Connect with us

DAKSHINA KANNADA

ಸುರತ್ಕಲ್ ಟೋಲ್ ಗೇಟ್ ಮುಚ್ಚಿಸಲು ಸಚಿವ ಗಡ್ಕರಿಯವರಿಗೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಡೆಡ್‌ಲೈನ್

Published

on

ಮಂಗಳೂರು : ವರ್ಷಗಳಿಂದ ನಡೆಯುತ್ತಿರುವ ಪ್ರತಿಭಟನೆ, ಭರವಸೆಗಳ ಹೊರತಾಗಿಯೂ ಸುರತ್ಕಲ್ (ಎನ್ಐಟಿಕೆ) ತಾತ್ಕಾಲಿಕ ಟೋಲ್ ಗೇಟ್ ಅಕ್ರಮವಾಗಿ ಮುಂದುವರಿದಿದೆ.

ಈಗ ಮತ್ತೆ ತಾತ್ಕಾಲಿಕ ನೆಲೆಯಲ್ಲಿ ಮೂರು ತಿಂಗಳ ಅವಧಿಗೆ ಟೆಂಡರ್ ಕರೆದು ಟೋಲ್ ಸಂಗ್ರಹ ಗುತ್ತಿಗೆ ನವೀಕರಿಸಲಾಗಿದೆ. ಇದು ಖಂಡನೀಯ.

ಈಗಿನ ಗುತ್ತಿಗೆ ಅವಧಿ ಮುಕ್ತಾಯದ ನಂತರ ಯಾವುದೇ ಕಾರಣಕ್ಕೂ ನವೀಕರಣಗೊಳಿಸದೆ ಸುರತ್ಕಲ್ ಟೋಲ್ ಕೇಂದ್ರವನ್ನು ತೆರವುಗೊಳಿಸಬೇಕು ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್ ಆಗ್ರಹಿಸಿದೆ. ಇಲ್ಲದಿದ್ದಲ್ಲಿ ಪ್ರತಿಭಟನೆ ತೀವ್ರಗೊಳಿಸುವುದಾಗಿ ಎಚ್ಚರಿಸಿದೆ.

ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಸಮಿತಿ ಸುರತ್ಕಲ್ ಟೋಲ್ ಗೇಟ್ ಆರು ವರ್ಷದ ಹಿಂದೆ ಆರಂಭಗೊಳ್ಳುವಾಗ ಒಂಬತ್ತು ಕೀ ಮೀ ಅಂತರದಲ್ಲಿ ನಿರ್ಮಾಣಗೊಳ್ಳುತ್ತಿದ್ದ ಹೆಜಮಾಡಿ ಟೋಲ್ ಸಂಗ್ರಹ ಕೇಂದ್ರ ಕಾರ್ಯಾರಂಭಗೊಂಡ ತಕ್ಷಣ ಅದರೊಂದಿಗೆ ವಿಲೀನಗೊಳಿಸುವ ವಾಗ್ದಾನ ನೀಡಲಾಗಿತ್ತು.

ಸರಕಾರಕ್ಕೂ ಲಿಖಿತವಾಗಿ ವಿಲೀನದ ಪ್ರಸ್ತಾಪ ಮುಂದಿಟ್ಟು ಆರು ತಿಂಗಳ ಅವಧಿಗೆ ಟೋಲ್ ಸಂಗ್ರಹಿಸಲು ತಾತ್ಕಾಲಿಕ ನೆಲೆಯಲ್ಲಿ ಅನುಮತಿ ಪಡೆಯಲಾಗಿತ್ತು.‌ ಆದರೆ ಆರು ತಿಂಗಳಲ್ಲಿ ಹೆಜಮಾಡಿ‌ ಟೋಲ್ ಸಂಗ್ರಹ ಕೇಂದ್ರ ಆರಂಭಗೊಂಡರೂ, ಸುರತ್ಕಲ್ ಟೋಲ್ ಕೇಂದ್ರವನ್ನು ಅದರೊಂದಿಗೆ ವಿಲೀನಗೊಳಿಸದೆ ವಂಚಿಸಲಾಯಿತು.‌ನಂತರವೂ ತಾತ್ಕಾಲಿಕ‌ ನೆಲೆಯಲ್ಲಿ‌ ಸುರತ್ಕಲ್ ಟೋಲ್ ಕೇಂದ್ರದಲ್ಲಿ ಸುಂಕ ಸಂಗ್ರಹ ಗುತ್ತಿಗೆಯನ್ನು ತಾತ್ಕಾಲಿಕ ನೆಲೆಯಲ್ಲಿ ನವೀಕರಿಸುತ್ತಾ ಬರಲಾಯಿತು.

ಈ ಅನ್ಯಾಯ, ಅಕ್ರಮ ಟೋಲ್ ಸಂಗ್ರಹದ ವಿರುದ್ದ ಪರಿಸರದ ಸಂಘ ಸಂಸ್ಥೆಗಳನ್ನು ಒಗ್ಗೂಡಿಸಿ “ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್” ಹಲವು ಹಂತದ ಹೋರಾಟಗಳನ್ನು ಸಂಘಟಿಸುತ್ತಾ ಬಂದಿದೆ.‌ ಸರಣಿ ಪ್ರತಿಭಟನೆಗಳ ತರುವಾಯ 2018 ರಲ್ಲಿ ‘ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ’ ಸುರತ್ಕಲ್ ತಾತ್ಕಾಲಿಕ ಟೋಲ್ ಕೇಂದ್ರವನ್ನು ಹೆಜಮಾಡಿಯಲ್ಲಿರುವ ನವಯುಗ್ ಟೋಲ್ ಕೇಂದ್ರದೊಂದಿಗೆ ವಿಲೀನಗೊಳಿಸುವ ತೀರ್ಮಾನವನ್ನು ಕೈಗೊಂಡಿತು. ರಾಜ್ಯ ಸರಕಾರಕ್ಕೆ ಪ್ರಸ್ಥಾಪವನ್ನು ಕಳುಹಿಸಿ ಅನುಮೋದನೆಯನ್ನೂ ಪಡೆದುಕೊಂಡಿತು. ಆದರೆ ಬೇರೆ ಬೇರೆ ಹಿತಾಸಕ್ತಿಗಳ ಕಾರಣ ವಿಲೀನ ನಿರ್ಧಾರ ನಾಲ್ಕು ವರ್ಷಗಳ ದೀರ್ಘ ಅವಧಿಯಿಂದ ನಿಯಮಗಳಿಗೆ ವಿರುದ್ದವಾಗಿ ಬಾಕಿ ಉಳಿದಿದೆ.

ಹೆದ್ದಾರಿ ಪ್ರಾಧಿಕಾರ ವಿಲೀನ ತೀರ್ಮಾನವನ್ನು ಜಾರಿಗೊಳಿಸದೆ ಮೂರು ತಿಂಗಳು, ಆರು ತಿಂಗಳ ಸಣ್ಣ ಅವಧಿಗೆ ತಾತ್ಕಾಲಿಕ‌ ನೆಲೆಯಲ್ಲಿ ಟೋಲ್ ಸಂಗ್ರಹ ಗುತ್ತಿಗೆಯನ್ನು ನವೀಕರಿಸುತ್ತಲೇ ಮುಂದುವರಿದುದರ ವಿರುದ್ದ ಹೋರಾಟ ಸಮಿತಿ ಹನ್ನೊಂದು‌ ದಿನಗಳ‌ ದೀರ್ಘ ಅವಧಿಯ ಹಗಲು‌ ರಾತ್ರಿ ಧರಣಿ, ಪಾದಯಾತ್ರೆಯ ಸಹಿತ ಹಲವು ಹೋರಾಟಗಳನ್ನು ನಡೆಸಿದೆ‌. ಈ ಸಂದರ್ಭ ಸುರತ್ಕಲ್ ಟೋಲ್ ಗೇಟ್ ಎತ್ತಂಗಡಿಯ ಕುರಿತು‌ ಹಲವು ಭರವಸೆಗಳನ್ನು ನೀಡಿ ವಂಚಿಸಲಾಗಿದೆ. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಭರತ್ ಶೆಟ್ಟಿ ಒಂದು ಹೆಜ್ಜೆ ಮುಂದೆ ಹೋಗಿ “ವಿಲೀನ ಅಲ್ಲ, ಸುರತ್ಕಲ್ , ಬಿ ಸಿ ರೋಡ್ ಹೆದ್ದಾರಿಯನ್ನು ಟೋಲ್ ಮುಕ್ತ ರಸ್ತೆಯನ್ನಾಗಿಸುತ್ತೇವೆ” ಎಂದು ಆಶ್ವಾಸನೆ ನೀಡಿದ್ದರು. ಆದರೆ ಈ ಭರವಸೆಗಳು ಸುಳ್ಳಾಗಿವೆ.

ಈ ನಡುವೆ ತೀವ್ರ ಪ್ರತಿಭಟನೆಗಳ ಕಾರಣ ಮಂಗಳೂರು ನೋಂದಣಿ ಖಾಸಗಿ ವಾಹನಗಳಿಗೆ ಟೋಲ್ ರಹಿತ ಪ್ರಯಾಣ, ಖಾಸಗಿ ಬಸ್ಸುಗಳ ಸಹಿತ ಸಾರ್ವಜನಿಕ ಸಾರಿಗೆಗಳಿಗೆ ರಿಯಾಯತಿ ಪಾಸ್ ಗಳನ್ನು ನೀಡಿರುವುದನ್ನು ರದ್ದುಗೊಳಿಸಲು ಹೆದ್ದಾರಿ ಪ್ರಾಧಿಕಾರ ಹಾಗೂ ಟೋಲ್ ಸಂಗ್ರಹ ಗುತ್ತಿಗೆದಾರರು ಹಲವು ಬಾರಿ ಪ್ರಯತ್ನಿಸಿದ್ದಾರೆ. ಆ ಸಂದರ್ಭದಲ್ಲೆಲ್ಲಾ ತೀವ್ರ ಪ್ರತಿಭಟನೆ ಒಡ್ಡಿ ಮಂಗಳೂರು ನೋಂದಣಿ‌ಯ ಖಾಸಗಿ ವಾಹನಗಳ ಉಚಿತ ಪ್ರಯಾಣದ ಅವಕಾಶವನ್ನು ಉಳಿಸಿಕೊಳ್ಳಲಾಗಿದೆ. ದೇಶಾದ್ಯಂತ ಎಲ್ಲಾ ಟೋಲ್ ಕೇಂದ್ರಗಳಲ್ಲಿ ಫಾಸ್ಟ್ ಟ್ಯಾಗ್ ಕಡ್ಡಾಯದ ಸಂದರ್ಭ ಅದೇ ನೆಪ ಮುಂದಿಟ್ಟು‌ ಸ್ಥಳೀಯ ರಿಯಾಯತಿಗಳನ್ನು ರದ್ದುಗೊಳಿಸಲು ಹೆದ್ದಾರಿ ಪ್ರಾಧಿಕಾರ ಮುಂದಾಯಿತು. ಆದರೆ ನಾಗರಿಕರನ್ನು ಒಗ್ಗೂಡಿಸಿ “ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ” ಅದಕ್ಕೆ ಅವಕಾಶಕೊಡಲಿಲ್ಲ.‌ ಅದರ ಪರಿಣಾಮ ಮಂಗಳೂರು ನೋಂದಣಿಯ ಖಾಸಗಿ ವಾಹನಗಳ ಓಡಾಟಕ್ಕೆ ಫಾಸ್ಟ್ ಟ್ಯಾಗ್ ರಹಿತ ಎರಡು ಗೇಟ್ ಗಳನ್ನು ಉಳಿಸಲಾಗಿದೆ. ಆದರೆ ಬಸ್ ಸಹಿತ ಸಾರ್ವಜನಿಕ ಸಾರಿಗೆಯ ರಿಯಾಯತಿಗಳು ಬಹುತೇಕ ರದ್ದು ಗೊಂಡಿದೆ. ಖಾಸಗಿ ಬಸ್ ಗಳು‌ ಈ ವೆಚ್ಚವನ್ನು ಪ್ರಯಾಣಿಕರ ಟಿಕೇಟ್ ಗಳ ಮೇಲೆ ಹಾಕಿ ಹೊರೆಯನ್ನು ಸಾರ್ವಜನಿಕರ ಹೆಗಲಿಗೆ ದಾಟಿಸಿವೆ. ಈ ರೀತಿ ಹಾಗೂ ಕೊರೋನ ಸಾಂಕ್ರಾಮಿಕ, ಲಾಕ್ ಡೌನ್ ಅವಧಿಯಲ್ಲಿ ಪ್ರತಿಭಟನೆಗೆ ಅವಕಾಶಗಳು ‌ನಿರಾಕರಿಸಲ್ಪಟ್ಟ ಸಂದರ್ಭಗಳನ್ನೂ ಬಳಸಿ ನಿಯಮ ಬಾಹಿರವಾಗಿ‌ ಮೂರು ತಿಂಗಳು, ಆರು ತಿಂಗಳ ಅವಧಿಗೆ ತಾತ್ಕಾಲಿಕ ನೆಲೆಯಲ್ಲಿ ಟೋಲ್ ಗುತ್ತಿಗೆಯನ್ನು ನವೀಕರಿಸಿ ಅಕ್ರಮವಾಗಿ ಟೋಲ್ ಕೇಂದ್ರವನ್ನು ಮುಂದುವರಿಸಲಾಗಿದೆ.‌ ಇದೇ ಡಿಸೆಮಬರ್ ತಿಂಗಳಲ್ಲಿ ಮತ್ತೊಮ್ಮೆ ಮೂರು ತಿಂಗಳ ಅವಧಿಗೆ ಟೋಲ್ ಸಂಗ್ರಹ ಗುತ್ತಿಗೆ ತಾತ್ಕಾಲಿಕ ನೆಲೆಯಲ್ಲಿ ನವೀಕರಣ ಗೊಂಡಿದ್ದು ಇದು ಸಾರ್ಮಜನಿಕರಲ್ಲಿ ವ್ಯಾಪಕ ಅಸಮಾಧಾನಕ್ಕೆ ಕಾರಣವಾಗಿದೆ. ಹೋರಾಟ ಸಮಿತಿ ಈ ಅನ್ಯಾಯವನ್ನು ತೀವ್ರವಾಗಿ ಖಂಡಿಸುತ್ತದೆ. ಈ ವಂಚನೆಗೆ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಭರತ್ ಶೆಟ್ಟಿ ನೇರ ಹೊಣೆಯಾಗಿರುತ್ತಾರೆ.‌ ಈ ಬಾರಿ ನಡೆದಿರುವ ಟೋಲ್ ಸಂಗ್ರಹ ಗುತ್ತಿಗೆ ನವೀಕರಣ ಕೊನೆಯ ನವೀಕರಣ ಆಗಬೇಕು. ಮೂರು ತಿಂಗಳ ಅವಧಿ ಮುಗಿಯುವ ಸಂದರ್ಭ ಸುರತ್ಕಲ್ ಟೋಲ್ ಕೇಂದ್ರವನ್ನು‌ ತೀರ್ಮಾನದಂತೆ ಅಲ್ಲಿಂದ ಎತ್ತಂಗಡಿ ಮಾಡಬೇಕು, ಯಾವುದೇ ಕಾರಣಕ್ಕೂ ಟೋಲ್ ಸಂಗ್ರಹ ಗುತ್ತಿಗೆಯನ್ನು ನವೀಕರಿಸಬಾರದು ಎಂದು ಹೋರಾಟ ಸಮಿತಿ ಒತ್ತಾಯಿಸಿದೆ. ಇಲ್ಲದಿದ್ದಲ್ಲಿ ಮತ್ತೊಮ್ಮೆ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ತೀವ್ರತರದ ಹೋರಾಟವನ್ನು ಆರಂಭಿಸುವುದಾಗಿ ಎಚ್ಚರಿಕೆ ನೀ ಡಿದೆ.

ಸಚಿವ ನಿತಿನ್ ಗಡ್ಕರಿ ಕಪ್ಪು ಬಾವುಟ ಪ್ರತಿಭಟನೆ ಎದುರಿಸಲಿ :

2019 ರ ಡಿಸೆಂಬರ್ ತಿಂಗಳಲ್ಲಿ‌ ಫಾಸ್ಟ್ ಟ್ಯಾಗ್ ಕಡ್ಡಾಯ ಸಂದರ್ಭ ಸುರತ್ಕಲ್ ತಾತ್ಕಾಲಿಕ ಟೋಲ್ ಗೇಟ್ ನಲ್ಲಿಯೂ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿ ಸ್ಥಳೀಯ ವಾಹನಗಳ ಉಚಿತ ಪ್ರಯಾಣ ರದ್ದುಗೊಳಿಸಲು ಹೆದ್ದಾರಿ ಪ್ರಾಧಿಕಾರ ಮುಂದಾಗಿತ್ತು. ಆ ಸಂದರ್ಭ ಟೋಟ್ ಗೇಟ್ ವಿರೋಧಿ ಹೋರಾಟ ಸಮಿತಿ ತೀವ್ರ ವಿರೋಧ ವ್ಯಕ್ತ ಪಡಿಸಿತ್ತು. ಇದು ಜಿಲ್ಲಾಡಳಿತ ಹಾಗೂ ಸಾರ್ವಜನಿಕರ ನಡುವೆ ತಿಕ್ಕಾಟಕ್ಕೂ ಕಾರಣವಾಗಿತ್ತು. ಆ ಸಂದರ್ಭ ಸಂಸತ್ ಅಧಿವೇಶನದ ಪ್ರಯುಕ್ತ ದೆಹಲಿಯಲ್ಲಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ರಾಜ್ಯದ ಕೆಲವು ಸಂಸದರ ನಿಯೋಗದೊಂದಿಗೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿದ್ದರು. ಸಚಿವ ನಿತಿನ್ ಗಡ್ಕರಿ ಸುರತ್ಕಲ್ ಟೋಲ್ ಗೇಟ್ ತೆರವು ಸಂಬಂಧ ವಿಶೇಷ ಸಭೆ ನಡೆಸಲು ಪ್ರಾಧಿಕಾರ, ಹಾಗೂ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೆಲವೇ ದಿನಗಳಲ್ಲಿ ಸುರತ್ಕಲ್ ಟೋಲ್ ಗೇಟ್ ತೆರವುಗೊಳ್ಳಲಿದೆ ಎಂದು ಮಾಧ್ಯಮಗಳಿಗೆ ಮಾಹಿತಿಯನ್ನೂ ನೀಡಿದ್ದರು. ಇದು ಜಿಲ್ಲೆಯ ಪತ್ರಿಕೆಗಳಲ್ಲಿ ವರದಿಯೂ ಆಗಿತ್ತು. ಈ ಪ್ರಯತ್ನಕ್ಕಾಗಿ ಕೆನರಾ ಬಸ್ಸು ಮಾಲಕರ ಸಂಘದವರು ಪತ್ರಿಕೆಗಳಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನೆ ಸಲ್ಲಿಸಿ‌ ಜಾಹೀರಾತನ್ನೂ ನೀಡಿದ್ದರು. ಆದರೆ ನಿತಿನ್ ಗಡ್ಕರಿಯವರು ಸಭೆ ನಡೆಸಿ ಟೋಲ್ ಗೇಟ್ ಸಮಸ್ಯೆ ಇತ್ಯರ್ಥ ಪಡಿಸಲಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿ ಈಗ ಎರಡು ವರ್ಷ ಸಂದಿದೆ. ಈ ನಡುವೆ ಮೂರು ಬಾರಿ ಟೋಲ್ ಸಂಗ್ರಹ ಗುತ್ತಿಗೆ ನವೀಕರಣಗೊಂಡಿದೆ. ಆದರೆ ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರಕ್ಕೆ ಸಂಬಂಧಿಸಿ ಈವರಗೆ ವಿಶೇಷ ಸಭೆಯಾಗಲಿ, ಸಾಮಾನ್ಯ ಸಭೆಯಾಗಲಿ ನಡೆದಿಲ್ಲ. ಬದಲಿಗೆ ಟೋಲ್ ದರವನ್ನು ಏರಿಸಿ ಪ್ರಯಾಣಿಕರ ಸುಲಿಗೆಯನ್ನು ಹೆಚ್ಚಿಸಲಾಗಿದೆ. ಈಗ ಸ್ವತಹ ನಿತಿನ‌್ ಗಡ್ಕರಿ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿಗಳಿಗೆ ಸಂಬಂಧಿಸಿ ಜನವರಿ 10 ರಂದು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಇದೇ ಸಂದರ್ಭ ಅಂದು‌ ಮಾತು ಕೊಟ್ಟಂತೆ ಸುರತ್ಕಲ್ ಟೋಲ್ ಕೇಂದ್ರ ತೆರವಿಗೆ ಸಂಬಂಧಿಸಿ ಸಚಿವ ಗಡ್ಕರಿಯವರ ನೇತೃತ್ವದಲ್ಲಿ‌ ಸಭೆ ನಡೆಸುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ನೋಡಿಕೊಳ್ಳಬೇಕು. ಆ ಮೂಲಕ ಹಲವು ವರ್ಷಗಳಿಂದ ಜನರ ಅಕ್ರಮ ಸುಲಿಗೆಯಲ್ಲಿ‌ ತೊಡಗಿರುವ ಸುರತ್ಕಲ್ ಟೋಲ್ ಕೇಂದ್ರದ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಬೇಕು. ಒಂದು ವೇಳೆ ಸಚಿವರು ಸಭೆ ನಡೆಸಲು‌ ಮುಂದಾಗದಿದ್ದಲ್ಲಿ‌ ಹೋರಾಟ ಸಮಿತಿಯಿಂದ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಹೋರಾಟ ಸಮಿತಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದೆ.  ಮುನೀರ್ ಕಾಟಿಪಳ್ಳ (ಸಂಚಾಲಕರು)) ರಾಘವೇಂದ್ರ ರಾವ್ (ಅಧ್ಯಕ್ಷರು, ಜಯ ಕರ್ನಾಟಕ ಸುರತ್ಕಲ್) ದಿನೇಶ್ ಹೆಗ್ಡೆ ಉಳೇಪಾಡಿ (ವಕೀಲರು) ದಯಾನಂದ ಶೆಟ್ಟಿ (ಮಾಜಿ ಕಾರ್ಪೊರೇಟರ್) ಬಿ ಕೆ ಇಮ್ತಿಯಾಜ್ (ಜಿಲ್ಲಾಧ್ಯಕ್ಷರು, ಡಿವೈಎಫ್ಐ ದ. ಕ.) ದಿನೇಶ್ ಕುಂಪಲ (ಅಧ್ಯಕ್ಷರು, ಟ್ಯಾಕ್ಸಿಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್, ದಕ್ಷಿಣ ಕನ್ನಡ) ರಾಜೇಶ್ ಪೂಜಾರಿ ಕುಳಾಯಿ (ಯುವ ಕಾಂಗ್ರೆಸ್ ಮುಖಂಡರು), ಹೋರಾಟ ಸಮಿತಿಯ ಮುಖಂಡರಾದ ರಾಜೇಶ್ ಶೆಟ್ಟಿ ಪಡ್ರೆ, ಜೀಷನ್ ಅಲಿ (ವಕೀಲರು), ಅಜ್ಮಲ್ ಕಾನ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

BELTHANGADY

ಪಂಚಭೂತಗಳಲ್ಲಿ ಲೀನವಾದ ಜನ ಮೆಚ್ಚಿದ ನಾಯಕ…!

Published

on

ಮಂಗಳೂರು : ಮೇಲ್ನೋಟಕ್ಕೆ ಕೋಪಿಷ್ಟನಂತೆ ಕಂಡರೂ ಒಳಗಡೆ ಮಗುವಿನಂತಹ ಮನಸ್ಸು…ಅಧಿಕಾರಿಗಳ ಪಾಲಿಗೆ ಸಿಂಹಸ್ವಪ್ನವಾದ್ರೆ ಬಡವರ ಪಾಲಿಗೆ ಇವರು ಬಂಗಾರದ ವ್ಯಕ್ತಿ. ಇದ್ದಿದ್ದು ಇದ್ದ ಹಾಗೆ ಖಡಕ್ ಆಗಿ ಮಾತನಾಡೋ ಕಾರಣ ಸಾಕಷ್ಟು ಜನರ ವಿರೋಧಿಯಾದ್ರೂ, ಒಳಗೊಳಗೆ ಅವರಿಂದಲೇ ಪ್ರೀತಿಯನ್ನು ಕೂಡಾ ಪಡಿತಾ ಇದ್ದ ಜನಪ್ರೀಯ ಜನನಾಯಕ. ಜನರನ್ನು ತನ್ನವರೆಂದೇ ಒಬ್ಬ ಜನಪ್ರತಿನಿಧಿಯಾಗಿ ಜನರ ಸಂಕಷ್ಟಕ್ಕೆ ಸ್ಪಂದಿಸ್ತಾ ಇದ್ದ ವಸಂತ ಬಂಗೇರ ಇನ್ನು ನೆನಪು ಮಾತ್ರ…

ಸದಾ ತನ್ನ ಮಾತಿನ ಮೂಲಕವೇ ಸುದ್ದಿಯಾಗುತ್ತಿದ್ದ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಶಾಶ್ವತವಾಗಿ ಮಾತು ಮುಗಿಸಿ ಇಹಲೋಕದ ಯಾತ್ರೆ ಮುಗಿಸಿದ್ದಾರೆ. ತನ್ನ ಕ್ಷೇತ್ರದ ಜನರ ಸೇವೆಗಾಗಿ ತನ್ನ ಜೀವನ ಮುಡಿಪಾಗಿಟ್ಟ ವಸಂತ ಬಂಗೇರ ನಿಜವಾಗಿಯೂ ಒಬ್ಬ ಜನನಾಯಕರಾಗಿದ್ದರು. ತನ್ನ ಬಳಿ ಕಷ್ಟ ಹೇಳಿಕೊಂಡು ಯಾರೇ ಬಂದ್ರೂ ಹಿಂದೂ ಮುಂದು ನೋಡದೆ ಸಹಾಯ ಮಾಡ್ತಾ ಇದ್ರು. ತನ್ನ ಕೈ ಖಾಲಿ ಮಾಡಿ ಮತ್ತೊಬ್ಬರಿಗೆ ಕೈ ಎತ್ತಿ ದಾನ ಮಾಡ್ತಾ ಇದ್ದ ವಸಂತ ಬಂಗೇರ ಇದೇ ಕಾರಣಕ್ಕೆ ಜನಾನುರಾಗಿಯಾಗಿದ್ದರು.


ಇದೀಗ ಅವರಿಲ್ಲಾ ಅನ್ನೋ ಸುದ್ದಿ ಅವರ ಅಭಿಮಾನಿಗಳನ್ನ ಕಣ್ಣೀರಿನ ಕಡಲಿನಲ್ಲಿ ಮುಳುಗಿಸಿದೆ. ಅವರ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುತ್ತಿದ್ದಂತೆ ಅವರ ಮನೆಗೆ ಅಭಿಮಾನಿಗಳ ದಂಡೇ ಹರಿದು ಬಂದಿದೆ. ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದ ತಾಲೂಕು ಕ್ರೀಡಾಂಗಣಕ್ಕೂ ಸಾವಿರಾರು ಅಭಿಮಾನಿಗಳು ಆಗಮಿಸಿ ಅವರಿಗೆ ಅಂತಿನ ನಮನ ಸಲ್ಲಿಸಿದ್ದಾರೆ. ನೇರವಾಗಿ ನಿಷ್ಠೂರವಾಗಿ ತಪ್ಪುಗಳನ್ನು ಖಂಡಿಸುತ್ತಿದ್ದ ತಮ್ಮ ಪರ ಧ್ವನಿಯಾಗಿದ್ದ ನಾಯಕ ಇನ್ನಿಲ್ಲ ಅನ್ನೋದನ್ನು ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಸಾದ್ಯವಾಗಿಲ್ಲ. ಬಡವರಿಗೆ ಅನ್ಯಾಯ ಆಗ್ತಾ ಇದೆ ಅಂತ ಗೊತ್ತಾದ್ರೆ ಮುಲಾಜಿಲ್ಲದೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ತಾ ಇದ್ದ ವಸಂತ ಬಂಗೇರ ಅವರ ಆ ಸ್ಟೈಲ್‌ ಯಾವತ್ತೂ ಮರೆಯಲು ಸಾದ್ಯವಿಲ್ಲ.


ರಾಜ್ಯ ರಾಜಕಾರಣದಲ್ಲಿ ಸರಿಸುಮಾರು 40 ವರ್ಷಗಳ ಕಾಲ ಚಾಲ್ತಿಯಲ್ಲಿದ್ದ ಹೆಸರು ವಸಂತ ಬಂಗೇರ. ಬೆಳ್ತಂಗಡಿ ಕ್ಷೇತ್ರದಲ್ಲಿ ಮೂರು ಪಕ್ಷಗಳಿಂದ ಶಾಸಕರಾಗಿದ್ದ ವಸಂತ ಬಂಗೇರ ಕೊನೆಯಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ಭದ್ರವಾಗಿ ನೆಲೆಯೂರಿದ್ದರು. ಬಿಜೆಪಿಯಿಂದ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದ ವಸಂತ ಬಂಗೇರ ಬಳಿಕ ನಡೆದ ರಾಜಕೀಯ ದ್ರುವೀಕರಣದಲ್ಲಿ ಜೆಡಿಎಸ್‌ ಮತ್ತು ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಜಾತ್ಯಾತೀತ ನಾಯಕನಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಒಡನಾಡಿಯಾಗಿ ರಾಜ್ಯದ ಅಪಾರ ರಾಜಕೀಯ ನಾಯಕರು ಮೆಚ್ಚಿಕೊಂಡಿದ್ದ ವ್ಯಕ್ತಿ ಇವರು. ವಿಪರ್ಯಾಸ ಅಂದ್ರೆ ರಾಜಕೀಯದ ಉತ್ತುಂಗಕ್ಕೆ ಏರಿದ್ರೂ ಸಚಿವರಾಗುವ ಅವಕಾಶ ವಸಂತ ಬಂಗೇರ ಅವರಿಗೆ ಸಿಗಲೇ ಇಲ್ಲ ಅನ್ನೋದು. 2013 ರಲ್ಲಿ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತದಲ್ಲಿ ಅಧಿಕಾರಕ್ಕೆ ಬಂದಿದ್ರೂ ವಸಂತ ಬಂಗೇರ ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಆದ್ರೆ ಯಾವೊಬ್ಬ ಸಚಿವನಿಗೂ ಸಾದ್ಯವಾಗದ ಕೆಲಸವನ್ನು ಸಿಎಂ ಆಗಿದ್ದ ಸಿದ್ಧರಾಮಯ್ಯ ಮೂಲಕ ಮಾಡಿಸೋ ತಾಕತ್ತು ಇದ್ದಿದ್ದು ವಸಂತ ಬಂಗೇರ ಅವರಿಗೆ ಮಾತ್ರ ಅನ್ನೋದನ್ನ ಮರೆಯುವ ಹಾಗಿಲ್ಲ.


ಮನಸ್ಸಿನಲ್ಲಿ ಏನನ್ನೂ ಇಟ್ಟುಕೊಳ್ಳದೆ ಇದ್ದಿದ್ದು ಇದ್ದಹಾಗೇ ಹೇಳೋ … ಬಡವರು ಅಂದ್ರೆ ನನ್ನವರು ಎಂದು ಪ್ರೀತಿ ಮಾಡೋ ಜನ ನಾಯಕ ಇಂದು ಎಲ್ಲರ ಪ್ರೀತಿಗೆ ವಿದಾಯ ಹೇಳಿ ಮೌನವಾಗಿದ್ದಾರೆ. ” ನನ್ನನ್ನು ಆರಿಸಿದವರು ನೀವು .. ನೀವು ನನ್ನನ್ನು ಆಯ್ಕೆ ಮಾಡಿದ್ದಕ್ಕೆ ನಾನು ಮೋಸ ಮಾಡಿಲ್ಲ. ಹಣ ಮಾಡದೆ ಸ್ವಚ್ಚವಾಗಿ ಜನ ಸೇವೆ ಮಾಡಿದ ತೃಪ್ತಿ ಇದೆ” ಅಂತಲೇ ರಾಜಕೀಯಕ್ಕೆ ವಿದಾಯ ಹೇಳಿದ್ದ ವಸಂತ ಬಂಗೇರ ಇಂದು ಎಲ್ಲವನ್ನೂ ಬಿಟ್ಟು ತಮ್ಮ ಅಂತಿಮಯಾತ್ರೆ ಮುಗಿಸಿದ್ದಾರೆ.


ವಸಂತ ಬಂಗೇರ ಅವರ ಅಂತ್ಯಕ್ರೀಯೆ ಅವರ ಕುವೆಟ್ಟು ಕೇದೆ ಮನೆಯಲ್ಲಿ ನಡೆಸಲಾಗಿದೆ. ತಂದೆಯ ಚಿತೆಗೆ ಮಗಳು ಅಗ್ನಿ ಸ್ಪರ್ಷ ಮಾಡುವ ಮೂಲಕ ಅಂತಿಮ ವಿಧಿಯನ್ನು ಪೂರೈಸಿದ್ದಾರೆ. ಪಂಚಭೂತಗಳಲ್ಲಿ ಲೀನವಾಗಿರುವ ಮಾಜಿ ಶಾಸಕ ವಸಂತ ಬಂಗೇರ ಇನ್ನು ನೆನಪು ಮಾತ್ರ. ಆದ್ರೆ ವಸಂತ ಬಂಗೇರ ಅವರು ಅವರ ಅಭಿಮಾನಿಗಳ ಹೃದಯದಲ್ಲಿ ಎಂದಿಗೂ ಜನನಾಯಕರಾಗಿರುತ್ತಾರೆ.

ವಿಡಿಯೋ ನೋಡಿ : ವಸಂತ ಬಂಗೇರ ಅವರ ರಾಜಕೀಯ ಜೀವನ ಕುರಿತಾದ ಸ್ಟೋರಿ

Continue Reading

DAKSHINA KANNADA

ನಿವೃತ್ತ ಶಿಕ್ಷಕ ರಸ್ತೆ ದುರಂತದಲ್ಲಿ ಸಾ*ವು

Published

on

ಪುತ್ತೂರು : ನಿವೃತ್ತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80) ಅವರು ರಸ್ತೆ ಅಪಘಾತಕ್ಕೆ ಬ*ಲಿಯಾಗಿದ್ದಾರೆ. ಪುತ್ತೂರಿನ ಸಂಪ್ಯ ಎಂಬಲ್ಲಿ ಗುರುವಾರ ರಸ್ತೆ ದಾಟುತ್ತಿದ್ದ ವೇಳೆ ಸೂರ್ಯನಾರಾಯಣ ಕಾರಂತ ಅವರಿಗೆ ಆಟೋ ರಿಕ್ಷಾವೊಂದು ಢಿಕ್ಕಿ ಹೊಡೆದಿತ್ತು.

ಡಿಕ್ಕಿಯ ರಭಸಕ್ಕೆ ಅವರು ರಸ್ತೆಗೆ ಬಿದ್ದು ತಲೆಗೆ ತೀವ್ರ ಗಾಯವಾಗಿತ್ತು. ಕೂಡಲೇ ಮತ್ತೊಂದು ರಿಕ್ಷಾದಲ್ಲಿ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ. ಸೂರ್ಯನಾರಾಯಣ ಕಾರಂತ ಅವರು ಗಣಿತ ಶಿಕ್ಷಕರಾಗಿ ಪ್ರಸಿದ್ಧರಾಗಿದ್ದರು.

ಇದನ್ನೂ ಓದಿ : ಕಣಗಿಲೆ ಹೂ ತಿಂದು ಇಹಲೋಕ ತ್ಯಜಿಸಿದ ಯುವತಿ!

Continue Reading

DAKSHINA KANNADA

ಅಯ್ಯೋ… ಟೀ ಕುಡಿದರೆ ಕಪ್ಪಗಾಗ್ತಾರಾ?

Published

on

ಮಂಗಳೂರು: ಸಾಮಾನ್ಯವಾಗಿ ಭಾರತ ದೇಶದಲ್ಲಿ ಜಾಸ್ತಿಯಾಗಿ ಟೀ ಕುಡಿಯುತ್ತಾರೆ. ಅದರಲ್ಲೂ ಕೆಲವರಿಗೆ ಬೆಳಿಗ್ಗೆ ಎದ್ದ ತಕ್ಷಣ ಟೀ ಕುಡಿದರೆ ಇನ್ನು ಕೆಲವರು ತಿಂಡಿ ತಿನ್ನುವಾಗ ಟೀ ಕುಡಿಯುತ್ತಾರೆ. ಕೆಲವರಿಗೆ ಟೀ ಕುಡಿಯದೇ ಇದ್ದರೆ ತಲೆನೋವು ಶುರುವಾಗಿ ಬಿಡುತ್ತದೆ. ಆದರೆ ಈಗ ಟೀ ಅಲ್ಲೂ ಗ್ರೀನ್ ಟೀ, ಬ್ಲೂ ಟೀ, ಲೆಮನ್ ಟೀ ಹೀಗೆ ವೆರೈಟಿ ವೆರೈಟಿ ಟೀಗಳಿದೆ.
ಆದರೆ ಅನೇಕ ಕಡೆ ವಿಚಿತ್ರ ನಂಬಿಕೆ ಇದೆ. ಟೀ ಕುಡಿದ್ರೆ ಕಪ್ಪಾಗುತ್ತಾರೆ ಎನ್ನುವ ಒಂದು ಸಂಗತಿ. ಹೌದು, ಟೀ ಕುಡಿದರೆ ಕಪ್ಪಾಗುತ್ತೇವೆ ಎಂದು ಅನೇಕರು ಹೇಳುವುದನ್ನು ಕೇಳಿರುತ್ತೇವೆ. ಅಲ್ಲದೇ ಇದೇ ಕಾರಣಕ್ಕೆ ಅದೆಷ್ಟೋ ಜನರು ಟೀ ಅನ್ನು ಕುಡಿಯುವುದಿಲ್ಲ ಎಂದು ಹೇಳಬಹುದು. ಆದರೆ ನಿಜವಾಗಿಯೂ ಟೀ ಕುಡಿದರೆ ಕಪ್ಪಾಗುತ್ತಾರಾ? ಇದು ಸತ್ಯವೇ? ಇದೇ ಪ್ರಶ್ನೆಗೆ ಇಲ್ಲಿದೆ ನೋಡಿ ಸರಿಯಾದ ಉತ್ತರ.

ಕೆಲ ಆಹಾರ ಚರ್ಮದ ಮೇಲೆ ಪರಿಣಾಮ ಬೀರುತ್ತದೆ:

ಆನುವಂಶಿಕ ಅಂಶಗಳ ಹೊರತಾಗಿ, ಚರ್ಮದ ಬಣ್ಣವು ನೀವು ಸೂರ್ಯನಲ್ಲಿ ಎಷ್ಟು ಹೊತ್ತು ಇರುತ್ತೀರಿ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ನಾವು ತಿನ್ನುವುದು ನಮ್ಮ ದೇಹದ ಮೇಲೆ ಪರಿಣಾಮ ಬೀರುತ್ತದೆ. ಕೆಲ ಆಹಾರವು ಚರ್ಮದ ಮೇಲೆಯೂ ಸಹ ಪರಿಣಾಮ ಬೀರುತ್ತದೆ. ಆದರೆ ನ್ಯಾಯೋಚಿತ ಬಣ್ಣವು ಅಂದರೆ ದೇಹದ ಹುಟ್ಟಿನ ಬಣ್ಣವು ಆಹಾರ ಸೇವನೆಯಿಂದ ಕಪ್ಪು ಬಣ್ಣಕ್ಕೆ ತಿರುಗುವುದಿಲ್ಲ ಎನ್ನಲಾಗುತ್ತದೆ. ಹಾಲಿನ ಟೀ ಕುಡಿಯುವುದರಿಂದ ಹೃದಯದ ಮೇಲೆ ಪರಿಣಾಮ ಬೀರುತ್ತದೆ.
ಕಡಿಮೆ ಸಕ್ಕರೆಯೊಂದಿಗೆ ಕಪ್ಪು ಚಹಾವನ್ನು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಟೀ ಕುಡಿಯುವುದರಿಂದ ಚರ್ಮ ಕಪ್ಪಾಗುತ್ತದೆ ಎಂದು ಹೇಳಲಾಗುತ್ತದೆ. ಆದರೆ ಇದಕ್ಕೆ ಯಾವುದೇ ಪುರಾವೆಗಳಿಲ್ಲ. ಇದಕ್ಕೆ ವಿರುದ್ಧವಾಗಿ, ಚಹಾವು ಚರ್ಮಕ್ಕೆ ಪ್ರಯೋಜನಕಾರಿ ಎಂದು ಸಂಶೋಧನೆ ತೋರಿಸಿದೆ.

ಅತಿಯಾದರೆ ಅಮೃತವೂ ವಿಷ :

ಅತಿಯಾದರೆ ಅಮೃತವೂ ವಿಷ ಎಂಬ ಮಾತಿದೆ. ಅದರಂತೆ ಟೀ ಅಥವಾ ಚಹಾ ಸೇವನೆ ಸಹ ಅತಿಯಾದರೆ ಅದೂ ದೇಹದ ಆರೋಗ್ಯದ ಮೇಲೆ ನೇರ ಪರಿಣಾಮಬೀರುತ್ತದೆ. ಬಿಸಿ ಮಾಡಿದ್ದ ಟೀ ತಣ್ಣಗಾದ ಬಳಿಕ ಅದನ್ನು ಕುಡಿಯುವುದರಿಂದ ದೇಹಕ್ಕೆ ಹಾನಿಯುಂಟಾಗುತ್ತದೆ. ಮೂರ್ನಾಲ್ಕು ಗಂಟೆಗಳಿಗೂ ಮುನ್ನ ಬಿಸಿ ಮಾಡಿದ ಚಹಾವನ್ನು ಕುಡಿದರೆ, ನಿಮಗೆ ಗೊತ್ತಿಲ್ಲದ ರೀತಿ ಇದು ನಿಮ್ಮ ದೇಹದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.

ಚಹಾವನ್ನು ಪದೇ ಪದೇ ಬಿಸಿ ಮಾಡಬಾರದು:

ಚಹಾವನ್ನು ಪದೇ-ಪದೇ ಬಿಸಿ ಮಾಡುವುದರಿಂದ ಅದರಲ್ಲಿರುವ ಎಲ್ಲಾ ಪೋಷಕಾಂಶಗಳು ಹೋಗುತ್ತವೆ. ಕೋಲ್ಡ್ ಟೀ ಬ್ಯಾಕ್ಟೀರಿಯಾವನ್ನು ಸೃಷ್ಟಿಸುತ್ತದೆ. ನೀವು ಚಹಾವನ್ನು ಎಷ್ಟು ಸಮಯ ಬೆಚ್ಚಗಾಗಿಸುತ್ತೀರೋ ಅಷ್ಟು ಹೆಚ್ಚು ಬ್ಯಾಕ್ಟೀರಿಯಾಗಳು ಬೆಳೆಯುತ್ತವೆ. ಇದು ದೇಹಕ್ಕೆ ತುಂಬಾ ಹಾನಿಕಾರಕವಾಗಿದೆ.

Continue Reading

LATEST NEWS

Trending