LATEST NEWS
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕೌನ್ಸಿಲರ್ಗಳ ಶುದ್ಧೀಕರಣ; ಗೋಮೂತ್ರ ಸಿಂಪಡಿಸಿದ ಬಿಜೆಪಿ ಶಾಸಕ..!
ಜೈಪುರ/ಮಂಗಳೂರು: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನಾಯಕರನ್ನು ಬಿಜೆಪಿ ಶಾಸಕ ಗಂಗಾಜಲ ಹಾಗೂ ಗೋಮೂತ್ರ ಸಿಂಪಡಿಸಿ ಶುದ್ಧೀಕರಣ ಮಾಡಿ ಪಕ್ಷಕ್ಕೆ ಬರಮಾಡಿಕೊಂಡ ಘಟನೆ ನಡದಿದೆ.
ಭ್ರಷ್ಟಾಚಾರದ ಆರೋಪ ಹೊತ್ತಿದ್ದ ಮಾಜಿ ಮೇಯರ್ ಮುನೇಶ್ ಗುರ್ಜಾರ್ ಅವರ ಜಾಗಕ್ಕೆ ಬಿಜೆಪಿ ಕುಸುಮ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ವೇಳೆ ಅವರಿಗೆ 7 ಕಾಂಗ್ರೆಸ್ ಮತ್ತು ಒಬ್ಬ ಸ್ವತಂತ್ರ ಸದಸ್ಯರು ಬೆಂಬಲ ಸೂಚಿಸಿದ್ದಾರೆ. ಇದೀಗ ಅವರೆಲ್ಲರೂ ಬಿಜೆಪಿಗೆ ಸೆರ್ಪಡೆಗೊಂಡಿದ್ದಾರೆ. ಇನ್ನು ಬಿಜೆಪಿಗೆ ಸೇರ್ಪಡಗೊಂಡ 8 ಜೈಪುರ ನಗರಪಾಲಿಕೆ ಸದಸ್ಯರನ್ನು ರಾಜಸ್ಥಾನ ಬಿಜೆಪಿ ಶಾಸಕ ಬಾಲಮುಕುಂದ ಆಚಾರ್ಯ ಗೋಮೂತ್ರ ಮತ್ತು ಗಂಗಾಜಲ ಸಿಂಪಡಿಸಿ ಪಕ್ಷಕ್ಕೆ ಸ್ವಾಗತ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ಭ್ರಷ್ಟಾಚಾರದಿಂದ ಅಶುದ್ಧಗೊಂಡಿದೆ ಎಂದು ಜೈಪುರ ಮಹಾನಗರ ಪಾಲಿಕೆಯನ್ನು ಕೂಡಾ ಗೋಮೂತ್ರದಿಂದ ಶುದ್ಧೀಕರಿಸಲಾಗಿದೆ. ಪಾಲಿಕೆಯ ಕಛೇರಿಯನ್ನು ಮಂತ್ರಘೋಷದೊಂದಿಗೆ ಗಂಗಾಜಲದಿಂದ ಶುದ್ಧೀಕರಿಸಲಾಯಿತು.
LATEST NEWS
ವೈದ್ಯನ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಬ*ಲಿ – ಪ್ರಕರಣ ದಾಖಲು
ಚಿಕ್ಕಮಗಳೂರು: ಖಾಸಗಿ ಕ್ಲಿನಿಕ್ ವೈದ್ಯ ನೀಡಿದ ಇಂಜೆಕ್ಷನ್ನಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕ ಮೃ*ತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ.
ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಅವರ 7 ವರ್ಷದ ಮಗ ಸೋನೇಶ್ ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ. ಪೋಷಕರು ಸೋನೇಶ್ ನನ್ನು ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯ ವರುಣ್ ಬಳಿ ಸೆಪ್ಟೆಂಬರ್ 24 ರಂದು ಚಿಕಿತ್ಸೆಗಾಗಿ ಕರೆದೊಯ್ದಿದ್ರು. ವೈದ್ಯ ವರುಣ್, ಬಾಲಕನ ಸೊಂಟಕ್ಕೆ ಇಂಜೆಕ್ಷನ್ ಮಾಡಿದ್ದು ಇದೆ ಇಂಜೆಕ್ಷನ್ ಓವರ್ ಡೋಸ್ ಆಗಿ ಬಾಲಕನ ಜೀವವನ್ನೇ ತೆಗೆದಿದೆ.
ವೈದ್ಯ ವರುಣ್ ನೀಡಿದ ಓವರ್ ಡೋಸ್ ಇಂಜೆಕ್ಷನ್ ನಿಂದ ಬಾಲಕನ ಸೊಂಟದ ಭಾಗದಲ್ಲಿ ಬೊಬ್ಬೆಗಳು ಕಾಣಿಸಿಕೊಂಡಿದ್ದವು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸೋನೇಶ್ ಮೃ*ತಪಟ್ಟಿದ್ದಾರೆ.
ಶ*ವ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಸರ್ಕಾರಿ ಆಸ್ಪತ್ರೆಗೆ ಬಾಲಕನ ಮೃ*ತದೇಹವನ್ನು ರವಾನೆ ಮಾಡಲಾಗಿದೆ. ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಡಾ ವರುಣ್ ವಿರುದ್ಧ ಪ್ರಕರಣ ದಾಖಲಾಗಿದೆ.
LATEST NEWS
ಮಗಳಿಂದಲೇ ತಾಯಿಯ ಕೊ*ಲೆ; ಕುಪ್ಪಾಣಿಯಿಂದ ಹೊ*ಡೆದು ಕೊಂ*ದ ಅಪ್ರಾಪ್ತೆ
ಮಂಗಳೂರು/ಅಸ್ಸಾಂ: ಇತ್ತೀಚಿನ ದಿನಗಳಲ್ಲಿ ಪ್ರತಿ ಮನೆಯಲ್ಲಿ ಒಂದೋ, ಎರಡೋ ಮಕ್ಕಳಿರುತ್ತಾರೆ. ಮಕ್ಕಳಿಗೆ ಸ್ವಲ್ಪವೂ ಕಷ್ಟ ತೋರದಂತೆ ಪೋಷಕರು ಸಾಕಿರುತ್ತಾರೆ. ಅದರಿಂದಾಗಿ ತಾಳ್ಮೆ, ಸಹನೆ, ಹೊಂದಾಣಿಕೆ ಸ್ವಲ್ಪವೂ ಇರದೆ ಹೆತ್ತ ಪೋಷಕರನ್ನೇ ಮಕ್ಕಳು ಬ*ಲಿ ಹಾಕುತ್ತಿದ್ದಾರೆ. ಮುದ್ದಾಗಿ ಸಾಕಿದ ಮಗಳ ಕೈಯಲ್ಲೇ ತಾಯಿ ಸಾವಿ*ಗೀಡಾಗಿರುವುದು ನಿಜಕ್ಕೂ ವಿಧಿ ವಿಪರ್ಯಾಸವೇ ಸರಿ.
ಅಪ್ರಾಪ್ತ ಮಗಳೊಬ್ಬಳು ಅಮ್ಮನಿಗೆ ಕುಟ್ಟಾಣಿಯಿಂದ ಹೊ*ಡೆದು ಕೊಂ*ದ ಆಘಾ*ತಕಾರಿ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಅವಳು ಉದಯೋನ್ಮುಖ ಟೆನ್ನಿಸ್ ಪ್ಲೇಯರ್ ಆಗಿದ್ದಳು ಎಂದು ತಿಳಿದು ಬಂದಿದೆ.
ಯುವತಿಯ ತಂದೆ ಟೆನ್ನಿಸ್ ಕೋಚರ್ ಆಗಿದ್ದು, ಸಂಜೆ ಕೋಚಿಂಗ್ ನೀಡುವುದಕ್ಕಾಗಿ ಡ್ಯೂಟಿಗೆ ತೆರಳಿದ್ದ ಸಂದರ್ಭದಲ್ಲಿ ಈ ದು*ರ್ಘಟನೆ ಸಂಭವಿಸಿದೆ.
ಅಪ್ಪ ಅಮ್ಮ, ಮಗಳು ಇದ್ದ ಪುಟ್ಟ ಕುಟುಂಬ ಇವರದಾಗಿತ್ತು. ತಂದೇ ದೀಪ್ ಚಂದ್ ಪ್ರಸಾದ್ ಟೆನ್ನಿಸ್ ಕೋಚರ್ ಆಗಿದ್ದು, ಇಲ್ಲಿನ ಅಪಾರ್ಟ್ಮೆಂಟ್ನಲ್ಲಿ ಜೊತೆಯಾಗಿ ಬದುಕುತ್ತಿದ್ದರು.
ಗುವಾಹಟಿಯ ಚಚಲ್ ಪ್ರದೇಶದ ಪೂರ್ಣಿಮಾ ಮೆನ್ಸನ್ನಲ್ಲಿ ಬ್ಲಾಕ್ ಎನಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಘಟನೆ ನಡೆದಿದೆ. ತಾಯಿ ಮಗಳಿಗೆ ಮಾತಿಗೆ ಮಾತು ಬೆಳೆದು ಕೊ*ಲೆಯಲ್ಲಿ ಅಂತ್ಯವಾಗಿದೆ. ಅಪ್ರಾಪ್ತ ಮಗಳು ತನ್ನ 40 ವರ್ಷ ಪ್ರಾಯದ ಹೆತ್ತಬ್ಬೆಯನ್ನು ಕುಟ್ಟಾಣಿಯಿಂದ ಹೊ*ಡೆದು ಸಾ*ಯಿಸಿದ್ದಾಳೆ.
ನಿನ್ನೆ (ಸೆ.27) ಸಂಜೆ 7.30ರ ಸಮಯಕ್ಕೆ ಅಮ್ಮ ಮಗಳ ಮಧ್ಯೆ ವಾಗ್ವಾದ ಶುರುವಾಗಿದೆ. ಈ ವೇಳೆ ತೀವ್ರವಾಗಿ ಕುಪಿತಗೊಂಡಿದ್ದ ಬಾಲಕಿ ತನ್ನ ಹೆತ್ತಮ್ಮ ಎಂಬುದನ್ನು ಕೂಡ ಯೋಚಿಸದೇ ಕುಟ್ಟಾಣಿಯಿಂದ ಅಮ್ಮ ಮಂಜುದೇವಿಗೆ ಸಾಯುವವರೆಗೂ ಹೊಡೆದು ಕೊಂ*ದೇ ಬಿಟ್ಟಿದ್ದಾಳೆ.
ಘಟನೆಯ ಬಳಿಕ ನೆರೆಮನೆಯವರು ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದು, ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಅಪ್ರಾಪ್ತ ಮಗಳನ್ನು ಬಂಧಿಸಿದ್ದಾರೆ. ಈಗ ಪೊಲೀಸ್ ಕಸ್ಟಡಿಯಲ್ಲಿರುವ ಆಕೆಯನ್ನು ವಿಚಾರಣೆ ನಡೆಸಲಾಗುತ್ತಿದ್ದು, ಕೊಲೆಗೆ ಮೊದಲು ಏನು ನಡೆಯಿತು ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.
DAKSHINA KANNADA
ಕೆಮ್ಮಾರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮಗುಚಿ ಬಿದ್ದ ಘಟನೆ ಇಂದು(ಸೆ.28) ಕೆಮ್ಮಾರದಲ್ಲಿ ನಡೆದಿದೆ. ಕಡಬ ಕಡೆಯಿಂದ ಕೆಮ್ಮಾರ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಕೂಡಲೇ ಸ್ಥಳೀಯರು ಕೂಡಿಕೊಂಡು ಕಾರನ್ನು ಮೇಲೆಕ್ಕೆತ್ತಿದ್ದಾರೆ.
ಬಸ್ ನಿಲ್ದಾಣದ ಬಳಿಯೇ ಈ ಘಟನೆ ನಡೆದಿದ್ದು, ಅಷ್ಟರಲ್ಲಾಗಲೇ ಬಸ್ ಬಂದು ಹೋಗಿದ್ದರಿಂದ ಅಲ್ಲಿ ಹೆಚ್ಚಿನ ಪ್ರಯಾಣಿಕರು ಇರಲಿಲ್ಲ. ಇದರಿಂದ ಸಂಭವನೀಯ ಅವಘ*ಡವೊಂದು ತಪ್ಪಿದಂತಾಗಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ : ಮಂಗಳೂರು ವಿಮಾನ ನಿಲ್ಧಾಣದ ಭದ್ರತೆಯಿಂದ ಜೂಲಿ ನಿವೃತ್ತಿ
ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವ ಈ ರಾಜ್ಯ ಹೆದ್ದಾರಿಯು ಹಳೆಗೇಟು- ಕೊಯಿಲದವರೆಗೆ ಸಂಪೂರ್ಣ ಹದಗೆಟ್ಟಿದ್ದು, ಹೊಂಡ-ಗುಂಡಿಗಳಿಂದ ಕೂಡಿದೆ. ಹಲವು ಬಾರಿ ಈ ಬಗ್ಗೆ ಮನವಿ ಮಾಡಿದರೂ ಲೋಕೋಪಯೋಗಿ ಇಲಾಖೆ ಸ್ಪಂದಿಸುತ್ತಿಲ್ಲ ಎಂಬ ಆಕ್ರೋಶ ಕೆಮ್ಮಾರ ನಾಗರಿಕ ಹಿತರಕ್ಷಣಾ ವೇದಿಕೆಯಿಂದ ವ್ಯಕ್ತವಾಗಿದೆ