Connect with us

DAKSHINA KANNADA

ಸೇತುವೆಯಿಲ್ಲದೆ ಸಂಪರ್ಕಕ್ಕೆ ಪರದಾಡುತ್ತಿರುವ ಪಾಂಗಾಳ ಜನತೆ 

Published

on

ಸೇತುವೆಯಿಲ್ಲದೆ ಸಂಪರ್ಕಕ್ಕೆ ಪರದಾಡುತ್ತಿರುವ ಪಾಂಗಾಳ ಜನತೆ 

ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಪಾಂಗಾಳದಿಂದ ಕೈಪುಂಜಾಲಿಗೆ ಹೋಗಬೇಕಾದ್ರೆ ಇಲ್ಲಿನ ಗ್ರಾಮಸ್ಥರು 5 ಕಿಲೋಮೀಟರ್ ಗೂ ಹೆಚ್ಚು ದೂರ ಹೋಗಬೇಕು  , ಹಾಗೇ ಕೃಷಿ ಕಾರ್ಯ ಮಾಡಬೇಕಾದ್ರೆ ಹೊಳೆ ದಾಟಿ ಹೋಗಬೇಕಾದ ಪರಿಸ್ಥಿತಿಯಿದೆ.

ಜನರ ಹೋರಾಟದಿಂದ ಸೇತುವೆ ನಿರ್ಮಾಣ ಕಾಮಗಾರಿ 2018 ರಲ್ಲಿ ಆರಂಭಗೊಂಡಿತ್ತು . ಸೇತುವೆ ನಿರ್ಮಾಣ ಶುರು ಆಯ್ತು ಆದ್ರೆ ಈವರೆಗೂ ಪೂರ್ಣಗೊಂಡಿಲ್ಲ.

ಕಾಪು ಪುರಸಭಾ ವ್ಯಾಪ್ತಿಯಲ್ಲಿ ಕೈಪುಂಜಾಲು ಪಾಂಗಾಳ ಜನತೆಗೆ ವರದಾನವಾದ ಸೇತುವೆ ಈ ವರ್ಷ ಮಾತ್ರ ಕಾಮಗಾರಿ ಪೂರ್ಣಗೊಳ್ಳದೆ ಸಾಕಷ್ಟು ಆವಾಂತರವನ್ನು ಸೃಷ್ಟಿಸಿತ್ತು .

ಮಳೆಗಾಲದ ಸಂದರ್ಭದಲ್ಲಿ ಕ್ರತಕ ನೆರೆ ಸ್ಪಷ್ಟಿಯಾಗಿ ಭತ್ತದ ಕೃಷಿಗೆ ಬಹಳಷ್ಟು ಹಾನಿ ಉಂಟು ಮಾಡಿತ್ತು . ಸೇತುವೆ ಕಂಪ್ಲಿಟ್ ಆಗದೆ ಇದ್ರು ಜನರ ಓಡಾಟಕ್ಕೂ ಇಲ್ಲಿ ಸರಿಯಾದ ದಾರಿಯನ್ನು ಮಾಡಿಕೊಟ್ಟಿಲ್ಲ ಸೇತುವೆ ಪಿಲ್ಲರ್ ನಿರ್ಮಾಣವಾಗಿದ್ದು ಪಿಲ್ಲರ್‌ ಎಡಭಾಗದಲ್ಲಿ ಕಬ್ಬಿಣದ ಸರಳಿನ ಮೇಲೆ ತಗಡು ಜೋಡಿಸಿ ನಡೆದಾಡಿ,ಅಂತಾ
ವಹಿಸಿಕೊಂಡ ಗುತ್ತಿಗೆದಾರರು ಜನರ ಜೀವದ ಚೆಲ್ಲಾಟ ಆಡ್ತಾ ಇದಾರೆ , ಒಂದು ಕಡೆಯಿಂದುಇನ್ನೊದು ಕಡೆಗೆ ಹೋಗಲು ಇದೇ ಕಬ್ಬಿಣದ ತಗಡನ್ನು ಜನ ಅವಲಂಭಿಸಿದ್ದು ಸ್ವಲ್ಪ ಯಾಮಾರಿದ್ರು ಜೀವ ಹೋಗೋದು ಗ್ಯಾರಂಟಿ .

ಒಟ್ಟಿನಲ್ಲಿ ಗುತ್ತಿಗೆದಾರನ ನಿರ್ಲಕ್ಷದಿಂದಾಗಿ ಜನರ ಜೀವಕ್ಕೂ ಬೆಲೆ ಇಲ್ಲದಂತಾಗಿದೆ. ನಗರೋತ್ತಾನ ಯೋಜನೆಯಡಿ ಸುಮಾರು 1 ಕೋಟಿ 47 ಲಕ್ಷ ರೂ ವೆಚ್ಚದಲ್ಲು ನಿರ್ಮಾಣಗೊಳ್ಳಬೇಕಾದ ಸೇತುವೆ ನೆನೆಗುದಿಗೆ ಬಿದ್ದಿದೆ . ಈ ಬಗ್ಗೆ ಜನತೆ ಜಿಲ್ಲಾಡಳಿತಕ್ಕೂ ಸಾಕಷ್ಟು ಬಾರಿ ಮನವಿ ನೀಡಿದ್ರು ಜಿಲ್ಲಾಡಳಿತ ಇನ್ನು ಎಚರಗೊಂಡಿಲ್ಲ ಎನ್ನುತ್ತಾರೆ ಊರವರು..

ಬರೀ 50 ಮೀಟರ್‌ ಸೇತುವೆ ನಿರ್ಮಾಣ 3 ವರ್ಷ ತುಂಬಿದರೂ ಇನ್ನೂ ಕಂಪ್ಲಿಟ್ ಆಗಿಲ್ಲ . ಶಾಲೆಗೆ ಹೋಗೋಮಕ್ಕಳಿಂದ ಹಿಡಿದು ಕ್ರಷಿಕರು ಮತ್ತು ಮೀನುಗಾರರು ತುತ್ತಿನ ಚೀಲ ತುಂಬಿಸಿಕೊಳ್ಳಲು ಆತಂಕದ ವಾತಾವರಣ ನಿರ್ಮಾಣವಾಗಿದೆ . ಈ ಬಾರಿ ಡಿಸೆಂಬರ್‌ ಒಳಗೆ ಕಾಮಗಾರಿ ಆರಂಭಿಸದಿದ್ದಲ್ಲಿ ತೀವ್ರ ಹೋರಾಟಕ್ಕೆ ಜನತೆ ಸಿದ್ಧತೆ ನಡೆಸುತ್ತಿದ್ದಾರೆ . ಜೊತೆಗೆ ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿದ್ದಾರೆ .

DAKSHINA KANNADA

Sullia : ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿದ ಸರ್ಕಾರಿ ಅಧಿಕಾರಿ

Published

on

ಸುಳ್ಯ : ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಬೈಗುಳ ತಿಂದ ಸುಳ್ಯದ ಅರಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಕಂಠಪೂರ್ತಿ ಕುಡಿದ ಮದ್ಯದ ಮತ್ತಿನಲ್ಲಿ ಸುಳ್ಯ ಅರಂಬೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ, ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಹಲವಾರು ವಾಹನಗಳಿಗೆ ಢಿಕ್ಕಿ ಆಗುವಂತಹ ಸಂಭಾವ್ಯ ದುರಂತವೊಂದು ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದೆ. ರಸ್ತೆಯುದ್ದಕ್ಕೂ ವಿರುದ್ಧ ದಿಕ್ಕಿನಲ್ಲಿ, ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಸಂಭವಿಸುವ ಸಾಧ್ಯತೆಯನ್ನು ಮನಗಂಡ ಕೆಲವು ವಾಹನ ಸವಾರರು ಸಾರ್ವಜನಿಕರ ಸಹಕಾರದಿಂದ ಅಡ್ಡಗಟ್ಟಿದ್ದಾರೆ. ಸರ್ಕಾರಿ ಅಧಿಕಾರಿಯ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

Continue Reading

DAKSHINA KANNADA

ಉಪ್ಪಿನಂಗಡಿ:12 ಅಡಿ ಉದ್ದದ‌ ಕಾಳಿಂಗ ಸರ್ಪ ಹಿಡಿಯೋಕು ಮೀಟ್ರು ಬೇಕು

Published

on

ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ 12 ಅಡಿ ಉದ್ದದ‌ ಕಾಳಿಂಗ ಸರ್ಪ ಪ್ರತ್ಯಕ್ಷಗೊಂಡಿತು. ಇದನ್ನು ಸೆರೆ ಹಿಡಿದ ಉರಗ ತಜ್ಞ ಕೆ. ಝಕರಿಯ್ಯ ಎಂಬುವವರು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

ಎರಡು- ಮೂರು ದಿನಗಳಿಂದ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ ಸುತ್ತಾಡಿಕೊಂಡಿತ್ತು.

ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿಯ ಕೆ. ಝಕರಿಯಾ ಅವರು ಅಲ್ಲಿಗೆ ತೆರಳಿ ಸುಮಾರು ಒಂದು ಗಂಟೆಯಷ್ಟು ಕಾರ್ಯಾಚರಣೆಯ ಬಳಿಕ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ಗುಂಡ್ಯ ಬಳಿ ದಟ್ಟಾರಣ್ಯಕ್ಕೆ ಬಿಟ್ಟಿದ್ದಾರೆ.

Continue Reading

DAKSHINA KANNADA

ಅತ್ತಾವರ ಅಪಾರ್ಟ್‌ಮೆಂಟ್‌ನಲ್ಲಿ ಆಕಸ್ಮಿಕ ಬೆಂಕಿ – ವೃದ್ಧೆ ಸಾವು..!

Published

on

ಮಂಗಳೂರು: ಮಂಗಳೂರಿನ ಅತ್ತಾವರದ ಅಪಾರ್ಟ್‌ ಮೆಂಟ್‌ವೊಂದರಲ್ಲಿ ಇಂದು ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ‌ಮಾಹಿತಿ ನೀಡಿದ್ದಾರೆ.

ಶಾಹಿನಾ ನುಸ್ಬಾ(58) ಸಾವನ್ನಪ್ಪಿದ ವೃದ್ಧೆ ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮುಂಜಾನೆ 4 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಅನಾರೋಗ್ಯದಿಂದಾಗಿ ಬೆಡ್ ರೂಮ್ ನಲ್ಲೇ ಇದ್ದ ವೃದ್ಧ ಮಹಿಳೆ ದಟ್ಟ ಹೊಗೆಯಿಂದಾಗಿ ತಕ್ಷಣ ಹೊರಬರಲಾಗದೇ ಉಸಿರುಗಟ್ಟಿ ಚಿಂತಾಜನಕ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Continue Reading

LATEST NEWS

Trending