DAKSHINA KANNADA
ವೆನ್ಲಾಕ್ ನ ಜನರಲ್ ವಾರ್ಡಿನ ಮಂಚದಡಿ ಒಂದು ತಿಂಗಳು ಅಂಗಾತ ಮಲಗಿದ್ದರು ಆ ಅಗರ್ಭ ಶ್ರೀಮಂತ..!
ಮಂಗಳೂರು : 35 ವರ್ಷಗಳ ಹಿಂದಿನ ಮಾತು. ತನ್ನ ಅಣ್ಣನಿಗೆ ಅವಘಡ ಉಂಟಾಗಿ ಸೊಂಟ, ಕಾಲಿಗೆ ಗಂಭೀರ ಗಾಯವಾಗಿತ್ತು. ಆ ಸಂದರ್ಭ ಬಡವರ ಆಶಾಕಿರಣವಾಗಿದ್ದ ಮಂಗಳೂರಿನ ಸರಕಾರಿ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು.
ಒಂದು ತಿಂಗಳ ಸುದೀರ್ಘ ಚಿಕಿತ್ಸೆ ನಡೆಯಿತು. ರೋಗಿ ಅಣ್ಣನಿಗೆ ಸಹಾಯಕರಾಗಿ ತಮ್ಮ ಆಸ್ಪತ್ರೆಯಲ್ಲಿ ನಿಂತಿದ್ದರು.
ಅಣ್ಣ ಜನರಲ್ ವಾರ್ಡಿನ ಹಾಸಿಗೆಯಲ್ಲಿ ಮಲಗಿದ್ದಾಗ ತಮ್ಮ ಆ ಹಾಸಿಗೆಯ ಕೆಳಗೆ ಖಾಲಿ ನೆಲದಲ್ಲಿ ಒಂದು ತುಂಡು ಬೆಡ್ ಶೀಟ್, ತಲೆದಿಂಬು ಇಲ್ಲದೇ ಅಂಗಾತ ಮಲಗಿ ಒಂದು ತಿಂಗಳನ್ನು ಶೋಚನೀಯವಾಗಿ ಕಳೆದಿದ್ದರು..!
ಆ ತಮ್ಮ ಬೇರೆ ಯಾರೂ ಅಲ್ಲ. ಇಂದು ಇಡೀ ಸಮಾಜ ಗುರುತಿಸಿರುವ, ಬಡವರ ಬಗ್ಗೆ ಅಪಾರ ಕಾಳಜಿ ವಹಿಸುವ ಆಗರ್ಭ ಶ್ರೀಮಂತ, ಮಂಗಳೂರಿನ ಹೆಸರಾಂತ ಬಿಲ್ಡರ್ ರೋಹನ್ ಕಾರ್ಪೊರೇಶನ್ ಲಿಮಿಟೆಡ್ ಮಾಲಕರಾದ ರೋಹನ್ ಮೊಂತೇರೋ ಅವರು.
ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಕಾರುಣ್ಯ ಯೋಜನೆಯ ಮೂಲಕ ಕಳೆದ ನಾಲ್ಕೂವರೆ ವರ್ಷಗಳಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ರಾತ್ರಿಯ ಭೋಜನವನ್ನು ಉಚಿತವಾಗಿ ವಿತರಿಸುತ್ತಿದೆ.
ಪ್ರತಿನಿತ್ಯ ನೂರಾರು ಜನರು ಇದರ ಸದುಪಯೋಗ ಪಡೆಯುತ್ತಾರೆ. ಇದನ್ನು ಗಮನಿಸಿ ಆಸಕ್ತರಾದ ಉದ್ಯಮಿ ರೋಹನ್ ಮೊಂತೇರೋ ಆಗಸ್ಟ್ ಒಂದು ತಿಂಗಳು ತಾನು ಪ್ರಾಯೋಜಿಸುವ ಇರಾದೆ ವ್ಯಕ್ತಪಡಿಸಿ ಒಂದು ತಿಂಗಳ ಮೊತ್ತ ರೂ. 2,25,000/- ವನ್ನು ಎಂ.ಫ್ರೆಂಡ್ಸ್ ಖಾತೆಗೆ ಜಮೆ ಮಾಡಿದರು.
ಕಳೆದ ಆಗಸ್ಟ್ 15 ರಂದು ವೆನ್ಲಾಕ್ ಆಸ್ಪತ್ರೆಗೆ ಆಗಮಿಸಿ ಅಸಹಾಯಕರಿಗೆ ಸ್ವತಃ ತನ್ನ ಕೈಯ್ಯಾರೆ ಭೋಜನ ಬಡಿಸಿದರು. ಅಶಕ್ತರ ನೋವಿಗೆ ಸ್ಪಂದಿಸಿದರು.
ರೋಗಿಗಳೊಂದಿಗೆ ಉಭಯ ಕುಶಲೋಪರಿ ಮಾತನಾಡಿದರು. ಈ ಸಂದರ್ಭ ರೋಗಿಗಳ ಜೊತೆಗಾರರಿಗೆ ಧೈರ್ಯ ಸ್ಥೈರ್ಯ ತುಂಬುವ ಸಲುವಾಗಿ ತಾನು ವೆನ್ಲಾಕ್ ಆಸ್ಪತ್ರೆಯ ಹಾಸಿಗೆಯಡಿ ಒಂದು ತಿಂಗಳು ಮಲಗಿರುವ ಅನುಭವವನ್ನು ಹಂಚಿಕೊಂಡರು.
ಆ ಸಂದರ್ಭ ರೋಹನ್ ಕುಟುಂಬ ಬಡತನದಲ್ಲಿತ್ತು. ಅವರ ಒಳ್ಳೆಯ ಗುಣಕ್ಕೆ ಭಗವಂತನು ಶ್ರೀಮಂತಿಕೆ ನೀಡಿರಬಹುದು.
ಏನೇ ಸಮಸ್ಯೆಗಳು ಎದುರಾದರೂ ಒಂದು ದಿನವೂ ನಿಲ್ಲಿಸದೇ ಸದಾ ಅನ್ನದಾನ ಮಾಡುತ್ತಿರುವ ಎಂ.ಫ್ರೆಂಡ್ಸ್ ಟ್ರಸ್ಟಿಗೆ ಪ್ರತಿ ವರ್ಷ ಆಗಸ್ಟ್ ತಿಂಗಳ ಪ್ರಾಯೋಜಕತ್ವ ನೀಡುವ ಜೊತೆಗೆ ಈ ನಡುವೆ ಕಾರುಣ್ಯಕ್ಕೆ ಆರ್ಥಿಕ ಸಮಸ್ಯೆ ಎದುರಾದರೆ ರೋಹನ್ ಕಾರ್ಪೊರೇಶನ್ ಎಂ.ಫ್ರೆಂಡ್ಸ್ ಜೊತೆಗಿದೆ ಎಂದು ರೋಹನ್ ಭರವಸೆ ನೀಡಿದರು.
ರೋಹನ್ ಅವರ ಈ ವರ್ಷದ ಪ್ರಾಯೋಜಕತ್ವ ಆಗಸ್ಟ್ ತಿಂಗಳು ನಿನ್ನೆಗೆ (01-08-2022 ರಿಂದ 31-08-2022) ಪೂರ್ತಿಗೊಂಡರೂ ಅವರ ಸಹಕಾರದ ಕಾರಣದಿಂದಾಗಿ ಹಸಿವಿನ ಹೊಟ್ಟೆ ತಣಿಸಿದ ಸುಮಾರು ಹನ್ನೊಂದು ಸಾವಿರ ಅಶಕ್ತರ ತುಟಿಗಳ ಪ್ರಾರ್ಥನೆ ರೋಹನ್ ಮೊಂತೇರೋ ಅವರಿಗಿದೆ. ಅವರ ದಾನಕ್ಕೆ ಸೃಷ್ಟಿಕರ್ತನು ಪ್ರತಿಫಲ ನೀಡಲಿ. ಅವರ ಉದ್ಯಮ ಯಶಸ್ವಿಯಾಗಲಿ.
DAKSHINA KANNADA
ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ
ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್ ಹಾನಿಗೊಂಡಿದೆ.
ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!
ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.
DAKSHINA KANNADA
ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…
ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.
DAKSHINA KANNADA
ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
ನ್ಯೂಯಾರ್ಕ್ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್ಗಳನ್ನು ದಾಟಿ, ಹಂಪ್ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್ನ ಆನಂದ್ ಜಿಲ್ಲೆಯ ರೇಖಾಬೆನ್ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.
ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.
ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.
- FILM6 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM7 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- chikkamagaluru6 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!
- FILM6 days ago
ಶೋಬಿತಾ ಜೊತೆ ಕಾಡಿನಲ್ಲಿ ಕಾಣಿಸಿಕೊಂಡ್ರ ನಾಗಚೈತನ್ಯ..! ಫ್ಯಾನ್ಸ್ ಏನಂದ್ರು..?