LATEST NEWS
ಬಿಟ್ ಕಾಯಿನ್ ಹಗರಣದಲ್ಲಿ ದ.ಕ ಜಿಲ್ಲೆಯ ರಾಜಕಾರಣಿಗಳೂ ಸೇರಿದ್ದಾರೆ ಎಂಬ ಸುದ್ದಿ ಇದೆ: ಮಾಜಿ ಸಚಿವ ರಮಾನಾಥ್ ರೈ
ಮಂಗಳೂರು: ಬಿಟ್ ಕಾಯಿನ್ ಹಗರಣದಲ್ಲಿ ದ.ಕ ಜಿಲ್ಲೆಯ ರಾಜಕಾರಣಿಗಳೂ ಸೇರಿದ್ದಾರೆ ಎಂಬ ಸುದ್ದಿ ಇದೆ. ಆದ್ದರಿಂದ ಯಾರು ಅಪರಾಧಿಗಳು ಯಾರು ನಿರಪರಾಧಿಗಳು ಎಂಬುವುದು ಬೆಳಕಿಗೆ ಬರಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಆಗ್ರಹಿಸಿದರು.
ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಜಿಲ್ಲೆಯ ರಾಜಕಾರಣದಲ್ಲಿ ಸ್ವಲ್ಪ ಪ್ರಾಮಾಣಿಕತೆ ಇದೆ ಎಂಬ ಮಾತಿದೆ. ಆದ್ದರಿಂದ ತನಿಖೆ ನಡೆಸಿ ಎಂದರು.
ಬಿಟ್ ಕಾಯಿನ್ನಿಂದ ಕಾಂಗ್ರೆಸ್ ಜಾಸ್ತಿ ತೊಂದರೆಯಾಗುತ್ತದೆ ಎಂದು ರಾಜ್ಯ ಗೃಹಸಚಿವರು ಹೇಳಿಕೆ ನೀಡಿದ್ದಾರೆ. ಅವರು ಕಾಂಗ್ರೆಸ್ ಹಿತ ಕಾಪಾಡುವುದು ಬೇಡ.
ಜನರ ಹಿತ ಕಾಯುವ ಕೆಲಸ ಮಾಡಲಿ. ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಅವಧಿಯಲ್ಲಿ ಯಾವುದೇ ಪ್ರಕರಣಗಳು ಬೆಳಕಿಗೆ ಬಂದರೆ ಸಮಗ್ರ ತನಿಖೆ ಆಗುತಿತ್ತು. ಆದರೆ ಇದೀಗ ಯಾವುದೇ ತನಿಖೆ ಸಮರ್ಪಕವಾಗಿ ಆಗುತ್ತಿಲ್ಲ.
ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರ ಇರುವ ವೇಳೆ ಎಂಟು ಪ್ರಕರಣಗಳು ಸಿಬಿಐ ತನಿಖೆ ಮಾಡಿಸಿದೆ. ಆಗ ಬಿಜೆಪಿ ಕೇಂದ್ರದಲ್ಲಿತ್ತು ಎಂದರು.
ಇತ್ತೀಚೆಗೆ ಕೇಂದ್ರ ಸರ್ಕಾರದ ಕೆಲವು ವೆಬ್ ಸೈಟ್ಗಳು ಹ್ಯಾಕ್ ಆಗಿದೆ ಎಂಬ ಸುದ್ದಿ ಕೇಳಿದ್ದೇವೆ. ಇದು ಗಂಭೀರ ವಿಚಾರ.
ಜನ್ಧನ್ ಖಾತೆ ಹ್ಯಾಕ್, ಪಿಂಚಣಿ ಯೋಜನೆ, ಗ್ಯಾಸ್ ಸಬ್ಸಿಡಿ ಹ್ಯಾಕ್, ಬ್ಯಾಂಕ್ ವಹಿವಾಟು ಸಹ ಹ್ಯಾಕ್ ಆಗಿದೆ.
ಬಿಜೆಪಿ ಭ್ರಷ್ಟಾಚಾರ ವಿರೋಧಿ ಪಕ್ಷ ಎಂಬುದು ಸುಳ್ಳು.
ಮೋದಿ ಅವರು ಹೇಳಿದ್ದಾರೆ ಕಾಂಗ್ರೆಸ್ನ ಆಗಿನ ರಾಜ್ಯ ಸರಕಾರ 10 ಪರ್ಸೆಂಟ್ ಸರಕಾರ ಎಂದು ಇದೀಗ ಅವರೇ ಯೋಜನೆಗಳ ಕಾಂಟ್ರಾಕ್ಟ್ ದಾರರಿಂದ 40% ಕಮಿಷನ್ ಪಡೆಯುತ್ತಿದ್ದಾರೆ ಎಂದು ಅವರು ಆರೋಪಿಸಿದರು.
Ancient Mangaluru
ಮೇ.10 ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಪಕ್ಷಿಕೆರೆ ಶಾಖೆಯ ಉದ್ಘಾಟನೆ
ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ರಾಷ್ಟ್ರೀಯ ಪುರಸ್ಕಾರ ಪಡೆದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಪಕ್ಷಿಕೆರೆ ಶಾಖೆಯ ಉದ್ಘಾಟನಾ ಸಮಾರಂಭ ಮೇ 10 ರಂದು ಮಧ್ಯಾಹ್ನ 12 ಗಂಟೆಗೆ ಮುಲ್ಕಿಯ ಲಘುವಿ ಕಾಂಪ್ಲೆಕ್ಸ್ ಮುಖ್ಯರಸ್ತೆ ಪಕ್ಷಿಕೆರೆಯಲ್ಲಿ ನಡೆಯಲಿದೆ.
ಮುಲ್ಕಿ ಮೂಡುಬಿದ್ರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಪಕ್ಷಿಕೆರೆ ಸಂತ ಜುದರ ಪುಣ್ಯಕ್ಷೇತ್ರ ಧರ್ಮಗುರು ಅತಿ ವಂದನೀಯ ಗುರುಗಳು ಮೆಲ್ವಿನ್ ನೊರೊಹ್ನಾ ದ್ವೀಪ ಪ್ರಜ್ವಲಿಸಲಿದ್ದಾರೆ. ಪಕ್ಷಿಕೆರೆ ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರ ಶ್ರೀ ಕೆ.ಸೀತಾರಾಮ್ ಶೆಟ್ಟಿ, ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಮಯ್ಯದ್ದಿ ಗಣಕೀಕೃತ ಬ್ಯಾಂಕಿಂಗ್ ಗೆ ಚಾಲನೆ ನೀಡಲಿದ್ದಾರೆ. ಪಕ್ಷಿಕೆರೆ, ಎಸ್ ಕೋಡಿ, ಬಿಲ್ಲವ ಸಂಘದ ಅಧ್ಯಕ್ಷ ನವೀನ್ ಹರಿಪಾದೆ ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ.
ಇದನ್ನೂ ಓದಿ : ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ಎರಡನೇ ಸ್ಥಾನ
ಸಮಾಜಸೇವಕ ಧನಂಜಯ ಶೆಟ್ಟಿಗಾರ್ ಇ-ಮುದ್ರಾಂಕ ಸೇವೆಗೆ, ಹಳೆಯಂಗಡಿ ಪ್ರಿಯದರ್ಶಿನಿ ಸಹಕಾರ ಸಂಘದ ಅಧ್ಯಕ್ಷ ಎಚ್.ವಸಂತ್ ಬೆರ್ನಾಡ್ ಆವರ್ತನ ಠೇವಣಿಗೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಕಸ್ತೂರಿ ಪಂಜ ಉಳಿತಾಯ ಖಾತೆಗೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿನೋದ್ ಕುಮಾರ್ ಬೊಳ್ಳೂರು, ಕಟ್ಟಡದ ಮಾಲಕ ಶ್ರೀನಿವಾಸ ಕೋಟ್ಯಾನ್ ಮೈಕ್ರೋ ಸಾಲ ಯೋಜನೆಗೆ ಚಾಲನೆ ನೀಡಲಿದ್ದಾರೆ. ಸರ್ವರಿಗೂ ಆದರದ ಸ್ವಾಗತ ಕೋರಲಾಗಿದೆ.
FILM
ಪ್ರಜ್ವಲ್ ಪ್ರಕರಣದ ನಡುವೆ ಖಾಸಗಿ ವೀಡಿಯೋ ವೈರಲ್; ಜ್ಯೋತಿ ರೈ ಹೇಳಿದ್ದೇನು?
ಬೆಂಗಳೂರು : ಅತ್ತ ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸುತ್ತಿದೆ. ಈ ನಡುವೆ ಖ್ಯಾತ ನಟಿ ಜ್ಯೋತಿ ರೈ ಅವರದ್ದೆನ್ನಲಾದ ಖಾಸಗಿ ವೀಡಿಯೋವೊಂದು ವೈರಲ್ ಆಗಿದೆ. ಒಂದಷ್ಟು ಅಶ್ಲೀಲ ವೀಡಿಯೋಗಳೂ ಸದ್ದು ಮಾಡುತ್ತಿವೆ.
ಜ್ಯೋತಿ ರೈ ಕನ್ನಡ ಕಿರುತೆರೆಯಲ್ಲಿ ಫೇಮಸ್ ನಟಿ. ಅಲ್ಲದೇ ತೆಲುಗು ಧಾರಾವಾಹಿಗಳಿಗೂ ಲಗ್ಗೆ ಇಟ್ಟಿದ್ದಾರೆ. ಇತ್ತೀಚೆಗೆ ಫೋಟೋಗಳಿಂದ ಭಾರೀ ಸುದ್ದಿಯಾಗುತ್ತಿದ್ದಾರೆ. ಹಾಟ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.
ಇದೀಗ ಅವರದ್ದೆನ್ನಲಾದ ಖಾಸಗಿ ವೀಡಿಯೋಗಳು ಭಾರೀ ವೈರಲ್ ಆಗಿದೆ. ಫೇಸ್ ಬುಕ್, ವಾಟ್ಸ್ ಆ್ಯಪ್, ಟ್ವಿಟ್ಟರ್ ಖಾತೆಗಳಲ್ಲಿ ಅಶ್ಳೀಲ ಫೋಟೋ, ವೀಡಿಯೋಗಳು ಹರಿದಾಡುತ್ತಿವೆ. ಈ ಬಗ್ಗೆ ಇದೀಗ ಮೌನ ಮುರಿದಿರುವ ನಟಿ ಸ್ಪಷ್ಟನೆ ನೀಡಿದ್ದಾರೆ.
ಏನಂದ್ರು ಜ್ಯೋತಿ ರೈ?
ತಮ್ಮ ಗ್ಲಾಮರಸ್ ಫೋಟೋಗಳನ್ನು ಹಂಚಿಕೊಂಡು ಪಡ್ಡೆಗಳ ನಿದ್ದೆಗೆಡಿಸುತ್ತಿದ್ದ ನಟಿ ಜ್ಯೋತಿ ರೈ ಅವರದ್ದೆನ್ನಲಾದ ಅಶ್ಲೀಲ ವೀಡಿಯೋ ವೈರಲ್ ಆಗಿದೆ. ಈ ವೀಡಿಯೋ ಬಗ್ಗೆ ಸ್ವತಃ ಜ್ಯೋತಿ ರೈ ಸ್ಪಷ್ಟನೆ ನೀಡಿದ್ದಾರೆ. ಆಘಾತಕ್ಕೊಳಗಾಗಿದ್ದೇನೆ ಎಂದಿದ್ದಾರೆ.
ನಾನು ಅಪರಿಚಿತ ವ್ಯಕ್ತಿಗಳಿಂದ ಈ ಸಂದೇಶಗಳನ್ನು ಸ್ವೀಕರಿಸಿ ನಾನು ಆಘಾತಕ್ಕೊಳಗಾಗಿದ್ದೇನೆ. ನನ್ನ ಖ್ಯಾತಿ ಮತ್ತು ನನ್ನ ಕುಟುಂಬದ ಪ್ರತಿಷ್ಠೆಗೆ ಅಪಾಯದಲ್ಲಿರುವುದರಿಂದ ಈ ಬಳಕೆದಾರರು/ವ್ಯಕ್ತಿಗಳ ವಿರುದ್ಧ ಸರಿಯಾದ ಮತ್ತು ತ್ವರಿತ ಕ್ರಮವನ್ನು ತೆಗೆದುಕೊಳ್ಳುವಂತೆ ವಿನಂತಿಸುತ್ತೇನೆ. ಅಲ್ಲದೆ, ಈ ಬಳಕೆದಾರರು/ವ್ಯಕ್ತಿಗಳ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಸರಿಪಡಿಸಲಾಗದ ಹಾನಿ ಉಂಟಾಗುತ್ತದೆ. ನಿಮ್ಮ ಪರಿಶೀಲನೆ ಮತ್ತು ತನಿಖೆಗಾಗಿ ನಾನು ಎಲ್ಲಾ ಬಳಕೆದಾರರ ಯೂಸರ್ ಐಡಿಗಳನ್ನು ಲಗತ್ತಿಸಿದ್ದೇನೆ.
ಈ ‘ಅಜ್ಞಾತ ಬಳಕೆದಾರರ’ ವಿರುದ್ಧ ಈ ಕೆಳಗಿನ ಅಪರಾಧಗಳನ್ನು ಮಾಡಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 66 (ಇ) ಅಡಿಯಲ್ಲಿ ಖಾಸಗಿತನದ ಉಲ್ಲಂಘನೆಗಾಗಿ ಶಿಕ್ಷೆ. ಮಾಹಿತಿ ತಂತ್ರಜ್ಞಾನ ಕಾಯಿದೆ, 2000, 2000 ರ ಸೆಕ್ಷನ್ 67 ರ ಅಡಿಯಲ್ಲಿ ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಸ್ತುಗಳನ್ನು ಪ್ರಕಟಿಸಲು ಅಥವಾ ರವಾನಿಸಿದ ಕಾರಣ ಶಿಕ್ಷೆ, ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 67 (ಎ) ಅಡಿಯಲ್ಲಿ ಲೈಂಗಿಕ ಕ್ರಿಯೆಯನ್ನು ಒಳಗೊಂಡಿರುವ ವಸ್ತುಗಳನ್ನು ಎಲೆಕ್ಟ್ರಾನಿಕ್ ರೂಪದಲ್ಲಿ ಪ್ರಕಟಿಸಿದ ಕಾರಣ ಶಿಕ್ಷೆ ಮತ್ತು ಭಾರತೀಯ ದಂಡ ಸಂಹಿತೆ, 1860 ರ ಸೆಕ್ಷನ್ 509 ರ ಅಡಿಯಲ್ಲಿ ಮಹಿಳೆಯ ಘನತೆಯನ್ನು ಅವಮಾನಿಸುವ ಉದ್ದೇಶದಿಂದ ಪದಗಳು ಅಥವಾ ಕೆಲಸ ಮಾಡಿರುವ ಕಾರಣ ಶಿಕ್ಷೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ತೆಲುಗು ನಿರ್ದೇಶಕನ ಕೈ ಹಿಡಿದ ಜ್ಯೋತಿ:
ಜ್ಯೋತಿ ರೈ ತೆಲುಗು ನಿರ್ದೇಶಕ ಸುಕುಮಾರ್ ಪೂರ್ವಜ್ ಅವರೊಂದಿಗೆ ಸಹ ಜೀವನ ನಡೆಸುತ್ತಿದ್ದ ಬಗ್ಗೆ ಗಾಸಿಪ್ ಹರಿದಾಡುತ್ತಿತ್ತು. ಆದದ ಬಳಿಕ ವಿವಾಹವಾಗಿರುವ ಬಗ್ಗೆ ಸ್ವತಃ ತಿಳಿಸಿ ತನ್ನ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ನಟಿ ಜ್ಯೋತಿ ರೈ ತನ್ನ 20 ನೇ ವಯಸ್ಸಿನಲ್ಲಿ ಮೊದಲ ಮದುವೆಯಾಗಿದ್ದರು. ನಂತರ ಅವರಿಂದ ವಿಚ್ಛೇದನ ಪಡೆದಿದ್ದಾರೆ. ಆಕೆಗೆ 11 ವರ್ಷದ ಮಗನಿದ್ದಾನೆ.
LATEST NEWS
ನಿರ್ಜನ ಪದೇಶದಲ್ಲಿ ಮಧ್ಯರಾತ್ರಿ ಎಣ್ಣೆ ಪಾರ್ಟಿ ..! ಬಾಟಲಿಯಲ್ಲಿ ಚುಚ್ಚಿ ಯುವಕನ ಕೊಲೆ.!!
ಗದಗ/ಮಂಗಳೂರು: ರಾತ್ರಿ ಪೂರ್ತಿ ಎಣ್ಣೆ ಪಾರ್ಟಿ ಮಾಡಿ ಕೊನೆಗೆ ಜೊತೆಯಲ್ಲಿದ್ದವನನ್ನೇ ಕೊಲೆಗೈದ ಘಟನೆ ಮುಂಡರಗಿ ತಾಲೂಕಿನ ಕೆಹೆಚ್ಬಿ ಕಾಲೋನಿಯಲ್ಲಿ ನಡೆದಿದೆ.
ಮುಂದೆ ಓದಿ..; ಮಂಗಳೂರು: ಸರಕಾರಿ ಹಾಸ್ಟೆಲ್ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ.!!
ಮೂವರು ಯುವಕರು ನಿರ್ಜನ ಪ್ರದೇಶದಲ್ಲಿ ಗುಂಡು ಪಾರ್ಟಿಯಲ್ಲಿ ತೊಡಗಿದ್ದರು. ಆದರೆ ಅದೇ ದಿನ ಮಧ್ಯರಾತ್ರಿ ಸುಭಾಷ್ ನಾಯಕ(23) ಎಂಬಾತನ ಕೊಲೆಯಾಗಿದೆ. ಬಾಟಲಿಯಿಂದ ಚುಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಪಾರ್ಟಿಯಲ್ಲಿದ್ದ ಇಬ್ಬರು ಘಟನೆ ಬಳಿಕ ತಲೆಮರಿಸಿಕೊಂಡಿದ್ದಾರೆ. ಈ ಬಗ್ಗೆ ಮಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೆತ್ತಿಕೊಂಡಿದ್ದಾರೆ. ತಲೆಮರಿಸೊಕೊಂಡವರಿಗೆ ಶೋಧ ಕಾರ್ಯ ನಡೆಯುತ್ತಿದೆ.
- DAKSHINA KANNADA6 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- dehali7 days ago
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
- LATEST NEWS6 days ago
ಎರಡು ಬಾರಿ ಅಕ್ರಮವಾಗಿ ಗರ್ಭಿಣಿಯಾದ ಅಪ್ರಾಪ್ತೆ..! ಪೋಷಕರ ವಿರುದ್ಧ ದೂರು.!!ಮುಂದೇನಾಯ್ತು?
- LATEST NEWS6 days ago
ಅಜೆಕಾರು : ಮನೆ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾ*ವು