Connect with us

DAKSHINA KANNADA

ಸೇತುವೆಯಿಲ್ಲದೆ ಸಂಪರ್ಕಕ್ಕೆ ಪರದಾಡುತ್ತಿರುವ ಪಾಂಗಾಳ ಜನತೆ 

Published

on

ಸೇತುವೆಯಿಲ್ಲದೆ ಸಂಪರ್ಕಕ್ಕೆ ಪರದಾಡುತ್ತಿರುವ ಪಾಂಗಾಳ ಜನತೆ 

ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಪಾಂಗಾಳದಿಂದ ಕೈಪುಂಜಾಲಿಗೆ ಹೋಗಬೇಕಾದ್ರೆ ಇಲ್ಲಿನ ಗ್ರಾಮಸ್ಥರು 5 ಕಿಲೋಮೀಟರ್ ಗೂ ಹೆಚ್ಚು ದೂರ ಹೋಗಬೇಕು  , ಹಾಗೇ ಕೃಷಿ ಕಾರ್ಯ ಮಾಡಬೇಕಾದ್ರೆ ಹೊಳೆ ದಾಟಿ ಹೋಗಬೇಕಾದ ಪರಿಸ್ಥಿತಿಯಿದೆ.

ಜನರ ಹೋರಾಟದಿಂದ ಸೇತುವೆ ನಿರ್ಮಾಣ ಕಾಮಗಾರಿ 2018 ರಲ್ಲಿ ಆರಂಭಗೊಂಡಿತ್ತು . ಸೇತುವೆ ನಿರ್ಮಾಣ ಶುರು ಆಯ್ತು ಆದ್ರೆ ಈವರೆಗೂ ಪೂರ್ಣಗೊಂಡಿಲ್ಲ.

ಕಾಪು ಪುರಸಭಾ ವ್ಯಾಪ್ತಿಯಲ್ಲಿ ಕೈಪುಂಜಾಲು ಪಾಂಗಾಳ ಜನತೆಗೆ ವರದಾನವಾದ ಸೇತುವೆ ಈ ವರ್ಷ ಮಾತ್ರ ಕಾಮಗಾರಿ ಪೂರ್ಣಗೊಳ್ಳದೆ ಸಾಕಷ್ಟು ಆವಾಂತರವನ್ನು ಸೃಷ್ಟಿಸಿತ್ತು .

ಮಳೆಗಾಲದ ಸಂದರ್ಭದಲ್ಲಿ ಕ್ರತಕ ನೆರೆ ಸ್ಪಷ್ಟಿಯಾಗಿ ಭತ್ತದ ಕೃಷಿಗೆ ಬಹಳಷ್ಟು ಹಾನಿ ಉಂಟು ಮಾಡಿತ್ತು . ಸೇತುವೆ ಕಂಪ್ಲಿಟ್ ಆಗದೆ ಇದ್ರು ಜನರ ಓಡಾಟಕ್ಕೂ ಇಲ್ಲಿ ಸರಿಯಾದ ದಾರಿಯನ್ನು ಮಾಡಿಕೊಟ್ಟಿಲ್ಲ ಸೇತುವೆ ಪಿಲ್ಲರ್ ನಿರ್ಮಾಣವಾಗಿದ್ದು ಪಿಲ್ಲರ್‌ ಎಡಭಾಗದಲ್ಲಿ ಕಬ್ಬಿಣದ ಸರಳಿನ ಮೇಲೆ ತಗಡು ಜೋಡಿಸಿ ನಡೆದಾಡಿ,ಅಂತಾ
ವಹಿಸಿಕೊಂಡ ಗುತ್ತಿಗೆದಾರರು ಜನರ ಜೀವದ ಚೆಲ್ಲಾಟ ಆಡ್ತಾ ಇದಾರೆ , ಒಂದು ಕಡೆಯಿಂದುಇನ್ನೊದು ಕಡೆಗೆ ಹೋಗಲು ಇದೇ ಕಬ್ಬಿಣದ ತಗಡನ್ನು ಜನ ಅವಲಂಭಿಸಿದ್ದು ಸ್ವಲ್ಪ ಯಾಮಾರಿದ್ರು ಜೀವ ಹೋಗೋದು ಗ್ಯಾರಂಟಿ .

ಒಟ್ಟಿನಲ್ಲಿ ಗುತ್ತಿಗೆದಾರನ ನಿರ್ಲಕ್ಷದಿಂದಾಗಿ ಜನರ ಜೀವಕ್ಕೂ ಬೆಲೆ ಇಲ್ಲದಂತಾಗಿದೆ. ನಗರೋತ್ತಾನ ಯೋಜನೆಯಡಿ ಸುಮಾರು 1 ಕೋಟಿ 47 ಲಕ್ಷ ರೂ ವೆಚ್ಚದಲ್ಲು ನಿರ್ಮಾಣಗೊಳ್ಳಬೇಕಾದ ಸೇತುವೆ ನೆನೆಗುದಿಗೆ ಬಿದ್ದಿದೆ . ಈ ಬಗ್ಗೆ ಜನತೆ ಜಿಲ್ಲಾಡಳಿತಕ್ಕೂ ಸಾಕಷ್ಟು ಬಾರಿ ಮನವಿ ನೀಡಿದ್ರು ಜಿಲ್ಲಾಡಳಿತ ಇನ್ನು ಎಚರಗೊಂಡಿಲ್ಲ ಎನ್ನುತ್ತಾರೆ ಊರವರು..

ಬರೀ 50 ಮೀಟರ್‌ ಸೇತುವೆ ನಿರ್ಮಾಣ 3 ವರ್ಷ ತುಂಬಿದರೂ ಇನ್ನೂ ಕಂಪ್ಲಿಟ್ ಆಗಿಲ್ಲ . ಶಾಲೆಗೆ ಹೋಗೋಮಕ್ಕಳಿಂದ ಹಿಡಿದು ಕ್ರಷಿಕರು ಮತ್ತು ಮೀನುಗಾರರು ತುತ್ತಿನ ಚೀಲ ತುಂಬಿಸಿಕೊಳ್ಳಲು ಆತಂಕದ ವಾತಾವರಣ ನಿರ್ಮಾಣವಾಗಿದೆ . ಈ ಬಾರಿ ಡಿಸೆಂಬರ್‌ ಒಳಗೆ ಕಾಮಗಾರಿ ಆರಂಭಿಸದಿದ್ದಲ್ಲಿ ತೀವ್ರ ಹೋರಾಟಕ್ಕೆ ಜನತೆ ಸಿದ್ಧತೆ ನಡೆಸುತ್ತಿದ್ದಾರೆ . ಜೊತೆಗೆ ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿದ್ದಾರೆ .

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

LATEST NEWS

Trending