dehali
“ಚುನಾವಣೆಗೆ ಸ್ಪರ್ಧಿಸಲು ಹಣವಿಲ್ಲ, ಹಾಗಾಗಿ ಸ್ಪರ್ಧಿಸುತ್ತಿಲ್ಲ” ಎಂದ ಕೇಂದ್ರ ಸಚಿವೆ..!!
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡಿದ್ದರೂ, ನನ್ನಲ್ಲಿ ಚುನಾವಣೆಗೆ ಹೋರಾಡಲು ಅಗತ್ಯವಿರುವಷ್ಟು ಹಣ ಇಲ್ಲದೆ ಇರುವುದರಿಂದ ನಾನು ಸ್ಪರ್ಧಿಸಲು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ಹೇಳಿಕೆ ನೀಡಿದ್ದಾರೆ.
ಈ ಬಾರಿಯ ಚುನಾವಣೆಗೆ ಬಿಜೆಪಿ ಅಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿತ್ತು. ಆದರೆ, ಚುನಾವಣೆಗೆ ಖರ್ಚು ಮಾಡಲು ಬೇಕಾದಷ್ಟು ಹಣದ ಕೊರತೆ ಇರವುದರಿಂದ ಸ್ವತಃ ನಾನು ಅವಕಾಶವನ್ನು ತಿರಸ್ಕರಿಸಿದ್ದೇನೆ. ಚುನಾವಣೆಗೆ ಅಗತ್ಯವಿರುವಷ್ಟು ಹಣ ನನ್ನ ಬಳಿ ಇಲ್ಲ. ನನ್ನ ಸಂಪಾದನೆ, ನನ್ನ ಉಳಿತಾಯ, ನನ್ನ ಸ್ವಂತದ್ದಷ್ಟೇ ನನ್ನ ಆಸ್ತಿ. ದೇಶದ ಹಣ ನನ್ನದಾಗಲು ಸಾಧ್ಯವಿಲ್ಲ. ಹೀಗಾಗಿ ಹಣದ ಕೊರತೆಯಿಂದ ನಾನು ಸ್ಪರ್ಧಿಸುತ್ತಿಲ್ಲ ಎಂದು ಹೇಳಿದ್ದಾರೆ.
ಇದರ ಜತೆಗೆ ಯಾವ ರಾಜ್ಯದ ಯಾವ ಕ್ಷೇತ್ರ ಆಯ್ದುಕೊಳ್ಳಬೇಕೆಂಬ ಗೊಂದಲ, ಗೆಲುವಿಗಾಗಿ ಅನುಸರಿಸುವ ಕೆಲವು ಮಾನದಂಡ ಯಾವ ಧರ್ಮ, ಯಾವ ಜಾತಿ, ಯಾವ ಸಮುದಾಯ ಎಂಬುದೆಲ್ಲ ನನ್ನಿಂದ ಸಾಧ್ಯವಾಗದು ಎಂದೆನಿಸಿದೆ. ಹಾಗಾಗಿ ನಾನೇ ಈ ಪ್ರಸ್ತಾಪ ತಿರಸ್ಕರಿಸಿದ್ದೇನೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
dehali
ಸ್ಪೀಕರ್ ಹುದ್ದೆಗೆ ಚುನಾವಣೆ..! ಇತಿಹಾಸದಲ್ಲೇ ಮೊದಲು..!
ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ. ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ವಿರೋಧ ಪಕ್ಷಗಳಿಗೆ ಬಿಟ್ಟುಕೊಡಲು ಎನ್ಡಿಎ ಹಿಂದೇಟು ಹಾಕಿದ ಕಾರಣ ಈ ಪರಿಸ್ಥಿತಿ ನಿರ್ಮಾಣವಾಗಿದೆ.
ಹದಿನೆಂಟನೇ ಲೋಕಸಭೆಯಲ್ಲಿ ಹತ್ತು ವರ್ಷಗಳ ಬಳಿಕ ಇಂಡಿಯಾ ಮೈತ್ರಿಕೂಟ ಪ್ರಬಲ ವಿರೋಧ ಪಕ್ಷವಾಗಿ ಮೂಡಿಬಂದಿದೆ. ಇದೇ ಕಾರಣದಿಂದ ಮೊದಲ ಅಧಿವೇಶನ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷಗಳು ಸರ್ಕಾರದ ಪ್ರತಿಯೊಂದು ನಡೆಯನ್ನು ಪ್ರಶ್ನೆ ಮಾಡಲು ಆರಂಭಿಸಿವೆ. ಅಧಿವೇಶನದ ಆರಂಭದಲ್ಲಿ ಹಂಗಾಮಿ ಸ್ಪೀಕರ್ ಆಯ್ಕೆಯಲ್ಲಿ ಹಿರಿಯ ಕಾಂಗ್ರೆಸ್ ಸಂಸದರನ್ನು ಕಡೆಗಣಿಸಿ ಭರ್ತೃಹರಿ ಅವರನ್ನು ನೇಮಿಸಲಾಗಿತ್ತು. ಇದೀಗ 18 ನೇ ಲೋಕಸಭೆಯ ಸ್ಪೀಕರ್ ಆಗಿ ಎನ್ಡಿಎ ನಿಂದ ಓಂ ಬಿರ್ಲಾ ಅವರ ಹೆಸರು ಮತ್ತೆ ಮುಂದಿಡಲಾಗಿದೆ. ಒಮ್ಮತದ ಸ್ಪೀಕರ್ ಆಯ್ಕೆಯ ವಿಚಾರವಾಗಿ ಆಡಳಿತ ಪಕ್ಷ ಮತ್ತು ವಿರೊಧ ಪಕ್ಷದ ನಡುವೆ ನಡೆದ ಮಾತುಕತೆ ವಿಫಲವಾಗಿದೆ.
ಇದನ್ನು ಓದಿ: ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಂಸದ ಬ್ರಿಜೇಶ್ ಚೌಟ
ಓಂ ಬಿರ್ಲಾ ಅವರನ್ನು ಒಮ್ಮತದ ಆಯ್ಕೆಯಾಗಿ ಪರಿಗಣಿಸಲು ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ಕಾನೂನುಬದ್ಧವಾಗಿ ವಿರೋಧ ಪಕ್ಷಕ್ಕೆ ಬಿಟ್ಟು ಕೊಡಲು ಕಾಂಗ್ರೆಸ್ ನೇತೃತ್ವದ ಇಂಡಿ ಒಕ್ಕೂಟ ಮನವಿ ಮಾಡಿತ್ತು. ಇದೇ ವಿಚಾರವಾಗಿ ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಅವರ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ ಕೂಡ ನಡೆದಿತ್ತು. ಆದರೆ ವಿರೋಧ ಪಕ್ಷದ ಮನವಿಗೆ ಎನ್ಡಿಎನಿಂದ ಸಕಾರಾತ್ಮಕ ಉತ್ತರ ಬಾರದ ಹಿನ್ನೆಲೆಯಲ್ಲಿ ವಿರೋಧ ಪಕ್ಷದಿಂದ ಹಿರಿಯ ಕಾಂಗ್ರೆಸ್ ನಾಯಕ ಕೆ. ಸುರೇಶ್ ಅವರನ್ನು ಸ್ಪೀಕರ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿದೆ. ಹೀಗಾಗಿ ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಸುವುದು ಅನಿವಾರ್ಯವಾಗಿದೆ.
ಎನ್ಡಿಎ ಒಕ್ಕೂಟಕ್ಕೆ ಸ್ಪಷ್ಟ ಬಹುಮತ ಇರುವ ಕಾರಣ ಓ ಬಿರ್ಲಾ ಅವರು ಸ್ಪೀಕರ್ ಆಗಿ ಆಯ್ಕೆಯಾಗಲು ಯಾವುದೇ ತೊಂದರೆ ಇಲ್ಲ. ಆದ್ರೆ ಸರ್ಕಾರಕ್ಕೆ ಸಹಕರಿಸುವಂತೆ ಮನವಿ ಮಾಡಿದ್ದ ಪ್ರಧಾನಿ ಮೋದಿ ಅವರು ವಿರೋಧ ಪಕ್ಷದ ಜೊತೆ ಸರಿಯಾಗಿ ವರ್ತಿಸುತ್ತಿಲ್ಲ . ಹೀಗಾಗಿ ಅಸಹಕಾರದ ಹೆಜ್ಜೆಯನ್ನು ವಿರೋಧ ಪಕ್ಷ ಇಡಲು ಅವರೇ ಪ್ರೇರೇಪಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
dehali
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
ದೆಹಲಿ: ಕೇಂದ್ರ ಸರಕಾರ ದೇಶದಾದ್ಯಂತ ಆಧಾರ್ ಕಾರ್ಡ್ಅನ್ನು ಕಡ್ಡಾಯಗೊಳಿಸಿದೆ. ಭಾರತೀಯ ನಾಗರಿಕರನ್ನು ಗುರುತಿಸುವುದಕ್ಕಾಗಿ ಹಾಗೂ ದೇಶದ ಭದ್ರತೆ ದೃಷ್ಠಿಯಿಂದ ಆಧಾರ್ ಕಾರ್ಡ್ನ್ನು ಜಾರಿಗೊಳಿಸಿದೆ. ಹಾಗಾಗಿ ಜನರು ತಮ್ಮ ಆಧಾರ್ ಕಾರ್ಡ್ಗಳ ಅಪ್ಡೇಟ್ ಮಾಡಲು, ಹೊಸ ಆಧಾರ್ ಮಾಡಿಸಲು ಸೈಬರ್ ಸೆಂಟರ್ ಗಳು ಸರಕಾರಿ ಕಛೇರಿಗಳ ಮುಂದೆ ಮುಗಿ ಬೀಳುತ್ತಾರೆ. ಇದೀಗ ನಾಯಿಗಳಿಗೂ ಮುಂದಿನ ದಿನಗಳಲ್ಲಿ ಇಂತಹ ಪರಿಸ್ಥಿತಿ ಬಂದರೆ ಆಶ್ಚರ್ಯವಿಲ್ಲ. ಯಾಕಂದ್ರೆ ಇದೀಗ ನಾಯಿಗಳಿಗೂ ಆಧಾರ್ ಹೊಂದಿರಬೇಕು ಎನ್ನುವ ನಿಯಮ ಜಾರಿಗೆ ಬಂದಿದೆ.
ದೆಹಲಿಯಲ್ಲಿ ಆಧಾರ್ ಕಾರ್ಡ್ ಹೋಲ್ಡರ್ಗಳಾದ 100 ನಾಯಿಗಳು!
ಈಗಾಗಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಾಯಿಗಳಿಗೆ ಆಧಾರ್ ಕಾರ್ಡ್ ನೀಡಲಾಗಿದೆಯಂತೆ. ಸರ್ವೆ ಪ್ರಕಾರ ಈಗಾಗಲೇ ದೆಹಲಿಯಲ್ಲಿ 100 ನಾಯಿಗಳಿಗೆ ಆಧಾರ್ ಕಾರ್ಡ್ಅನ್ನು ನೀಡಲಾಗಿದೆ ಎಂದು ತಿಳಿದು ಬಂದಿದೆ. ಈ 100 ನಾಯಿಗಳು ದೆಹಲಿಯ ಟರ್ಮಿನಲ್ 1 ವಿಮಾನ ನಿಲ್ದಾಣ, ಇಂಡಿಯಾ ಗೇಟ್ ಮತ್ತು ಪ್ರಾಣಿ ಕಾರ್ಯಕರ್ತೆ ಮಾನವಿ ರೈ ನಡೆಸುತ್ತಿರುವ ದೆಹಲಿಯ ನಾಯಿ ಆಶ್ರಯ ಸೇರಿದಂತೆ ವಿವಿಧ ಸ್ಥಳಗಳಿಗೆ ಸೇರಿವೆ ಎನ್ನಲಾಗಿದೆ. ದಾರಿ ತಪ್ಪಿದ ನಾಯಿಗಳನ್ನು ರಕ್ಷಿಸುವ ಹಾಗೂ ಅವುಗಳನ್ನು ಸ್ಥಳಾಂತರಿಸುವ ದೃಷ್ಟಿಯಲ್ಲಿ ಎನ್ಜಿಒ ಗಳು ಈ ನಿಯಮವನ್ನು ಜಾರಿಗೆ ತಂದಿದ್ದಾರೆ.
ನಾಯಿಗೂ ಬಂತು ಸ್ಕ್ಯಾನರ್ ಒಳಗೊಂಡ ಟ್ಯಾಗ್ ಕಾರ್ಡ್:
ಏಪ್ರಿಲ್ 27ರಂದು ನಾಯಿಗಳಿಗೆ ಆಧಾರ್ ಕಾರ್ಡ್ ನೀಡುವ ಕ್ರಮಕ್ಕೆ ಚಾಲನೆ ನೀಡಿದ್ದು, ಇಂದಿನಿಂದ ಈ ಕೆಲಸ ಪ್ರಾರಂಭವಾಗಿದೆ. ಇದಕ್ಕೆ ಸಂಬಂಧಪಟ್ಟ ನಾಯಿಗಳಿಗೆ ಆಧಾರ್ ಕಾರ್ಡ್ ಟ್ಯಾಗ್ ಮಾಡಲಾಗಿದೆ. ಈ ಬಗ್ಗೆ ಪ್ರಾಣಿ ಕಾರ್ಯಕರ್ತೆ ಮಾನವಿ ರೈ ಅವರು ನಾಯಿಗಳಿಗೆ ಈ ಆಧಾರ್ ಕಾರ್ಡ್ ಜೀವಸೆಲೆ . ಇಂದು ಈ ಕ್ಯೂಆರ್ ಆಧಾರಿತ ಟ್ಯಾಗ್ ಗಳು ನಮ್ಮ ನಾಯಿಗಳಿಗೆ ವಿಶೇಷವಾಗಿ ಸಂಕಷ್ಟದ ಸಮಯದಲ್ಲಿ ಜೀವಸೆಲೆಯಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಮುಂದೆ ನೋಡಿ..; ತಮಿಳು ಚಿತ್ರರಂಗಕ್ಕೆ ಎಂಟ್ರಿಕೊಟ್ಟ ‘ಬಿಗ್ ಬಾಸ್’ ರೂಪೇಶ್ ಶೆಟ್ಟಿ
Pawfriend.in ಎಂಬ ಎನ್ಜಿಒ ಇದನ್ನು ಆವಿಷ್ಕಾರ ಮಾಡಿದ್ದು ನಾಯಿಗಳಿಗೆ ನೀಡುವ ಆಧಾರ್ ಕಾರ್ಡ್ನಲ್ಲಿ ಕ್ಯೂ ಆರ್ ಕೋಡ್ಅನ್ನು ಕೂಡಾ ಅಳವಡಿಸಿದ್ದಾರೆ. ಇದು ಮೈಕ್ರೋಚಿಪ್ಗಳನ್ನು ಒಳಗೊಂಡಿದ್ದು, ನಾಯಿಗಳು ಒಂದು ವೇಳೆ ಕಳೆದು ಹೋದಲ್ಲಿ ಈ ಟ್ಯಾಗ್ಗಳಲ್ಲಿರುವ ಕ್ಯೂಆರ್ಕೋಡ್ ಅನ್ನು ಸ್ಕ್ಯಾನ್ ಮಾಡಿದ್ರೆ ನಾಯಿಯ ಕುರಿತು ವಿವರಗಳನ್ನು ಪಡೆಯಬಹುದಾಗಿದೆ. ಇದು ನಾಯಿಯ ಯಜಮಾನನಿಗೆ ಬಹಳ ಸಹಾಯಕಾರಿಯಾಗಿದೆ.
DAKSHINA KANNADA
ಮಂಗಳೂರಿನಲ್ಲಿ ಹವಾ ಸೃಷ್ಟಿಸಿದ ಪ್ರಧಾನಿ ಮೋದಿ.. ಮುಗಿಲು ಮುಟ್ಟಿದ ಮೋದಿ ಘೋಷಣೆ
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಎ.14ರಂದು ಮಂಗಳೂರಿಗೆ ಭೇಟಿ ನೀಡಿದ್ದು, ನಗರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ರಾತ್ರಿ ಸರಿ ಸುಮಾರು 7.45 ಕ್ಕೆ ಮಂಗಳೂರು ಆಗಮಿಸಿ ಪ್ರಧಾನಿ ನಾರಾಯಣ ಗುರು ವೃತ್ತದಲ್ಲಿ ನಾರಾಯಣಗುರುಗಳ ಪ್ರತಿಮೆಗೆ ಮಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ್ದಾರೆ. ಬಳಿಕ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಉಡುಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಜೊತೆ ರೋಡ್ ಶೋ ನಡೆಸಿದ್ದಾರೆ.
ನಾರಾಯಣ ಗುರು ವೃತ್ತದಿಂದ ನವಭಾರತ್ ವೃತ್ತದ ವರೆಗೆ ಬೃಹತ್ ರೋಡ್ ಶೋ ನಡೆಸಿದ್ದಾರೆ. ಪ್ರಧಾನಿ ಮೋದಿ ಅವರ ಸಮಾವೇಶ ರದ್ದಾಗಿ ರೋಡ್ ಶೋ ನಿಗದಿಯಾಗಿದ್ದ ಹಿನ್ನಲೆಯಲ್ಲಿ ನಗರದಲ್ಲಿ ಭಾರಿ ಭದ್ರತೆ ನಡೆಸಲಾಗಿತ್ತು. ಹೀಗಾಗಿ ರೋಡ್ ಶೋ ನಡೆಯುವ ರಸ್ತೆಯಲ್ಲಿ ರಸ್ತೆಯ ಇಕ್ಕೆಲೆಯಲ್ಲೂ ಬ್ಯಾರಿಕೇಡ್ ಅಳವಡಿಸಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ರೋಡ್ ಶೋ ನಡೆದ ಲಾಲ್ಭಾಗ್ ಬಳ್ಳಾಲ್ ಭಾಗ್, ಪಿವಿಎಸ್ ಹಾಗೂ ರೋಡ್ ಶೋ ಕೊನೆಗೊಂಡ ನವಭಾರತ್ ಸರ್ಕಲ್ ವರೆಗೂ ಸಾವಿರಾರು ಜನರು ಮೋದಿಯವರಿಗಾಗಿ ಕಾದು ಕುಳಿತಿದದ್ದರು. ಮೋದಿ ಆಗಮಿಸುತ್ತಿದ್ದಂತೆ ಮೋದಿ ಘೋಷಣೆ ಮುಗಿಲು ಮುಟ್ಟಿದ್ದು ಅದು ರೋಡ್ ಶೋದ ಉದ್ದಕ್ಕೂ ಕೇಳಿಸಿ ಇಡೀ ನಗರವೇ ಮೋದಿ ಘೋಷ ಮೊಳಗಿತ್ತು. 7. 50 ಕ್ಕೆ ಆರಂಭವಾದ ರೋಡ್ ಶೋ 8. 45ಕ್ಕೆ ನವಭಾರತ್ ವೃತ್ತದಲ್ಲಿ ಅಂತ್ಯಗೊಂಡಿದೆ.
Read More..; ರೋಡ್ ಶೋ ವೇಳೆ ಕಲ್ಲು ತೂರಾಟ…! ಆಂದ್ರ ಸಿಎಂ ಹಣೆಗೆ ಗಾಯ…!
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ