ದುಬೈಯಿಂದ ಇಂದು ಮಂಗಳೂರಿಗೆ ಎರಡನೇ ವಿಮಾನ ಆಗಮನ: ಬರಮಾಡಿಕೊಳ್ಳಲು ಜಿಲ್ಲಾಡಳಿತ ಸಜ್ಜು..
ದುಬೈಯಿಂದ ಇಂದು ಮಂಗಳೂರಿಗೆ ಎರಡನೇ ವಿಮಾನ ಆಗಮನ: ಬರಮಾಡಿಕೊಳ್ಳಲಿ ಜಿಲ್ಲಾಡಳಿತ ಸಜ್ಜು..
ಮಂಗಳೂರು: ಕೇಂದ್ರ ಸರಕಾರದ “ವಂದೇ ಭಾರತ್ ಮಿಷನ್’ ಕಾರ್ಯಾಚರಣೆಯಲ್ಲಿ ದುಬೈಯಿಂದ ಎರಡನೇ ವಿಮಾನ ಇಂದು (ಮೇ 18) ಸಂಜೆ 6.30ಕ್ಕೆ ಮಂಗಳೂರಿನ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ.
ಲಾಕ್ ಡೌನ್ ನಿಂದಾಗಿ ದುಬೈಯಲ್ಲಿ ಸಿಲುಕಿಕೊಂಡಿರುವ 35 ಗರ್ಭಿಣಿಯರ ಸಹಿತ 173 ಮಂದಿ ಪ್ರಯಾಣಿಕರನ್ನು ಈ ವಿಮಾನ ಕರೆ ತರಲಿದೆ.
ಮೇ 12ರಂದು ದುಬೈಯಿಂದ ಮಂಗಳೂರಿಗೆ 177 ಪ್ರಯಾಣಿಕರಿರುವ ಮೊದಲ ವಿಮಾನ ಆಗಮಿಸಿತ್ತು.
ಮಂಗಳೂರಿನಿಂದ ಇಂದು ಬೆಳಗ್ಗೆ ದುಬೈಗೆ ತೆರಳುವ ಏರ್ ಇಂಡಿಯಾ ವಿಮಾನವು, ಅಪರಾಹ್ನ 3ರ ಸುಮಾರಿಗೆ 95 ಪುರುಷರು ಹಾಗೂ 78 ಮಹಿಳಾ ಪ್ರಯಾಣಿಕರೊಂದಿಗೆ ಹೊರಡಲಿದೆ.
ಇನ್ನು ಮೇ 12ರಂದು ದುಬೈಯಿಂದ ಮೊದಲ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಸೂಕ್ತ ವ್ಯವಸ್ಥೆ ಕಲ್ಪಿಸಿಲ್ಲ ಎಂಬ ಆರೋಪ ಕೇಳಿ ಬಂದಿತ್ತು.
ಈ ಸಂಬಂಧ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಮೇ 16ರ ಶನಿವಾರ, ಖುದ್ದಾಗಿ ವಿಮಾನ ನಿಲ್ದಾಣಕ್ಕೆ ತೆರಳಿ, ಇಂದು ಆಗಮಿಸುವ ಪ್ರಯಾಣಿಕರಿಗೆ ಸಮಸ್ಯೆ ಆಗದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜೊತೆಗೆ ಸಂಸದ ನಳಿನ್ ಕುಮಾರ್ ಕಟೀಲ್ ನಿನ್ನೆ (ಮೇ 17) ಸಂಜೆ ಮಂಗಳೂರಿನಲ್ಲಿ ಜಿಲ್ಲಾಡಳಿತದ ಜೊತೆಗೆ ಸಭೆ ನಡೆಸಿ ಎಲ್ಲಾ ಸಿದ್ಧತೆ ನಡೆಸುವಂತೆ ಸೂಚಿಸಿದ್ದಾರೆ.
ಸದ್ಯ ವಿದೇಶದಿಂದ ಆಗಮಿಸುವ ಪ್ರಯಾಣಿಕರ ಪೈಕಿ ದ.ಕ. ಜಿಲ್ಲೆಯವರಿಗೆ ಮಂಗಳೂರಿನಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದ್ದು,
ಉಡುಪಿ ಹಾಗೂ ಇತರ ಜಿಲ್ಲೆಗಳ ಪ್ರಯಾಣಿಕರಿಗೆ ಆಯಾಯ ಜಿಲ್ಲೆಗಳಲ್ಲಿ ಕ್ವಾರಂಟೈನ್ ಮಾಡಲು ಆಯಾ ಜಿಲ್ಲಾಡಳಿತ ವ್ಯವಸ್ಥೆ ಕಲ್ಪಿಸಲಿದೆ.
ಪ್ರಯಾಣಿಕರ ವಿವರಗಳನ್ನು ಮೊದಲೇ ಪಡೆದಿರುವ ಜಿಲ್ಲಾಡಳಿತ ಆನ್ ಲೈನ್ ಮೂಲಕ ಹೊಟೇಲ್ ಬುಕ್ಕಿಂಗ್ ಗೆ ಅವಕಾಶ ಕಲ್ಪಿಸಿದೆ.
ಕಳೆದ ಬಾರಿಯಂತೆ ಪ್ರಯಾಣಿಕರು ನಿಲ್ದಾಣದಲ್ಲಿ ಕಾಯಬೇಕಾದ ಪ್ರಮೇಯ ಕಡಿಮೆ.
ವಿಮಾನ ಬಂದ ತಕ್ಷಣ ಎಲ್ಲ ಪ್ರಯಾಣಿಕರಿಗೆ ಉಪಾಹಾರ ವ್ಯವಸ್ಥೆ ಮಾಡಲಾಗಿದ್ದು, ಆರೋಗ್ಯ ತಪಾಸಣೆಯ ಬಳಿಕ ಊಟದ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಕಲ್ಪಿಸಲಾಗಿದೆ.
ಏರ್ ಪೋರ್ಟ್, ಏರ್ ಲೈನ್ಸ್ ಹಾಗೂ ಭದ್ರತಾ ಪಡೆಯವರ ಹೆಚ್ಚುವರಿ ಕೌಂಟರ್ಗಳನ್ನು ತೆರೆಯಲಾಗುತ್ತದೆ.
ಹಣ ಪಾವತಿಸುವ ಶರತ್ತಿಗೊಳಪಟ್ಟು, ಹೊಟೇಲ್ ಗಳಲ್ಲಿ ಕ್ವಾರಂಟೈನ್ ಆಗಲು ಒಪ್ಪಿಗೆ ಪತ್ರ ನೀಡಿರುವವರಿಗಾಗಿ ನಗರದಲ್ಲಿ 10 ಹೊಟೇಲ್ ಗಳನ್ನು ಜಿಲ್ಲಾಡಳಿತ ಕಾದಿರಿಸಿದೆ.
ದಿನಕ್ಕೆ ಕನಿಷ್ಠ 1,000 ರೂ.ಗಳಿಂದ ಗರಿಷ್ಠ 5,400 ರೂ.ವರೆಗಿನ ಬಾಡಿಗೆ ಇರುವ ಕೊಠಡಿಗಳು ಇರಲಿವೆ.
ಅವುಗಳಿಗೆ ನೋಡೆಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಹೊಟೇಲ್ ವಾಸ್ತವ್ಯಕ್ಕೆ ಒಪ್ಪಿಗೆ ಇಲ್ಲದವರನ್ನು ಸರಕಾರಿ ವಸತಿ ನಿಲಯಗಳಲ್ಲಿ ಕ್ವಾರಂಟೈನ್ ಗೆ ಅವಕಾಶ ಮಾಡಿ ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ವಿದೇಶದಿಂದ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆ ಹಾಗೂ ವ್ಯವಸ್ಥೆಗಳ ಪರಿಶೀಲನೆಗಾಗಿ ನಿಲ್ದಾಣದಲ್ಲಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮಾರ್ಕಿಂಗ್ ಮಾಡಲಾಗಿದೆ. ಸಾರ್ವಜನಿಕರು ಹಾಗೂ ಪ್ರಯಾಣಿಕರ ಕುಟುಂಬಸ್ಥರಿಗೆ ನಿಲ್ದಾಣಕ್ಕಾಗಲೀ ಅಥವಾ ಕ್ವಾರಂಟೈನ್ ಕೇಂದ್ರಗಳಿಗಾಗಲೀ ಬರಲು ಅವಕಾಶ ನೀಡಲಾಗಿಲ್ಲ.
ಲಗೇಜ್ ಗಳನ್ನು ಕೊಂಡೊಯ್ಯಲು ಜಿಲ್ಲಾಡಳಿತದ ವತಿಯಿಂದ ಕೆಲವರನ್ನು ಆರೋಗ್ಯ ಸುರಕ್ಷಾ ಕವಚದೊಂದಿಗೆ ನೇಮಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ಕ್ವಾರಂಟೈನ್ ಕೇಂದ್ರಗಳಿಗೆ ಕರೆದೊಯ್ಯಲು ಬಸ್ ವ್ಯವಸ್ಥೆ ಕೂಡ ಮಾಡಲಾಗಿದೆ.
ಇನ್ನು ಎಂದಿನಂತೆ ಪ್ರಯಾಣಿಕರನ್ನು “ಎ’ ಮತ್ತು “ಬಿ’ ಎಂದು 2 ವಿಭಾಗ ಮಾಡಲಾಗಿದೆ. ಕೆಮ್ಮು, ಜ್ವರ, ನೆಗಡಿ ಇರುವವರು “ಎ’ ವಿಭಾಗದವರಾಗಿದ್ದು,
ಅವರನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆಯೊಂದಿಗೆ 14 ದಿನಗಳ ಕ್ವಾರಂಟೈನ್ ಮಾಡಲಾಗುತ್ತದೆ.
ಯಾವುದೇ ರೋಗ ಲಕ್ಷಣ ಇಲ್ಲದವರು “ಬಿ’ ವಿಭಾಗದವರಾಗಿದ್ದು ಅಂತವರನ್ನು ಆಯಾಯ ಜಿಲ್ಲೆಗೆ ಜಿಲ್ಲಾಡಳಿತದ ವತಿಯಿಂದಲೇ ಕಳುಹಿಸಿ 14 ದಿನಗಳ ಕ್ವಾರಂಟೈನ್ ಮಾಡಲಾಗುತ್ತದೆ.
LATEST NEWS
ಉಡುಪಿ : ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿಅ*ಗ್ನಿ ಅವಘ*ಡ
ಉಡುಪಿ : ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಇಂದು(ಸೆ.23) ಬೆಳಗ್ಗೆ ಅ*ಗ್ನಿ ಅವಘ*ಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂ*ಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ರಿನೋವೇಷನ್ ಆಗುತ್ತಿದ್ದುದರಿಂದ ರೋಗಿಗಳು ಯಾರೂ ಇರಲಿಲ್ಲ. ಬೆಳಗ್ಗೆ ದೈನಂದಿನ ಕೆಲಸಕ್ಕೆ ಬರುವ ಮಹಿಳೆಯೊಬ್ಬರು ಅಡುಗೆ ಕೋಣೆಯಲ್ಲಿ ಕೆಲಸ ಪ್ರಾರಂಭಿಸುವಾಗ ಹಾಲ್ ನಲ್ಲಿ ಬೆಂ*ಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ತಕ್ಷಣ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಡುಪಿ ಅ*ಗ್ನಿಶಾಮಕ ದಳದ ತಂಡ ಬೆಂ*ಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಾರಂಭದಲ್ಲಿ ಕಟ್ಟಡದ ಮೇಲ್ಮಹಡಿಯಲ್ಲಿ ಬೆಂ*ಕಿ ಹೊತ್ತಿಕೊಂಡಿದೆ. ಮೊದಲ ಮಹಡಿಯಲ್ಲಿದ್ದ ಇಬ್ಬರು ಕಾರ್ಮಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
LATEST NEWS
ಅಣ್ಣನ ಪ್ರೀತಿಗೆ ತಮ್ಮ ಬ*ಲಿ; ತಾಯಿಯ ಮುಂದೆಯೇ ಮಗನ ಕೊ*ಲೆ
ಮಂಗಳೂರು/ಕಲಬುರಗಿ: ಯುವ ಸಮಾಜದ ಪ್ರೀತಿಗೆ ಮನೆಯಲ್ಲಿ ವಿರೋಧ ಬರುವುದು ಸಹಜ. ಅದರಲ್ಲೂ ಹುಡುಗಿಯ ವಿಚಾರದಲ್ಲಿ ಇದು ಹೆಚ್ಚಾಗಿಯೇ ಕಾಣಬಹುದು. ವಿಪರ್ಯಾಸವೆಂದರೆ ಅಣ್ಣನ ಪ್ರೇಮದ ವಿಚಾರದಲ್ಲಿ ತಮ್ಮ ಬಲಿ*ಯಾದ ಘಟನೆ ನಡೆದಿದೆ.
ಕಲಬುರಗಿ ನಗರದ ಹೊರವಲಯದಲ್ಲಿರುವ ನಾಗನಹಳ್ಳಿ ಗ್ರಾಮದಲ್ಲಿ ಸುಮಿತ್ ಮಲ್ಲಾಬಾದ್ ಎಂಬ 19 ವರ್ಷದ ಯುವಕನನ್ನು ಭೀಕ*ರವಾಗಿ ಕೊ*ಲೆ ಮಾಡಲಾಗಿದೆ. ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ವಾಸವಾಗಿದ್ದ ಸುಮಿತ್, ಮುಂಬೈನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ. ಕಳೆದ ವಾರವಷ್ಟೇ ತಾಯಿಯೊಂದಿಗೆ ಕಲಬುರಗಿಗೆ ಆಗಮಿಸಿದ್ದ. ಊರಲ್ಲಿ ಸುಮಿತ್ ಸಹೋದರ ಸಚಿನ್ ಮನೆಯಲ್ಲಿ ವಾಸವಾಗಿದ್ದ. ಸಚಿನ್ ನಾಗನಹಳ್ಳಿ ಗ್ರಾಮದ ತನ್ನದೆ ಏರಿಯಾದ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಈ ವಿಚಾರ ಯುವತಿಯ ಮನೆಯವರಿಗೆ ಗೊತ್ತಾಗಿ ಸಾಕಷ್ಟು ಭಾರಿ ನ್ಯಾಯ ಪಂಚಾಯಿತಿ ಮಾಡಿದ್ದರಂತೆ. ಆದರೆ ಅದು ಬಗೆಹರೆದಿರಲಿಲ್ಲ. ನಿನ್ನೆ ಸಂಜೆ (ಸೆ.21) ಸಚಿನ್ ಮನೆಗೆ ಯುವತಿಯ ಸಹೋದರ ಮತ್ತು ಆತನ ಕೆಲ ಸ್ನೇಹಿತರು ಬಂದಿದ್ದಾಗ ಸಚಿನ್ ಮನೆಯಲ್ಲಿರದ ಕಾರಣ ಆತನ ತಾಯಿ ಮತ್ತು ಸಹೋದರನ ಜೊತೆ ಗಲಾಟೆ ತೆಗೆದಿದ್ದಾರೆ. ಬಳಿಕ ಗಲಾಟೆ ವಿಕೋಪಕ್ಕೆ ತೆರಳಿ ಸುಮಿತ್ನನ್ನ ಚಾ*ಕುವಿನಿಂದ ಚು*ಚ್ಚಿ ಎಸ್ಕೇಪ್ ಆಗಿದ್ದಾರೆ.
ಇತ್ತ ಸುಮಿತ್ಗೆ ಚಾ*ಕು ಚುಚ್ಚಿ*ದ್ದನ್ನು ಕಂಡ ತಾಯಿ, ಮಗನನ್ನ ಉಳಿಸಿಕೊಳ್ಳಲು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹನ್ನೆರೆಡು ಗಂಟೆಗಳ ಕಾಲ ನಡೆದ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ (ಸೆ.22) ಸಾವನ್ನ*ಪ್ಪಿದ್ದಾನೆ.
ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಅದೇನೆ ಆಗಲಿ ಯುವತಿಯ ವಿಚಾರದಲ್ಲಿ ಏನು ಮಾಡದ ಅಮಾಯಕ ಯುವಕ ಬಲಿಯಾಗಿರೋದು ನಿಜಕ್ಕೂ ದುರಂತವೆ ಸರಿ.
LATEST NEWS
ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ತುಪ್ಪ ಸಾಗಿಸುವ ಟ್ಯಾಂಕರ್ಗಳಿಗೆ ಜಿಪಿಎಸ್ ಅಳವಡಿಕೆ
ಆಂಧ್ರಪ್ರದೇಶ/ಮಂಗಳೂರು: ತಿರುಪತಿ ತಿರುಮಲದಲ್ಲಿ ಲಡ್ಡು ವಿವಾದ ಉಂಟಾದ ಬಳಿಕ ಸರಕಾರ ನಂದಿನಿ ತುಪ್ಪಕ್ಕೆ ಬೇಡಿಕೆ ಇಟ್ಟಿದೆ. ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.
ತಿರುಪತಿ ಲಡ್ಡು ವಿವಾದದ ಬಳಿಕ ಕೆಎಮ್ಎಫ್ ಹೈ ಅಲರ್ಟ್:
“ನಾವು ಒಂದು ತಿಂಗಳ ಹಿಂದೆ ತುಪ್ಪವನ್ನು(ಟಿಟಿಡಿಗೆ) ಸರಬರಾಜು ಮಾಡುತ್ತಿದ್ದೇವೆ. ನಾವು ವಾಹನಗಳಿಗೆ ಜಿಪಿಎಸ್ ಸಿಸ್ಟಮ್ ಮತ್ತು ಜಿಯೋ ಲೊಕೇಶನ್ ಸಾಧನಗಳನ್ನು ಅಳವಡಿಸಿದ್ದೇವೆ. ಇದರಿಂದ ವಾಹನ ಎಲ್ಲಿ ನಿಲ್ಲುತ್ತವೆ ಎಂಬುದನ್ನು ನಾವು ಕಂಡುಹಿಡಿಯಬಹುದು. ಇದು ಎಲ್ಲಿಯೂ ಕಲಬೆರಕೆ ಮಾಡದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ” ಎಂದು ಜಗದೀಶ್ ತಿಳಿಸಿದ್ದಾರೆ.
ಕೆಎಂಎಫ್, ಟಿಟಿಡಿಗೆ 350 ಟನ್ ತುಪ್ಪ ಪೂರೈಸುವ ಗುತ್ತಿಗೆ ಪಡೆದುಕೊಂಡಿದೆ. ಅಗತ್ಯ ಬಿದ್ದಾಗ ತುಪ್ಪ ಪೂರೈಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.