LATEST NEWS
ಕಳ್ಳನನ್ನು ಹಿಡಿಯಲು ಹೋಗಿ ತಮ್ಮ ಪ್ರಾ*ಣಕ್ಕೆ ಕುತ್ತು ತಂದುಕೊಂಡ ಪೊಲೀಸರು
ಮಂಗಳೂರು/ತುಮಕೂರು : ಕಳ್ಳನನ್ನ ಟ್ರೇಸ್ ಮಾಡುವ ಭರದಲ್ಲಿ ಪೊಲೀಸರು ತಮ್ಮ ಪ್ರಾ*ಣಕ್ಕೆ ಕು*ತ್ತು ತಂದುಕೊಂಡ ಘಟನೆ ನಡೆದಿದೆ. ಕಳ್ಳನನ್ನ ಟ್ರೇಸ್ ಮಾಡುವಾಗ ಪೊಲೀಸರ ಕಾರು ಅಪಘಾ*ತಕ್ಕೀಡಾಗಿರುವ ಘಟನೆ ಆಂಧ್ರಪ್ರದೇಶದ ಮಣೂರು ಬಳಿ ನಡೆದಿದೆ. ಪರಿಣಾಮ ತುಮಕೂರಿನ ಮಧುಗಿರಿ ಠಾಣೆಯ ಮೂವರು ಪೊಲೀಸರಿಗೆ ಗಂ*ಭೀರ ಗಾಯಗಳಾಗಿವೆ.
ಮಧುಗಿರಿ ಪೊಲೀಸ್ ಠಾಣೆಯ ಕ್ರೈಂ ಸಿಬ್ಬಂದಿ ಪ್ರಕಾಶ್, ಮುದ್ದರಾಜು ಹಾಗೂ ರಮೇಶ್ ಗಂ*ಭೀರ ಗಾ*ಯಗೊಂಡವರು.
ಏನಿದು ಟ್ರೇಸ್ ಕೇಸ್?
ಶನಿವಾರ(ಸೆ.28) ಮಧುಗಿರಿ ಪಟ್ಟಣದಲ್ಲಿ ಮಹಿಳೆಯ 70 ಗ್ರಾಂ ಚಿನ್ನದ ಸರ ಎಗರಿಸಿ ಖದೀಮನೊಬ್ಬ ಎಸ್ಕೇಪ್ ಆಗಿದ್ದ. ಪ್ರಕರಣ ಸಂಬಂಧ ಮಧುಗಿರಿ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದರು.
ಕಳ್ಳನ ಜಾಡು ಹಿಡಿದು ಹೊರಟಿದ್ದ ಮಧುಗಿರಿ ಪೊಲೀಸರು ಕಳ್ಳನನ್ನು ಹಿಡಿಯುವ ಭರದಲ್ಲಿ ವೇಗವಾಗಿ ಕಾರಿನಲ್ಲಿ ತೆರಳುತ್ತಿದ್ದಾಗ, ಸ್ಟೇರಿಂಗ್ ಲಾಕ್ ಆಗಿ ಪ*ಲ್ಟಿ ಹೊಡೆದಿದೆ.
ಇದನ್ನೂ ಓದಿ : ಪತ್ನಿಯನ್ನೇ ಕೊಂ*ದ ಕ್ರೂ*ರ ಪತಿ
ಪರಿಣಾಮ ಪೊಲೀಸ್ ಸಿಬ್ಬಂದಿಯ ಕಣ್ಣು, ತಲೆ, ಕೈ, ಕಾಲುಗಳಿಗೆ ಗಂಭೀ*ರ ಗಾ*ಯಗಳಾಗಿವೆ. ಗಾ*ಯಗೊಂಡ ಪೊಲೀಸ್ ಸಿಬ್ಬಂದಿಗೆ ಆಂಧ್ರದ ಧರ್ಮವರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಅದೃಷ್ಟವಶಾತ್ ಪೊಲೀಸರು ಪ್ರಾ*ಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
DAKSHINA KANNADA
ಪುತ್ತೂರು ಕಾಂಗ್ರೆಸ್ ಮುಖಂಡನ ಅಶ್ಲೀ*ಲ ವೀಡಿಯೋ ವೈರಲ್..!
ಪುತ್ತೂರು : ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್ ಮುಖಂಡನೊಬ್ಬನ ಅಶ್ಲೀ*ಲ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಜನರಿಗೆ ಪುಕ್ಕಟೆ ಸಲಹೆ ನೀಡುತ್ತಿದ್ದ ಅದ್ದು ಪಡೀಲ್ ಎಂಬ ಈ ಕಾಂಗ್ರೆಸ್ ನಾಯಕ ಈಗ ಅಶ್ಲೀ*ಲ ವೀಡಿಯೋ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸುದ್ಧಿಯಾಗಿದ್ದಾರೆ.
ಸಾರ್ವಜನಿಕರ ಆಕ್ರೋಶ; ನಾನಲ್ಲ ಎಂದ ಅದ್ದು :
ಹಣ ಪಾವತಿಸಿದರೆ ಸಿಗುವ ಆನ್ಲೈನ್ ಸೆ*ಕ್ಸ್ ಫ್ಲಾಟ್ಫಾರಂನಲ್ಲಿ ಅದ್ದು ಪಡೀಲ್ ವೀಡಿಯೋ ಚಾಟಿಂಗ್ ಮಾಡಿದ್ದಾರೆ. ಧಾರ್ಮಿಕ ಕೇಂದ್ರವೊಂದರಲ್ಲಿ ಈ ವೀಡಿಯೋ ಚಾಟಿಂಗ್ ಮಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ. ಊರಿಗೆ ಬುದ್ದಿ ಹೇಳುವ ವ್ಯಕ್ತಿಯ ಈ ರೀತಿಯ ವರ್ತನೆ ಎಷ್ಟು ಸರಿ ಎಂಬ ಬಗ್ಗೆ ಜನರೇ ಅದ್ದು ಪಡೀಲ್ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ.
ಆದ್ರೆ, ಈ ವಿಡಿಯೋ ಬಗ್ಗೆ ಮಾತನಾಡಿರುವ ಅದ್ದು ಪಡೀಲ್ ಈ ವೀಡಿಯೋಗು ನನಗೂ ಯಾವುದೇ ಸಂಬಂಧವಿಲ್ಲ. ಇದು ಟೆಕ್ನಾಲಜಿ ಬಳಸಿ ಮಾರ್ಫಿಂಗ್ ಮಾಡಿ ನನ್ನಂತೆ ತೋರಿಸಲಾಗಿದೆ ಎಂದು ಸಮಜಾಯಿಸಿ ನೀಡಿದ್ದಾರೆ.
ಇದನ್ನೂ ಓದಿ : ವಿಮಾನದಲ್ಲಿ ನೀಡಿದ ಆಮ್ಲೆಟ್ನಲ್ಲಿ ಜಿರಳೆ..! ಪೋಸ್ಟ್ ವೈರಲ್ ..!
ಆದ್ರೆ, ಅದ್ದು ಪಡೀಲ್ ಅವರ ಈ ಉತ್ತರ ಪುತ್ತೂರಿನ ಜನ ನಂಬಿಲ್ಲ. ಈ ಬಗ್ಗೆ ತನಿಖೆ ನಡೆಸಲು ಅದ್ದು ಪಡೀಲ್ ಅವರೇ ಪೊಲೀಸರಿಗೆ ದೂರು ನೀಡಿ ಎಂದು ಸಲಹೆ ನೀಡಿದ್ದಾರೆ. ಆನ್ಲೈನ್ನಲ್ಲಿ ಸಿಗುವ ಇಂತಹ ಸೈಟ್ಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಪೊಲೀಸ್ ಇಲಾಖೆ ಈ ಹಿಂದೆಯೇ ಎಚ್ಚರಿಕೆ ನೀಡಿತ್ತು
LATEST NEWS
ವಿಮಾನದಲ್ಲಿ ನೀಡಿದ ಆಮ್ಲೆಟ್ನಲ್ಲಿ ಜಿರಳೆ..! ಪೋಸ್ಟ್ ವೈರಲ್ ..!
ಮಂಗಳೂರು/ನವದೆಹಲಿ : ನವದೆಹಲಿಯಿಂದ ನ್ಯೂಯಾರ್ಕ್ಗೆ ಏರ್ ಇಂಡಿಯಾದಲ್ಲಿ ಪ್ರಯಾಣಿಕರೊಬ್ಬರಿಗೆ ನೀಡಿದ ಆಮ್ಲೇಟ್ನಲ್ಲಿ ಜಿರಳೆ ಪತ್ತೆಯಾದ ಘಟನೆ ನಡೆದಿದೆ. ಸೆಪ್ಟಂಬರ್ 17 ರಂದು ಈ ಘಟನೆ ನಡೆದಿದ್ದು, ಇದರ ವಿಡಿಯೋವನ್ನು ಪ್ರಯಾಣಕಿ ಸುಯೇಶಾ ಸಾವಂತ್ ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಟ್ವೀಟ್(ಎಕ್ಸ್) ಮಾಡಿದ ಮಹಿಳೆ :
ಏರ್ ಇಂಡಿಯಾ ವಿಮಾನದಲ್ಲಿ ಇತ್ತೀಚೆಗೆ ಜೂನ್ ತಿಂಗಳಲ್ಲಿ ಸ್ಯಾನ್ ಫ್ರಾನ್ಸಿಸ್ಕೋದಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾರಣಿಕರೊಬ್ಬರಿಗೂ ಇಂತಹುದೇ ಅನುಭವ ಆಗಿತ್ತು. ಏರ್ ಇಂಡಿಯಾ ನೀಡಿದ್ದ ಆಹಾರದಲ್ಲಿ ಬ್ಲೇಡ್ನಂತಹ ವಸ್ತು ಪತ್ತೆಯಾಗಿತ್ತು.
ಇದೀಗ ದೆಹಲಿಯಿಂದ ನ್ಯೂಯಾರ್ಕ್ಗೆ ತನ್ನ ಎರಡು ವರ್ಷದ ಮಗುವಿನ ಜೊತೆ ತೆರಳುತ್ತಿದ್ದ ಸುಯೇಶಾ ಸಾವಂತ್ ಎಂಬವರಿಗೆ ಆಮ್ಲೇಟ್ನಲ್ಲಿ ಜಿರಳೆ ಪತ್ತೆಯಾಗಿದೆ. ಈ ಆಹಾರ ಸೇವನೆಯಿಂದ ತಾನು ಹಾಗ ಮಗು ಫುಡ್ ಪಾಯಿಸನ್ಗೆ ಒಳಗಾಗಿದ್ದೆವು ಎಂದು ಅವರು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಏರ್ ಇಂಡಿಯಾ ಪ್ರತಿಕ್ರಿಯೆ :
ಈ ಬಗ್ಗೆ ಏರ್ ಇಂಡಿಯಾ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ತನಿಖೆ ನಡೆಸುವುದಾಗಿ ಹೇಳಿದೆ. “ದೆಹಲಿಯಿಂದ ನ್ಯೂಯಾರ್ಕ್ ಗೆ ತೆರಳುತ್ತಿದ್ದ ಎಐ 101 ವಿಮಾನದಲ್ಲಿ ಫುಡ್ನಲ್ಲಿ ಜಿರಳೆ ಇದ್ದುದಾಗಿ ಪ್ರಯಾಣಿಕರು ದೂರಿದ್ದಾರೆ. ಏರ್ ಇಂಡಿಯಾ, ಜಾಗತಿಕವಾಗಿರುವ ಪ್ರಮುಖ ವಿಮಾನ ಸಂಸ್ಥೆಗಳಿಗೆ ಆಹಾರ ಪೂರೈಕೆ ಮಾಡುವ ಕ್ಯಾಟರಿಂಗ್ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ.
ಇದನ್ನೂ ಓದಿ : ಕಳ್ಳನನ್ನು ಹಿಡಿಯಲು ಹೋಗಿ ತಮ್ಮ ಪ್ರಾ*ಣಕ್ಕೆ ಕುತ್ತು ತಂದುಕೊಂಡ ಪೊಲೀಸರು
ಆಹಾರದ ಗುಣಮಟ್ಟಕ್ಕೆ ಹಲವು ನಿರ್ದಿಷ್ಟ ಮಾನದಂಡದೊಂದಿಗೆ ಆ ಸಂಸ್ಥೆ ಎಲ್ಲಾ ಪ್ರತಿಷ್ಠಿತ ವಿಮಾನ ಕಂಪೆನಿಗಳಿಗೆ ಆಹಾರ ಪೂರೈಕೆ ಮಾಡುತ್ತದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುವುದು” ಎಂದು ಏರ್ ಇಂಡಿಯಾ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
LATEST NEWS
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಸಂಸದ ಯದುವೀರ್ ಭೇಟಿ
ಉಡುಪಿ : ಉಡುಪಿ ಶ್ರೀ ಕೃಷ್ಣ ಮಠಕ್ಕೆ ಮೈಸೂರು – ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್ ಇಂದು (ಸೆ.29) ಭೇಟಿ ನೀಡಿ ದೇವರ ದರ್ಶನ ಪಡೆದರು.
ಅದಾದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರಿಂದ ಆಶೀರ್ವಾದ ಹಾಗೂ ಮಂತ್ರಾಕ್ಷತೆ ಪಡೆದರು.
ಬಿಜೆಪಿ ವತಿಯಿಂದ ಕುಂಜಿಬೆಟ್ಟು ಶಾರದ ಮಂಟಪದಲ್ಲಿ ನೆರವೇರಿದ ಬಿಜೆಪಿ ಸಾಹಿತ್ಯ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಘಾಟಿಸಿದರು.
- LATEST NEWS5 days ago
ಸೆಪ್ಟಂಬರ್ 29 ರಿಂದ ಆಕಾಶದಲ್ಲಿ ಎರಡು ಚಂದ್ರ ಗೋಚರ..! ಏನಿದು ವಿಸ್ಮಯ..?
- LATEST NEWS4 days ago
ಲಕ್ಷ್ಮೀ ಹೆಬ್ಬಾಳ್ಕರ್ಗೆ 1 ಕೆಜಿ ಬಂಗಾರದ ಆಫರ್ ನೀಡಿದ ಮಾಜಿ ಸಚಿವ
- LATEST NEWS5 days ago
ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃ*ತ್ಯು
- LATEST NEWS5 days ago
ಬಜೆಟ್ ಬೆಲೆಯ ಐಫೋನ್ ಹುಡುಕುತ್ತಿದ್ದೀರಾ? ಸದ್ಯದಲ್ಲೇ ಬರಲಿದೆ iPhone SE4
Pingback: ಕಾರು ಅಡ್ಡಗಟ್ಟಿ 1 ಕೋಟಿ ಹಣ ದೋಚಿದ ಕಳ್ಳರು - NAMMAKUDLA NEWS - ನಮ್ಮಕುಡ್ಲ ನ್ಯೂಸ್
Pingback: ವಿಮಾನದಲ್ಲಿ ನೀಡಿದ ಆಮ್ಲೆಟ್ನಲ್ಲಿ ಜಿರಳೆ..! ಪೋಸ್ಟ್ ವೈರಲ್ ..! - NAMMAKUDLA NEWS - ನಮ್ಮಕುಡ್ಲ ನ್ಯೂಸ್