Connect with us

LATEST NEWS

ವಿಕೃತ ಮನಸ್ಸಿನ ಯುವಕನ ಮೋಸಕ್ಕೆ ಬಲಿಯಾಯಿತು ಮುಗ್ಧ ಸುಂದರ ಯುವತಿಯ ಜೀವ..!

Published

on

ವಿಕೃತ ಮನಸ್ಸಿನ ಯುವಕನ ಮೋಸಕ್ಕೆ ಬಲಿಯಾಯಿತು ಮುಗ್ಧ ಸುಂದರ ಯುವತಿಯ ಜೀವ ..!

ಉಡುಪಿ: ಮದುವೆ ಮಾಡಿ  ನೋಡು ಮನೆ ಕಟ್ಟಿ ನೋಡು ಎನ್ನುವ ನಾಣ್ಣುಡಿ ಹಿಂದೆ ಇತ್ತು ಆದ್ರೆ ಈಗ ಮದುವೆಯಾಗುವಾಗ ಸಾವಿರ ಸಲ ಯೋಚಿಸಿ ಕೇಳಿ ತಿಳಿದು ಆಗಬೇಕೆನ್ನುವುದು ಕೆಲವು ದುರಂತಗಳನ್ನು ನೋಡಿದಾಗ ತಿಳಿಯುವುದುಮದುವೆ ಅನ್ನೋದು  ಪ್ರತೀ ಹೆಣ್ಣಿನ ಬಾಳಲ್ಲಿ ಮರೆಯಲಾರದ ಕ್ಷಣ. ಆದರೆ ಇದರ ನಡುವೆ ದೈಹಿಕ, ಮಾನಸಿಕ  ವರದಕ್ಷಿಣೆ  ಕಿರುಕುಳವಾದ್ರೆ ಆಕೆಯ ಮಾತ್ರವಲ್ಲ ಆಕೆಯ ಮನೆಯವರು ಸಂಕಷ್ಟಕ್ಕೀಡಾಗುತ್ತಾರೆ. ಇಲ್ಲೊಂದು ಅಪೂರ್ವ ಸುಂದರ ಯುವತಿಯ ಬಾಳು  ಸೈಕೋ ಯುವಕನಿಂದಾಗಿ ಚಿಗುರುವ ಮೊದಲೇ ಕಮರಿ ಹೋಗಿದೆಸಪ್ತಪದಿ ತುಳಿಯಬೇಕಿದ್ದ ಹುಡುಗಿ ನಿಶ್ಚಿತಾರ್ಥದ ಸಮಯದಲ್ಲೇ ವಿಕೃತ ಮನಸ್ಸಿನ  ಯುವಕನ ಕಿರುಕುಳಕ್ಕೆ ಬಲಿಯಾಗಿದ್ದಾಳೆ

ಒಬ್ಬಳೇ ಮಗಳು ಆದ್ರಿಂದ ಕೇಳಿದನ್ನು ಕೊಡಿಸುತ್ತಾ, ಮುದ್ದಿನ ಮಗಳಿಗೆ ಯಾವುದಕ್ಕೂ ಕಮ್ಮಿ ಮಾಡಿರ್ಲಿಲ್ಲ.. ವಯಸ್ಸಿಗೆ ಬಂದ ಮಗಳನ್ನು ಒಂದೊಳ್ಳೆ ಮನೆಗೆ ಮದುವೆ ಮಾಡಿ ಕೊಡಬೇಕು ಎಂದು  ಹೆತ್ತವರು  ಕನಸು ಕಂಡಿದ್ರು. ವರನ ಹುಡುಕಾಟ ಕೂಡ ನಡೆಸುತ್ತಿದ್ರು.ಇತ್ತ  ಮ್ಯಾಟ್ರಿಮೋನಿ ಸೈಟ್‌ನಲ್ಲಿ ನೋಡಿ,  ಮದುವೆ ಪ್ರಸ್ತಾಪ ಇಟ್ಟ ಉಡುಪಿಯ ಗೋವರ್ಧನ್, ಮಾತುಕತೆ ಬಳಿಕ ಸ್ಪೂರ್ತಿಯ ಮನೆಗೆ ಹೆಣ್ಣು ನೋಡುವ ಶಾಸ್ತ್ರಕ್ಕೆ  ಬರುವಾಗಲೇ ಯಾರದ್ದೋ ಕಾರನ್ನು  ತನ್ನ ಕಾರು ಎಂಬಂತೆ  ಬಿಂಬಿಸಿ ಫೋಸು ಕೊಟ್ಟಿದ್ದ.ಆನ್ಲೈನ್ ಸೇಲ್ಸ್ ಉದ್ಯಮ ಮಾಡುತ್ತಿದ್ದೇನೆ ಎಂದು  ಯಾರದ್ದೋ ಮಳಿಗೆಯನ್ನು  ತನ್ನ ಕಚೇರಿ ಎಂದು ತೋರಿಸಿ ಯುವತಿ ಮನೆಯವರಿಗೆ ನಂಬಿಸಿ ಮೋಸ ಮಾಡಿದ್ದ.

ಆ ಪಾತಕಿ ಯುವಕನನ್ನು   ನಂಬಿದ್ದ ಸ್ಪೂರ್ತಿ ಪೋಷಕರು ಗೋವರ್ಧನ್ ಓಕೆ ಎಂದು  ಗ್ರೀನ್ ಸಿಗ್ನಲ್ ಕೊಟ್ಟು ಆಗಸ್ಟ್ 16ರಂದು ಅದ್ದೂರಿ ಎಂಗೇಜ್‌ಮೆಂಟ್ ಮಾಡಿ, ಹುಡುಗನಿಗೆ ಚಿನ್ನದ ಬ್ರಾಸ್ ‌ಲೈಟ್, ಉಂಗುರ,  ಹಾಕಿದ್ರಂತೆ…ಫೆಬ್ರವರಿಯಲ್ಲಿ ಮದುವೆ ಕೂಡಾ ಫಿಕ್ಸ್ ಆಗಿತ್ತು…ಇನ್ನೇನು ತನ್ನ ಮಗಳ ನಿಶ್ಚಿತಾರ್ಥ ಆಯಿತೆಂದು ಖುಷಿಯಾಗಿದ್ದ ಯುವತಿ ಕುಟುಂಬ ಮನೆಯ ಸಮೀಪದಲ್ಲೇ ಇದ್ದ ಸೀತಾರಾಮ ಹಾಲ್ ನಲ್ಲಿ ಆಗಷ್ಟ್ 16ಕ್ಕೆ ನಿಶ್ಚಿತಾರ್ಥ ವೂ ಆಯಿತು.

ನಿಶ್ಚಿತಾರ್ಥ ಮಾಡಿಕೊಂಡ ಹುಡುಗ ಗೋವರ್ಧನ್ ಆಗಾಗ ಯುವತಿ‌ ಮನೆಗೆ ಬಂದು ಮದುವೆಯಾಗೋ ಹುಡುಗಿಯನ್ನ ಹೊರಗಡೆ ಕರೆದುಕೊಂಡು ಹೋಗುತ್ತಿದ್ದ ಆದ್ರೆ ಅದೊಂದು ದಿನ ಹೊರಗಡೆ ಆಕೆಗೆ ಕಿಸ್ ಕೊಟ್ಟು ಆಕೆಯ ಕೆನ್ನೆಯನ್ನೇ ಕಚ್ಚಿ ಗಾಯಮಾಡಿದ್ದ ಅಷ್ಟೇ ಅಲ್ಲದೆ ಪದೇ ಪದೇ ವಾಟ್ಸಾಪ್ ನಲ್ಲಿ ನಗ್ನ ಚಿತ್ರ ಕಳುಹಿಸು, ಬೆತ್ತಲೆಯಾಗಿ ವೀಡಿಯೋ ಕಾಲ್ ಮಾಡು ಎಂದು ‌‌ಅಶ್ಲೀಲ ಬೇಡಿಕೆಯನ್ನಿಡುತ್ತಿದ್ದ. ಪಾಪ ಯುವತಿ ವಿಷಯವನ್ನು ಯಾರ ಬಳಿಯೂ ಹೇಳಲಾರದೆ ಹೈರಾಣಾಗಿದ್ದಳು.

ಈತನ ಸೈಕೋ ಕಾಮುಕತನಕ್ಕೆ ಒಪ್ಪದಿದ್ದಾಗ  ಮದುವೆಗೆ 10ಲಕ್ಷ ನಗದು 50 ಪವನ್ ಚಿನ್ನ ಕೊಡಲೇ ಬೇಕು ಎಂದು  ಪಟ್ಟು ಹಿಡಿದಿದ್ದ ಗೋವರ್ಧನ್. ಇದಕ್ಕೆ‌ ಒಪ್ಪದಿದ್ದಾಗ ನಿಮ್ಮ ಮಗಳಿಗೆ ವಿಷ‌ ಕೊಟ್ಟು ಸಾಯಿಸಿ ಎಂದು ಬೆದರಿಸಿದ್ದ. ಇವೆಲ್ಲದರಿಂದ ಖಿನ್ನತೆ ಗೆ ಜಾರಿದ್ದ ಸ್ಪೂರ್ತಿ ನವೆಂಬರ್ 6ರಂದು ಇಲಿಪಾಶಾಣ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಹೆತ್ತವರ ಪಾಲಿಗೆ ಮುದ್ದಿನ ಮಗಳ ಅಗಲುವಿಕೆ ಭಾರೀ ಆಘಾತ ತಂದಿದೆ. ಗೋವರ್ಧನ್ ಸೈಕೋ  ವಿರುದ್ಧ ಕಠಿಣ ಕ್ರಮ ಕೈಗೊಂಡು ಆದಷ್ಟು ಬೇಗ ಶಿಕ್ಷೆ ಕೊಡಿಸಿ ಎಂದು ಹೆತ್ತವರು ಅಲವತ್ತುಕೊಂಡಿದ್ದಾರೆ.ಶ್ರಿಕರ್ ನಾಯಕ್ ಮೃತ ಯುವತಿ ಸಹೋದರ ಮಾವ ಇನ್ಯಾರೂ ಆತನಿಗೆ ಹೆಣ್ಣು ಕೊಡಬೇಡಿ ಎಂದು ಬೇಡಿಕೊಳ್ಳುತ್ತಿದ್ದಾರೆ..

ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಗೋವರ್ಧನ್ ಹಾಗೂ ಆತನ ತಾಯಿ ನಾಪತ್ತೆಯಾಗಿದ್ದಾರೆ.

LATEST NEWS

ಕೇರಳದಲ್ಲಿ ಬಹಿರಂಗವಾಗಿ ಕಾಣಿಸಿದ ನಕ್ಸಲರ ತಂಡ; ಚುನಾವಣೆ ಬಹಿಷ್ಕಾರಕ್ಕೆ ಕರೆ

Published

on

ಕೇರಳ : ವಯನಾಡು ಜಿಲ್ಲೆಯ ಕಂಬಮಲೆ ಅರಣ್ಯ ಹಾಗೂ ಮಕ್ಕಿಮಲೆ ಅರಣ್ಯದಲ್ಲಿ ನಕ್ಸಲರು ಇದ್ದಾರೆ ಅನ್ನೋ ಅನುಮಾನ ಬಲವಾಗಿತ್ತು. ಹೀಗಾಗಿ ಕೇರಳದ ನಕ್ಸಲ್ ನಿಗ್ರಹ ತಂಡ ನಿರಂತರ ಕೂಂಬಿಂಗ್ ನಡೆಸಿತ್ತು. ಆದ್ರೆ, ನಕ್ಸಲರ ಸುಳಿವು ಪತ್ತೆಯಾಗದ ಕಾರಣ ಕೂಂಬಿಂಗ್ ನಿಲ್ಲಿಸಲಾಗಿತ್ತು. ಆದ್ರೆ, ಇದೀಗ ಲೋಕಸಭಾ ಚುನಾವಣೆ ವೇಳೆ ಮತ್ತೆ ನಕ್ಸಲರು ಗ್ರಾಮದಲ್ಲಿ ಕಾಣಿಸಿಕೊಂಡಿದ್ದಾರೆ.


ಚುನಾವಣೆ ಬಹಿಷ್ಕರಿಸಲು ಸೂಚನೆ :

ಮಾವೋವಿಸ್ಟ್ ಜಿಂದಾಬಾದ್ ಎಂಬ ಘೋಷಣೆ ಕೂಗಿ ಗ್ರಾಮಕ್ಕೆ ಎಂಟ್ರಿ ಕೊಟ್ಟು ನಾಲ್ವರ ತಂಡ ಚುನಾವಣೆಗೆ ಬಹಿಷ್ಕಾರ ಮಾಡುವಂತೆ ಕರೆ ನೀಡಿದ್ದಾರೆ. ಗ್ರಾಮಸ್ಥರ ಜೊತೆ ಮಾತನಾಡಿ ಕಳೆದ ನಲುವತ್ತು ವರ್ಷದಿಂದ ಕಂಬಮಲೆ ಅರಣ್ಯ ತಪ್ಪಲಿನ ಜನರ ಸಮಸ್ಯೆಯನ್ನು ಸರ್ಕಾರ ಗಮನಿಸಿಲ್ಲ. ಇಲ್ಲಿ ವಾಸವಾಗಿರುವ ಕೂಲಿ ಕಾರ್ಮಿಕರ ಕಷ್ಟ ಸರ್ಕಾರ ಅರ್ಥ ಮಾಡಿಕೊಂಡಿಲ್ಲ. ಹೀಗಾಗಿ ಎಲ್ಲರೂ ಚುನಾವಣೆ ಬಹಿಷ್ಕಾರ ಮಾಡಿ ಎಂದು ಕರೆ ನೀಡಿದ್ದಾರೆ.

ಈ ತಂಡದಲ್ಲಿ ಕೇರಳ ರಾಜ್ಯಕ್ಕೆ ಬಹಳಷ್ಟು ವರ್ಷಗಳಿಂದ ತಲೆ ಮರೆಸಿಕೊಂಡಿರುವ ನಕ್ಸಲರು ಇದ್ದರು ಅನ್ನೋ ಮಾಹಿತಿಯನ್ನು ಸ್ಥಳೀಯರು ನೀಡಿದ್ದಾರೆ. ಕಂಬಮಲೆ ಎಂಬ ಪ್ರದೇಶದಲ್ಲಿ ಟೀ ಎಸ್ಟೇಟ್ ಇದ್ದು, ಇಲ್ಲಿನ ಕೂಲಿ ಕಾರ್ಮಿಕರ ಜೊತೆ ನಕ್ಸಲರು ಮಾತುಕತೆ ನಡಿಸಿದ ವಿಡಿಯೋ ಈಗ ಪೊಲೀಸರಿಗೆ ಲಭ್ಯವಾಗಿದೆ.

ಇದನ್ನೂ ಓದಿ : ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!

ವಿಡಿಯೋ ಮಾಡುತ್ತಿರುವುದು ಗಮನಕ್ಕೆ ಬಂದರೂ ಏನೂ ಮಾತನಾಡದೆ ಶಸಸ್ತ್ರರಾಗಿದ್ದ ನಕ್ಸಲರು ಮಕ್ಕಿಮಲೆ ಕಾಡಿನೊಳಗೆ ಹೋಗಿ ಕಣ್ಮರೆ ಆಗಿದ್ದಾರೆ.

 

Continue Reading

bangalore

ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಳೆಯಾಗಲಿದೆ: ಹವಾಮಾನ ಇಲಾಖೆ ಮುನ್ಸೂಚನೆ

Published

on

ಬೆಂಗಳೂರು : ಬಿಸಿಲಿನ ಉರಿಗೆ ಜನರು ಬೆಂದು ಹೋಗಿದ್ದಾರೆ. ವರುಣ ಕೃಪೆ ತೋರಯ್ಯ ಎಂದು ಬೇಡಿಕೊಳ್ಳುತ್ತಿದ್ದಾರೆ. ಈ ನಡುವೆ ಅಲ್ಲಲ್ಲಿ ಮಳೆಯಾಗಿದ್ರೂ ಸೂರ್ಯ ತಾಪವೇನೂ ಕಮ್ಮಿಯಾಗಿಲ್ಲ. ಇದೀಗ 8 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

heavy rain
ಎಲ್ಲೆಲ್ಲಿ ಮಳೆ ?
ರಾಜ್ಯದ ಜನತೆ ಮಳೆರಾಯನಿಗಾಗಿ ಕಾಯುತ್ತಿದ್ದಾರೆ. ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಶುಭ ಸುದ್ದಿ ನೀಡಿದೆ. ಏಪ್ರಿಲ್ 24ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಮೈಸೂರು, ಕೊಡಗು, ಹಾಸನ ಸೇರಿ 8 ಜಿಲ್ಲೆಗಳಲ್ಲಿ ಕೆಲವೆಡೆ ಮಳೆ ಬೀಳಬಹುದು ಎಂದು ಹೇಳಿದೆ.

ತಾಪಮಾನ ಹೆಚ್ಚಳ :
ಭಾರತೀಯ ಹವಾಮಾನ ಇಲಾಖೆ ದೇಶದ ಹಲವು ಭಾಗಗಳಲ್ಲಿ ಬಿಸಿಲಿನ ತಾಪ ತೀವ್ರವಾಗಲಿದೆ ಎಂದು ಕೂಡ ಮಾಹಿತಿ ನಡಿದೆ. ಅದರಲ್ಲೂ ಪೂರ್ವ ಮತ್ತು ದಕ್ಷಿಣ ಭಾರತದ ಹೆಚ್ಚಿನ ಭಾಗಗಳಲ್ಲಿ ಶಾಖದ ಅಲೆಗಳು ಹೆಚ್ಚಲಿವೆ ಎಂದಿದೆ. ಏಪ್ರಿಲ್ 25 ರ ವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಏಪ್ರಿಲ್ 27 ರ ವರೆಗೆ ಈ ಪ್ರದೇಶಗಳಲ್ಲಿ ಉಷ್ಣಾಂಶ 2 ರಿಂದ 2 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಏಪ್ರಿಲ್ 6 ರಂದು ರಾಜಧಾನಿಯಲ್ಲಿ ಗರಿಷ್ಠ 37.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಎಂಟು ವರ್ಷಗಳಲ್ಲಿ ಅತಿ ಹೆಚ್ಚು ಎಂದು ವರದಿಯಾಗಿದೆ.

ಮುಂದಿನವಾರ ನಗರದಲ್ಲಿ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

Continue Reading

LATEST NEWS

ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!

Published

on

ಕೋಟ : ಈತ ಅಂತಿಂಥ ಕಳ್ಳನಲ್ಲ..ಖತರ್ನಾಕ್ ಕಳ್ಳ! ಇತ್ತೀಚೆಗೆ ಕೇರಳದಿಂದ ಭಾರೀ ಮೊತ್ತದ ಚಿನ್ನಾಭರಣವನ್ನು ಕಳ್ಳತನ ಮಾಡಿ ಬಿಹಾರಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಉಡುಪಿ ಜಿಲ್ಲೆಯ ಕೋಟ ಪೊಲೀಸರ ಅತಿಥಿಯಾಗಿದ್ದಾನೆ. ಬಿಹಾರ ಮೂಲದ ಮಹಮ್ಮದ್ ಇರ್ಫಾನ್‌ ಬಂಧಿತ ಆರೋಪಿ. ಬ್ರಹ್ಮಾವರ ತಾಲೂಕು ಕೋಟ ಮೂರ್ಕೈನಲ್ಲಿ ಶನಿವಾರ ರಾತ್ರಿ ಕೋಟ ಪೊಲೀಸರು ನಡೆಸಿದ ಕಾರ್ಯಾಚರಣೆ ಸಂದರ್ಭ ಈತ ಬಲೆಗೆ ಬಿದ್ದಿದ್ದಾನೆ. ವಿಚಾರಣೆ ವೇಳೆ ಈತನ ಕರಾಮತ್ತು ಕೇಳಿ ಪೊಲೀಸರೇ ಶಾಕ್ ಗೊಳಗಾಗಿದ್ದಾರೆ.


‘ಕೋಟಿ’ ಮೇಲೆ ಕಣ್ಣು:

ಇರ್ಫಾನ್ ಸಾಮಾನ್ಯ ಕಳ್ಳನಲ್ಲ. ಈತನ ವಿರುದ್ಧ 13 ರಾಜ್ಯಗಳಲ್ಲಿ ಹಲವಾರು ಕಳ್ಳತನ ಆರೋಪಗಳಿವೆ. ಇದರ ಜತೆಗೆ ಹಲವಾರು ಕುತೂಹಲಕಾರಿ ವಿಷಯಗಳು ಹೊರಬಿದ್ದಿವೆ. ಈತ ಈಗಾಗಲೇ ಹಲವು ಬಾರಿ ಪೊಲೀಸರ ಅತಿಥಿಯಾಗಿದ್ದು, ಸಿನಿಮಾ ನಟರು, ರಾಜಕಾರಣಿಗಳು, ಗುತ್ತಿಗೆದಾರರು ಸೇರಿದಂತೆ ಅತ್ಯಂತ ಶ್ರೀಮಂತರ ಮನೆಗಳನ್ನೇ ಹೊಂಚುಹಾಕಿ ಕಳ್ಳತನ ಮಾಡುತ್ತಿದ್ದ.

ಒಮ್ಮೆ ಕಣ್ಣಿಟ್ಟರೆ ಸಾಕು! ಎಷ್ಟೇ ದಿನಗಳಾದರೂ ಕಾದು ತನ್ನ ಕೈಚಳಕ ತೋರುತ್ತಿದ್ದ. ಹೆಚ್ಚಿನ ಬಾರಿ ಓರ್ವನೇ ಪ್ರಕರಣದಲ್ಲಿ ಭಾಗಿಯಾಗುತ್ತಿದ್ದ ಹಾಗೂ ಪ್ರತಿ ಬಾರಿಯೂ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣಗಳನ್ನೇ ಲಪಟಾಯಿಸುತ್ತಿದ್ದ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ಕಸ್ಟಮ್ಸ್ ಅಧಿಕಾರಿಗಳಿಗೆ ಶಾಕ್; ಅದರಲ್ಲಿತ್ತು 10 ಅನಕೊಂಡಾ!

‘ನನ್ನ ಬಗ್ಗೆ ಯೂಟ್ಯೂಬ್ ನೋಡಿ’ ಎಂದ ಖದೀಮ :

ಕೋಟ್ಯಂತರ ರೂಪಾಯಿ ಕಳವುಗೈದು ಬಂಧಿಸಲ್ಪಟ್ಟ ಇರ್ಫಾನ್ ವಿಚಾರಣೆಗಿಳಿದ ಪೊಲೀಸರಿಗೆ ಆತನ ಹೇಳಿಕೆ ಅಚ್ಚರಿ ಹುಟ್ಟಿಸಿತ್ತು. ‘ ನನ್ನ ಬಗ್ಗೆ ಮಾಹಿತಿ ಬೇಕಾದರೆ ಯೂಟ್ಯೂಬ್‌ನಲ್ಲಿ ಮಹಮ್ಮದ್ ಇರ್ಫಾನ್ ರೋಬಿನ್‌ಹುಡ್ ಎಂದು ಸರ್ಚ್ ಮಾಡಿ’ ಎಂದಿದ್ದನಂತೆ ಈ ಖದೀಮ. ಯೂಟ್ಯೂಬ್‌ನಲ್ಲಿ ಸರ್ಚ್ ಮಾಡಿದಾಗ ಈತನ ಬಗ್ಗೆ ಇರುವ ಹತ್ತಾರು ವೀಡಿಯೋಗಳು ಸಿಕ್ಕಿವೆ. ಅದರಲ್ಲಿ ಕಳ್ಳತನ ಹಾಗೂ ಕೋಟ್ಯಂತರ ರೂ. ಮೊತ್ತವನ್ನು ಜನರಿಗೆ ಹಂಚುವ ಕುರಿತು ವಿಚಾರಗಳಿವೆ. ಇವೆಲ್ಲವನ್ನು ನೋಡಿದ ಪೊಲೀಸರಿಗೆ ಶಾಕ್ ಆಗಿದ್ದು ಸುಳ್ಳಲ್ಲ.

Continue Reading

LATEST NEWS

Trending