DAKSHINA KANNADA
ಮೋದಿ ರೋಡ್ ಶೋ ರಹಸ್ಯ…! ಪದ್ಮರಾಜ್ ಪೂಜಾರಿಗೆ ಬೆದರಿತಾ ಬಿಜೆಪಿ..?
ಮಂಗಳೂರು : 33 ವರ್ಷಗಳ ನಿರಂತರ ಅಧಿಕಾರ… 1 ಲಕ್ಷ ಕೋಟಿಗೂ ಅಧಿಕ ಅನುದಾನ ತಂದಿರುವ ಹಾಲಿ ಸಂಸದರ ಸಾಧನೆ. ಇನ್ನು ದೇಶ ಸೇವೆ ಮಾಡಿರೋ ಹೆಮ್ಮೆಯ ಸುಪುತ್ರ… ಹಿಂದುತ್ವಕ್ಕೆ ಜೀವನ ಮುಡಿಪಾಗಿಟ್ಟಿರುವ ಅಪ್ಪಟ ದೇಶ ಪ್ರೇಮಿ ಅಭ್ಯರ್ಥಿ. ಇದಿಷ್ಟು ಇದ್ರೂ ಈ ಬಾರಿ ಚುನಾವಣೆ ಗೆಲ್ಲೋದು ಅಷ್ಟೊಂದು ಸುಲಭ ಅಲ್ಲ ಅನ್ನೋ ಆತಂಕ ಜಿಲ್ಲಾ ಬಿಜೆಪಿಯಲ್ಲಿ ಇದೆಯಾ ? ಮತದಾರರಲ್ಲಿ ಇಂತಹ ಒಂದು ಚರ್ಚೆಗೆ ಸ್ವತಹ ಬಿಜೆಪಿ ಪಕ್ಷವೇ ಎಡೆ ಮಾಡಿ ಕೊಟ್ಟಿದೆ.
ಹವಾ ಕ್ರಿಯೇಟ್ ಮಾಡಿದ್ದಾರ ಪದ್ಮರಾಜ್ ಪೂಜಾರಿ..?
ಹಿಂದುತ್ವದ ಭದ್ರ ಕೋಟೆಯಲ್ಲಿ ಬಿಜೆಪಿ ಪಕ್ಷದಿಂದ ಯಾರೇ ಸ್ಪರ್ಧೆ ಮಾಡಿದ್ರೂ ಗೆದ್ದೇ ಗೆಲ್ತಾರೆ ಅಂತಿದ್ದ ಬಿಜೆಪಿ ಪಾಳಯದಲ್ಲಿ ಈ ಬಾರಿ ಅಂತಹ ಗೆಲುವಿನ ಉತ್ಸಾಹ ಕಂಡು ಬರ್ತಾ ಇಲ್ಲ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸದ್ಯದ ಮಟ್ಟಿಗೆ ಹವಾ ಎಬ್ಬಿಸಿರೋ ಕೈ ಅಭ್ಯರ್ಥಿ ಆರ್ ಪದ್ಮರಾಜ್ ಮುಂದೆ, ಬಿಜೆಪಿ ಅಭ್ಯರ್ಥಿ ಮಂಕಾಗಿದ್ದಾರೆ ಅಂತ ಚರ್ಚೆಗಳು ನಡಿತಾ ಇದೆ. ಇಂತಹ ಚರ್ಚೆಗೆ ಪೂರಕವೆಂಬಂತೆ ಕ್ಷೇತ್ರದಲ್ಲಿ ಬಿಜೆಪಿ ಮೋದಿ ಹವಾ ಕ್ರಿಯೇಟ್ ಮಾಡಲು ಹೊರಟಿರೋದು ಅನುಮಾನ ಮೂಡಿಸಿದೆ.
4 ಲಕ್ಷದಿಂದ ಗೆಲ್ಲುತ್ತೇವೆ ಅಂತಿದ್ದವರಿಗೆ ಆತಂಕ ಯಾಕೆ ?
ಜಿಲ್ಲೆಯಲ್ಲಿ ಈ ಬಾರಿ ನಾಲ್ಕು ಲಕ್ಷದ ಮತಗಳ ಅಂತರದಿಂದ ಗೆಲ್ತೇವೆ ಅನ್ನೋ ದೃಢ ವಿಶ್ವಾಸವನ್ನೂ ಬಿಜೆಪಿ ಪಾಳಯ ವ್ಯಕ್ತಪಡಿಸಿದೆ. ಇನ್ನು ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ನಡೆದಿದ್ದ ಮೋದಿ ಸಮಾವೇಶದಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ್ ವೇದಿಕೆ ಹಂಚಿಕೊಂಡಿದ್ದಾರೆ. ಅಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಅಂತ ಪ್ರಧಾನಿ ಮೋದಿಯೇ ಕರೆ ನೀಡಿದ್ದಾರೆ. ಹೀಗಿದ್ರೂ ಪ್ರಧಾನಿ ಮೋದಿ ಮಂಗಳೂರಿಗೆ ಬರಲಿ ಅಂತ ಎಲ್ಲಾ ಬಿಜೆಪಿ ನಾಯಕರು ಹಾರೈಸುತ್ತಿದ್ದು, ಮೋದಿ ಬಂದ್ರೆ ಗೆಲುವು ಪಕ್ಕಾ ಅನ್ನೋ ಲೆವೆಲ್ಗೆ ಬಂದು ನಿಂತಿದ್ದಾರೆ.
ಬಿಲ್ಲವರನ್ನು ಒಲಿಸಿಕೊಳ್ಳಲು ನಾರಾಯಣಗುರು ಜಪ..?
ಬಂಟ – ಬಿಲ್ಲವರ ಫೈಟ್ನಲ್ಲಿ ಕಾರ್ಯಕರ್ತರು ಪಕ್ಷವನ್ನು ಮರೆತಿದ್ದಾರೆ ಅನ್ನೋದೇ ಬಿಜೆಪಿ ಪಾಳಯದಲ್ಲಿ ಸದ್ಯಕ್ಕೆ ಇರುವ ಆತಂಕ. ಬಹುತೇಕ ಬಿಲ್ಲವರು ಈ ಬಾರಿ ಪದ್ಮರಾಜ್ ಕೈ ಹಿಡಿತಾರೆ ಅನ್ನೋದು ಪಕ್ಕಾ ಆಗ್ತಾ ಇದ್ದಂತೆ ಬಿಜೆಪಿ ಪಾಳಯದಲ್ಲಿ ನಡುಕ ಆರಂಭವಾಗಿದೆ. ಹೀಗಾಗಿ ಪ್ರಧಾನಿ ಮೋದಿಯವರನ್ನು ಮೊರೆ ಹೋಗಬೇಕಾದ ಇಕ್ಕಟಿನ ಪರಿಸ್ಥಿತಿ ನಿರ್ಮಾಣವಾಗಿದೆ. ಮೋದಿ ಸಮಾವೇಶದಿಂದ ಒಂದಷ್ಟು ಲಾಭದ ಲೆಕ್ಕಾಚಾರ ಮಾಡಿದ್ದ ಬಿಜೆಪಿಗೆ ಸದ್ಯ ಸಮಾವೇಶ ರದ್ದಾಗಿರುವುದು ಬೇಸರ ತಂದಿದೆ. ಆದ್ರೆ ಕನಿಷ್ಟ ರೋಡ್ ಶೋ ಮಾಡಿಯಾದ್ರೂ ಡ್ಯಾಮೇಜ್ ಕಂಟ್ರೋಲ್ ಮಾಡಬೇಕಾಗಿದೆ. ಇನ್ನು ಸಮಾವೇಶದ ಮೈಲೇಜ್ ರೋಡ್ ಶೋದಲ್ಲಿ ಸಿಗದ ಕಾರಣ ನಾರಾಯಣ ಗುರು ವೃತ್ತದಲ್ಲಿ ಗುರುಗಳಿಗೆ ಮಾಲಾರ್ಪಣೆ ಮಾಡಿ ರೋಡ್ ಶೋದ ಪ್ಲಾನ್ ಮಾಡಲಾಗಿದೆ. ಆದ್ರೆ ಈ ಪ್ಲಾನ್ಗೆ ರಾಜ್ಯ ಬಿಜೆಪಿ ಹಾಗೂ ಪ್ರಧಾನಿ ಭದ್ರತಾ ಕಾರ್ಯಾಲಯದಿಂದ ಇನ್ನೂ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ ಅಂತ ಜಿಲ್ಲಾಧ್ಯಕ್ಷರು ಹೇಳಿದ್ದಾರೆ. ಮೋದಿ ಬಂದು ನಾರಾಯಣ ಗುರುಗಳಿಗೆ ಮಾಲಾರ್ಪಣೆ ಮಾಡಿದ್ರೆ ಪಕ್ಷದಿಂದ ಅಂತರ ಕಾಪಾಡಿಕೊಂಡ ಬಿಲ್ಲವರು ಮತ್ತೆ ಪಕ್ಷದತ್ತ ಮುಖ ಮಾಡಬಹುದು ಅನ್ನೋ ನಿರೀಕ್ಷೆ ಬಿಜೆಪಿಯಲ್ಲಿ ಇದೆ. ಆದ್ರೆ ಇದೆಲ್ಲವೂ ಈಗ ಮತದಾರನ ಬಾಯಿಗೆ ಅಸ್ತ್ರವಾಗಿದ್ದು ಒಬ್ಬೊಬ್ಬರೂ ಒಂದೊಂದು ರೀತಿಯ ಚರ್ಚೆ ನಡೆಸ್ತಾ ಇದ್ದಾರೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರದಲ್ಲಿ ಕೈ ಬೆಂಬಲಿಗರು ಬಿಜೆಪಿ ಬೆಂಬಲಿಗರ ಕಾಲೆಳೆಯುತ್ತಿದ್ದಾರೆ. ಒಟ್ಟಾರೆ ಮೋದಿ ಕರೆತರುವ ಬಿಜೆಪಿ ಪ್ಲ್ಯಾನ್ ಸದ್ಯ ಚರ್ಚೆಯ ವಿಷಯ ಆಗಿರೋದಂತು ನಿಜ.
DAKSHINA KANNADA
ಸಾವಿನಲ್ಲೂ ಒಂದಾದ ಸಹೋದರರು! ಅಣ್ಣನ ನಿಧನದ ಸುದ್ದಿ ಕೇಳಿ ಇಹಲೋಕ ತ್ಯಜಿಸಿದ ತಮ್ಮ
ಸುಳ್ಯ : ಸಹೋದರರಿಬ್ಬರು ಸಾ*ವಿನಲ್ಲೂ ಒಂದಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಅರಂತೋಡು ಗ್ರಾಮದ 82 ವರ್ಷದ ಎಸ್. ಇ. ಅಬ್ದುಲ್ಲಾ ಹಾಗೂ ಮಹಮ್ಮದ್ ಎಸ್. ಇ ಮೃ*ತ ಸಹೋದರರು.
ಅಬ್ದುಲ್ಲಾ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧ*ನರಾಗಿದ್ದಾರೆ. ಈ ವಿಚಾರ ತಿಳಿದ ಅವರ ಸಹೋದರ ಮಹಮ್ಮದ್ ಕುಸಿದು ಬಿದ್ದು ಸಾ*ವನ್ನಪ್ಪಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?
ಇಬ್ಬರನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.
DAKSHINA KANNADA
ಈ ತಿಂಗಳಿನಲ್ಲಿ ಬರುತ್ತೆ ಪಿಎಂ ಕಿಸಾನ್ ಯೋಜನೆಯ 17ನೇಕಂತು..!
ದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ದೇಶದ ಕೋಟ್ಯಂತರ ರೈತರಿಗೆ ಆರ್ಥಿಕ ನೆರವು ನೀಡುತ್ತಿದೆ. ಈ ಯೋಜನೆಯಿಂದ ಪ್ರತೀ ವರ್ಷ ರೈತರಿಗೆ ವಾರ್ಷಿಕವಾಗಿ 6000 ರೂಪಾಯಿಗಳ ಆರ್ಥಿಕ ನೆರವು ನೀಡಲಾಗುತ್ತಿದ್ದು, ಮೂರು ಕಂತುಗಳಲ್ಲಿ 2000 ರೂ. ನೇರವಾಗಿ ಕೃಷಿಗರ ಖಾತೆಗೆ ಜಮೆ ಮಾಡಲಾಗುತ್ತಿದೆ.
ಇದೀಗ ರೈತರು 17ನೇ ಕಂತಿನ ನಿರೀಕ್ಷೆಯಲ್ಲಿದ್ದು, ಮೇ.2024ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಕಂತನ್ನು ಪಡೆಯಬಹುದಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಸರ್ಕಾರ ಯಾವುದೇ ಮಾಹಿತಿ ನೀಡಿಲ್ಲ.
16ನೇ ಕಂತನ್ನು ಫೆಬ್ರವರಿ ತಿಂಗಳಲ್ಲಿ ಪಿಎಂ ಕಿಸಾನ್ ನಿಧಿ ಯೋಜನೆಯ ಕಂತನ್ನು ರೈತರಿಗೆ ವರ್ಗಾವಣೆ ಮಾಡಲಾಗಿದೆ. ಇನ್ನು 17ನೇ ಕಂತಿಗಾಗಿ ಕಾದು ನೋಡಬೇಕಿದೆ. ಈ ಯೋಜನೆಯ ಕಂತುಗಳನ್ನು ವರ್ಷದಲ್ಲಿ ನಾಲ್ಕು ತಿಂಗಳಿಗೊಮ್ಮೆ ನೀಡಲಾಗುತ್ತದೆ. ಮೊದಲನೆಯ ಕಂತು ಏಪ್ರಿಲ್-ಜುಲೈನಲ್ಲಿ, ಎರಡನೆಯದು ಆಗಸ್ಟ್-ನವೆಂಬರ್ ನಲ್ಲಿ ಮತ್ತು ಮೂರನೆಯದು ಡಿಸೆಂಬರ್-ಮಾರ್ಚ್ನಲ್ಲಿ ನೀಡಲಾಗುತ್ತದೆ.
ಮುಂದೆ ಓದಿ..; “ಮದುವೆ ಗೌನ್”ಗೆ ಮತ್ತೊಂದು ಟಚ್ ಕೊಟ್ಟ ‘ಸಮಂತಾ’..!! ಶಾಕ್ನಲ್ಲಿಅಭಿಮಾನಿಗಳು!
ಈಗಾಗಲೇ 16ನೇ ಕಂತನ್ನು ಫೆಬ್ರವರಿಯಲ್ಲಿ ನೀಡಿದ್ದು, 17 ನೇ ಕಂತು ಮೇ ತಿಂಗಳಿನಲ್ಲಿ ವರ್ಗಾವಣೆಯಾಗಬಹುದು ಎನ್ನಲಾಗಿದ್ದು, ನಿರ್ದಿಷ್ಟ ದಿನಾಂಕ ಮಾತ್ರ ನಿಗದಿಯಾಗಿಲ್ಲ.
BANTWAL
ULLALA : ನೇಣಿಗೆ ಶರಣಾದ ಇಬ್ಬರು ಪುಟ್ಟ ಮಕ್ಕಳ ತಂದೆ
ಉಳ್ಳಾಲ : ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ ಕುಂಪಲದ ಹನುಮಾನ್ ನಗರದಲ್ಲಿ ಸೋಮವಾರ(ಏ. 29) ಮುಂಜಾನೆ ನಡೆದಿದೆ. 44 ವರ್ಷ ಯೋಗೀಶ್ ಆತ್ಮಹ*ತ್ಯೆಗೈದ ವ್ಯಕ್ತಿ.
ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಯೋಗೀಶ್ ಸೋಮವಾರ ಬೆಳಗ್ಗೆ ತಮ್ಮ ಮನೆಗೆ ತಾಗಿಕೊಂಡಿರುವ ಶೌಚಾಲಯದಲ್ಲಿ ನೇಣಿಗೆ ಶರಣಾಗಿದ್ದಾರೆ. ಯೋಗೀಶ್ ಸ್ವಸಹಾಯ ಗುಂಪೊಂದರ ಸದಸ್ಯರಾಗಿದ್ದು, ಸಂಘದ ನಲ್ವತ್ತು ಸಾವಿರ ರೂಪಾಯಿಗಳನ್ನ ಬ್ಯಾಂಕಿಗೆ ಕಟ್ಟದೆ ಖರ್ಚು ಮಾಡಿದ್ದರು ಎನ್ನಲಾಗಿದೆ.
ಈ ಬಗ್ಗೆ ಸಂಘದ ಉಳಿದ ಸದಸ್ಯರು ಭಾನುವಾರ ಬೆಳಗ್ಗೆ ಮತ್ತು ಸಂಜೆ ಯೋಗೀಶ್ ಅವರ ಮನೆಗೆ ತೆರಳಿ ಹಣ ಕಟ್ಟುವಂತೆ ಪೀಡನೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇದೇ ಅವಮಾನದಲ್ಲಿ ಯೋಗೀಶ್ ಆತ್ಮಹ*ತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ.
ಇದನ್ನೂ ಓದಿ : ಮೇ 3 ರಂದು ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವ; ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ!
ಉಳ್ಳಾಲ ಠಾಣಾ ಪೊಲೀಸರು ಮೃ*ತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
ಯೋಗೀಶ್ ಪತ್ನಿಯೂ ಆತ್ಮಹತ್ಯೆಗೆ ಯತ್ನ:
ಯೋಗೀಶ್ ಸಾ*ವನ್ನಪ್ಪಿದನ್ನು ಕಂಡ ಪತ್ನಿಯೂ ನೇಣು ಬಿಗಿದು ಆತ್ಮ ಹ*ತ್ಯೆಗೈಯಲು ಮುಂದಾಗಿದ್ದಾರೆ. ಘಟನಾ ಸ್ಥಳದಲ್ಲಿ ನೆರೆದಿದ್ದ ಸ್ಥಳೀಯರು ಆಕೆಯನ್ನ ತಡೆದು ಸಂತೈಸಿದ್ದಾರೆ. ಮೃ*ತ ಯೋಗೀಶ್ ಇಬ್ಬರು ಪುಟ್ಟ ಗಂಡು ಮಕ್ಕಳು, ಪತ್ನಿ, ತಾಯಿಯನ್ನು ಅಗಲಿದ್ದಾರೆ.