Connect with us

DAKSHINA KANNADA

ಅಭಿವೃದ್ಧಿಗೆ ಸಿಗಲಿದೆ ವೇಗ ಎನ್ ಎಂ ಪಿಟಿಗೆ ಬಂತು 35 ಕೋಟಿಯ ಅತ್ಯಾಧುನಿಕ ಸ್ಕ್ಯಾನರ್..!

Published

on

ಅಭಿವೃದ್ಧಿಗೆ ಸಿಗಲಿದೆ ವೇಗ; ಎನ್ ಎಂ ಪಿಟಿಗೆ ಬಂತು 35ಕೋಟಿಯ ಅತ್ಯಾಧುನಿಕ ಸ್ಕ್ಯಾನರ್..!

The NMPT is the most advanced scanner worth Rs. 35 crores!

ಮಂಗಳೂರು: ಮುಂಬೈ ಸೇರಿದಂತೆ ಪ್ರಮುಖ ಬಂದರುಗಳಲ್ಲಿ ಅಳವಡಿಸಲಾಗಿರುವ ಅತ್ಯಾಧುನಿಕ ತಂತ್ರಜ್ಞಾನದ ಸುಮಾರು 35 ಕೋಟಿ ರೂಪಾಯಿ ವೆಚ್ಚದ ಮೊಬೈಲ್‌ ಕಂಟೈನರ್‌ ಎಕ್ಸ್‌ರೇ ಸ್ಕ್ಯಾನರ್‌ ಅನ್ನು ನವಮಂಗಳೂರು ಬಂದರು ಮಂಡಳಿ(ಎನ್‌ಎಂಪಿಟಿ)ಯಲ್ಲೂ ಇದೀಗ ಅಳವಡಿಸಲಾಗಿದೆ.

ವಿಮಾನ ನಿಲ್ದಾಣಗಳ ಮಾದರಿಯಲ್ಲಿಯೇ ಎಲ್ಲ ದೇಶಗಳ ಬಂದರುಗಳಲ್ಲಿ ಸ್ಕ್ಯಾನಿಂಗ್ ಮಾಡಿ ಕಳುಹಿಸಬೇಕು ಎಂಬ ಕೇಂದ್ರ ಸರಕಾರದ ನಿರ್ದೇಶನದಂತೆ ಮೊಬೈಲ್ ಕಂಟೈನರ್ ಎಕ್ಸ್ ರೇ ಸ್ಕ್ಯಾನರ್ ಅಳವಡಿಸಲಾಗಿದೆ.ಈ ಸ್ಕ್ಯಾನರನ್ನು ಎನ್​ಎಂಪಿಟಿ ಫ್ರಾನ್ಸ್​​ನಿಂದ 16 ಕೋಟಿಗೆ ಖರೀದಿಸಿದ್ದು, ಅಳವಡಿಸಲು 35 ಕೋಟಿ ವೆಚ್ಚವಾಗಿದೆ. ಎನ್​ಎಂಪಿಟಿಯಲ್ಲಿ ಈ ಹಿಂದೆ ಒಂದೊಂದೇ ಪಾರ್ಸೆಲ್  ಬಾಕ್ಸ್​​ಗಳನ್ನು ತಪಾಸಣೆ ಮಾಡಲಾಗುತ್ತಿದ್ದುದರಿಂದ  ತಪಾಸಣೆಗೆ ಬಹಳಷ್ಟು ಸಮಯ ತಗಲುತ್ತಿತ್ತು. ವಿನೂತನ ಸ್ಕ್ಯಾನರ್​ನಿಂದ ಕೆಲವೇ ನಿಮಿಷಗಳಲ್ಲಿ ತಪಾಸಣೆ ಪೂರ್ಣಗೊಂಡು ಅಭಿವೃದ್ಧಿಗೆ ಇನ್ನಷ್ಟು   ವೇಗ ಸಿಗಲಿದೆ.

ಸದ್ಯ ಎನ್‌ಎಂಪಿಟಿಯಲ್ಲಿ ಸ್ಕ್ಯಾನರ್​ ಪ್ರಾಯೋಗಿಕ ಹಂತದಲ್ಲಿದ್ದು ಮುಂದಿನ ತಿಂಗಳಲ್ಲಿ ಅಧಿಕೃತ ಕಾರ್ಯಾಚರಣೆ ಶುರುವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending