Connect with us

DAKSHINA KANNADA

ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟ ‘ಕಾಂತಾರ’ದ ರಿಷಬ್‌ ಶೆಟ್ಟಿ..!

Published

on

ಮಂಗಳೂರು: ಇದೀಗ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿರುವ ಕಾಂತಾರ ಚಲನಚಿತ್ರದ ತಂಡ ಇಂದು ಮಂಗಳೂರಿನ ಮಾಲ್‌ನಲ್ಲಿ ಚಿತ್ರ ಪ್ರೇಮಿಗಳೊಂದಿಗೆ ಹರಟೆ ಹೊಡೆದು ಚಿತ್ರ ಪ್ರೇಮಿಗಳಿಗೆ ಖುಷಿ ಕೊಟ್ಟಿದೆ.


ಚಿತ್ರದ ನಾಯಕ ನಟ, ನಿರ್ದೇಶನ ರಿಷಬ್ ಶೆಟ್ಟಿ, ನಟಿ ಸಪ್ತಮಿ ಗೌಡ ಹಾಗೂ ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮಿನಾಡು ಅವರ ತಂಡ ಇಂದು ನಗರದ ಖಾಸಗಿ ಮಾಲ್‌ನಲ್ಲಿ ಚಿತ್ರ ಪ್ರೇಮಿಗಳೊಂದಿಗೆ ಒಂದಷ್ಟು ಹರಟೆ ಹೊಡೆದಿದೆ. ತಮ್ಮ ಅಚ್ಚುಮೆಚ್ಚಿನ ನಟನನ್ನು ಕಂಡು ಚಿತ್ರ ಪ್ರೇಮಿಗಳು ಹರ್ಷ ವ್ಯಕ್ತಪಡಿಸಿದರು.


ಇನ್ನು ಚಿತ್ರ ಇಷ್ಟೊಂದು ಯಶಸ್ವಿಯಾಗಿ ಓಡಲು ಕಾರಣವಾದ ತುಳುನಾಡಿನ ಚಿತ್ರ ಪ್ರೇಮಿಗಳಿಗೂ ಕಾಂತಾರ ಚಿತ್ರ ತಂಡ ಧನ್ಯವಾದವನ್ನು ಸಲ್ಲಿಸಿದೆ. ಚಿತ್ರ ಪ್ರೇಮಿಗಳು ಕೂಡಾ ಚಿತ್ರ ತಂಡಕ್ಕೆ ಕೆಲವು ಪ್ರಶ್ನೆಗಳನ್ನು ಕೇಳಿ ತಮ್ಮ ಚಿತ್ರದ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.


ಇನ್ನು ಈ ಬಗ್ಗೆ ಮಾತನಾಡಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ ಮಾತನಾಡಿ ‘ತುಳುನಾಡಿನ ದೈವಾರಾಧನೆಗೆ ಒಂದಷ್ಟು ಚ್ಯುತಿ ಬಾರದ ರೀತಿಯಲ್ಲಿ ನಾವು ಕಾಂತಾರಾ ಚಿತ್ರವನ್ನು ನೀಡಿದ್ದೇವೆ.

ಚಿತ್ರ ಇಷ್ಟೊಂದು ಒಳ್ಳೆಯದಾಗಿ ಮೂಡಿ ಬಂದಿದ್ದು, ಎಲ್ಲವೂ ತುಳುನಾಡಿದ ದೈವದ ಕೃಪೆ. ಅತ್ಯಂತ ಯಶಸ್ವಿಯಾಗಿರುವ ಈ ಸಿನೆಮಾವನ್ನು ನಾನು ನಾಡಿನ ದೈವಾರಾಧಕರಿಗೆ ಹಾಗೂ ನನ್ನ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ ಕುಮಾರ್‌ ಅವರಿಗೆ ಅರ್ಪಣೆ ಮಾಡಿರುವುದಾಗಿ ಹೇಳಿದ್ದಾರೆ.

ಚಿತ್ರದ ಯಶಸ್ಸಿನ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲೂ ಮಾತನಾಡಿದ ಅವರು ‘ಈ ಚಿತ್ರ ಪ್ರಪಂಚದ ಬೇರೆ ಬೇರೆ ದೇಶಗಳಲ್ಲಿ ಇಂದು ದೊಡ್ಡ ಮಟ್ಟದಲ್ಲಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಈ ಸಿನೆಮಾ ನಾನುಮಾಡಿದ್ದಲ್ಲ.

ಇಲ್ಲಿನ ದೈವಗಳೇ ಅದನ್ನು ನನ್ನ ಕೈಯಲ್ಲಿ ಮಾಡಿಸಿದ್ದು. ಹಿಂದಿ, ತೆಲುಗು, ತಮಿಳು ಭಾಷೆಗಳಲ್ಲಿ ಚಿತ್ರ ಮಾಡಿ ಎನ್ನುವ ಬೇಡಿಕೆ ಬರ್ತಾ ಇದೆ.

ಈ ನಿಟ್ಟಿನಲ್ಲಿ ನಾವು ಯೋಚನೆ ಮಾಡುತ್ತಿದ್ದೇವೆ’ ಎಂದರು.
ಚಿತ್ರ ನಿರ್ಮಾಣದಲ್ಲಿ ಸಲಹೆ ನೀಡಿದ ದೈವಾರಾಧಕ ಮುಖೇಶ್‌ ಅವರು ಮಾತನಾಡಿ ಈ ಚಿತ್ರವನ್ನು ಯಾವುದೇ ಹಣಕಾಸಿನ ವಿಚಾರ, ಲಾಭಕ್ಕಾಗಿ ಮಾಡಿದ ಚಿತ್ರ ಅಲ್ಲ.

ಇಲ್ಲಿನ ದೈವಗಳ ವಿಚಾರ ಇಡೀ ನಾಡಿನ ಜನತೆಯ ಮಣ್ಣಿನ ಸೊಬಗಿನ ಚಿತ್ರವನ್ನು ನಾವು ಕಟ್ಟಿಕೊಟ್ಟಿದ್ದೇವೆ ಎಂದರು.

ಮನುಷ್ಯ ಹುಟ್ಟಿದಾಗಿನಿಂದ ಪ್ರಕೃತಿ ಜೊತೆಗೆ ಸಂಘರ್ಷ ಇದ್ದೇ ಇದೆ. ಅದನ್ನು ಚಿತ್ರದಲ್ಲಿ ತೋರಿಸಿದ್ದೇವೆ ಎಂದರು. ಚಿತ್ರದಲ್ಲಿ ನಟರಾದ ಪ್ರಮೋದ್‌, ನಟಿ ಸಪ್ತಮಿ ಗೌಡ, ಪ್ರಕಾಶ್‌, ಸ್ವರಾಜ್‌ ಶೆಟ್ಟಿ, ಗುರು ಮೊದಲಾದವರಿದ್ದರು.

Click to comment

Leave a Reply

Your email address will not be published. Required fields are marked *

DAKSHINA KANNADA

Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!

Published

on

ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.

ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ

Continue Reading

DAKSHINA KANNADA

Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು

Published

on

ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್‌ ಕುಮಾರ್‌ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.

ನವೀನ್‌ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫ‌ಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.

 

Continue Reading

DAKSHINA KANNADA

ಕಟೀಲು ಕ್ಷೇತ್ರಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ

Published

on

ಕಿನ್ನಿಗೋಳಿ: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ ನೀಡಿದರು.

ದೇವಳದ ವತಿಯಿಂದ ಶ್ರೀ ರಾಮುಲು ಅವರನ್ನು ಗೌರವಿಸಲಾಯಿತು.

ಈ ಸಂದರ್ಭ ವೆಂಕಟರಮಣ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ಉಪಸ್ಥಿತರಿದ್ದರು.

ಕ್ಷೇತ್ರದಲ್ಲಿ ಅವರು ಅನ್ನಪ್ರಸಾದವನ್ನು ಸ್ವೀಕರಿಸಿ ಸರಳತೆ ಮೆರೆದರು. ಬಳಿಕ ಕ್ಷೇತ್ರದ ಕುರಿತಂತೆ ಹೆಚ್ಚಿನ ಮಾಹಿತಿ ಪಡೆದುಕೊಂಡರು.

Continue Reading

LATEST NEWS

Trending