BANTWAL
ನಾಪತ್ತೆಯಾಗಿದ್ದ ಎಣ್ಮೂರು ಬೈದರ್ಕಳ ಗರಡಿಯ ಪಾತ್ರಿ ಶ*ವವಾಗಿ ಪತ್ತೆ!
ಬಂಟ್ವಾಳ : ನಾಪತ್ತೆಯಾಗಿದ್ದ ಎಣ್ಮೂರು ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಗಿರೀಶ್ ಮೃ*ತದೇಹ ಪತ್ತೆಯಾಗಿದೆ. ಪಾತ್ರಿಯಾಗಿದ್ದ ಗಿರೀಶ್, ದೈವ ಚಾಕಿರಿಯ ಜೊತೆಗೆ ಜೀವನೋಪಾಯಕ್ಕಾಗಿ ಆಟೋ ಚಾಲನೆಯ ಕೆಲಸ ಮಾಡುತ್ತಿದ್ದರು. ಬಜಪೆ ವಿಮಾನ ನಿಲ್ದಾಣಕ್ಕೆ ಬಾಡಿಗೆ ಇದೆ ಎಂದು ಹೇಳಿ ಬುಧವಾರ ತಡರಾತ್ರಿ ಎರಡು ಗಂಟೆಗೆ ರಿಕ್ಷಾದಲ್ಲಿ ಹೊರಟವರು ಬಳಿಕ ನಾಪತ್ತೆಯಾಗಿದ್ದರು.
ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಗುರುವಾರ ಅವರ ರಿಕ್ಷಾವು ಅಡ್ಡರು-ಪೊಳಲಿ ಸೇತುವೆಯಲ್ಲಿ ಚಾಲನೆ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದೇ ವೇಳೆ ರಾತ್ರಿ ಗಸ್ತಿನಲ್ಲಿದ್ದ ಬಜಪೆ ಪೊಲೀಸರು ಅನುಮಾನಾಸ್ಪದ ವಾಗಿ ಚಾಲನೆಯಲ್ಲೇ ನಿಂತಿದ್ದ ರಿಕ್ಷಾವನ್ನು ಪರಿಶೀಲಿಸಿದರು.
ಇದನ್ನೂ ಓದಿ : ಹೋಂ ವರ್ಕ್ ಮಾಡುತ್ತಿದ್ದಾಗ ತಲೆಗೆ ಪೆನ್ ಚುಚ್ಚಿ ಯುಕೆಜಿ ಮಗು ಸಾ*ವು!
ಪರಿಸರದಲ್ಲಿ ಹುಡುಕಿದರೂ ಚಾಲಕನ ಪತ್ತೆಯಾಗಲಿಲ್ಲ, ಬಳಿಕ ರಿಕ್ಷಾದಲ್ಲಿ ದೊರೆತ ದಾಖಲೆ ಪತ್ರದ ಆಧಾರದಲ್ಲಿ ಅವರ ಮನೆಗೆ ಮಾಹಿತಿ ನೀಡಿದ್ದರು. ತೀವ್ರ ಹುಡುಕಾಟದ ಬಳಿಕ ಅವರು ಶ*ವವಾಗಿ ಪತ್ತೆಯಾಗಿದ್ದಾರೆ.
BANTWAL
ಸಜಿಪದಲ್ಲಿ ರಸ್ತೆ ಅಪಘಾತ: ಯುವಕ ಮೃ*ತ್ಯು
ಬಂಟ್ವಾಳ: ಮೆಲ್ಕಾರ್ – ಮುಡಿಪು ರಾಜ್ಯ ಹೆದ್ದಾರಿಯ ಸಜಿಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದ್ವಿಚಕ್ರ ವಾಹನ ಸವಾರ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃ*ತಪಟ್ಟಿದ್ದಾರೆ.
ಬರಿಮಾರು ನಿವಾಸಿ ಸರ್ಫ್ರಾಝ್ ( 33) ಮೃ*ತಪಟ್ಟ ಯುವಕ. ಬೈಕ್ ಸವರಳಾಗಿದ್ದ ಸಹೋದರಿ ಜಾಸ್ಮೀನ್ (18) ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸರ್ಫ್ರಾಝ್ ವಿದ್ಯಾರ್ಥಿನಿಯಾಗಿರುವ ತಂಗಿ ಜಾಸ್ಮೀನ್ ರನ್ನು ಬುಧವಾರ ಬೆಳಗ್ಗೆ ದೇರಳಕಟ್ಟೆಯ ಕಾಲೇಜಿಗೆ ಸ್ಕೂಟರ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಮೆಲ್ಕಾರ್ ನಿಂದ ಮುಡಿಪು ಮಾರ್ಗವಾಗಿ ಮಾರ್ನಬೈಲು ತಲುಪಿದಾಗ ಇವರ ಸ್ಕೂಟರ್ ಗೆ ಎದುರಿನಿಂದ ಇಮ್ತಿಯಾಝ್ ಎಂಬಾತ ಚಲಾಯಿಸಿಕೊಂಡು ಬಂದ ಬೈಕ್ ಢಿಕ್ಕಿ ಹೊಡೆದಿತ್ತು. ಇದರಿಂದ ಸ್ಕೂಟರ್ ನಲ್ಲಿದ್ದ ರಸ್ತೆಗೆ ಎಸೆಯಲ್ಪಟ್ಟಿದ್ದರು.
ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಸರ್ಫ್ರಾಝ್ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BANTWAL
ಬಸ್ಸಿನಿಂದ ಪರಿಸರ ಮಾಲಿನ್ಯ; ಸಾರ್ವಜನಿಕರ ಆಕ್ರೋಶ
ಬಂಟ್ವಾಳ: ಮಂಗಳೂರು ವಿಭಾಗಕ್ಕೆ ಸೇರಿದ ಕೆಎಸ್ಆರ್ಟಿಸಿ ಬಸ್ಸೊಂದು ಮಂಗಳೂರು – ಧರ್ಮಸ್ಥಳ ಸಂಚರಿಸುವ ವೇಳೆಯಲ್ಲಿ ಜೀವಕ್ಕೆ ಹಾಗೂ ಪರಿಸರಕ್ಕೆ ಹಾನಿಕಾರಕವಾದ ಕಪ್ಪು ಹೊಗೆಯನ್ನು ಹೊರ ಹಾಕುತ್ತಿದ್ದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಕೆ.ಎಸ್.ಆರ್.ಟಿ.ಸಿ ಸಂಸ್ಥೆಯು ಸರಿಯಾದ ನಿರ್ವಹಣೆ ಇಲ್ಲದ ಬಸ್ಸುಗಳನ್ನು ರಸ್ತೆಯಲ್ಲಿ ಓಡಿಸುತ್ತಿದ್ದು, ಇದರಿಂದ ಜನರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರವೇ ನಿವಾರಿಸಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ಕಪ್ಪು ಹೋಗೆ ಹೊರ ಸೂಸುವ ಬಸ್ಸಿನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಸರ್ಕಾರದ ವಿರುದ್ಧ ಕಿಡಿ ಕಾರುತ್ತಿದ್ದಾರೆ.
BANTWAL
ಬಂಟ್ವಾಳ: ಮನೆಯೊಂದಕ್ಕೆ ಸಿಡಿಲು ಬಡಿದು ಅಪಾರ ಹಾನಿ
ಬಂಟ್ವಾಳ: ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಅಪಾರ ಹಾನಿಯುಂಟಾದ ಘಟನೆ ಬಂಟ್ವಾಳದ ಉರುವಾಲು ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ತಾರಿದಡಿ ನಿವಾಸಿ ಸೇಸಪ್ಪ ಅವರ ಮನೆಗೆ ಸಿಡಿಲು ಬಡಿದಿದ್ದು, ಗೋಡೆ ಬಿರುಕು ಬಿಟ್ಟಿದೆ. ಇದರೊಂದಿಗೆ ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.
ಸಿಡಿಲು ಬಡಿದ ಸಂದರ್ಭದಲ್ಲಿ ಸಂದರ್ಭ ಸೇಸಪ್ಪ ಗೌಡರು ಮಕ್ಕಳನ್ನು ಶಾಲೆಯಿಂದ ಕರೆದುಂಡು ಬರಲು ತೆರಳಿದ್ದರು. ಹೀಗಾಗಿ ಸಂಭವನೀಯ ಅಪಾಯ ತಪ್ಪಿದಂತಾಗಿದೆ. ಇನ್ನು ಸಿಡಿಲು ಬಡಿದ ಪರಿಣಾಮ 9 ವರ್ಷಗಳ ಹಿಂದೆ ಕಟ್ಟಿದ್ದ ಈ ಕಾಂಕ್ರೀಟ್ ಮನೆ ಸಂಪೂರ್ಣ ಹಾನಿಗೀಡಾಗಿದೆ ಎಂದು ಸೇಸಪ್ಪ ಅವರು ಹೇಳಿದ್ದಾರೆ.
- BIG BOSS5 days ago
BBK11 ವೇದಿಕೆಗೆ ಬರುತ್ತಿದ್ದಂತೆ ರೀಲ್ಸ್ ಸ್ಟಾರ್ ಮೇಲೆ ಕೋಪಗೊಂಡ ಕಿಚ್ಚ: ಇಂತವರನ್ನ ಏಕೆ ಕರೆಸಿದ್ರಿ ಎಂದು ಗರಂ?
- BIG BOSS5 days ago
ಭ್ರಷ್ಟರ ವಿರುದ್ಧ ಗುಡುಗಿದ ಸ್ಪರ್ಧಿ ಲಾಯರ್ ಜಗದೀಶ್ಗೆ ಕಿಚ್ಚ ವಾರ್ನಿಂಗ್..!
- LATEST NEWS4 days ago
Watch Video: ಕೋಚಿಂಗ್ ಸೆಂಟರ್ನಲ್ಲಿ ವಿದ್ಯಾರ್ಥಿನಿಯೊಂದಿಗೆ ಬಯಾಲಜಿ ಶಿಕ್ಷಕನ ರೊಮ್ಯಾನ್ಸ್
- BIG BOSS5 days ago
ಚೈತ್ರಾ ಕುಂದಾಪುರಗೆ ಮೊದಲ ದಿನವೇ ಹೊಸ ಬಿರುದು ಕೊಟ್ಟ ಲಾಯರ್ ಜಗದೀಶ್
Pingback: ಕಡಬ ಕೆರೆ ನೀರಿನಿಂದ ರಸ್ತೆ ಮುಳುಗಡೆ..! ಸಂಕಷ್ಟದಲ್ಲಿ ದಲಿತ ಕುಟುಂಬ..! - NAMMAKUDLA NEWS - ನಮ್ಮಕುಡ್ಲ ನ್ಯೂಸ್