DAKSHINA KANNADA
ಸ್ಕೂಟರ್ ಸೀಟಿನ ಅಡಿಯಲ್ಲಿದ್ದ ಆಗಂತುಕ; ಆಸ್ಪತ್ರೆ ಸೇರಿದ ಯುವಕ
ಕೈಕಂಬ: ಸೀಟಿನ ಮೇಲೆ ಏನಾದರು ಇದ್ದರೆ ಗುರುತಿಸಬಹುದು. ಆದರೆ ಸೀಟಿನ ಕೆಳಗಡೆ ಅವಿತ್ತಿದ್ದರೆ ಪತ್ತೆ ಹಚ್ಚುವುದು ಕಷ್ಟ. ಅದರಿಂದ ಪ್ರಾಣಕ್ಕೂ ಹಾನಿಯಾಗಬಹುದು. ಈಗ ಅಂತಹದ್ದೇ ಒಂದು ಆಘಾತಕಾರಿ ಘಟನೆ ಗುರುಪುರ ಕೈಕಂಬ ಆವರಣದಲ್ಲಿ ನಡೆದಿದೆ.
ಕನ್ನಡಿ ಹಾವಿನ ಕಣ್ಣಾಮುಚ್ಚಾಲೆ:
ಸ್ಕೂಟರ್ನ ಸೀಟಿನ ಕೆಳಗಡೆ ಕನ್ನಡಿ ಹಾವು ನುಸುಳಿ ಕೂತಿದ್ದು, ಬಳಿಕ ಸವಾರನಿಗೆ ಕಚ್ಚಿದ ಘಟನೆ ಕುಪ್ಪೆಪದವಿನಲ್ಲಿ ಶುಕ್ರವಾರ (ಸೆ.27) ನಡೆದಿತ್ತು.
ತಕ್ಷಣವೇ ವ್ಯಕ್ತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಅಪಾಯದಿಂದ ಪಾರಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರ ವರದಿ ತಿಳಿಸಿದೆ.
ಹಾವು ಕಡಿತಕ್ಕೆ ಓಳಗಾದ ವ್ಯಕ್ತಿ ಯಾರು ?
ಕುಪ್ಪೆಪದವಿನಲ್ಲಿ ಸೈಬರ್ ಸೆಂಟರ್ ನಡೆಸುತ್ತಿರುವ ಇಮ್ತಿಯಾಝ್ ಹಾವು ಕಡಿತಕ್ಕೆ ಒಳಗಾದವರು. ಸೆ.27 ರಂದು ರಾತ್ರಿ ಕೆಲಸ ಮುಗಿಸಿ ಮಸೀದಿಗೆ ಹೋಗಿ ಅಲ್ಲಿಂದ ಮನೆಗೆ ತೆರಳಲು ತನ್ನ ಎಲೆಕ್ಟ್ರಿಕ್ ಸ್ಕೂಟರ್ ಬಳಿ ಬಂದು ಸೀಟ್ ತೆರೆದು ಕಾಗದ ಪತ್ರಗಳನ್ನು ಇಡುವ ಸಂದರ್ಭದಲ್ಲಿ ಸೀಟಿನ ಕೆಳಗಿದ್ದ ಹಾವು ಬೆರಳಿಗೆ ಕಚ್ಚಿತ್ತು ಎಂಬುವುದಾಗಿ ತಿಳಿದು ಬಂದಿದೆ.
DAKSHINA KANNADA
ಡೆ*ತ್ ನೋಟ್ ಬರೆದು ನೇ*ಣಿಗೆ ಶರಣಾದ ವಿದ್ಯಾರ್ಥಿನಿ !!
ಮುಲ್ಕಿ: ಸಣ್ಣ ಸಣ್ಣ ಕಾರಣಗಳಿಗೆ ವಿದ್ಯಾರ್ಥಿಗಳು ಸಾ*ವಿನ ಹಾದಿಯನ್ನಿಡಿಯುವ ಅದೆಷ್ಟೋ ಘಟನೆಗಳು ನಡೆಯುತ್ತಿವೆ. ಇದೀಗ ಅಂತಹದ್ದೇ ಒಂದು ಪ್ರಕರಣ ದಾಖಲಾಗಿದ್ದು, ಡೆ*ತ್ ನೋ*ಟ್ ಬರೆದಿಟ್ಟು ವಿದ್ಯಾರ್ಥಿನಿ ನೇ*ಣಿಗೆ ಶರಣಾಗಿರುವ ಘಟನೆ ಮುಲ್ಕಿ ಸಮೀಪದ ಅತಿಕಾರಿಬೆಟ್ಟು ರೈಲ್ವೆ ಗೇಟ್ ಬಳಿಯ ಕ್ವಾಟರ್ಸ್ನಲ್ಲಿ ನಡೆದಿರುವುದು ತಿಳಿದು ಬಂದಿದೆ.
ಕೊಂಕಣ ರೈಲ್ವೆ ಗೇಟ್ ಸಿಬ್ಬಂದಿ ಮಹೇಶ್ ನಾಯಕ್ ಎಂಬವರ ಪುತ್ರಿ ಉಜ್ವಲ (17) ಶನಿವಾರ (ಸೆ.28) ಸಂಜೆ ರೈಲ್ವೇ ಕ್ವಾಟರ್ಸ್ನ ಮನೆಯ ಎದುರು ಬದಿಯ ಕೋಣೆಯಲ್ಲಿ ಡೆ*ತ್ ನೋಟ್ ಬರೆದಿಟ್ಟು ಪ್ಯಾನ್ಗೆ ನೇ*ಣು ಬಿಗಿದು ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಉಜ್ವಲ ಮುಲ್ಕಿ ವಿಜಯ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಕಾಲೇಜಿನಲ್ಲಿ ನೆಡೆದ ಮೀಟಿಂಗ್ ಮುಗಿದ ಬಳಿಕ ಮನೆ ಕಡೆ ಬಂದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಏಕಾ ಏಕಿ ಈ ಕೃ*ತ್ಯ ಎಸಗಿದ್ದಾಳೆ.
ಆತ್ಮ*ಹತ್ಯೆ ಸಂದರ್ಭ ತಂದೆ ಮಹೇಶ್ ನಾಯಕ್ ಮೈಲೊಟ್ಟು ರೈಲ್ವೇ ಗೇಟ್ ಬಳಿ ಕರ್ತವ್ಯಕ್ಕೆ ಹಾಜರಾಗಿದ್ದು, ತಾಯಿ ಊರಾದ ಭಟ್ಕಳಕ್ಕೆ ತೆರಳಿದ್ದಳು. ಮೃತಳ ಅಣ್ಣ ಮುಕ್ಕ ಕಾಲೇಜಿನಲ್ಲಿ ಕಲಿಯುತ್ತಿದ್ದು ಕಾಲೇಜು ಮುಗಿಸಿ ಸಂಜೆ 6:30 ಗಂಟೆ ಸುಮಾರಿಗೆ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
ಮೃತಳ ರೂಮ್ನಲ್ಲಿದ್ದ ಡೆ*ತ್ ನೋಟಲ್ಲಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಕೆಯ ಬಗ್ಗೆ ಬರೆದಿದ್ದಾಳೆ. ತೋಟದ ಮನೆಯಲ್ಲಿ ಅಂತಿಮ ಕ್ರಿಯೆ ನಡೆಯಬೇಕು ಎಂಬುವುದಾಗಿಯೂ ಉಲ್ಲೇಖಿಸಿದ್ದಾಳೆ.
ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
DAKSHINA KANNADA
ಈಜಾಡಲು ಹೋಗಿ ನೀ*ರುಪಾಲಾದ ಇಬ್ಬರು ಗೆಳೆಯರು
ಬಜಪೆ: ನದಿ ನೀರು ಕಂಡಾಗ ಈಜುವ ಎಂದು ಅನಿಸುವುದು ಸಾಮಾನ್ಯ. ಕಲವೊಮ್ಮೆ ನೀರಿನ ಆಳ ಎಷ್ಟಿದೆ ಎಂಬ ಪರಿವೇ ಇರುವುದಿಲ್ಲ. ತಿಳಿದವರು ಎಚ್ಚರಿಕೆ ನೀಡಿದರೂ ಕಡೆಗಣಿಸಿ ಅಪಾಯವನ್ನು ತಂದೊಪ್ಪಿಕೊಂಡಿರುವ ಎಷ್ಟೋ ಉದಾಹರಣೆಗಳಿವೆ.
ಇದೀಗ ಅಂತಹದ್ದೇ ಒಂದು ಘಟನೆ ಮಳವೂರು ರೈಲ್ವೇ ಸೇತುವೆ ಬಳಿ ಫಲ್ಗುಣಿ ನದಿಯ ನೀರಿನಲ್ಲಿ ನಿನ್ನೆ (ಸೆ.29) ಸಂಜೆ 4 ರ ವೇಳೆ ಈಜಾಡಲು ತೆರಳಿದ್ದ ನಾಲ್ಕು ಮಂದಿಯಲ್ಲಿ ಇಬ್ಬರು ನೀ*ರುಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಏನಿದು ಪ್ರಕರಣ?
ಮಂಗಳೂರು ನಗರದ ಕೋಟಿಕಲ್ ಅರುಣ್ (19), ದೀಕ್ಷಿತ್ (20), ಕೊಟ್ಟರ ಚೌಕಿಯ ಸುಮಿತ್ (20) ಹಾಗೂ ಉರ್ವಸ್ಟೋರಿನ ಅನೀಶ್ (19) ಎಂಬುವವರು ಮಳವೂರು ರೈಲ್ವೇ ಸೇತುವೆ ಬಳಿ ಫಲ್ಗುಣಿ ನದಿಯಲ್ಲಿ ಈಜಾಡಲು ಹೋಗಿದ್ದರು. ನಾಲ್ವರ ಪೈಕಿ ಸುಮಿತ್ ಮತ್ತು ಅನೀಶ್ ನೀರಿನ ಸು*ಳಿಗೆ ಸಿಕ್ಕಿಕೊಂಡು ನೀರುಪಾ*ಲಾಗಿದ್ದಾರೆ.
ತಕ್ಷಣವೇ ಬಜಪೆ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸ್ಥಳಕ್ಕೆ ಭೇಟಿ ನೀಡಿದ್ದು, ಹುಡುಕಾಟ ಆರಂಭಿಸಿದ್ದರು. ಅಗ್ನಿಶಾಮಕದ ಬೆಳಕಿನ ವ್ಯವಸ್ಥಯೊಂದಿಗೆ ಶೋಧ ಕಾರ್ಯ ಮುಂದುವರೆದಿತ್ತು. ಬಜಪೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೀಪ್ ಜಿ.ಎಸ್ ಮತ್ತು ಸಿಬ್ಬಂದಿಯೊಬ್ಬರು ರಾತ್ರಿ ಫೂರ್ತಿ ಅಲ್ಲಿಯೇ ಇದ್ದರು.
ರಜೆ ಸಿಕ್ಕಾಗ ನದಿಯಲ್ಲಿ ಈಜಾಟ:
ಮಳವೂರು ಡ್ಯಾಂ ಪರಿಸರದಲ್ಲಿ ರಜಾ ದಿನಗಳಲ್ಲಿ ಮಂಗಳೂರು ಸಹಿತ ವಿವಿಧ ಪ್ರದೇಶದ ಯುವಕರು ಈಜಲು ಬರುತ್ತಾರೆ. ಇತ್ತೀಚಿನ ದಿನ ವಾತಾವರಣದಲ್ಲಿ ಏರುಪೇರುಗಳಿರುವುದರಿಂದ ನೀರಿಗೆ ಇಳಿಯಬಾರದೆಂದು ಸ್ಥಳೀಯರು ಎಚ್ಚರಿಕೆ ನೀಡಿದ್ದರು. ಅದನ್ನು ಕಡೆಗಣಿಸಿ ನೀರಿಗಿಳಿದು ಪ್ರಾಣ ಕಳೆದುಕೊಂಡ ಣಪ್ರಕರಣ ಬಜಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
BANTWAL
ದೊಡ್ಮನೆಗೆ ಎಂಟ್ರಿ ಕೊಟ್ಟ ಕರಾವಳಿಯ ಖ್ಯಾತ ಯೂಟ್ಯೂಬರ್ ಧನರಾಜ್ ಆಚಾರ್ಯ
ಬಂಟ್ವಾಳ : ಖ್ಯಾತ ಯುಟ್ಯೂಬರ್ ಧನರಾಜ್ ಆಚಾರ್ಯ ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದಾರೆ.
ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಮಾಮೇಶ್ವರ ನಿವಾಸಿಯಾಗಿರುವ ಧನರಾಜ್ ಆಚಾರ್ಯ ತಮ್ಮ ಕಾಮಿಡಿ ಮ್ಯಾನರಿಸಂನಿಂದಲೇ ಫೇಮಸ್. ಹಾಸ್ಯಮಯ ವೀಡಿಯೋಗಳನ್ನು ಮಾಡಿ ಜನಮನಕ್ಕೆ ಹತ್ತಿರವಾಗಿದ್ದಾರೆ. ಜರ್ನಲಿಸಂ ಪದವೀಧರನಾಗಿರುವ ಧನರಾಜ್, ಆರಂಭದಲ್ಲಿ ಸಂಸಾರ ಜೋಡುಮಾರ್ಗ ತಂಡದ ಕಲಾವಿದನಾಗಿದ್ದು ಬಳಿಕ ಮೈಸೂರಿನ ರಂಗಾಯಣದಲ್ಲಿ ರಂಗಭೂಮಿ ಪದವಿಯನ್ನೂ ಪಡೆದಿದ್ದಾರೆ.
ಟಿಕ್ ಟಾಕ್ ನಲ್ಲಿ ಕಾಮಿಡಿ ವೀಡಿಯೋ ಮಾಡಿ ಪ್ರಸಿದ್ದಿ ಪಡೆದಿದ್ದ ಧನರಾಜ್ ಬಳಿಕ ಯೂಟ್ಯೂಬ್ ಹಾಗೂ ಇನ್ಸ್ಟಾಗ್ರಾಂ ನಲ್ಲಿ ಕಾಮಿಡಿ ವಿಡಿಯೋಗಳನ್ನು ಮಾಡಿ ಖ್ಯಾತಿ ಗಳಿಸಿದ್ದಾರೆ. ಕಲರ್ಸ್ ಕನ್ನಡದಲ್ಲಿ ಬಿತ್ತರವಾಗುವ ಗಿಚ್ಛಿಗಿಲಿಗಿಲಿ ಸೀಸನ್ 2 ರ ಸ್ಪರ್ಧಿಯಾಗಿಯೂ ಗಮನ ಸೆಳೆದಿದ್ದರು.
ವಿವಾಹದ ಬಳಿಕವೂ ಪತ್ನಿ ಪ್ರಜ್ಞಾ ಆಚಾರ್ಯ ಜೊತೆಗೂಡಿ ವೀಡಿಯೋಗಳನ್ನು ಮಾಡುತ್ತಿರುವ ಧನರಾಜ್ ಆಚಾರ್ಯ ಇತ್ತೀಚೆಗಷ್ಟೇ ಹೆಣ್ಣು ಮಗುವಿಗೆ ತಂದೆಯಾಗಿದ್ದಾರೆ.
- LATEST NEWS5 days ago
ಲಕ್ಷ್ಮೀ ಹೆಬ್ಬಾಳ್ಕರ್ಗೆ 1 ಕೆಜಿ ಬಂಗಾರದ ಆಫರ್ ನೀಡಿದ ಮಾಜಿ ಸಚಿವ
- LATEST NEWS6 days ago
ಸೆಪ್ಟಂಬರ್ 29 ರಿಂದ ಆಕಾಶದಲ್ಲಿ ಎರಡು ಚಂದ್ರ ಗೋಚರ..! ಏನಿದು ವಿಸ್ಮಯ..?
- LATEST NEWS6 days ago
ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃ*ತ್ಯು
- LATEST NEWS6 days ago
ಬಜೆಟ್ ಬೆಲೆಯ ಐಫೋನ್ ಹುಡುಕುತ್ತಿದ್ದೀರಾ? ಸದ್ಯದಲ್ಲೇ ಬರಲಿದೆ iPhone SE4