಂಬಸ್ಥರಲ್ಲಿ ಸಂತಸ ಮನೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬೆಳಾಲು ಗ್ರಾಮದ ಓಡಿಪ್ರೊಟ್ಟು ಮನೆ ಈ ಸಂತಸದ ಕ್ಷಣಕ್ಕೆ ಸಾಕ್ಷಿಯಾಗಿದೆ. ಬೆಳಾಲು ಗ್ರಾಮದ ಓಡಿಪ್ರೊಟ್ಟು ಮನೆಯ ಕೊರಗಪ್ಪ ಪೂಜಾರಿಯವರ ಪುತ್ರ ಶಿವಪ್ಪ ಪೂಜಾರಿ ಮರಳಿ ಮನೆ ಸೇರಿದವರು.
ಶಿವಪ್ಪ ಅವರು 20 ವರ್ಷ ವಯಸ್ಸಿದ್ದಾಗ ಮನೆ ತೊರೆದಿದ್ದರು. ಇದೀಗ ಅವರಿಗೆ 46 ವರ್ಷ ವಯಸ್ಸಾಗಿದ್ದು, ಅಂದರೆ 26 ವರ್ಷಗಳ ಬಳಿಕ ಮರಳಿ ಮನೆ ಸೇರಿದ್ದಾರೆ.ಹೊಟೇಲ್ ಕೆಲಸಕ್ಕೆ ಸೇರಿದ್ದ ಶಿವಪ್ಪ ಪೂಜಾರಿಯವರು ತಮ್ಮ20ನೇ ವಯಸ್ಸಿನಲ್ಲಿಯೇ ಮನೆ ಬಿಟ್ಟು ತೆರಳಿದ್ದರು. ಬಡತನದಿಂದ ಮನೆ ಬಿಟ್ಟು ಹೋಗಿದ್ದ ಅವರು ಆರಂಭದಲ್ಲಿ ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು.

ಈ ವೇಳೆ ಮನೆಯವರ ಸಂಪರ್ಕದಲ್ಲಿದ್ದರು. ಬಳಿಕ ಉದ್ಯೋಗ ಅರಸುತ್ತಾ ತರೀಕೆರೆ, ಮೈಸೂರು ಕಡೆ ಹೋಗಿ ಮನೆಮಂದಿ ಸಂಪರ್ಕಕ್ಕೆ ಸಿಗದೆ ಹೋಗಿದ್ದರು. ಹುಡುಕಾಟ ನಡೆಸಿದರೂ ಮಗ ಸಿಕ್ಕಿರಲಿಲ್ಲ.

ಆದರೆ ಸುದೀರ್ಘ ಸಮಯದ ಬಳಿಕ ಮಗ ಮರಳುತ್ತಾನೆ ಎಂಬ ನಿರೀಕ್ಷೆ ಕಳೆದುಕೊಂಡಿದ್ದರು. ಪ್ರಸ್ತುತ ಮೈಸೂರಿನ ಹೋಟೆಲೊಂದರಲ್ಲಿ ಬಾಣಸಿಗನಾಗಿ ಕರ್ತವ್ಯನಿರ್ವಹಿಸುತ್ತಿದ್ದ ಶಿವಪ್ಪ ಅವರು ತರೀಕೆರೆಯ ಮೀನಾಕ್ಷಿಯವರೊಂದಿಗೆ ವಿವಾಹವಾಗಿದ್ದೇನೆ ಎಂದು ಹೇಳುತ್ತಿದ್ದು, ಪುತ್ರ ಪ್ರಸನ್ನ ಕುಮಾರ್, ಮಗಳು ಪ್ರಾರ್ಥನಾರೊಂದಿಗೆ ವಾಸ್ತವ್ಯವಿದ್ದರಂತೆ.

ಇದೀಗ ಲಾಕ್‌ಡೌನ್ ಘೋಷಣೆಯಾಗಿದ್ದು, ಮೈಸೂರಿನಲ್ಲಿ ಹೋಟೆಲುಗಳು ಮುಚ್ಚಿರುವುದರಿಂದ ಲಾರಿಯಲ್ಲಿ ಬಂಟ್ವಾಳಕ್ಕೆ ಬಂದಿದ್ದರು.
ಬಂಟ್ವಾಳ ಸಮೀಪದ ಮಾರಿಪಳ್ಳ ಬಸ್ ನಿಲ್ದಾಣದಲ್ಲಿ ಶಿವಪ್ಪ ಪೂಜಾರಿಯವರು ಅಸ್ವಸ್ಥಗೊಂಡು ಬಿದ್ದಿದ್ದರು. ತಕ್ಷಣ ಸ್ಥಳೀಯರು ಆರೈಕೆ ಮಾಡಿ ಊಟ ಕೊಡಿಸಿ ಮನೆ ವಿಚಾರಿಸುವಾಗ ಬೆಳಾಲಿನಲ್ಲಿರುವ ತಮ್ಮ ಮನೆಯವರ ಬಗ್ಗೆ ತಿಳಿಸಿದ್ದರು.

ತಕ್ಷಣ ಸ್ಥಳೀಯರೊಬ್ಬರು ವಾಟ್ಸ್‌ಪ್‌ನಲ್ಲಿ ಅವರ ವಿವರ, ಫೋಟೋ ಹಾಕಿದ್ದರು. ವಾಟ್ಸ್‌ಪ್ ಬಳಗದಲ್ಲಿ ಬೆಳಾಲಿನ ಯುವಕರು ಮನೆಮಂದಿಯನ್ನು ಸಂಪರ್ಕಿಸಿದಾಗ ಕಾಣೆಯಾಗಿದ್ದ ವಿಚಾರ ಖಾತ್ರಿಯಾಗಿತ್ತು.

ತಕ್ಷಣವೇ ಯುವಕರಾದ ತಾರಿದಡಿ ಆದಂ, ಆದರ್ಶನಗರದ ಉಸ್ಮಾನ್, ಕಬೀರ್, ಪರಂಗಿಪೇಟೆಯ ಮುಸ್ತಪ್ ಕೌಸರಿ ಅವರು ಮೇ 6ರಂದು ಶಿವಪ್ಪ ಅವರನ್ನು ಮನೆಗೆ ಕರೆದುಕೊಂಡು ಕುಟುಂಬವನ್ನು ಸೇರಿಸಿದ್ದಾರೆ.

ಕಳೆದ 26 ವರ್ಷಗಳಿಂದ ನಾಪತ್ತೆಯಾಗಿದ್ದ ಮಗ ಮನೆಗೆ ಮರಳಿರುವ ಸಂತೋಷದಲ್ಲಿ ಕುಟುಂಬವಿದ್ದು, ಇತ್ತ ಶಿವಪ್ಪ ಅವರು ಮನೆ ಮಂದಿಯೊಂದಿಗೆ ಸಂತೋಷವಾಗಿ ಸಮಯ ಕಳೆಯುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BELTHANGADY

ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ

Published

on

ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮ‌ಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.

bison

ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.

Continue Reading

LATEST NEWS

Trending