Connect with us

DAKSHINA KANNADA

ಕ್ಯಾನ್ಸರ್ ವಿರುದ್ಧ ಹೋರಾಟ… ವೇಲ್ಸ್‌ ರಾಜಕುಮಾರಿಗೆ ಜಗತ್ತಿನೆಲ್ಲಡೆಯಿಂದ ಬೆಂಬಲ…!

Published

on

ವೇಲ್ಸ್‌ ರಾಜಕುಮಾರಿ ಕೇಟ್ ಮಿಡಲ್ಟನ್ ಅವರು ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿದ್ದು, ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಅವರಿಗೆ ವಿಶ್ವಾದ್ಯಂತ ಬೆಂಬಲ ವ್ಯಕ್ತವಾಗಿದೆ. ಜಗತ್ತಿನ ಹಲವು ಪ್ರಮುಖ ನಾಯಕರುಗಳು ವೇಲ್ಸ್‌ ರಾಜಕುಮಾರಿಯ ಶೀಘೃ ಚೇತರಿಕೆಗೆ ಶುಭ ಹಾರೈಸಿದ್ದಾರೆ.

ket mid

ರಾಜಕುಮಾರಿ ಕ್ಯಾಥರೀನ್‌ಗೆ ವಿಶ್ವಾದ್ಯಂತ ಬೆಂಬಲ..

ಬ್ರಿಟನ್‌ನ ವೇಲ್ಸ್‌ ರಾಜಕುಮಾರಿ ಕೇಟ್‌ ಮಿಡಲ್‌ಟನ್‌ ಅವರಿಗೆ ಕ್ಯಾನ್ಸರ್‌ ಕಾಯಿಲೆ ದೃಡ ಪಟ್ಟ ಬಳಿಕ ಜಗತ್ತಿನಾದ್ಯಂತ ಬೆಂಬಲದ ಸಂದೇಶಗಳು ಹರಿದು ಬಂದಿವೆ. ಪ್ರಿನ್ಸೆಸ್ ಕೇಟ್ ಅವರ ಮಾವ, ಕಿಂಗ್ ಚಾರ್ಲ್ಸ್ III, ಪ್ರಸ್ತುತ ಸ್ವತಃ ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗುತ್ತಿದ್ದಾರೆ, ಕೇಟ್ ಅವರನ್ನು ಭೇಟಿಯಾಗಿ ಅವರಿಗೆ ಧೈರ್ಯ ತುಂಬಿದ್ದಾರೆ.

prince charls

ಕ್ಯಾಲಿಫೋರ್ನಿಯಾದಲ್ಲಿ ನೆಲೆಸಿರುವ ಪ್ರಿನ್ಸ್ ಹ್ಯಾರಿ ಮತ್ತು ಮೇಘನ್ ತಮ್ಮ ಅತ್ತಿಗೆಗೆ ಬೆಂಬಲದ ಸಂದೇಶವನ್ನು ಹೇಳಿಕೆಯ ಮುಖಾಂತರ ಹಂಚಿಕೊಂಡಿದ್ದಾರೆ: “ಕೇಟ್ ಅವರ ಶೀಘೃ ಗುಣಮುಖಕ್ಕಾಗಿ ಹಾರೈಸುತ್ತಿದ್ದು, ಅವರ ಕುಟುಂಬದೊಂದಿಗೆ ನಾವು ಇರಲಿದ್ದೇವೆ. ಕೇಟ್ ಮತ್ತು ಅವರ ಕುಟುಂಬ ಇದನ್ನ ತುಂಬಾ ಖಾಸಗಿಯಾಗಿ ನಿಭಾಯಿಸಲಿದೆ” ಎಂದು ಹೇಳಿದ್ದಾರೆ.

ಇನ್ನು ಈ ಬಗ್ಗೆ ಬಕಿಂಗ್ಹ್ಯಾಮ್ ಅರಮನೆ ಪ್ರಕಟಣೆ ಹೊರಡಿಸಿದ್ದು, “ಕಿಂಗ್ ಚಾರ್ಲ್ಸ್‌ ಮತ್ತು ಕ್ಯಾಮಿಲ್ಲಾ ಅವರು ತಮ್ಮ ಪ್ರೀತಿಯ ಸೊಸೆಯೊಂದಿಗೆ ನಿಂತಿದೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಅವರ ಜೊತೆ ಸಮಯ ಕಳೆದಿದ್ದಾರೆ. ಇಡೀ ಕುಟುಂಬ ಕೇಟ್ ಅವರಿಗೆ ಪ್ರೀಯನ್ನು ಹಾಗೂ ಕ್ಯಾನ್ಸ್ ವಿರುದ್ಧ ಹೋರಾಡಲು ಬೆಂಬಲ ನೀಡಿದೆ” ಎಂದು ಹೇಳಿದೆ.  ಇನ್ನು ಬಿಟನ್ ಪ್ರಧಾನಿ ರಿಶಿ ಸುನಕ್ ಅವರೂ ಕೂಡಾ ತನ್ನ X ಖಾತೆಯಲ್ಲಿ ಸಂದೇಶ ಹಂಚಿಕೊಂಡಿದ್ದಾರೆ. “ಆರೋಗ್ಯದ ವಿಚಾರಕ್ಕೆ ಬಂದಾಗ ಕೇಟ್‌ ಅವರಿಗೆ ಚಿಕಿತ್ಸಾ ಸಮಯದಲ್ಲಿ ಅವರಿಗೆ ತುಂಬಾ ಖಾಸಗಿತನ ಬೇಕಿದೆ. ಅವರು ಹೆಚ್ಚು ಸಮಯವನ್ನು ತಮ್ಮ ಕುಟುಂಬದೊಂದಿಗೆ ಕಳೆಯಬೇಕಿದೆ. ಇಡೀ ದೇಶ ಅವರ ಶೀಘೃ ಚೇತರಿಕೆ ಕಂಡು ಹಿಂದಿನಿಂದ ಲವಲವಿಕೆಯಲ್ಲಿ ಇರುವುದನ್ನ ಕಾಣ ಬಯಸುತ್ತದೆ” ಎಂದಿದ್ದಾರೆ.

ಬ್ರಿಟನ್ ಸಂಸತ್‌ನ ವಿರೋಧ ಪಕ್ಷ ಲೇಬರ್ ಪಾರ್ಟಿಯ ನಾಯಕರೂ ಕೂಡಾ ರಾಜಕುಮಾರಿಯ ಶೀಘೃ ಚೇತರಿಕೆಗೆ ಶುಭ ಹಾರೈಸಿದೆ. ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಅವರೂ ಕೂಡಾ ತಮ್ಮ X ಖಾತೆಯಲ್ಲಿ ಪತ್ನಿ ಜಿಲ್‌ ಅವರೊಂದಿಗೆ ಶುಭ ಹಾರೈಸಿದ್ದಾರೆ. ” ರಾಜಕುಮಾರಿ ಕೇಟ್‌, ಪ್ರಪಂಚದ ಕೊಟ್ಯಾಂತರ ಜನ ನಿಮ್ಮ ಸಂಪೂರ್ಣ ಚೇತರಿಕೆಗಾಗಿ ಶುಭ ಹಾರೈಸುತ್ತಾರೆ” ಎಂದು ಬರೆದಿದ್ದಾರೆ.

ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ X ನಲ್ಲಿ “ನೀವು ಈಗ ಕಷ್ಟದ ಸಮಯದಲ್ಲಿ ಸಾಗುತ್ತಿದ್ದೀರಿ, ಬ್ರಿಗಿಟ್ಟೆ ಮತ್ತು ನಾನು ನಿಮಗೆ ಸಂಪೂರ್ಣ ಚೇತರಿಸಿಕೊಳ್ಳಬೇಕೆಂದು ಬಯಸುತ್ತೇನೆ.” ನಿಮ್ಮ ಶಕ್ತಿ ಮತ್ತು ನಿಮ್ಮಲ್ಲಿನ ಸ್ವಯಂ ನಿಗ್ರಹ ಶಕ್ತಿ ನಮಗೆಲ್ಲರಿಗೂ ಸ್ಫೂರ್ತಿ ನೀಡುತ್ತದೆ.” ಎಂದು ಬರೆದುಕೊಂಡಿದ್ದಾರೆ.

ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಕೂಡಾ ಶುಭ ಹಾರೈಸಿ ಧೈರ್ಯ ತುಂಬಿದ್ದು, “ಚಿಕಿತ್ಸೆಗೆ ಒಳಪಡುತ್ತಿರುವ ಕೇಟ್ ಅವರಿಗೆ ಕೆನಡಿಯನ್ನರ ಪರವಾಗಿ ನಮ್ಮ ಬೆಂಬಲ ಹಾಗೂ ಶೀಘೃ ಚೇತರಿಕೆಗೆ ಹಾರೈಸುತ್ತೇನೆ” ಎಂದು ಸಂದೇಶ ನೀಡಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಪುತ್ತೂರಿನಲ್ಲಿ ಭೀ*ಕರ ಅಪಘಾ*ತ; ರಿಕ್ಷಾ ಚಾಲಕ ಸಾ*ವು

Published

on

ಪುತ್ತೂರು : ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್‌ ಮತ್ತು ಆಟೋ ರಿಕ್ಷಾ ನಡುವೆ ಡಿ*ಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃ*ತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ನಸುಕಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ.

ಆಟೋ ರಿಕ್ಷಾ ಚಾಲಕ 30 ವರ್ಷದ ಜೈಸನ್ ಮೃ*ತಪಟ್ಟವರು. ಪುತ್ತೂರಿಗೆ ಬರುತ್ತಿದ್ದ ಬಸ್ ಮತ್ತು ವಿರುದ್ಧ ದಿಕ್ಕಿನಿಂದ ಚಲಿಸುತ್ತಿದ್ದ ರಿಕ್ಷಾ ನಡುವೆ ಡಿ*ಕ್ಕಿ ಸಂಭವಿಸಿದೆ.

ಇದನ್ನೂ ಓದಿ : ಕಡೆ ಕ್ಷಣ ವರನಿಂದ ತಾಳಿ ಕಟ್ಟಲು ನಿರಾಕರಿಸಿದ ವಧು; ಮುರಿದು ಬಿದ್ದ ಮದುವೆ

ಅಪಘಾತದ ತೀವ್ರತೆಗೆ ರಿಕ್ಷಾ ನಜ್ಜುಗುಜ್ಜಾಗಿದೆ. ಚಾಲಕ ಜೈಸನ್ ರಿಕ್ಷಾದ ಒಳಗೆ ಸಿಲುಕಿ ಹಾಕಿಕೊಂಡಿದ್ದರು. ಪುತ್ತೂರು ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಜೈಸನ್‌ ಅವರನ್ನು ಹೊರತೆಗೆದಿದ್ದಾರೆ. ಆದರೆ, ಜೈಸನ್ ಆಗಲೇ ಇಹಲೋಕ ತ್ಯಜಿಸಿದ್ದರು.

Continue Reading

DAKSHINA KANNADA

ಕಡೆ ಕ್ಷಣ ವರನಿಂದ ತಾಳಿ ಕಟ್ಟಲು ನಿರಾಕರಿಸಿದ ವಧು; ಮುರಿದು ಬಿದ್ದ ಮದುವೆ

Published

on

ಉಪ್ಪಿನಂಗಡಿ: ಇತ್ತೀಚಿನ ದಿನಗಳಲ್ಲಿ ಕಡೆ ಕ್ಷಣದಲ್ಲಿ ಅದೆಷ್ಟೋ ಮದುವೆಗಳು ಮುರಿದು ಬಿದ್ದ ಘಟನೆ ನಡೆದಿದೆ. ಹಾಗೆಯೇ ಇಲ್ಲೊಂದು ಮದುವೆ ಮಂಟಪದಲ್ಲಿ ಕೊನೆಯ ಕ್ಷಣ ವರನಿಂದ ತಾಳಿ ಕಟ್ಟಲು ವಧು ನಿರಾಕರಸಿದ ಕಾರಣ ಮದುಮೆ ಮುರಿದು ಬಿದ್ದ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ನಡೆದಿದೆ.

ಕೊಣಾಲು ಗ್ರಾಮದ ಕೋಲ್ಪೆ ದಿ। ಬಾಬು ಗೌಡ ಅವರ ಪುತ್ರ ಉಮೇಶ ಅವರ ಮದುವೆಯು ಬಂಟ್ವಾಳ ತಾಲೂಕು ಕುಳ ಗ್ರಾಮದ ಕಂಟ್ರಮಜಲು ದಿ। ಕೊರಗಪ್ಪ ಗೌಡ ಅವರ ಪುತ್ರಿ ಸರಸ್ವತಿ ಅವರೊಂದಿಗೆ ನಿಗದಿಯಾಗಿತ್ತು. ಎ.26 ರಂದು ಬೆಳಗ್ಗೆ 11.35ರ ಮೂಹೂರ್ತದಲ್ಲಿ ಕಾಂಚನ ಪೆರ್ಲದ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಮದುವೆ ನಿಗದಿಯಾಗಿತ್ತು. ಅದರಂತೆ ವರ ಹಾಗೂ ವಧುವಿನ ಕಡೆಯವರು ಮದುವೆಯ ದಿಬ್ಬಣದಲ್ಲಿ ಬಂದಿದ್ದರು. ವಧು ದಾರೆ ಸೀರೆ ಹಾಕಿ ಪರಸ್ಪರ ಹೂಮಾಲೆ ಕೂಡ ಹಾಕಿದ್ದರು. ಆದರೆ ತಾಳಿ ಕಟ್ಟಲು ಮುಂದಾದಗ ನನಗೆ ಈ ಮದುವೆ ಇಷ್ಟ ವಿಲ್ಲ ಎಂದು ವಧು ಹೇಳಿದ್ದಾಳೆ.

ಇದರಿಂದ ಎರಡೂ ಕಡೆಯವರು ಕಂಗಾಲಾಗಿ ವಧುವಿನ ಮನವೊಲಿಕೆಗೆ ಮುಂದಾದರು. ಆದರೆ ವಧು ಒಪ್ಪಲಿಲ್ಲ. ಬಳಿಕ ಎರಡೂ ಕಡೆ ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿದರು.

ಔತಣ ಕೂಟಕ್ಕೆ ಸಿದ್ಧತೆ:

ವರನ ಮನೆಯಲ್ಲಿ ಮಧ್ಯಾಹ್ನದ ಔತಣ ಕೂಟಕ್ಕೆ ಸುಮಾರು 500 ಜನರಿಗೆ ಮಾಂಸಾಹಾರಿ ಊಟ ತಯಾರಾಗಿತ್ತು. 1 ಸಾವಿರದಷ್ಟು ಐಸ್‌ಕ್ರೀಮ್ ವ್ಯವಸ್ಥೆಯನ್ನು ಮಾಡಲಾಗಿತ್ತು. ಮದುವೆ ಮುರಿದು ಬಿದ್ದ ಕಾರಣ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಮತ್ತೆ ಮದುವೆಯಾಗಲು ಒಪ್ಪಿದ ವಧು:

ಪೊಲೀಸ್ ಠಾಣೆಯಲ್ಲಿ ನಡೆದ ಮಾತುಕತೆ ವೇಳೆ ವಧು ಸರಸ್ವತಿ ಮತ್ತೆ ಮದುವೆ ಆಗಲು ಒಪ್ಪಿದ್ದರು. ಆದರೆ ಆಗ ವರ ಉಮೇಶ್ ಅವರು ಮದುವೆ ಆಗಲು ನಿರಾಕರಿಸಿದರು. ಇದರಿಂದಾಗಿ ಎರಡೂ ಕಡೆಯವರು ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ ಬರೆಯಿಸಿಕೊಂಡು ತಮ್ಮ ತಮ್ಮ ಮನೆಗಳಿಗೆ ತೆರಳಿದರು.

Continue Reading

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

LATEST NEWS

Trending