Connect with us

    ಪಾರ್ಶ್ವವಾಯು ಪೀಡಿತ ಅನಿವಾಸಿ ಕನ್ನಡಿಗನ ಕೈಹಿಡಿದ ಸೋಶಿಯಲ್ ಫೋರಮ್

    Published

    on

    ಪಾರ್ಶ್ವವಾಯು ಪೀಡಿತ ಅನಿವಾಸಿ ಕನ್ನಡಿಗನ ಕೈಹಿಡಿದ ಸೋಶಿಯಲ್ ಫೋರಮ್

    ಮಸ್ಕತ್: ಕೋವಿಡ್ ಲಾಕ್ ಡೌನ್ ನಡುವೆ ಎಪ್ರಿಲ್ 12ರಂದು ತನ್ನ ಕಾರಿನಲ್ಲೇ ಪ್ರಜ್ಞಾಹೀನನಾಗಿ ಬಿದ್ದು,

    ಆಸ್ಪತ್ರೆಗೆ ದಾಖಲಾದ ಬೆಂಗಳೂರು ಮೂಲದ 29ರ ಹರೆಯದ ಯುವಕ ಅಶ್ರಫ್ ಅಫಾಖ್ ನಿಗೆ ಪ್ರಜ್ಞೆ ಬಂದಾಗ ತನ್ನ ದೇಹದ ಒಂದು ಭಾಗದ ಸ್ವಾಧೀನ ಕಳೆದುಕೊಂಡಿದ್ದ.

    ರಕ್ತದೊತ್ತಡ ಅಧಿಕಗೊಂಡು ಮೆದುಳಿನ ನರವೊಂದು ಘಾಸಿಗೊಂಡಿದ್ದರಿಂದ ಪ್ರಜ್ಞಾಹೀನ ಸ್ಥಿತಿಯಲ್ಲೇ ಕೆಲವು ದಿನಗಳ ಕಾಲ ಮಸ್ಕತ್ ನ ಕೌಲಾ ಅಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು.

    ಒಮಾನ್ ನ ಮುಸನ್ನ ಎಂಬಲ್ಲಿ ಅಂಗಡಿಯೊಂದರಲ್ಲಿ ಸೇಲ್ಸ್‌ಮನ್ ಆಗಿ ಕೆಲಸ ಮಾಡುತ್ತಿದ್ದ ಅಶ್ರಫ್ ನ ಈ ಶೋಚನೀಯ ಪರಿಸ್ಥಿತಿಯ ಬಗ್ಗೆ,

    ಕುಟುಂಬ ಸಂಬಂಧಿ ಮುಹಮ್ಮದ್ ನಬೀಲ್ ಎಂಬವರು ಒಮಾನ್ ನ ಅನಿವಾಸಿ ಭಾರತೀಯರ ಸಾಮಾಜಿಕ ಸಂಘಟನೆಯಾಗಿರುವ ಸೋಶಿಯಲ್ ಫೋರಮ್ ನ ಗಮನಕ್ಕೆ ತಂದಿದ್ದರು.

    ವಿಷಯ ತಿಳಿದು ಆಸ್ಪತ್ರೆಗೆ ಧಾವಿಸಿ ಸಂಪೂರ್ಣ ಮಾಹಿತಿ ಕಲೆ ಹಾಕಿದ ಸೋಶಿಯಲ್ ಫೋರಮ್ ಒಮಾನ್ ನ ನಿಯೋಗವು ಅಶ್ರಫ್ ನಿಗೆ ಹೆಚ್ಚಿನ ಚಿಕಿತ್ಸೆಗಾಗಿ ತವರಿಗೆ ಕಳುಹಿಸಿ ಕೊಡಬೇಕಾದ ಅನಿವಾರ್ಯತೆಯನ್ನು ಮನಗಂಡಿತು.

    ಭಾರತ ಸರಕಾರದ ‘ವಂದೇ ಭಾರತ್ ಮಿಶನ್’ ಭಾಗವಾಗಿ ವಿಶೇಷವಾಗಿ ಕಲ್ಪಿಸಲಾದ ವಿಮಾನದಲ್ಲಿ ಪ್ರಯಾಣಿಸಲು ಅನುಮತಿ ಕೋರಿ ಭಾರತದ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿತು.

    ಇದಕ್ಕೆ ಪೂರಕವಾಗಿ ಆಸ್ಪತ್ರೆಯ ಬಿಲ್ಲು ಪಾವತಿಸಲು ಬೇಕಾದ ಹಣಕಾಸಿನ ಮೂಲಕ್ಕೆ ಸಹಕರಿಸಿತು.

    ತೀವ್ರ ನಿಗಾ ಘಟಕ ಮತ್ತು ವಿಶೇಷ ಚಿಕಿತ್ಸೆಯ ಹಿನ್ನಲೆಯಲ್ಲಿ ಆಸ್ಪತ್ರೆಯ ಬಿಲ್ಲು 4 ಲಕ್ಷ ರೂಪಾಯಿ ದಾಟಿತ್ತು.

    ಪ್ರಯಾಣಕ್ಕೆ ಬೇಕಾದ ಪ್ರಮಾಣಪತ್ರ, ಸಹಾಯಕ್ಕಾಗಿ ಸಹಪ್ರಯಾಣಿಕರೊಬ್ಬರನ್ನು ಸೋಶಿಯಲ್ ಫೋರಮ್ ಸಂಘಟಿಸಿತು.

    ಕೋವಿಡ್ -19 ನಡುವೆಯೂ ಪಾರ್ಶ್ವವಾಯು ಪೀಡಿತರಾದ ಅಶ್ರಫ್ ನೊಂದಿಗೆ ಮುಹಮ್ಮದ್ ನಬೀಲ್ ಆಸ್ಪತ್ರೆಯಲ್ಲೇ ಉಳಿದು ಮಾನವೀಯತೆ ಮೆರೆದರು.

    ತೀರಾ ಬಡ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ ಅಶ್ರಫ್ ಅಫಾಖ್ ನ ದೇಹದ ಒಂದು ಭಾಗವು ಈಗ ಸ್ತಬ್ಧಗೊಂಡಿದೆ.

    ಸುದೀರ್ಘಕಾಲದ ಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ತಂದೆ ಕಿಡ್ನಿಕಾಯಿಲೆಯಿಂದ ಬಳಲುತ್ತಿದ್ದು ಮನೆಯವರನ್ನು ಸಾಕಿ-ಸಲಹುವ ಜವಾಬ್ಧಾರಿ ವಹಿಸಿಕೊಂಡು ಒಮಾನ್ ಗೆ ಉದ್ಯೋಗಕ್ಕೆಂದು ಬಂದ ಯುವಕನ ಕನಸು ಇದೀಗ ನುಚ್ಚು ನೂರಾಗಿದೆ.

    ವೀಲ್ ಚೆಯರ್ ನಲ್ಲಿ ತವರಿಗೆ ಮರಳುತ್ತಿರುವ ಅಶ್ರಫ್ ಅಫಾಖ್ ಹಿಂದಿನಂತೆ ಗುಣಮುಖರಾಗಿ ಎದ್ದು ನಿಲ್ಲುವಂತಾಗಲಿ ಎಂದು ಸೋಶಿಯಲ್ ಫೋರಮ್ ಹಾರೈಸಿದೆ.

    ಸೋಶಿಯಲ್ ಫೋರಮ್ ನ ನಿಯೋಗದಲ್ಲಿ ಅಬ್ದುಲ್ ಹಮೀದ್, ಆಸಿಫ್ ಬೈಲೂರು, ನೂರ್ ಮುಹಮ್ಮದ್, ಫಯಾಝ್ ಉಪ್ಪಿನಂಗಡಿ, ಯೂಸುಫ್ ಮುಕ್ಕ ಮುಂತಾದವರು ಕಾರ್ಯನಿರ್ವಹಿಸಿದ್ದರು.

    Click to comment

    Leave a Reply

    Your email address will not be published. Required fields are marked *

    BANTWAL

    VIDEO: ಕೆಸರುಗದ್ದೆಯಲ್ಲಿ ಜಿಲ್ಲಾಧಿಕಾರಿಯ ಪಿಲಿ ನಲಿಕೆ

    Published

    on

    ಬಂಟ್ವಾಳ: ತಾಲೂಕಿನ ಅನಂತಾಡಿ ಗ್ರಾಮದ ನವ ಭಾರತ್ ಯುವಕ ಸಂಘ ( ರಿ ) ಅನಂತಾಡಿ ವತಿಯಿಂದ ಪಡಿಪಿರೆ ಗದ್ದೆಯಲ್ಲಿ ಜರಗಿದ 6 ನೇ ವರ್ಷದ “ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಅನೀಶ್ ಅಶ್ವತ್ತಾಡಿ ವಹಿಸಿದ್ದರು.

    ಕಾರ್ಯಕ್ರಮದ ಧ್ವಜಾರೋಹಣವನ್ನು ಡಾ.ರೂಪಲತಾ ಕೊಂಗಲಾಯಿ ನೆರವೇರಿಸಿ , ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಲಯನ್ಸ್ ಕ್ಲಬ್ ಮಾಣಿ ವಲಯ ಅಧ್ಯಕ್ಷ ರಾಮ್ ಕಿಶಾನ್ ರೈ ನೆರವೇರಿಸಿದರು. ಕ್ರೀಡಾಕೂಟದ ಕೆಸರುಗದ್ದೆಯ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರ ಸಂಘದ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಹಾಗೂ ವಿಠಲ ಕೋಟ್ಯಾನ್ ಪೊಯ್ಯೇ ನೆರವೇರಿಸಿದರು.

    ಕೆಸರು ಗದ್ದೆಯಲ್ಲಿ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ, ವಿವಿಧ ಕ್ರೀಡಾಕೂಟಗಳನ್ನು ನಡೆಸಲಾಯಿತು.  ಈ ಸಂದರ್ಭದಲ್ಲಿ ನಮ್ಮ ತುಳುವ ಸಂಸ್ಕೃತಿಯ ಚಾಪೆ ಹೆಣೆಯುವುದು, ಬುಟ್ಟಿ ಹೆಣೆಯುವುದು, ಮುಟ್ಟಾಲೆ ಕಟ್ಟುವುದು, ತೆಂಗಿನಗರಿ ಹೆಣೆಯುವುದು,  ಅಕ್ಕಿ ಮುಡಿ ಕಟ್ಟುವ ಪ್ರಾತ್ಯಕ್ಷತೆ ನಡೆಸಲಾಯಿತು. 

    ಕತ್ತಲು ಆವರಿಸಿದ ಬ್ರಹ್ಮಗಿರಿಯ ಪ್ರವಾಸಿತಾಣ..! ಮೆಸ್ಕಾಂ ಅಧಿಕಾರಿಗಳಿಂದ ವಿದ್ಯುತ್ ಕಡಿತ

    ವೇದಿಕೆಯಲ್ಲಿ ಮಾಣಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ, ನಿವೃತ್ತ ಶಿಕ್ಷಕ ರಾಮಣ್ಣ ಗೌಡ ಕೋಂಗಲಾಯಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನಾರ್ಶ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ನೇರಳಕಟ್ಟೆ, ಸರಕಾರಿ ಪದವಿ ಪೂರ್ವ ಕಾಲೇಜು ವಾಮದಪದವಿನ ರಾಧಾಕೃಷ್ಣಮೂಲ್ಯ, ಮಲ್ಲರಾಯ ದೈವ ಪರಿಚರಕರುಗಳಾದ ರಾಮಣ್ಣ ಗೌಡ, ಬಾಲಪ್ಪ ಮಡಿವಾಳ, ಲಕ್ಷ್ಮಣ ಪೂಜಾರಿ ಬಾಕಿಲ, ಪದ್ಮನಾಭ ಪೂಜಾರಿ ಈಡೆಮುಂಡೆವು ಮೊದಲಾದವರು ಉಪಸ್ಥಿತರಿದ್ದರು.

    ಮಕ್ಕಳೊಂದಿಗೆ ಹೆಜ್ಜೆ ಹಾಕಿದ ಜಿಲ್ಲಾಧಿಕಾರಿ
    ಈಗಾಗಲೇ ಶಾಲಾ ಮಕ್ಕಳಿಗೆ ರಜೆ ನೀಡುವ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ಫೇವರೆಟ್ ಆಗಿರುವ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಅನಂತಾಡಿಯಲ್ಲಿ ಸಂಘಟನೆಯವರು ಆಯೋಜನೆ ಮಾಡಿದ್ದ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಭಾಗವಹಿಸಿ, ಮಕ್ಕಳೊಂದಿಗೆ ಮಕ್ಕಳಾಗಿ ಕೆಸರಿನಲ್ಲಿ ಆಟವಾಡಿದ್ದಾರೆ. ಅಲ್ಲದೇ ಕರಾವಳಿಯ ಪಿಲಿ ನಲಿಕೆಗೆ ಹೆಜ್ಜೆ ಹಾಕಿ ಎಲ್ಲರ ಹುಬ್ಬೆರಗಾಗುವಂತೆ ಮಾಡಿದ್ದಾರೆ. ಮಕ್ಕಳ ಜೊತೆ ತಾನೂ ಮಗುವಾಗಿ ಮೈಮರೆತು ಹಾಡಿನ ನೃತ್ಯ ಮಾಡಿದ ಜಿಲ್ಲಾಧಿಕಾರಿಗಳ ನಡೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಇದರ ಜೊತೆಗೆ ಯುವಕರ ಜೊತೆ ವಾಲಿಬಾಲ್ ಆಡುವ ಮೂಲಕವೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರವರು ಎಲ್ಲರ ಗಮನ ಸೆಳೆದಿದ್ದಾರೆ.

     

    Continue Reading

    LATEST NEWS

    ಇನ್ಮುಂದೆ ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ…!

    Published

    on

    ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೊರನಾಡಿನಲ್ಲಿ ನೆಲೆಸಿರುವ ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯ ಮಾಡಿದ್ದು, ಭಕ್ತರು ಈ ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಅಡಳಿತ ಮಂಡಳಿ ಮನವಿ ಮಾಡಿಕೊಂಡಿದೆ.

    ಗಂಡಸರು ಶಲ್ಯ, ಪ್ಯಾಂಟ್, ಪಂಚೆ ಧರಿಸಬೇಕು. ಹೆಣ್ಣು ಮಕ್ಕಳು ಸೀರೆ ಹಾಗೂ ಚೂಡಿದಾರ ಧರಿಸುವಂತೆ ದೇವಾಲಯದ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಸಾಂಪ್ರದಾಯಿಕ ಉಡುಗೆಯಲ್ಲಿ ಬರದಿದ್ದರೆ ದೇವಸ್ಥಾನದ ಒಳಗೆ ಪ್ರವೇಶವಿಲ್ಲ ಅಂತ ಅಡಳಿತ ಮಂಡಳಿ ತಿಳಿಸಿದೆ.

    Continue Reading

    LATEST NEWS

    ಎಂಟು ಕಾಲುಗಳೊಂದಿಗೆ ಜನಿಸಿದ ಕರು..! ಈ ವಿಚಿತ್ರ ನೋಡಲು ಮುಗಿಬಿದ್ದ ಜನ..!!

    Published

    on

    ಉತ್ತರಪ್ರದೇಶ/ಮಂಗಳೂರು: ಇಲ್ಲಿನ ಗ್ರಾಮದ ರೈತರೊಬ್ಬರ ಮನೆಯಲ್ಲಿ ಎಮ್ಮೆಯೊಂದು ಎಂಟು ಕಾಲುಗಳಿರುವ ಕರುವಿಗೆ ಜನ್ಮ ನೀಡುವ ಮೂಲಕ ವಿಸ್ಮಯವನ್ನುಂಟುಮಾಡಿದೆ. ಅಲ್ಲದೇ ಈ ವಿಚಿತ್ರ ಕರುವನ್ನು ನೋಡಲು ಊರವರೆಲ್ಲಾ ಮನೆಗೆ ದೌಡಾಯಿಸಿದ್ದಾರೆ.

    ಎರಡು ಬೆನ್ನು ಹಾಗೂ ಎಂಟು ಕಾಲು ಹಾಗೂ ಒಂದು ತಲೆಯೊಂದಿಗೆ ಜನಿಸಿದ ಈ ಕರುವನ್ನು ನೋಡಿ ಎಲ್ಲರೂ ಬೆಚ್ಚಿ ಬಿದ್ದಿದ್ದಾರೆ.  ಕರುವನ್ನು ಪರೀಕ್ಷಿಸಿದ ವೈದ್ಯರು ಆನುವಂಶಿಕ ದೋಷದಿಂದ ಇಂತಹ ಕರುಗಳು ಜನಿಸುತ್ತವೆ ಎಂದು ಹೇಳಿದ್ದಾರೆ. ಈ ಘಟನೆ ಸ್ಥಳೀಯರು ಹಾಗೂ ನೆಟ್ಟಿಗರ ಗಮನ ಸೆಳೆದಿದೆ.

    ಕರುವಿನ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

    Continue Reading

    LATEST NEWS

    Trending