Connect with us

    LATEST NEWS

    ದರ್ಶನ್‌ಗೆ ಜಾಮೀನು ನಿರಾಕರಣೆ..! ಜೈಲೇ ಗತಿ..!

    Published

    on

    ಮಂಗಳೂರು/ ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾದ ನಟ ದರ್ಶನ್‌ ತೂಗುದೀಪ ಅವರ ಜಾಮೀನು ಅರ್ಜಿ ವಿಚಾರಣೆ ಇಂದು(ಅ.14) ನಡೆದಿದೆ. ಜಾಮೀನು ಮಂಜೂರಾಗದ ಹಿನ್ನೆಲೆಯಲ್ಲಿ ದರ್ಶನ್ ಗೆ ಮತ್ತೆ ನಿರಾಸೆ ಆಗಿದೆ.  A13 ದೀಪಕ್  ಹಾಗೂ ಎ8 ರವಿಶಂಕರ್ ಗೆ ಮಾತ್ರ  ಜಾಮೀನು ನೀಡಿ ಆದೇಶ ಹೊರಡಿಸಲಾಗಿದೆ. ಪವಿತ್ರಾ ಗೌಡ, ಲಕ್ಷ್ಮಣ್, ನಾಗರಾಜ್ ಅವರಿಗೂ ಜಾಮೀನು ನಿರಾಕರಿಸಲಾಗಿದೆ.

    ದರ್ಶನ್‌ ಅವರ ಜಾರ್ಮಿನು ಅರ್ಜಿ ಸಂಬಂಧ ಬೆಂಗಳೂರಿನ 57 ನೇ ಸಿಸಿಎಚ್‌ ನ್ಯಾಯಾಲಯದಲ್ಲಿ ಸುದೀರ್ಘ ವಾದ – ಪ್ರತಿವಾದ ನಡೆದಿದ್ದು, ನ್ಯಾಯಾಧೀಶರು ಸೋಮವಾರಕ್ಕೆ ಅಂತಿಮ ಆದೇಶ ಕಾಯ್ದಿರಿಸಿದ್ದರು. ಆದರೆ, ಜಾಮೀನು ಮಂಜೂರಾಗಿಲ್ಲ.

    ಇದನ್ನೂ ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಯಶಸ್ವಿಯಾಗಿ ಮುಕ್ತಾಯ: ನಾಡಿನಿಂದ ಕಾಡಿನತ್ತ ಹೊರಟ ಗಜಪಡೆ

    ಅಭಿಮಾನಿಗಳು ದೌಡು : 

    ಇನ್ನು ನಟ ದರ್ಶನ್ ನೋಡಲು ಬಳ್ಳಾರಿ ಸೆಂಟ್ರಲ್ ಜೈಲ್ ಮುಂಭಾಗ ಅಭಿಮಾನಿಗಳ ದಂಡು ಹರಿದು ಬಂದಿದೆ. ಡಿ ಬಾಸ್ ಫೋಟೋ ಹಿಡಿದು, ಅಭಿಮಾನಿಗಳು  ಘೋಷಣೆ ಕೂಗುತ್ತಿದ್ದಾರೆ. ಪೊಲೀಸರು ಬ್ಯಾರಿಕೇ ಡ್ ಅಳವಡಿಸಿ ಅಭಿಮಾನಿಗಳನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

    LATEST NEWS

    ಹೃದಯಾಘಾತದಿಂದ 5 ವರ್ಷದ ಬಾಲಕಿ ಸಾ*ವು

    Published

    on

    ಇಂದಿನ ದಿನಮಾನಗಳಲ್ಲಿ ವಯಸ್ಸಿನ ಬೇಧವಿಲ್ಲದೆ ಕಾಯಿಲೆಗಳು ಕಾಡುತ್ತಿವೆ. ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಹೃದಯಾಘಾ*ತವಾಗುತ್ತಿತ್ತು ಆದರೆ ಈಗ ಮಕ್ಕಳಿಗೂ ಹದಿಹರೆಯದವರಿಗೂ ಹೃದಯಾಘಾ*ತವಾಗುತ್ತಿದೆ.

    ಈ ನಡುವೆ ತೆಲಂಗಾಣದಲ್ಲಿ 5 ವರ್ಷದ ಬಾಲಕಿ ಹೃದಯಾಘಾ*ತದಿಂದ ಸಾವನ್ನಪ್ಪಿದ್ದಾಳೆ. ಜಂಟಿ ಕರೀಂನಗರ ಜಿಲ್ಲೆಯ ಜಮ್ಮಿಕುಂಟಾದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

    ಸ್ಥಳೀಯ ವರದಿಗಳ ಪ್ರಕಾರ, ರಾಜು-ಜಮುನಾ ಅವರ ಪುತ್ರಿ ಉಕ್ಕುಲು (5) ಮಂಗಳವಾರ ಬೆಳಿಗ್ಗೆ ತೀವ್ರ ಅಸ್ವಸ್ಥಳಾಗಿದ್ದಳು, ಆಕೆಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಗು ಹೃದಯಾಘಾತದಿಂದ ಸಾವನ್ನಪ್ಪಿದೆ ಎಂದು ತಿಳಿದು ಪೋಷಕರು ಆಘಾತಕ್ಕೊಳಗಾಗಿದ್ದಾರೆ. ಆಕೆಗೆ ಹೃದಯ ಸಂಬಂಧಿ ಕಾಯಿಲೆ ಇರಬಹುದೆಂದು ಶಂಕಿಸಿದ್ದರು. ಒಬ್ಬಳೇ ಮಗಳು ತೀರಿ ಹೋಗುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

    Continue Reading

    LATEST NEWS

    ಚಲಿಸುತ್ತಿದ್ದ ರೈಲು ಕಿಟಕಿಯಿಂದ ಜಾರಿ ಬಿದ್ದ ಮಗು; ರಕ್ಷಿಸಿದ ತಂದೆ

    Published

    on

    ಮಂಗಳೂರು/ಉತ್ತರ ಪ್ರದೇಶ: ವೇಗವಾಗಿ ಚಲಿಸುತ್ತಿದ್ದ ರೈಲಿನ ಎಮರ್ಜೆನ್ಸಿ ಕಿಟಕಿಯಿಂದ ಪುಟ್ಟ ಮಗಳು ಹೊರಗೆ ಜಾರಿಬಿದ್ದ ಕೂಡಲೇ ಅಪ್ಪ ರೈಲು ನಿಲ್ಲಿಸಿ 16 ಕಿಲೋಮೀಟರ್‌ ಹಿಂದಕ್ಕೆ ಓಡಿಹೋಗಿ ಆಕೆಯನ್ನು ಪತ್ತೆಹಚ್ಚಿ ಉಳಿಸಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.


    ಮಗಳ ಪಾಲಿಗೆ ತಂದೆಯೇ ಮೊದಲ ರಿಯಲ್ ಹೀರೊ ಆಗಿರ್ತಾನೆ ಅನ್ನೋದಕ್ಕೆ ಈ ಘಟನೆ ಪ್ರತ್ಯಕ್ಷ ಸಾಕ್ಷಿಯಾಗಿದೆ.

    ಮಥುರಾದ ಅರವಿಂದ ತನ್ನ ಮಗಳು ಗೌರಿಯೊಂದಿಗೆ ಕುರುಕ್ಷೇತ್ರದಿಂದ ಮಥುರಕ್ಕೆ ವಾಪಾಸ್​ ಆಗುತ್ತಿದ್ದರು. ಶುಕ್ರವಾರ ರಾತ್ರಿ ರೈಲಿನಲ್ಲಿ ಎಮರ್ಜೆನ್ಸಿ ವಿಂಡೋ ಬಳಿ ಮಗಳನ್ನು ಮಲಗಿಸಿದ್ದು, ಅಷ್ಟರಲ್ಲಿ ಮುಂದಿನ ನಿಲ್ದಾಣದಲ್ಲಿ ಹತ್ತಿಕೊಂಡ ಪ್ರಯಾಣಿಕರು ಗಾಳಿ ಬರಲಿ ಎಂದು ತುರ್ತು ಕಿಟಕಿಯನ್ನು ತೆರೆದಾಗ ಆಕೆ ಜಾರಿ ಹೊರಗೆ ಬಿದ್ದಿದ್ದಳು.

    ಮಗಳು ಜಾರಿ ಬಿದ್ದ ಕೂಡಲೇ ಅಪ್ಪ ರೈಲಿನ ಚೈನ್ ಹಿಡಿದು ಎಳೆದಿದ್ದಾನೆ. ನಂತರ 112ಕ್ಕೆ ಕರೆ ಮಾಡಿ ಪೊಲೀಸರ ಸಹಾಯ ಕೋರಿದ್ದ. ಅಷ್ಟರಲ್ಲಿ ರೈಲು 15 ಕಿಲೋಮೀಟರ್‌ ಮುಂದಕ್ಕೆ ಚಲಿಸಿ ನಿಂತಿದೆ.

    ಕೂಡಲೇ ಪೊಲೀಸರು ಮೂರು ಟೀಂ​​ಗಳಾಗಿ ಕಂದಮ್ಮನನ್ನು ರಕ್ಷಿಸುವ ಕಾರ್ಯಾಚರಣೆ ಆರಂಭಿಸಿದರು. ಎರಡು ಟೀಮ್ ವಾಹನಗಳಲ್ಲಿ ಹುಡುಕಾಟ ನಡೆಸಿತು. ಮತ್ತೊಂದು ಟೀಮ್ ಟ್ರ್ಯಾಕ್ ಮೇಲೆ ಹುಡುಕಲು ಮುಂದಾಗಿತ್ತು. ಆದರೆ ತಂದೆ ಅರವಿಂದ್ ಗಾಡಿ ಹತ್ತದೇ ಮಗಳನ್ನು ಹಳಿಯ ಮೇಲೆ ಹುಡುಕುತ್ತಾ ಒಂದೇ ಸಮನೇ ಓಡಿದ್ದರು.

    ಆತ ಪೊಲೀಸರಿಗಿಂತಲೂ ಮೊದಲೇ ವಿರಾರಿ ಸ್ಟೇಷನ್​​ ಬಳಿಗೆ ಧಾವಿಸಿದ್ದರು. ಬೆಳಕೇ ಇಲ್ಲದ ನಿರ್ಮಾನುಷ ಪ್ರದೇಶದಲ್ಲಿ ಪೊದೆಯಲ್ಲಿ ಮಗಳು ಬಿದ್ದಿದ್ದುದು ಆತನಿಗೇ ಕಂಡಿತ್ತು. ಪೊದೆಯೊಂದರಲ್ಲಿ ಗಾಯಗೊಂಡು ಬಿದ್ದಿದ್ದ ಕಂದಮ್ಮನನ್ನು ಅರವಿಂದ್ ಪತ್ತೆಹಚ್ಚಿ ಬಿಗಿದಪ್ಪಿಕೊಂಡಿದ್ದಾನೆ.

    ರೈಲಿನಿಂದ ಬಿದ್ದ ಕಾರಣ ಗೌರಿಗೆ ಪ್ರಜ್ಞೆ ತಪ್ಪಿ ಹೋಗಿತ್ತು. ಅರವಿಂದ್ ಹಿಂದೆಯೇ ಓಡೋಡಿ ಬಂದ ಪೊಲೀಸರು ಕೂಡಲೇ ಮಗುವನ್ನು ಲಲಿತ್​ಪುರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಗು ಚೇತರಿಸಿಕೊಂಡಿರುವುದಾಗಿ ತಿಳಿದು ಬಂದಿದೆ.

    Continue Reading

    LATEST NEWS

    ಅಕ್ಟೋಬರ್ 30 ರಂದು ಕುದ್ರೋಳಿಯಲ್ಲಿ 25ನೇ ವರ್ಷದ ‘ನಮ್ಮಕುಡ್ಲ’ ಗೂಡುದೀಪ ಸ್ಪರ್ಧೆ

    Published

    on

    ಮಂಗಳೂರು: ಆಧುನಿಕತೆಯೊಂದಿಗೆ ಬದಲಾಗುತ್ತಿರುವ ಸಮಾಜದಲ್ಲಿ ನಮ್ಮ ಹಿರಿಯರು ಆಚರಿಸಿಕೊಂಡು ಬಂದಿದ್ದ ಹಲವು ಹಳೆಯ ಸಂಪ್ರದಾಯ ಮರೆಯಾಗುತ್ತಿದ್ದು, ಅದರಲ್ಲಿ ದೀಪಾವಳಿಯ ಹಬ್ಬದ ಆಚರಣೆಯೂ ಒಂದಾಗಿದೆ. ದೀಪಾವಳಿಯ ಸಂದರ್ಭದಲ್ಲಿ ಮನೆಯವರೆಲ್ಲರೂ ಸೇರಿ ತಯಾರಿಸುತ್ತಿದ್ದ ಗೂಡುದೀಪದ ಜಾಗವನ್ನು ಅಂಗಡಿಯಲ್ಲಿ ಸಿಗುವ ಗೂಡು ದೀಪಗಳು ಆವರಿಸಿಕೊಂಡಿವೆ. ಹೀಗಾಗಿ ಗೂಡುದೀಪ ರಚಿಸುವ ಕಲೆಯನ್ನು ಉಳಿಸುವ ಜೊತೆ ಮಕ್ಕಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ 25 ವರ್ಷಗಳ ಹಿಂದೆ ‘ನಮ್ಮ ಕುಡ್ಲ’ ವಾಹಿನಿ ಗೂಡುದೀಪ ಸ್ಪರ್ಧೆಯನ್ನು ಆಯೋಜನೆ ಮಾಡಲು ಆರಂಭಿಸಿತ್ತು. ಇದೀಗ 25ನೇ ವರ್ಷದ ಗೂಡುದೀಪದ ಸ್ಪರ್ಧೆಯು ದಿನಾಂಕ 30-10-2024,ಬುಧವಾರ ರಂದು ಕುದ್ರೋಳಿ ಶ್ರೀಕ್ಷೇತ್ರ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.

    ಸಾಂಪ್ರದಾಯಿಕ, ಆಧುನಿಕ ಮತ್ತು ಪ್ರತಿಕೃತಿ ಎಂಬ ಮೂರು ವಿಭಾಗದಲ್ಲಿ ಗೂಡುದೀಪ ಸ್ಪರ್ಧೆ ನಡೆಸಲಾಗುತ್ತಿದೆ. ಈ ಮೂರು ವಿಭಾಗದಲ್ಲಿ ನಡೆಯುವ ಗೂಡುದೀಪ ಸ್ಪರ್ಧೆಯಲ್ಲಿ ಸ್ಪರ್ಧಿಗಳು ಉತ್ತಮ ರೀತಿಯಲ್ಲಿ ಭಾಗವಹಿಸಿದ್ದಾರೆ. ಈ ಬಾರಿಯೂ ಈ ಮೂರೂ ವಿಭಾಗದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಗೂಡುದೀಪ ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಿಗಳಿಗೆ ಕೆಲವೊಂದು ನಿಯಮಗಳಿದ್ದು, ಅವುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕಾಗುತ್ತದೆ. ಮೂರು ವಿಭಾಗದಲ್ಲೂ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರಿಗೆ ಚಿನ್ನದ ಪದಕ ಹಾಗೂ ತೃತೀಯ ಸ್ಥಾನ ಪಡೆದವರಿಗೆ ಬೆಳ್ಳಿಯ ಪದಕ ನೀಡಲಾಗುತ್ತದೆ.

    ‘ನಮ್ಮಕುಡ್ಲ’ ಗೂಡುದೀಪ ಸ್ಪರ್ಧೆಯ ನಿಯಮಗಳು ಇಂತಿವೆ :

    ಸಾಂಪ್ರದಾಯಿಕ ವಿಭಾಗ : ಬಣ್ಣದ ಕಾಗದ, ಗ್ಲಾಸ್ ಪೇಪರ್ ಅಥವಾ ಬಟ್ಟೆಯಿಂದ ಗೂಡುದೀಪ ತಯಾರು ಮಾಡಿರಬೇಕು. ಗೂಡುದೀಪಕ್ಕೆ ಬಾಲ ಇರಬೇಕು ಹಾಗೂ ಅದು ನೇತು ಹಾಕುವಂತಿರಬೇಕು. ಗೂಡುದೀಪದ ಒಳಗಿನ ಬೆಳಕು ಹೊರಗೆ ಕಾಣುವಂತೆ ತಯಾರಿಸಬೇಕು. ಇದರಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಅಥವಾ ಯಾವುದೇ ಆಧುನಿಕ ಪರಿಕರಗಳನ್ನು ಬಳಸುವಂತಿಲ್ಲ. ಬೇಗಡೆಯನ್ನು ಉಪಯೋಗಿಸಲು ಅವಕಾಶ ಇದೆ. ಗೂಡುದೀಪ ಶುದ್ಧವಾಗಿ ಸಾಂಪ್ರದಾಯಿಕವಾಗಿಯೇ ಇರಬೇಕು.

    ಆಧುನಿಕ ವಿಭಾಗ : ಆಧುನಿಕ ಗೂಡುದೀಪದಲ್ಲಿ ಯಾವುದೇ ಆಧುನಿಕ ಪರಿಕರಗಳನ್ನು ಬಳಸಬಹುದಾಗಿದೆ. ಆದರೆ, ಸಾಂಪ್ರದಾಯಿಕ ಗೂಡುದೀಪದಂತೆ ಇದೂ ಕೂಡ ನೇತು ಹಾಕುವಂತೆ ಇರಬೇಕು. ಗೂಡುದೀಪದಲ್ಲಿ ಗೂಡು ಇರುವುದು ಕಡ್ಡಾಯವಾಗಿದ್ದು, ಪ್ರತಿಕೃತಿಯ ಹೋಲಿಕೆ ಇರಬಾರದು.

    ಪ್ರತಿಕೃತಿ ವಿಭಾಗ : ಇದರಲ್ಲಿ ಯಾವುದೇ ಕಲಾತ್ಮಕ ರಚನೆಗೆ ಅವಕಾಶವಿದೆ. ಯಾವುದೇ ಆಧುನಿಕ ಪರಿಕರಗಳನ್ನು ಇದರಲ್ಲಿ ಬಳಕೆ ಮಾಡಬಹುದಾಗಿದೆ. ಆದಷ್ಟು ಹೊಸತನವನ್ನು ಅಳವಡಿಸಿಕೊಂಡು ಪ್ರತಿಕೃತಿಯ ರಚನೆ ಇರಬೇಕು.

    Continue Reading

    LATEST NEWS

    Trending