Connect with us

    LATEST NEWS

    ಯುವಕನ ಜೊತೆ ಓಡಿಹೋದ ತಾಯಿ..! ಅಮ್ಮಾ ಬಾರಮ್ಮ..ಎಂದು ಮಕ್ಕಳು ಅಂಗಲಾಚಿದ್ರೂ ಕ್ಯಾರೇ ಅನ್ನದ ತಾಯಿ..!!

    Published

    on

    ಬೆಳಗಾವಿ/ಮಂಗಳೂರು: ಹೆತ್ತ ಮಕ್ಕಳನ್ನು ಬಿಟ್ಟು ಇಪ್ಪತ್ತೈದು ವರ್ಷದ ಯುವಕನ ಜೊತೆ ತಾಯಿಯೊಬ್ಬಳು ಪರಾರಿಯಾದ ಘಟನೆ ಬೆಳಗಾವಿ ನಗರದ ಗಣೇಶಪುರದಲ್ಲಿ ನಡೆದಿದೆ. ತಾಯಿಯಿಂದಾಗಿ ಮೂರು ಗಂಡು ಮಕ್ಕಳು ಬೀದಿಗೆ ಬಂದಿದ್ದಾರೆ. ನಮಗೆ ನ್ಯಾಯ ಕೊಡಿಸುವಂತೆ ಮೂರು ಮಕ್ಕಳು ಬೆಳಗಾವಿ ಕ್ಯಾಂಪ್ ಪೊಲೀಸರ ಮೊರೆ ಹೋಗಿದ್ದಾರೆ.

    ಸರಕಾರಿ ನೌಕರಿಯಲ್ಲಿದ್ದ ಪತಿಯ ಅಕಾಲಿಕ ಮರಣದ ಬಳಿಕ ಮಹಿಳೆ ಅನುಕಂಪದ ನೌಕರಿ ಗಿಟ್ಟಿಸಿಕೊಂಡಿದ್ದಳು. ಪತಿಯ ಮರಣ ನಂತರ ಮೂರು ಮಕ್ಕಳು ತಾಯಿಯ ನೆರಳಲ್ಲಿ ಬೆಳೆದಿದ್ದಾರೆ. ಇದೀಗ ಮೂರು ಗಂಡು ಮಕ್ಕಳನ್ನು ಬೀದಿ ಪಾಳು ಮಾಡಿ ಇಪ್ಪತ್ತೈದು ವರ್ಷದ ಯುವಕನ ಜೊತೆ ಓಡಿ ಹೋಗಿದ್ದಾಳೆ. ಕೆಲ ತಿಂಗಳಿನಿಂದ ಮಹಿಳೆ ಯುವಕನ ಜೊತೆಯಲ್ಲಿ ನೆಲೆಸಿದ್ದಾಳೆ.

    Read More..; ನಟ ದರ್ಶನ್ ಮತ್ತೊಬ್ಬ ಮ್ಯಾನೇಜರ್ ಆತ್ಮಹ*ತ್ಯೆ!? ಡೆ*ತ್ ನೋಟ್ ನಲ್ಲಿ ಏನಿದೆ!?

    ಇತ್ತ ತಂದೆಯೂ ಇಲ್ಲದೆ ತಾಯಿಯೂ ಇಲ್ಲದೆ ಮಕ್ಕಳು ಅನಾಥರಾಗಿದ್ದಾರೆ. ಇತ್ತ ಮನೆ ಬಾಡಿಗೆ ಕಟ್ಟದೆ ಮನೆ ಮಾಲೀಕ ಮಕ್ಕಳನ್ನು ಮನೆಯಿಂದ ಹೊರ ಹಾಕಿದ್ದಾರೆ. ಸದ್ಯಕ್ಕೆ ಅಜ್ಜಿ ಮನೆಯಲ್ಲಿ ಮೂರು ಮಕ್ಕಳು ಆಶ್ರಯ ಪಡೆಯುತ್ತಿದ್ದಾರೆ.

    ಬೆಳಗಾವಿ ಕ್ಯಾಂಪ್ ಪೊಲೀಸರ ಬಳಿ ಹೋಗಿ ತಮ್ಮ ತಾಯಿಯನ್ನು ನಮ್ಮ ಜೊತೆ ಕಳುಹಿಸಿಕೊಡಿ ಎಂಬುದಾಗಿ ಮನವಿ ಮಾಡಿಕೊಂಡಿದ್ದಾರೆ. ನಾವು ವಿದ್ಯಾಭ್ಯಾಸ ಬಿಟ್ಟು ಕೆಲಸಕ್ಕೆ ಹೋಗಿ ತಾಯಿಯನ್ನು ಸಾಕುತ್ತೇವೆ ಎಂದು ಹೇಳಿದ್ದಾರೆ. ಆದರೆ ಇದಕ್ಕೆಲ್ಲಾ ಮರುಗದ ನಲುವತ್ತು ವರುಷದ ತಾಯಿ ನಾನು ನಿಮ್ಮ ಜೊತೆ ಬರುವುದಿಲ್ಲ ಎಂದು ಪಟ್ಟುಹಿಡಿದಿದ್ದಾಳೆ.

    Read More..; WATCH : ಕಾರು ಚಲಾಯಿಸುವಾಗ ರೀಲ್ಸ್ ಮಾಡಲು ಹೋಗಿ ಪ್ರಾ*ಣ ಕಳೆದುಕೊಂಡ ಯುವತಿ

    ಇನ್ನು ಯುವಕ ವಿನಾಯಕ ಕೋಲ್ಕಾರ ಈ ಹಿಂದೆ ಮಹಿಳೆಯೊಬ್ಬರಿಂದ ಚಪ್ಪಲಿ ಏಟು ತಿಂದಿದ್ದನು. ಮಹಿಳೆಗೆ ಕರೆ ಮಾಡಿ ಐ ಲವ್‌ ಯೂ ಎಂದಿದ್ದನಂತೆ. ಇದರಿಂದ ಆಕ್ರೋಶಗೊಂಡ ಮಹಿಳೆ ಯುವಕನಿಗೆ ಚಪ್ಪಲಿ ಸೇವೆ ಮಾಡಿದ್ದರು. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

    ಸದ್ಯ ಯುವಕನ ಜಾಲದಲ್ಲಿ ಸಿಲುಕಿಕೊಂಡಿರುವ ಮಹಿಳೆ ತನ್ನ ಮೂರು ಮಕ್ಕಳನ್ನು ಬಿಟ್ಟು ಹಾಯಾಗಿದ್ದಾಳೆ. ಕರುಳಿನ ಕೂಗು ಆಕೆಗೆ ಕೇಳಿಸದೆ ಇರುವುದು ವಿಪರ್ಯಾಸ.

    DAKSHINA KANNADA

    ಜಿಲ್ಲೆಯಲ್ಲಿ ರೆಡ್ ಅಲರ್ಟ್‌..! ಜೂನ್ 27 ಶಾಲೆಗೆ ರಜೆ ಘೋಷಣೆ..!

    Published

    on

    ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 27 ರ ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳು, ಅಂಗನವಾಡಿ , ಹಾಗೂ ಪ್ರೌಡಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜೂನ್ 27 ರಂದು ವ್ಯಾಪಕ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ.

    ಈ ಕುರಿತಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಯಿಲನ್ ಅವರು ಈ ಆದೇಶ ಹೊರಡಿಸಿದ್ದಾರೆ. ಇಷ್ಟೇ ಅಲ್ಲದೆ ತೀವೃ ಮಳೆಯ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸೂಕ್ತ ಕ್ರಮಗಳ ಬಗ್ಗೆಯೂ ಎಚ್ಚರಿಕೆ ನೀಡಿದ್ದಾರೆ. ಮೀನುಗಾರು ಸಮುದ್ರಕ್ಕೆ ಇಳಿಯದಂತೆ ಆದೇಶದಲ್ಲಿ ಸೂಚಿಸಿದ್ದಾರೆ. ನೀರು ಇರುವ ತಗ್ಗು ಪ್ರದೇಶಗಳಿಗೆ ಜನರು ತೆರಳದೇ ಇರುವುದು, ಹಾಗೂ ಮಳೆ ನೀರಿನಿಂದ ನೆರೆಯ ಆತಂಕ ಇರುವ ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆಯೂ ಸೂಚನೆ ನೀಡಿದ್ದಾರೆ.

    ಯಾವುದೇ ತುರ್ತು ಪರಿಸ್ಥಿತಿಯ ಸಮಯದಲ್ಲಿ ಜಿಲ್ಲಾಡಳಿತದ 1077 ಅಥವಾ  0824-2442590 ನಂಬರ್ ಕರೆ ಮಾಡುವಂತೆ ಸೂಚಿನೆ ನೀಡಲಾಗಿದೆ.

    Continue Reading

    LATEST NEWS

    500 ನೌಕರರನ್ನು ಕೆಲಸದಿಂದ ವಜಾಗೊಳಿಸಿದ Yes ಬ್ಯಾಂಕ್‌..!

    Published

    on

    ಮಂಗಳೂರು ( ಮುಂಬೈ ) : ದೇಶದಲ್ಲಿ ಹೆಸರು ಮಾಡಿರುವ ಖಾಸಗಿ ಬ್ಯಾಂಕ್ ಆಗಿರುವ Yes ಬ್ಯಾಂಕ್ ತನ್ನ 500 ನೌಕರರಿಗೆ ಮೂರು ತಿಂಗಳ ಸಮಾನ ವೇತನ ನೀಡಿ ಹೊರ ಹಾಕಿದೆ. ಬ್ಯುಸಿನೆಸ್ ಟುಡೆ ವರದಿ ಪ್ರಕಾರ ಯೆಸ್ ಬ್ಯಾಂಕ್‌ ಇನ್ನೂ ಅನೇಕ ನೌಕರರ ಲಿಸ್ಟ್‌ ತಯಾರಿಸಿದ್ದು, ಮುಂದಿನ ದಿನದಲ್ಲಿ ಅವರನ್ನೂ ವಜಾಗೊಳಿಸುವ ಸಾದ್ಯತೆ ಇದೆ ಎಂದು ಹೇಳಿದೆ. ಬಹುತೇಕ ಎಲ್ಲಾ ವಿಭಾಗದ ನೌಕರರು ಈ ಪಟ್ಟಿಯಲ್ಲಿ ಒಳಗೊಂಡಿದ್ದು, ನೌಕರರು ಅತಂತ್ರ ಸ್ಥಿತಿಯನ್ನು ಎದುರಿಸುತ್ತಿದ್ದಾರೆ.

    ಡಿಜಿಟಲೀಕರಣದಿಂದ ಕಾಸ್ಟ್‌ ಕಟ್ಟಿಂಗ್‌ ..!

    Yes ಬ್ಯಾಂಕ್‌ ಡಿಜಿಟಲೀಕರಣದೊಂದಿಗೆ ಗ್ರಾಹಕರ ಜೊತೆ ನೇರ ಸಂಪರ್ಕ ಮಾಡುತ್ತಿದ್ದು, ನಡುವಿನಲ್ಲಿ ಅನಗತ್ಯ ನೌಕರರ ಅಗತ್ಯ ಇಲ್ಲ ಎಂದು ಈ ತೀರ್ಮಾನಕ್ಕೆ ಬಂದಿದೆ ಎಂದು ವರದಿ ಹೇಳಿದೆ. ಬ್ಯಾಂಕ್ ತೆಗೆದುಕೊಂಡಿರುವ ಈ ನಿರ್ಧಾರದಿಂದ ಬ್ಯಾಂಕ್‌ನ ನಿರ್ವಹಣಾ ವೆಚ್ಚವನ್ನು ಸರಿದೂಗಿಸಲು ಸಾಧ್ಯವಾಗಲಿದೆ. ಬ್ಯಾಂಕ್ ವೇಗವಾಗಿ ಡಿಜಿಟಲೀಕರಣವಾಗುತ್ತಿರುವುದರಿಂದ ನೌಕರರ ಅಗತ್ಯವೂ ಕಡಿಮೆಯಾಗುತ್ತಿರುವುದಾಗಿ ಬ್ಯಾಂಕ್ ಮೂಲಗಳು ತಿಳಿಸಿದೆ. 2023 -24 ರಲ್ಲಿ Yes ಬ್ಯಾಂಕ್ ನೌಕರರಿಗೆ ನೀಡಿದ ಸ್ಯಾಲರಿ ಹಾಗೂ ಭತ್ತೆಗಳು ರೂ.3363 ಕೋಟಿಯಿಂದ ರೂ.3774 ಕೋಟಿಗಳಿಗೆ ಏರಿಕೆಯಾಗಿದೆ. ಇದೀಗ ಅನಗತ್ಯ ನೌಕರರ ವಜಾದಿಂದ ಈ ಏರಿಕೆಯನ್ನು ತಡೆಯಲು ಬ್ಯಾಂಕ್ ಮುಂದಾಗಿದೆ.

    Yes ಬ್ಯಾಂಕ್‌ನ ಈ ನಿರ್ಧಾರ ಕೇವಲ ನೌಕರರ ಮೇಲೆ ಮಾತ್ರವಲ್ಲದೆ ಶೇರ್ ಮಾರುಕಟ್ಟೆಯಲ್ಲೂ ಪ್ರಭಾವ ಬೀರಿದ್ದು Yes ಬ್ಯಾಂಕ್ ಶೇರು ಬೆಲೆ ಕುಸಿತವಾಗಿದೆ. ಮಂಗಳವಾರ 24.02 ರೂಗಳಲ್ಲಿ ಅಂತ್ಯವಾಗಿದ್ದ Yes ಬ್ಯಾಂಕ್ ಶೇರ್ ಬುಧವಾರ ನೌಕರರನ್ನು ವಜಾಗೊಳಿಸಿದ ವಿಚಾರ ಬಹಿರಂಗವಾಗುತ್ತಿದ್ದಂತೆ 23.90 ರೂಪಾಯಿಗೆ ಕುಸಿತವಾಗಿದೆ.

    Continue Reading

    LATEST NEWS

    ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

    Published

    on

    ಬೆಂಗಳೂರು : ಹಾಸನ ಜೆಡಿಎಸ್​​ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಲೈಂ*ಗಿಕ ದೌ*ರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್  ಬುಧವಾರ (ಜೂನ್ 26) ಅರ್ಜಿ ವಿಚಾರಣೆ ನಡೆಸಿದ್ದು, ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದೆ.


    ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊದಲನೇ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಜಾಮೀನು ಆದೇಶ ಕಾಯ್ದಿರಿಸಿತ್ತು. ಆದರೆ, ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಪ್ರಜ್ವಲ್ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಇನ್ನು ಜಾಮೀನಿಗಾಗಿ ಪ್ರಜ್ವಲ್​ ಹೈಕೋರ್ಟ್​ ಮೆಟ್ಟಿಲೇರಬೇಕಿದೆ.

    ಇದನ್ನೂ ಓದಿ : ಖ್ಯಾತ ನಟ ಜಯಂ ರವಿ – ಆರತಿ ದಾಂಪತ್ಯ ಜೀವನದಲ್ಲಿ ಬಿರುಕು!?

    ಲೈಂ*ಗಿಕ ದೌರ್ಜ*ನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 42ನೇ ಎಸಿಎಂಎಂ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರನ್ನು ಜೂನ್ 29ರ ವರೆಗೂ ಎಸ್​ಐಟಿ ಕಸ್ಟಡಿಗೆ ನೀಡಿದೆ.

    Continue Reading

    LATEST NEWS

    Trending