ಮಹಾಮಾರಿ ಕೊರೊನಾಗೆ ಈವರೆಗೆ ಭಾರತದಲ್ಲಿ ಬಲಿಯಾದವರ ಸಂಖ್ಯೆ 1147ಕ್ಕೆ ಏರಿಕೆ
ಮಹಾಮಾರಿ ಕೊರೊನಾಗೆ ಈವರೆಗೆ ಭಾರತದಲ್ಲಿ ಬಲಿಯಾದವರ ಸಂಖ್ಯೆ 1147ಕ್ಕೆ ಏರಿಕೆ
ನವದೆಹಲಿ: ಲಾಕ್ ಡೌನ್ ತೆರವಿಗೆ ಇನ್ನೂ 2 ದಿನಗಳು ಬಾಕಿ ಇರುವಾಗಲೇ ದೇಶದಲ್ಲಿ ಕೊರೋನಾ ಸಾವಿನ ಸಂಖ್ಯೆ ದಾಖಲೆ ಪ್ರಮಾಣದ ಏರಿಕೆ ಕಂಡಿದೆ.
ಮಹಾಮಾರಿ ಕೊರೊನಾ ವೈರಸ್ ಗೆ ಈವರೆಗೆ ಭಾರತದಲ್ಲಿ ಬಲಿಯಾದವರ ಸಂಖ್ಯೆ 1147ಕ್ಕೆ ಏರಿಕೆಯಾಗಿದೆ.
ಇದೇ ವೇಳೆ ದೇಶದಲ್ಲಿ 24 ಗಂಟೆಗಳಲ್ಲಿ 1,993 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರಂತೆ ಒಟ್ಟಾರೆ ಸೋಂಕಿತರ ಸಂಖ್ಯೆ 35, 043ಕ್ಕೆ ಏರಿಕೆಯಾಗಿದೆ.
ಇನ್ನು ಒಂದೇ ದಿನದಲ್ಲಿ 73 ಮಂದಿ ಬಲಿಯಾದಿದ್ದು, ಸಾವಿನ ಸಂಖ್ಯೆ ಕೂಡ 1,147ಕ್ಕೆ ಏರಿಕೆಯಾಗಿದೆ.
ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಮಹಾರಾಷ್ಟ್ರ ರಾಜ್ಯದಲ್ಲಿಯೇ ಅತೀ ಹೆಚ್ಚು ಸೋಂಕಿತರ ಪ್ರಕರಣಗಳು ದಾಖಲಾಗಿವೆ.
ಮಹಾರಾಷ್ಟ್ರದಲ್ಲಿ 10,478 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದರೆ, ಗುಜರಾತ್ 4,082, ದೆಹಲಿ 3,515, ಮಧ್ಯಪ್ರದೇಶ 2,660,
ರಾಜಸ್ತಾನ 2,438, ಉತ್ತರಪ್ರದೇಶ 2,203, ತಮಿಳುನಾಡು 2,162, ಆಂಧ್ರಪ್ರದೇಶದಲ್ಲಿ 403 ಜನರಲ್ಲಿ ಸೋಂಕು ಪತ್ತೆಯಾಗಿದೆ.
LATEST NEWS
ತಿರುಪತಿ ಲಡ್ಡು ಕಲಬೆರಕೆ ವಿಚಾರ; ಜಗನ್ ಮನೆ ಬಳಿ ಉದ್ವಿಗ್ನತೆ!
ಆಂದ್ರಪ್ರದೇಶ/ಮಂಗಳೂರು : ವೈಎಸ್ಆರ್ ಸರ್ಕಾರದ ಅವಧಿಯಲ್ಲಿ ಶ್ರೀವೆಂಕಟೇಶ್ವರ ಸ್ವಾಮಿಯ ಲಡ್ಡು ಪ್ರಸಾದ ತಯಾರಿಕೆಗೆ ಬಳಸುತ್ತಿದ್ದ ತುಪ್ಪದಲ್ಲಿ ಕಲಬೆರಕೆಯಾಗಿರುವುದು ದೃಢಪಟ್ಟಿರುವುದರಿಂದ ಮಾಜಿ ಸಿಎಂ ಹಾಗೂ ವೈಸಿಪಿ ನಾಯಕ ಜಗನ್ ಮೋಹನ್ ರೆಡ್ಡಿ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಸೆ.22 ಶ್ರೀವೆಂಕಟೇಶ್ವರ ಸ್ವಾಮಿಯ ಭಕ್ತರು ಹಾಗೂ ಹಿಂದೂ ಧಾರ್ಮಿಕ ಸಂಘಟನೆಗಳು ಜಗನ್ ನಿವಾಸದ ಎದುರು ಆಕ್ರೋಶ ವ್ಯಕ್ತಪಡಿಸಿದರು. ಸಹಸ್ರಾರು ಮಂದಿ ಭಕ್ತರು ಸೇರಿದ್ದರಿಂದ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ತಾಡಪಲ್ಲಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಜಗನ್ ನಿವಾಸದ ಎದುರು ಧಿಕ್ಕಾರದ ಘೋಷಣೆಗಳನ್ನು ಕೂಗಿದ ಭಕ್ತರು ಜಗನ್ ಹಿಂದೂ ಸಮುದಾಯದ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಜಗನ್ ಮನೆಯ ಗೇಟ್ನಲ್ಲಿ ಜಮಾಯಿಸಿದರು. ಪೊಲೀಸರು ತಡೆಯಲು ಮುಂದಾದಾಗ ಪರಿಸ್ಥಿತಿ ಉದ್ವಿಗ್ನಕ್ಕೆ ಕಾರಣವಾಯಿತು.
ತಿಮ್ಮಪ್ಪನ ಪ್ರಸಾದದಲ್ಲಿ ಪ್ರಾಣಿ ಕೊಬ್ಬಿನ ಕಲಬೆರಕೆ; ಪ್ರಾಯಶ್ಚಿತ ದೀಕ್ಷೆ ಕೈಗೊಂಡ ಪವನ್ ಕಲ್ಯಾಣ್..!!
ಮಾತಿನ ಚಕಮಕಿ:
ಈ ವೇಳೆ ಪೊಲೀಸರು ಹಾಗೂ ಯುವಮೋರ್ಚಾ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು. ಮುಖ್ಯದ್ವಾರದಲ್ಲಿ ಹಾಕಿದ್ದ ಬ್ಯಾರಿಕೇಡ್ಗಳನ್ನು ದಾಟಿದ ಭಕ್ತರು ವೈಎಸ್ಆರ್ ಕಚೇರಿ ಮುಂಭಾಗಕ್ಕೆ ತೆರಳಿ ಗೋಡೆಗಳಿಗೆ ಕೆಂಪು ಬಣ್ಣ ಎರಚಿದ್ದಾರೆ. ಬಳಿಕ ಜಗನ್ ಮನೆಗೆ ನುಗ್ಗಲು ಯತ್ನ ನಡೆಸಿದ್ದಾರೆ. ಬೃಹತ್ ಗೇಟ್ ಮುಚ್ಚಿದ್ದರಿಂದ ಗೇಟಿನ ಮೇಲೂ ಕೆಂಪು ಬಣ್ಣ ಸುರಿದಿದ್ದಾರೆ.
DAKSHINA KANNADA
WATCH: ಕೆಪಿಟಿ ಬಳಿ ಭೀಕರ ಅಪಘಾ*ತ: ಲಾರಿಯಡಿ ಬಿದ್ದ ಬೈಕ್ ಸವಾರ; ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಮಂಗಳೂರು : ಬೈಕ್ ಸವಾರನ ಮೇಲೆ ಲಾರಿ ಹರಿದು ಸವಾರ ಗಂಭೀ*ರವಾಗಿ ಗಾ*ಯಗೊಂಡಿರುವ ಘಟನೆ ಮಂಗಳೂರಿನ ಕೆಪಿಟಿ ಬಳಿ ನಡೆದಿದೆ. ತಲಪಾಡಿ ಕಿನ್ಯಾ ಮೂಲದ ಅಶೋಕ್(44) ಗಂಭೀ*ರವಾಗಿ ಗಾಯಗೊಂಡವರು.
ಯೆಯ್ಯಾಡಿಯಿಂದ ಕೆ.ಪಿ.ಟಿ ಜಂಕ್ಷನ್ ಬಳಿಯ ಪೆಟ್ರೋಲ್ ಪಂಪ್ ಕಡೆ ಬೈಕ್ ಸವಾರ ಬರುತ್ತಿದ್ದರು. ಅದೇ ವೇಳೆ ಪೆಟ್ರೋಲ್ ಪಂಪ್ ಕಡೆಗೆ ಇಂಡೇನ್ ಗ್ಯಾಸ್ ತುಂಬಿದ್ದ ಗೂಡ್ಸ್ ಲಾರಿ ಬರುತ್ತಿತ್ತು. ಗೂಡ್ಸ್ ಲಾರಿಯ ಚಾಲಕ ಏಕಾಏಕಿ ಎಡಬದಿಗೆ ತಿರುಗಿಸಿದ್ದರಿಂದ ಬೈಕ್ಗೆ ಡಿ*ಕ್ಕಿ ಹೊಡೆದಿದೆ.
ಇದನ್ನೂ ಓದಿ : ಕಳ್ಳರ ಜೊತೆ ಕೈ ಜೋಡಿಸಿ ಲಕ್ಷಗಟ್ಟಲೆ ಕೊಳ್ಳೆ ಹೊಡೆದ ಪೊಲೀಸ್; ತಗಲಾಕ್ಕೊಂಡಿದ್ದು ಹೇಗೆ?
ಪರಿಣಾಮ ಬೈಕ್ ಸವಾರ ಲಾರಿಯಡಿಗೆ ಸಿಲುಕಿ ಗಂಭೀ*ರವಾಗಿ ಗಾ*ಯಗೊಂಡಿದ್ದಾರೆ. ಅಪಘಾ*ತದ ದೃಶ್ಯ ಪೆಟ್ರೋಲ್ ಬಂಕ್ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
LATEST NEWS
ಕಳ್ಳರ ಜೊತೆ ಕೈ ಜೋಡಿಸಿ ಲಕ್ಷಗಟ್ಟಲೆ ಕೊಳ್ಳೆ ಹೊಡೆದ ಪೊಲೀಸ್; ತಗಲಾಕ್ಕೊಂಡಿದ್ದು ಹೇಗೆ?
ಮಂಗಳೂರು/ ಬಳ್ಳಾರಿ : ಸೆ.12ರಂದು ನಡೆದಿದ್ದ ಹಣ, ಆಭರಣ ದರೋಡೆ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಯೇ ಕಂಬಿ ಎಣಿಸುತ್ತಿದ್ದಾರೆ. ಬ್ರೂಸ್ಪೇಟೆ ಹೆಡ್ ಕಾನ್ಸ್ಟೇಬಲ್ ಮಹಬೂಬ್, ಗೃಹರಕ್ಷಕ ದಳದ ಮಾಜಿ ಸಿಬ್ಬಂದಿ ಆರೀಫ್, ಜೊತೆಗೆ ತೌಸೀಫ್, ಜಾವೀದ್, ಪೀರ, ದಾದಾ ಕಲಂದರ್, ಮುಸ್ತಾಕ್ ಅಲಿ ರೆಹಮಾನ್ ಬಂಧಿತರು. ಆರೋಪಿಗಳಿಂದ ಒಟ್ಟು 22,41,000 ಮೌಲ್ಯದ ಹಣ, ಆಭರಣ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ ತಿಳಿಸಿದ್ದಾರೆ. ಕೃ*ತ್ಯದಲ್ಲಿ ಭಾಗಿಯಾಗಿದ್ದ ಕಾನ್ಸ್ಟೇಬಲ್ ಮೆಹಬೂಬ್ ನನ್ನು ಅಮಾನತು ಮಾಡಲಾಗಿದೆ.
ಏನಿದು ಪ್ರಕರಣ?
ರಘು ಎಂಬುವವರು ಸೆ. 12ರಂದು ಮುಂಜಾನೆ 22,99,000 ಹಣ ಮತ್ತು 15,90,000 ಮೌಲ್ಯದ 318 ಗ್ರಾಂ ಚಿನ್ನಾಭರಣಗಳನ್ನು ತಮ್ಮ ದ್ವಿಚಕ್ರ ವಾಹನದಲ್ಲಿಟ್ಟುಕೊಂಡು ಟ್ಯಾಂಕ್ ಬಾಂಡ್ ರಸ್ತೆ ಕಡೆಯಿಂದ ರಾಯದುರ್ಗ ಬಸ್ ನಿಲ್ದಾಣದ ಕಡೆಯ ಓಣಿಯಲ್ಲಿ ಮನೆಗೆ ತೆರಳುತ್ತಿದ್ದರು. ಆಗ ಬೈಕ್ನಲ್ಲಿ ಬಂದ ಇಬ್ಬರು ರಘು ಕಣ್ಣಿಗೆ ಖಾರದಪುಡಿ ಎರಚಿ ದರೋಡೆ ಮಾಡಿದ್ದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ವಿ.ಜೆ ಮತ್ತು ಬ್ರೂಸ್ಪೇಟೆ ಠಾಣೆ ಇನ್ಸ್ಪೆಕ್ಟರ್ ಸಿಂಧೂರ್ ತನಿಖೆಗಾಗಿ ನಗರ ಡಿಎಸ್ಪಿ ಚಂದ್ರಕಾಂತ ನಂದರೆಡ್ಡಿ, ಬ್ರೂಸ್ಪೇಟೆ ಠಾಣೆಯ ಇನ್ಸ್ಪೆಕ್ಟರ್ ಎಂ.ಎನ್. ಸಿಂಧೂರ್ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಅದರಂತೆ, ಸೆ. 21ರಂದು ಆರೀಫ್ ಎಂಬಾತನನ್ನು ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆ ನಡೆಸಿದಾಗ ಪ್ರಕರಣ ಬಯಲಾಗಿದೆ.
ತೌಸೀಫ್, ಜಾವೀದ್, ಪೀರ, ದಾದಾ ಕಲಂದರ್, ಮುಸ್ತಾಕ್ ಅಲಿ ರೆಹಮಾನ್ಎಂಬುವವರೊಂದಿಗೆ ಎರಡು ಬೈಕ್ಗಳಲ್ಲಿ ಹೋಗಿ ಹಣ ಮತ್ತು ಬಂಗಾರವುಳ್ಳ ಬ್ಯಾಗ್ ಕಸಿದು ಬಂದಿದ್ದಾಗಿ ವಿಚಾರಣೆ ವೇಳೆ ಆರೀಫ್ ತಿಳಿಸಿದ್ದ. ದರೋಡೆ ಮಾಡಿದ ಹಣ ಮತ್ತು ಆಭರಣವನ್ನು ಆರೀಫ್ ತನ್ನ ತಂಡಕ್ಕೆ ಸ್ವಲ್ಪ ಪ್ರಮಾಣದಲ್ಲಿ ಹಂಚಿ, 9 ಲಕ್ಷವನ್ನು ತನ್ನ ಆತ್ಮೀಯನಾಗಿದ್ದ ಬ್ರೂಸ್ಪೇಟೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಹಬೂಬ್ಗೆ ಆರೀಫ್ಗೆ ನೀಡಿದ್ದ.ಕದ್ದ ಮಾಲು ಸಾಗಿಸಲು ಆರೀಫ್ಗೆ ಮೆಹಬೂಬ್ ವಾಹನದ ವ್ಯವಸ್ಥೆ ಮಾಡಿದ್ದ ಎಂದು ಗೊತ್ತಾಗಿದೆ. ಮೆಹಬೂಬ್ ನಿಂದ 6.90 ಲಕ್ಷ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಹುಡುಗಿಗಾಗಿ ನಡೀತು ಜಗಳ; ಕಲ್ಲು ಎತ್ತಿ ಹಾಕಿ ಸ್ನೇಹಿತನನ್ನೇ ಕೊಂದ ಯುವಕ
ಸಿಕ್ಕಿಬಿದ್ದಿದ್ದು ಹೇಗೆ?
ಘಟನೆ ನಡೆಯುತ್ತಲೇ ಪೊಲೀಸರು ಸಿ.ಸಿ ಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದರು. ಅದರಲ್ಲಿ ದುಷ್ಕರ್ಮಿಗಳ ಅಸ್ಪಷ್ಟ ಚಹರೆ ಸಿಕ್ಕಿತ್ತು. ಹೀಗಿರುವಾಗಲೇ ದುಷ್ಕರ್ಮಿಗಳ ವರ್ತನೆಯಲ್ಲಿ ಆಗಿದ್ದ ಬದಲಾವಣೆ ಪ್ರಕರಣಕ್ಕೆ ತಿರುವು ಕೊಟ್ಟಿತ್ತು.
ಕುಡಿಯುವುದು ಜನರ ಮೇಲೆ ದಬ್ಬಾಳಿಕೆ ನಡೆಸುವುದು ದರೋಡೆಕೋರರು ಹೆಚ್ಚು ಮಾಡಿದ್ದರು. ಈ ಬಗ್ಗೆ ಪೊಲೀಸರಿಗೆ ಗುಪ್ತ ಮಾಹಿತಿ ರವಾನೆಯಾಗಿತ್ತು. ಇದೇ ಅನುಮಾನದ ಮೇಲೆ ಆರೀಫ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.