Connect with us

    DAKSHINA KANNADA

    ಹೊಸ ಮನೆಗೆ ಸ್ಥಳಾಂತರಿಸುವಾಗ ಈ ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಿ

    Published

    on

    ಮಂಗಳೂರು: ಪ್ರತಿಯೊಬ್ಬರಿಗೂ ತಮ್ಮದೇ ಆದ ಸ್ವಂತ ಮನೆಯನ್ನು ಹೊಂದಿರಬೇಕು ಎನ್ನುವ ಕನಸು, ಆಸೆ ಇದ್ದೇ ಇರುತ್ತದೆ. ಮನೆ ಕಟ್ಟುವುದು ಆಗಲಿ ಅಥವಾ ಕೊಂಡುಕೊಳ್ಳುವುದಾಗಲಿ ಅದೇನು ಸುಲಭದ ಮಾತಲ್ಲ. ಬ್ಯಾಂಕ್‌ನಲ್ಲಿ, ಸ್ನೇಹಿತರಲ್ಲಿ, ಕುಟುಂಬದವರಲ್ಲಿ ಸಾಲ ಮಾಡಿ ಹೇಗೊ ಮನೆ ಖರೀದಿಸುತ್ತೇವೆ. ಆದರೆ ಕನಸಿನ ಮನೆ ವಾಸ್ತವಕ್ಕೆ ಬಂದಾಗ ಅದರಲ್ಲಿ ಆಗುವ ಖುಷಿಯೇ ಬೇರೆ.

    ಮನೆ ಬದಲು ಮಾಡುವಾಗ ಈ ವಿಷಯ ನೆನಪಿಡಿ

    ತಮ್ಮ ಹೊಸ ಮನೆಗೆ ಹೋಗುವ ಖುಷಿಯಲ್ಲಿ ಜನರು ಸಾಮಾನ್ಯವಾಗಿ ಕೆಲವು ವಿಷಯಗಳನ್ನು ಮರೆತು ಬಿಡುತ್ತಾರೆ. ಇದರಿಂದಾಗಿ ಅವರಿಗೆ ನಂತರದ ದಿನಗಳಲ್ಲಿ ಸಮಸ್ಯೆ ಆಗಬಹುದು. ನೀವು ಮನೆ ಬದಲು ಮಾಡುವಾಗ ಕೆಲವು ಪ್ರಮುಖ ವಿಷಯಗಳನ್ನು ತಿಳಿದುಕೊಳ್ಳಿ.

    ಮನೆಯ ಪ್ರತಿಯೊಂದು ಮೂಲೆಯನ್ನು ಪರಿಶೀಲಿಸಿ

    ನೀವು ಹೊಸ ಮನೆಗೆ ಸ್ಥಳಾಂತರಗೊಳ್ಳುತ್ತಿದ್ದರೆ ಮೊದಲು ನೀವು ದಿನ ಬಳಕೆಯ ವಿಷಯಗಳತ್ತ ಗಮನ ಕೊಡಬೇಕು. ಆದುದರಿಂದ ನಿಮ್ಮ ಮನೆಯ ಪ್ರತಿಯೊಂದು ನಳ್ಳಿಯಲ್ಲಿ ನೀರು ಬರುತ್ತಿದ್ದೇಯೋ, ವಾಶ್ ರೂಂ ಅನ್ನು ಚೆನ್ನಾಗಿ ಪರಿಶೀಲಿಸಿ, ಮನೆಯ ಫ್ಯಾನ್, ಲೈಟ್ ಸರಿಯಾಗಿ ಇದೆಯೋ ಎಂದು ಗಮನಿಸಿ. ಇದರಿಂದ ಹೊಸ ಮನೆಗೆ ಬಂದ ತಕ್ಷಣ ಯಾವೂದೇ ಸಮಸ್ಯೆ ಎದುರಾಗುವುದಿಲ್ಲ.

    ಶುಚಿಗೊಳಿಸುವಿಕೆಯನ್ನು ಮುಂಚಿತವಾಗಿ ಮಾಡಿ

    ಹೊಸ ಮನೆಗೆ ಸ್ಥಳಾಂತರಗೊಳ್ಳುವ ಮೊದಲು ಒಮ್ಮೆ ಸ್ವಚ್ಛಗೊಳಿಸಬೇಕು. ಏಕೆಂದರೆ ವಸ್ತುಗಳನ್ನು ಸ್ಥಳಾಂತರಿಸಿದ ನಂತರ ನಿಮಗೆ ಸ್ವಚ್ಛಗೊಳಿಸಲು ಕಷ್ಟವಾಗಬಹುದು. ಮನೆಯನ್ನು ಬದಲಾಯಿಸಿದ ನಂತರವೂ ಕೊಳಕು ಕಾಣುತ್ತದೆ. ಹೀಗಾಗಿ ಹೊಸ ಮನೆಗೆ ಬಂದ ನಂತರ ಮೊದಲ ದಿನದಿಂದಲೇ ಮನೆಯನ್ನು ಶುಚಿಯಾಗಿಡಿ.

    ಪ್ಯಾಕಿಂಗ್ ವಿಧಾನ

    ಹೊಸ ಮನೆಗೆ ಬದಲಾಯಿಸುವ ಮೊದಲು ಹಳೆಯ ವಸ್ತುಗಳನ್ನು ಪ್ಯಾಕಿಂಗ್ ಮಾಡುವುದು ದೊಡ್ಡ ಸಮಸ್ಯೆಯಾಗಿದೆ. ಆದ್ಧರಿಂದ ಸರಕುಗಳನ್ನು ಪ್ಯಾಕ್ ಮಾಡುವಾಗ ಪೆಟ್ಟಿಗೆಯಲ್ಲಿ ಹೆಸರನ್ನು ಬರೆಯಿರಿ. ಇದರಿಂದಾಗಿ ಬಾಕ್ಸ್ ತೆರೆಯುವಾಗ ಯಾವೂದೇ ಗೊಂದಲ ಉಂಟಾಗುವುದಿಲ್ಲ.

    ಪೀಠೋಪಕರಣಗಳ ಬಗ್ಗೆಯೂ ಕಾಳಜಿ ವಹಿಸಿ​

    ಸ್ಥಳಾಂತರಗೊಳ್ಳುವ ಮೊದಲು, ಮನೆಯ ಪೀಠೋಪಕರಣಗಳು ನಿಮ್ಮ ಅಗತ್ಯಗಳಿಗೆ ಸರಿಹೊಂದುತ್ತವೆಯೇ ಅಥವಾ ಇಲ್ಲವೇ ಎಂಬುದನ್ನು ಸಹ ನೀವು ಪರಿಶೀಲಿಸಬೇಕು. ನಿಮಗೆ ಸರಿಹೊಂದುವ ಸ್ಥಳದಲ್ಲಿ ಹಾಗೂ ಕೆಲವೊಂದು ವಸ್ತುಗಳನ್ನು ವಾಸ್ತು ಪ್ರಕಾರವೇ ಇಡಬೇಕಾಗುತ್ತದೆ. ಆದ್ದರಿಂದ ಅದರ ಬಗ್ಗೆ ಕಾಳಜಿ ವಹಿಸಿ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಹರೇಕಳ ಹಾಜಬ್ಬ ಶಾಲೆಯ ಕಂಪೌಂಡ್ ಕುಸಿತ..! ವಿದ್ಯಾರ್ಥಿನಿ ಸಾ*ವು..!

    Published

    on

    ಮಂಗಳೂರು : ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ನ್ಯೂಪಡ್ಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಂಪೌಂಡ್‌ ವಾಲ್ ಕುಸಿತಗೊಂಡಿದೆ. ಕುಸಿತಗೊಂಡ ವಾಲ್‌ ಅಡಿಗೆ ಸಿಲುಕಿದ 3 ನೇ ತರಗತಿ ವಿದ್ಯಾರ್ಥಿನಿ ಅಸುನೀಗಿದ್ದಾಳೆ. ಹರೇಕಳ ಗ್ರಾ.ಪಂ ವ್ಯಾಪ್ತಿಯ ನ್ಯೂಪಡ್ಪುವಿನಲ್ಲಿ ಮೇ 20ರ ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಂಜೆ ವೇಳೆ ಸುರಿದ ಧಾರಕಾರ ಮಳೆಯಿಂದಾಗಿ ದುರ್ಘಟನೆ ಸಂಭವಿಸಿದೆ.


    ನ್ಯೂಪಡ್ಪು ನಿವಾಸಿ ಸಿದ್ದೀಖ್ – ಜಮೀಲಾ ದಂಪತಿ ಪುತ್ರಿ ಶಾಝಿಯಾ ಬಾನು (7) ಮೃತ ಬಾಲಕಿ. ಹರೇಕಳ ಹಾಜಬ್ಬರ ಶಾಲೆಯಲ್ಲಿ ಕಳೆದ ಎರಡು ದಿನಗಳಿಂದ ಮುಡಿಪು ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಶಿಬಿರ ನಡೆಯುತ್ತಿದೆ. ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳು ಇದ್ದ ಹಿನ್ನೆಲೆಯಲ್ಲಿ ಶಾಲೆಯ ಸಮೀಪದಲ್ಲೇ ಇರುವ ವಿದ್ಯಾರ್ಥಿನಿ ಶಾಝಿಯಾ ಭಾನು ಭಾಗವಹಿಸಿದ್ದಳು.

    ಸಂಜೆ ವೇಳೆ ಮನೆಗೆ ಹಿಂತಿರುಗುವ ಸಂದರ್ಭ ಶಾಲಾ ಕಂಪೌಂಡ್ ಗೇಟಿನಲ್ಲಿ ಆಟವಾಡುವ ಸಂದರ್ಭ ಕಂಪೌಂಡ್ ಬಾಲಕಿ ಶಾಝಿಯಾ ಮೇಲೆ ಕುಸಿದುಬಿದ್ದಿದೆ. ತಕ್ಷಣ ಸ್ಥಳೀಯರು ರಕ್ಷಣೆಗೆ ಧಾವಿಸಿದರೂ, ಬಾಲಕಿ ಪ್ರಾಣಪಕ್ಷಿ ಹಾರಿಹೋಗಿತ್ತು. ಬೆಳಿಗ್ಗೆಯಿಂದ ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ ಆಗಾಗ್ಗ ಮಳೆಯಾಗುತ್ತಿದ್ದು, ಇದರಿಂದಾಗಿ ಕಂಪೌಂಡ್ ಶಿಥಿಲಗೊಂಡು ಬಿದ್ದಿದೆ. ಘಟನಾ ಸ್ಥಳಕ್ಕೆ ಹರೇಕಳ ಗ್ರಾ.ಪಂ ಅಧಿಕಾರಿಗಳು, ಕೊಣಾಜೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Continue Reading

    DAKSHINA KANNADA

    ಪಡೀಲ್‌ ಕಣ್ಣೂರು ಬಳಿ ಭೀಕರ ವಾಹನ ಅಪಘಾ*ತ; ಕೇಬಲ್ ಟೆಕ್ನಿಷಿಯನ್ ವಿಧಿವ*ಶ

    Published

    on

    ಮಂಗಳೂರು : ಪಡೀಲ್‌ ಕಣ್ಣೂರು ಬಳಿ ನಡೆದ ರಸ್ತೆ ಅಪಘಾ*ತದಲ್ಲಿ ನಮ್ಮ ಕುಡ್ಲ ವಾಹಿನಿಯ ಸಹಸಂಸ್ಥೆ ವಿಝಾರ್ಡ್‌ ಕೇಬಲ್‌ ನೆಟ್ ವರ್ಕ್‌ನ ಸಿಬಂದಿ ಹರೀಶ್ (45) ವಿಧಿವ*ಶರಾಗಿದ್ದಾರೆ. ಕರ್ತವ್ಯ ನಿಮಿತ್ತ ಫರಂಗಿಪೇಟೆಗೆ ತೆರಳಿದ್ದ ಹರೀಶ್ ಪಡೀಲ್‌ ಕಣ್ಣೂರು ಬಳಿ ಬೈಕ್ ನಿಲ್ಲಿಸಿದ್ದ ವೇಳೆ ವೇಗವಾಗಿ ಬಂದ ಡಸ್ಟರ್‌ ಕಾರೊಂದು ಬೈಕ್‌ಗೆ ಡಿ*ಕ್ಕಿ ಹೊಡೆದಿದೆ.


    ಮಹಿಳೆಯೊಬ್ಬರು ಕಾರು ಚಲಾಯಿಸುತ್ತಿದ್ದು, ಬೈಕ್‌ಗೆ ಡಿ*ಕ್ಕಿ ಹೊಡೆದ ಬಳಿಕ ಅಲ್ಪ ದೂರ ಚಲಿಸಿದ ಕಾರಣ ಬೈಕ್ ಸಹಿತ ಹರೀಶ್ ಕಾರಿನ ಅಡಿಗೆ ಸಿಲುಕಿಕೊಂಡಿದ್ದರು. ಈ ಭೀಕರ ಅಪಘಾ*ತದಲ್ಲಿ ಗಂಭೀರ ಗಾಯಗೊಂಡಿದ್ದ ಹರೀಶ್ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

    ಹರೀಶ್ ಕಲ್ಲಾಪು ಅವರು ಹಲವಾರು ವರ್ಷಗಳಿಂದ ವಿಝಾರ್ಡ್‌ ಕೆಬಲ್ ನೆಟ್‌ವರ್ಕ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    ಇದನ್ನೂ ಓದಿ : ಕಾರ್ಕಳ : ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿ*ಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾ*ವು

    ಅಗಲಿದ ಸಿಬ್ಬಂದಿಗೆ ನಮ್ಮ ಕುಡ್ಲ ವಾಹಿನಿಯ ನಿರ್ದೇಶಕರು ಹಾಗೂ ಸಿಬಂದಿ ಸಂತಾಪ ಸೂಚಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಮೃ*ತ ಹರೀಶ್‌ ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

    Continue Reading

    DAKSHINA KANNADA

    ಕದ್ದ ಫೋನ್ ಸ್ವಿಚ್ ಆಫ್ ಆಗಿದ್ರೂ ಸುಲಭದಲ್ಲಿ ಕಂಡುಹಿಡಿಯಬಹುದು.. ಹೇಗೆ ಗೊತ್ತಾ?

    Published

    on

    ಮಂಗಳೂರು: ನಿಮ್ಮ ಸ್ಮಾರ್ಟ್‌ಫೋನ್ ಕದ್ದರೆ ಮತ್ತು ಕಳ್ಳರು ಆ ಫೋನನ್ನು ಸ್ವಿಚ್ ಆಫ್ ಮಾಡಿದರೆ ಅದನ್ನು ಹುಡುಕುವುದು ದೊಡ್ಡ ಕಷ್ಟ. ಆದರೆ ಮುಂಬರುವ ಗೂಗಲ್‌ನ ನವೀಕರಣ, ಆಂಡ್ರಾಯ್ಡ್ ಬಳಕೆದಾರರ ಫೋನ್ ಸ್ವಿಚ್ ಆಫ್ ಆಗಿದ್ದರೂ ಅವರ ಸ್ಮಾರ್ಟ್‌ಫೋನ್ ನಿಖರವಾದ ಸ್ಥಳವನ್ನು ಸುಲಭವಾಗಿ ಹುಡುಕಲು ಸಾಧ್ಯವಾಗುತ್ತದೆ.

    ಗೂಗಲ್ ಶೀಘ್ರದಲ್ಲೇ ತನ್ನ ಆಂಡ್ರಾಯ್ಡ್ 15 ಅಪ್ಡೇಟ್ ಅನ್ನು ತರಲಿದೆ. ಇದನ್ನು ಇನ್​ಸ್ಟಾಲ್ ಮಾಡಿದ ನಂತರ ಆಂಡ್ರಾಯ್ಡ್ ಬಳಕೆದಾರರು ಸ್ವಿಚ್ ಆಫ್ ಮಾಡಿದ ನಂತರವೂ ತಮ್ಮ ಫೋನ್ ಅನ್ನು ಸುಲಭವಾಗಿ ಹುಡುಕಲು ಸಾಧ್ಯವಾಗುತ್ತದೆ. ಇಲ್ಲಿಯವರೆಗೆ ಈ ವೈಶಿಷ್ಟ್ಯವು ಆಂಡ್ರಾಯ್ಡ್ ಫೋನ್‌ಗಳಲ್ಲಿ ಲಭ್ಯವಿರಲಿಲ್ಲ.

    ಗೂಗಲ್ ಕಂಪನಿಯು ಆಂಡ್ರಾಯ್ಡ್ 15 ಸಿಸ್ಟಮ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದು ಗೂಗಲ್‌ನ ಮುಂಬರುವ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ಆಗಿದೆ. ಆಂಡ್ರಾಯ್ಡ್ 15 ಓಎಸ್‌ನಲ್ಲಿ ಸ್ಮಾರ್ಟ್‌ಫೋನ್ ಬಳಕೆದಾರರಿಗೆ ಗೂಗಲ್ ಉತ್ತಮ ವೈಶಿಷ್ಟ್ಯವನ್ನು ನೀಡಲಿದೆ. ಇದರಲ್ಲಿ ಬಳಕೆದಾರರಿಗೆ ಫೋನ್ ಸ್ವಿಚ್ ಆಫ್ ಆಗಿದ್ದರೂ ಅದನ್ನು ಪತ್ತೆ ಮಾಡುವ ಆಯ್ಕೆ ಕೂಡ ಒಂದು.

    ಗೂಗಲ್​ನ ಮುಂಬರುವ OS ಆಂಡ್ರಾಯ್ಡ್ 15 ನಲ್ಲಿ ಪಾಸ್‌ವರ್ಡ್ ಮೂಲಕ ಹುಡುಕುವ ವೈಶಿಷ್ಟ್ಯವು ಲಭ್ಯವಿರುತ್ತದೆ. ಈ ಹೊಸ ವ್ಯವಸ್ಥೆಯು ಪೂರ್ವ ಕಂಪ್ಯೂಟೆಡ್ ಬ್ಲೂಟೂತ್ ಬೀಕನ್ ಆಗಿರುತ್ತದೆ. ಇದು ಸಾಧನದ ಮೆಮೊರಿಯಿಂದ ನಿಯಂತ್ರಿಸಲ್ಪಡುತ್ತದಂತೆ. ಇದಕ್ಕಾಗಿ ಫೋನ್​ನ ಹಾರ್ಡ್‌ವೇರ್‌ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ.

    ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಆಂಡ್ರಾಯ್ಡ್ ತಜ್ಞ ಮಿಶಾಲ್ ರೆಹಮಾನ್ ಈ ಬಗ್ಗೆ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಪಿಕ್ಸೆಲ್ 8 ಮತ್ತು ಪಿಕ್ಸೆಲ್ 8 ಪ್ರೊ ಜೊತೆಗೆ ಗೂಗಲ್‌ನ ಮುಂಬರುವ ಸ್ಮಾರ್ಟ್‌ಫೋನ್‌ಗಳಲ್ಲಿ ಈ ವೈಶಿಷ್ಟ್ಯವನ್ನು ಒದಗಿಸಲಾಗುವುದು ಎಂದು ಅವರು ಹೇಳಿದ್ದಾರೆ. ಪ್ರಸ್ತುತ ಆಂಡ್ರಾಯ್ಡ್ 15 ಓಎಸ್ ಬಿಡುಗಡೆಗೆ ಯಾವುದೇ ನಿಖರವಾದ ದಿನಾಂಕವನ್ನು ಗೂಗಲ್ ಬಹಿರಂಗಪಡಿಸಿಲ್ಲ.

    Continue Reading

    LATEST NEWS

    Trending