LATEST NEWS
ಊಟಿಗೆ ಪ್ರಯಾಣ ಬೆಳೆಸೋ ಯೋಚನೆಯಲ್ಲಿದ್ದೀರಾ? ಹಾಗಾದ್ರೆ ಈ ಆದೇಶ ಪಾಲಿಸೋದು ಕಡ್ಡಾಯ!
ಮಂಗಳೂರು / ಚೆನ್ನೈ : ಮಕ್ಕಳಿಗೆ ರಜೆ ಇದೆ ಈ ಬೇಸಿಗೆ ರಜೆಗೆ ಎಲ್ಲಾದರೂ ಸುತ್ತಾಡೋಣ ಅನ್ನೋ ಯೋಚನೆ ಬರುವುದು ಸಾಮಾನ್ಯ. ಬಿಸಿಲಿನ ತಾಪದಿಂದ ತಂಪಾಗಲು ಊಟಿ, ಕೊಡೈಕನಾಲ್ ನತ್ತ ಪಯಣ ಬೆಳೆಸೋ ಯೋಚನೆಯಲ್ಲಿದ್ದೀರಾ? ಹಾಗಾದರೆ ಅಲ್ಲಿಗೆ ಭೇಟಿ ನೀಡಲು ಹೊಸ ನಿಯಮ ಜಾರಿ ಆಗಿದೆ.
ಹೌದು, ಜಿಲ್ಲಾಡಳಿತ ಹೊಸ ಕ್ರಮ ಕೈಗೊಂಡಿದೆ. ಇಲ್ಲಿಗೆ ಭೇಟಿ ನೀಡಲು ಇ – ಪಾಸ್ ಕಡ್ಡಾಯ ಎಂದು ಆದೇಶಿಸಿದೆ. ಪ್ರಸ್ತುತ ಇರುವ ವಿವಿಧ ವಾಹನಗಳು ಮತ್ತು ಬೇಸಿಗೆಯ ತಿಂಗಳುಗಳಲ್ಲಿ ಈ ಗಿರಿಧಾಮಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಗೆ ಸಂಬಂಧಿಸಿದಂತೆ ಡೇಟಾ ಸಂಗ್ರಹಿಸಲು ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.
ಹೈಕೋರ್ಟ್ ಆದೇಶ :
ಮೇ 7 ಮತ್ತು ಜೂನ್ 30 ರ ನಡುವೆ ನೀಲಗಿರಿ ಮತ್ತು ಕೊಡೈಕೆನಾಲ್ಗೆ ಪ್ರವೇಶಿಸಲು ಬಯಸುವ ಎಲ್ಲಾ ಮೋಟಾರು ವಾಹನಗಳು ಎಲೆಕ್ಟ್ರಾನಿಕ್ ಪಾಸ್ಗಳನ್ನು (ಇ-ಪಾಸ್ಗಳು) ಪಡೆಯಬೇಕು. ಎರಡು ಗಿರಿಧಾಮಗಳಿಗೆ ಪ್ರವೇಶಿಸುವ ವಾಹನಗಳ ಸಂಖ್ಯೆ ಸೇರಿ ಎಲ್ಲಾ ಡೇಟಾವನ್ನು ಸಂಗ್ರಹ ಮಾಡಲು ಮದ್ರಾಸ್ ಹೈಕೋರ್ಟ್ ಆದೇಶ ಹೊರಡಿಸಿದೆ.
ಮೇ 7 ರಿಂದ ಜೂನ್ 30 ರವರೆಗೆ ಊಟಿ ಮತ್ತು ಕೊಡೈಕೆನಾಲ್ಗೆ ಭೇಟಿ ನೀಡುವ ಪ್ರವಾಸಿಗರು ಕಡ್ಡಾಯವಾಗಿ ಇ-ಪಾಸ್ ಪಡೆಯಬೇಕು ಎಂದು ನ್ಯಾಯಮೂರ್ತಿಗಳಾದ ಎನ್.ಸತೀಶ್ ಕುಮಾರ್ ಮತ್ತು ಡಿ.ಭರತ ಚಕ್ರವರ್ತಿ ಅವರನ್ನೊಳಗೊಂಡ ವಿಶೇಷ ವಿಭಾಗೀಯ ಪೀಠ ಆದೇಶಿಸಿದೆ.
ಇದರ ಜೊತೆಗೆ ವಿಶೇಷ ವಿಭಾಗೀಯ ಪೀಠವು ನೀಲಗಿರಿ ಮತ್ತು ದಿಂಡುಗಲ್ ಕಲೆಕ್ಟರೇಟ್ಗಳಿಂದ ಇ-ಪಾಸ್ಗಳ ವಿತರಣೆಗೆ ಯಾವುದೇ ಮಿತಿಯಿಲ್ಲ ಎಂದು ಹೇಳಿದೆ. ಅಲ್ಲದೇ, ಈ ಪಾಸ್ಗಳನ್ನು ಪಡೆದುಕೊಳ್ಳುವುದರಿಂದ ಸ್ಥಳೀಯ ನಿವಾಸಿಗಳಿಗೆ ವಿನಾಯಿತಿ ನೀಡಲಾಗಿದೆ. ಇ-ಪಾಸ್ ವ್ಯವಸ್ಥೆಯನ್ನು ವ್ಯಾಪಕವಾಗಿ ಪ್ರಚಾರ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಇಬ್ಬರು ಜಿಲ್ಲಾಧಿಕಾರಿಗಳು ಮಾಹಿತಿ ತಂತ್ರಜ್ಞಾನ ಇಲಾಖೆಯ ಜೊತೆಗೆ ಇ-ಪಾಸ್ ವ್ಯವಸ್ಥೆಯಲ್ಲಿ ಪಾವತಿ ಗೇಟ್ವೇ ಅನ್ನು ತರುವ ಬಗ್ಗೆ ಚರ್ಚೆ ಮಾಡಲು ನ್ಯಾಯಾಧೀಶರು ತಿಳಿಸಿದ್ದಾರೆ.
ಇದನ್ನೂ ಓದು : ನೇ*ಣಿಗೆ ಶರಣಾದ ಯುವ ನಟಿ..! ಸಾ*ವಿಗೂ ಮುನ್ನ ವ್ಯಾಟ್ಸಾಪ್ ಸ್ಟೇಟಸ್ನಲ್ಲಿ ಬರೆದಿದ್ದೇನು..!
ಯಾಕೆ ಈ ನಿರ್ಧಾರ ?
ಇದು ಅರ್ಜಿದಾರರಿಗೆ ಆನ್ಲೈನ್ನಲ್ಲಿ ಟೋಲ್ ಶುಲ್ಕವನ್ನು ಪಾವತಿಸಲು, ಚೆಕ್ಪೋಸ್ಟ್ಗಳ ಬಳಿ ದಟ್ಟಣೆಯನ್ನು ಕಡಿಮೆ ಮಾಡಲು, ಇಂಧನವನ್ನು ಉಳಿಸಲು ಮತ್ತು ಇಂಗಾಲದ ಹೊರಸೂಸುವಿಕೆಯನ್ನು ತಡೆಯಲು ಅನುವು ಮಾಡಿಕೊಡುತ್ತದೆ. ಈ ಹಿಂದೆ, ಪ್ರವಾಸಿಗರ ಸಂಖ್ಯೆಗೆ ಕಡಿವಾಣ ಹಾಕುವ ಹೈಕೋರ್ಟ್ನ ಚಿಂತನೆಗೆ ಪ್ರತಿಕ್ರಿಯೆಯಾಗಿ ನೀಲಗಿರಿ ಮತ್ತು ದಿಂಡುಗಲ್ ಜಿಲ್ಲಾಧಿಕಾರಿಗಳು ವಾಹನ ಸಂಚಾರವನ್ನು ನಿರ್ಬಂಧಿಸಲು ಪ್ರಸ್ತಾಪಿಸಿದರು. ಪೀಕ್ ಸೀಸನ್ಗಳಲ್ಲಿ, ವಾಹನಗಳ ಒಳಹರಿವು ದಿನಕ್ಕೆ 2,000 ರಿಂದ 20,000 ಕ್ಕೆ ಏರುತ್ತದೆ, ಇದು ದಟ್ಟಣೆ ಮತ್ತು ಪರಿಸರ ಹಾನಿಗೆ ಕಾರಣವಾಗುತ್ತದೆ.
ಈ ವಿಷಯವನ್ನು ಅಂಗೀಕರಿಸಿದ ನ್ಯಾಯಮೂರ್ತಿಗಳ ವಿಶೇಷ ವಿಭಾಗೀಯ ಪೀಠವು ಈ ವಿಷಯದ ಬಗ್ಗೆ ಚರ್ಚಿಸಿತು. ಘಾಟ್ ರಸ್ತೆಗಳ ಮೇಲಿನ ಒತ್ತಡ ಮತ್ತು ಬೇಸಿಗೆಯಲ್ಲಿ ಅತಿಯಾದ ಪ್ರವಾಸಿ ಚಟುವಟಿಕೆಯಿಂದ ಉಂಟಾಗುವ ಪರಿಸರ ನಾಶವನ್ನು ವಕೀಲರು ಎತ್ತಿ ತೋರಿಸಿದ್ದರು.
ಒಂಭತ್ತು ಚೆಕ್ ಪೋಸ್ಟ್ಗಳ ಮೂಲಕ ಪ್ರತಿದಿನ ಸರಿಸುಮಾರು 20 ಸಾವಿರ ವಾಹನಗಳು ಅಂದರೆ 11,500 ಕಾರುಗಳು, 1,300 ವ್ಯಾನ್ಗಳು, 600 ಬಸ್ಗಳು ಮತ್ತು 6,500 ಬೈಕುಗಳು ನೀಲಗಿರಿ ಪ್ರವೇಶಿಸುತ್ತವೆ ಎಂದು ರಾಜ್ಯ ಸರ್ಕಾರ ವರದಿ ಸಲ್ಲಿಸಿದೆ.
DAKSHINA KANNADA
ಹರೇಕಳ ಹಾಜಬ್ಬ ಶಾಲೆಯ ಕಂಪೌಂಡ್ ಕುಸಿತ..! ವಿದ್ಯಾರ್ಥಿನಿ ಸಾ*ವು..!
ಮಂಗಳೂರು : ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ನ್ಯೂಪಡ್ಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಂಪೌಂಡ್ ವಾಲ್ ಕುಸಿತಗೊಂಡಿದೆ. ಕುಸಿತಗೊಂಡ ವಾಲ್ ಅಡಿಗೆ ಸಿಲುಕಿದ 3 ನೇ ತರಗತಿ ವಿದ್ಯಾರ್ಥಿನಿ ಅಸುನೀಗಿದ್ದಾಳೆ. ಹರೇಕಳ ಗ್ರಾ.ಪಂ ವ್ಯಾಪ್ತಿಯ ನ್ಯೂಪಡ್ಪುವಿನಲ್ಲಿ ಮೇ 20ರ ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಂಜೆ ವೇಳೆ ಸುರಿದ ಧಾರಕಾರ ಮಳೆಯಿಂದಾಗಿ ದುರ್ಘಟನೆ ಸಂಭವಿಸಿದೆ.
ನ್ಯೂಪಡ್ಪು ನಿವಾಸಿ ಸಿದ್ದೀಖ್ – ಜಮೀಲಾ ದಂಪತಿ ಪುತ್ರಿ ಶಾಝಿಯಾ ಬಾನು (7) ಮೃತ ಬಾಲಕಿ. ಹರೇಕಳ ಹಾಜಬ್ಬರ ಶಾಲೆಯಲ್ಲಿ ಕಳೆದ ಎರಡು ದಿನಗಳಿಂದ ಮುಡಿಪು ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಶಿಬಿರ ನಡೆಯುತ್ತಿದೆ. ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳು ಇದ್ದ ಹಿನ್ನೆಲೆಯಲ್ಲಿ ಶಾಲೆಯ ಸಮೀಪದಲ್ಲೇ ಇರುವ ವಿದ್ಯಾರ್ಥಿನಿ ಶಾಝಿಯಾ ಭಾನು ಭಾಗವಹಿಸಿದ್ದಳು.
ಸಂಜೆ ವೇಳೆ ಮನೆಗೆ ಹಿಂತಿರುಗುವ ಸಂದರ್ಭ ಶಾಲಾ ಕಂಪೌಂಡ್ ಗೇಟಿನಲ್ಲಿ ಆಟವಾಡುವ ಸಂದರ್ಭ ಕಂಪೌಂಡ್ ಬಾಲಕಿ ಶಾಝಿಯಾ ಮೇಲೆ ಕುಸಿದುಬಿದ್ದಿದೆ. ತಕ್ಷಣ ಸ್ಥಳೀಯರು ರಕ್ಷಣೆಗೆ ಧಾವಿಸಿದರೂ, ಬಾಲಕಿ ಪ್ರಾಣಪಕ್ಷಿ ಹಾರಿಹೋಗಿತ್ತು. ಬೆಳಿಗ್ಗೆಯಿಂದ ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ ಆಗಾಗ್ಗ ಮಳೆಯಾಗುತ್ತಿದ್ದು, ಇದರಿಂದಾಗಿ ಕಂಪೌಂಡ್ ಶಿಥಿಲಗೊಂಡು ಬಿದ್ದಿದೆ. ಘಟನಾ ಸ್ಥಳಕ್ಕೆ ಹರೇಕಳ ಗ್ರಾ.ಪಂ ಅಧಿಕಾರಿಗಳು, ಕೊಣಾಜೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
LATEST NEWS
ಗುಜರಾತ್ ಎಟಿಎಸ್ನಿಂದ ನಾಲ್ವರು ಐಸಿಸ್ ಉಗ್ರರ ಸೆರೆ..!
ಮಂಗಳೂರು ( ಗುಜರಾತ್) : ಗುಜಾರಾತ್ನಲ್ಲಿ ನಾಲ್ವರು ಐಸಿಸ್ ಉಗ್ರರನ್ನು ಗುಜರಾತ್ ಎಟಿಸಿ ಅಧಿಕಾರಿಗಳು ಬಂಧಿಸಿದ್ದಾರೆ. ಅಹಮ್ಮದಾ ಬಾದ್ ವಿಮಾನ ನಿಲ್ದಾಣದಲ್ಲಿ ಈ ನಾಲ್ವರು ಉಗ್ರರನ್ನು ಎಟಿಎಸ್ ಅಧಿಕಾರಿಗಳು ಬಂಧಿಸಿದ್ದಾರೆ. ಚೆನೈ ಮೂಲಕ ಅಹಮ್ಮದಾಬಾದ್ ತಲುಪಿದ್ದ ಈ ನಾಲ್ವರೂ ಮೂಲತಃ ಶ್ರೀಲಂಕದವರು ಎಂದು ಮಾಹಿತಿ ಲಭ್ಯವಾಗಿದೆ.
ಎರಡು ವಾರಗಳ ಹಿಂದೆ ಅಹ್ಮದಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಸ್ಫೋಟದ ಈ ಮೇಲ್ ಸಂದೇಶ ಬಂದಿತ್ತು. ಈ ವಿಚಾರವಾಗಿ ಎಟಿಎಸ್ ಅದಿಕಾರಿಗಳು ಹಲವು ಆಯಾಮಗಳಲ್ಲಿ ತನಿಕೆಯನ್ನು ನಡೆಸಿದ್ದರು. ಈ ತನಿಕೆಯ ಮುಂದುವರೆದ ಭಾಗವಾಗಿ ಈ ನಾಲ್ವರು ಐಸಿಸ್ ಉಗ್ರರರನ್ನು ಬಂಧಿಸಲಾಗಿದೆ. ಬಂದಿತರು ದೇಶದಲ್ಲಿ ವಿದ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಎಟಿಎಸ್ಗೆ ಲಭ್ಯವಾಗಿದೆ. ಅಲ್ಲದೆ ಇವರಿಗೆ ಪಾಕಿಸ್ತಾನದ ಉಗ್ರ ಸಂಘಟನೆಗಳ ಜೊತೆ ನಂಟು ಇದೆ ಅನ್ನೋ ಅಂಶ ಕೂಡಾ ಬೆಳಕಿಗೆ ಬಂದಿದೆ. ಆರೋಪಿಗಳ ಮೊಬೈಲ್ ಪರಿಶೀಲನೆ ನಡೆಸಿದ ವೇಳೆ ಈ ವಿಚಾರ ಗೊತ್ತಾಗಿದೆ ಎಂದು ಎಟಿಎಸ್ ಮೂಲಗಳು ಬಹಿರಂಗಪಡಿಸಿದೆ.
FILM
ಐಶ್ವರ್ಯಾ ರೈ ಜೊತೆಗೂಡಿ ಬಿಗ್ ಬಿ ಫ್ಯಾಮಿಲಿ ಮತದಾನ…!
ಮಂಗಳೂರು ( ಮಹಾರಾಷ್ಟ್ರ ) : ಚುನಾವಣೆಯಲ್ಲಿ ಮತ ಚಲಾಯಿಸಿರುವ ಐಶ್ವರ್ಯಾ ರೈ ಬಚ್ಚನ್ ಕುಟುಂಬದ ಜೊತೆ ಮತಕೇಂದ್ರಕ್ಕೆ ಆಗಮಿಸಿದ್ದಾರೆ. ಅಮಿತಾಬಚ್ಚನ್, ಜಯಾಬಚ್ಚನ್ ಜೊತೆಯಲ್ಲಿ ಒಂದೇ ಕಾರಿನಲ್ಲಿ ಮತಗಟ್ಟೆಗೆ ಆಗಮಿಸಿದ್ದಾರೆ. ಈ ಮೂಲಕ ಹಲವು ಸಮಯದಿಂದ ಐಶ್ವರ್ಯಾ ರೈ ಬಚ್ಚನ್ ಹಾಗೂ ಅಭಿಶೇಕ್ ಬಚ್ಚನ್ ದಾಂಪತ್ಯ ವಿಚಾರವಾಗಿ ಇದ್ದ ಗಾಸಿಪ್ಗೆ ತೆರೆ ಎಳೆದಿದ್ದಾರೆ.
ಐದನೇ ಹಂತದ ಮತದಾನದಲ್ಲಿ ಅನೇಖ ಸೆಲಬ್ರಿಟಿಗಳು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ವಿಶೇಷವಾಗಿ ಮಹಾರಾಷ್ಟ್ರದಲ್ಲಿ ಮತದಾನವಾಗಿದ್ದು, ಬಾಲಿವುಡ್ ನಟ ನಟಿಯರು ಮತದನಾ ಕೇಂದ್ರಕ್ಕೆ ಆಗಮಿಸಿ ಮತ ಚಲಾಯಿಸಿದ್ದಾರೆ. ನಟ ಅಕ್ಷಯ್ ಕುಮಾರ್ ಬೆಳಗ್ಗೆ 7 ಗಂಟೆಗೆ ಮತದಾನ ಕೇಂದ್ರಕ್ಕೆ ಹಾಜರಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಭಾರತೀಯ ಪೌರತ್ವ ಪಡೆದ ನಂತರ ಅಕ್ಷಯ್ ಕುಮಾರ್ ಮೊದಲ ಬಾರಿಗೆ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ.
ಪಿಂಕ್ ಡ್ರೆಸ್ನಲ್ಲಿ ಆಗಮಿಸಿದ ಜಾನ್ವಿ ಸರತಿ ಸಾಲಿನಲ್ಲಿ ನಿಲ್ಲದೆ ನೇರವಾಗಿ ತೆರಳಿ ಮತಯಾಚನೆ ಮಾಡಿದರು. ಮತದಾನ ಕೇಂದ್ರದಲ್ಲಿ ಜಾನ್ವಿ ಕಪೂರ್ ಅವರನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದರು. ವಿಶೇಷ ಮಹಿಳಾ ಪೊಲೀಸರು ನಟಿ ಜಾನ್ವಿಗೆ ಭದ್ರತೆ ಒದಗಿಸಿದರು.
ಅದೇ ರೀತಿ ಶಾರುಖ್ ಖಾನ್ ಅವರು ತಮ್ಮ ಕುಟುಂಬದೊಂದಿಗೆ ಮತದಾನ ಮಾಡುತ್ತಿರುವುದು ಕಂಡುಬಂದಿದೆ. ಹೀಗೆ ಹೃತಿಕ್ ರೋಷನ್, ರಾಕೇಶ್ ರೋಷನ್, ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಮತದಾನ ಮಾಡಿದರು. ಇನ್ನು ವರುಣ್ ಧವನ್ ಜೊತೆಗೆ ತಂದೆ ಡೇವಿಡ್ ಧವನ್, ಧರ್ಮೇಂದ್ರ, ಆಶಾ ಭೋಂಸ್ಲೆ ಮತ್ತು ಇತರರು ಬೂತ್ನಲ್ಲಿ ಮತದಾನ ಮಾಡಿದರು.
- DAKSHINA KANNADA1 day ago
ವೈರಲ್ ಆಯ್ತು ಮೆಟರ್ನಿಟಿ ಶೂಟ್..! ಮೆಚ್ಚುಗೆ ಪಡೆದ ಫೋಟೋಗ್ರಾಫರ್..!
- LATEST NEWS3 days ago
ಕೊನೆಗೂ ಮೌನ ಮುರಿದ ಎಚ್ಡಿ ದೇವೇಗೌಡ..! ಪ್ರಜ್ವಲ್ ಬಗ್ಗೆ ಹೇಳಿದ್ದೇನು?
- LATEST NEWS13 hours ago
ಮಲತಾಯಿಯ ಕ್ರೌರ್ಯಕ್ಕೆ ಮೂರು ವರ್ಷದ ಮಗು ಬ*ಲಿ
- LATEST NEWS6 days ago
ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಮತ್ತೆ ಚಿನ್ನದ ಬೆಲೆಯಲ್ಲಿ ಇಳಿಕೆ