LATEST NEWS
ಈ ಬಸ್ಸಿನಲ್ಲಿ ಎಲ್ಲವೂ ಇದೆ…ಆದರೆ ಪ್ರಯಾಣಿಕರಿಲ್ಲ….!!! ಯಾಕೆ ಗೊತ್ತಾ..?
ಈ ಬಸ್ಸಿನಲ್ಲಿ ಎಲ್ಲವೂ ಇದೆ…ಆದರೆ ಪ್ರಯಾಣಿಕರಿಲ್ಲ….!!! ಯಾಕೆ ಗೊತ್ತಾ..?
ವರದಿ : ಪ್ರಮೋದ್ ಸುವರ್ಣ ಕಟಪಾಡಿ..
ಉಡುಪಿ : ಕರಾವಳಿಯ ಗ್ರಾಮೀಣ ರಸ್ತೆಗಳಲ್ಲೂ ಕೆಎಸ್ ಆರ್ ಟಿಸಿ ಐರಾವತ ಬಸ್ ಗಳು ಓಡಾಡುತ್ತೆ. ಈ ಲಕ್ಸುರಿ ಬಸ್ ಗಳ ನೋಡೋಕೆ ಜನ ಮುಗಿಬೀಳ್ತಾರೆ. ಅರೇ.. ಇದೇನಪ್ಪಾ.. ಗ್ರಾಮೀಣ ಭಾಗದಲ್ಲಿ ಅದೂ ಕೂಡ ಐರಾವತ ಸಂಚಾರ ಎಂದು ಆಶ್ಚರ್ಯಪಡುತ್ತಿದ್ದೀರಾ ?
ಕಲಾವಿದರ ಕೈ ಚಳಕವೇ ಹಾಗೇ..ಶೂನ್ಯದಲ್ಲೇ ಅದ್ಭುತ ಕಲಾಕೃತಿ ಬಿಡಿಸುವ ಕಲೆಗಾರಿಕೆ ಒರ್ವ ನೈಜ ಕಲಾವಿದನಿಗಿದೆ.
ಇಂತಹ ಒರ್ವ ಅಪರೂಪದ ಕಲಾವಿದ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿದ್ದಾರೆ. ಅವರೇ ಪ್ರಶಾಂತ್ ಆಚಾರ್. ಕುಂದಾಪುರದ ಹೆಮ್ಮಾಡಿ ಸಮೀಪದ ಡೈರಿ ಸರ್ಕಲ್ನ ಈ ಪ್ರಶಾಂತ್ ವಿಶೇಷ ಕಲಾಕೃತಿಯನ್ನು ನಿರ್ಮಿಸಿ ಸುದ್ದಿಯಲ್ಲಿದ್ದಾರೆ. ಪ್ರಶಾಂತ್ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಬಸ್ಸುನ್ನು ವಿಶಿಷ್ಟವಾಗಿ ಚಿತ್ರಿಸಿದ್ದಾರೆ.
ಕರ್ನಾಟಕ ಸಾರಿಗೆ ಸಂಸ್ಥೆಯ ಐರಾವತ ಹಾಗೂ ವೇಗದೂತ ವಿನ್ಯಾಸದಲ್ಲಿ ಇರುವ ಈ ಬಸ್ಸುಗಳು ಸಂಚರಿಸುವ ಬಸ್ಸಲ್ಲ. ಬದಲಾಗಿ ಆಟಿಕೆಯ ಬಸ್ಸಾಗಿದೆ ಆದರೆ ಅಷ್ಟೇ ಆಕರ್ಷಣೀಯವಾಗಿದೆ. ಸಹೋದರ ನಾಗರಾಜ್ ಅವರೊಂದಿಗೆ ಸೇರಿಕೊಂಡು ನಿರ್ಮಾಣ ಮಾಡಿದ ಈ ಬಸ್ಸುಗಳು ಸದ್ಯ ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿದೆ. ಅಂದಹಾಗೇ ಪ್ರಶಾಂತ್ ಅವರಿಗೆ ಮೊದಲಿನಿಂದಲೂ ಸರ್ಕಾರಿ ಬಸ್ಸುಗಳ ಮೇಲೆ ಹೆಚ್ಚಿನ ಅಭಿಮಾನವಂತೆ. ಈ ಕಾರಣದಿಂದಾಗಿ ಪ್ರಶಾಂತ್ ಸರ್ಕಾರಿ ಬಸ್ಸುಗಳ ನಿರ್ಮಾಣ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಇನ್ನೂ ಪ್ರಶಾಂತ್ ಅವ್ರು ಬಸ್ಸಿನ ಪ್ರತಿಯೊಂದು ಭಾಗಗಳನ್ನು ನಾಜೂಕು ಹಾಗೂ ತಾಳ್ಮೆಯಿಂದ ತಯಾರಿಸಿ ಆ ಭಾಗಗಳು ಎಲ್ಲಿ ಎಂದು ಯಾರೂ ಕೂಡ ಪ್ರಶ್ನಿಸದಷ್ಟು ಪರಿಪೂರ್ಣವಾಗಿ ತಯಾರಿಸಿದ್ದಾರೆ.
ಬಗ್ಗೆ ಸುದ್ದಿ ತಿಳಿದ ಸ್ವತಃ: ಸಾರಿಗೆ ಸಚಿವರು ಪ್ರಶಾಂತ್ ರನ್ನು ಬರಮಾಡಿಕೊಂಡಿದ್ದಾರೆ.
ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರನ್ನು ಭೇಟಿ ಮಾಡಿ ಸಚಿವರಿಗಾಗಿಯೇ ವಿಶೇಷವಾಗಿ ತಯಾರಿಸಿದ ಐರಾವತ ಬಸ್ ಅನ್ನು ಪ್ರಶಾಂತ್ ಉಡುಗೊರೆಯಾಗಿ ನೀಡಿದ್ದಾರೆ.
ಬಸ್ ಮಾದರಿಯನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿರುವ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಪ್ರಶಾಂತ್ ಅವರ ಕೈಚಳಕಕ್ಕೆ ಶಹಬ್ಬಾಸ್ ತಿಳಿಸಿ, ಸರಕಾರಿ ಬಸೊಂದನ್ನು ಉಚಿತವಾಗಿ ನೀಡುವುದಾಗಿ ಹೇಳಿದ್ದಾರೆ.
ಮುಂದೆ ಒಂದು ದಿನ ಈ ಪ್ರಶಾಂತ್ ಆಚಾರ್ ಓರ್ವ ಖ್ಯಾತ ಕಲಾವಿದನಾಗಿ ರೂಪುಗೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.
FILM
ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ
ಉಡುಪಿ: ಇಂದು ಬೆಳಂಬೆಳಗ್ಗೆ ರಾಜಕೀಯ ನಾಯಕರು, ಜನಸಾಮಾನ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸಿದರೆ ಉಡುಪಿಯ ಮತಗಟ್ಟೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತದಾನ ಮಾಡಿದ್ದಾರೆ.
ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 197 ಕ್ಕೆ ಆಗಮಿಸಿ ಮತ ಚಲಾಯಿಸಿದರು. ರಕ್ಷಿತ್ ಶೆಟ್ಟಿ ಮನೆಯ ಮುಂಭಾಗದಲ್ಲೇ ಇರುವ ಮತಗಟ್ಟೆಗೆ ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದರು. ರಕ್ಷಿತ್ ಶೆಟ್ಟಿ ಈ ಸಂದರ್ಭದಲ್ಲಿ ಸೆಲೆಬ್ರೆಟಿಯನ್ನು ಕಂಡ ಇತರ ಮತದಾರರು ಹರ್ಷಚಿತ್ತರಾಗಿ ಸೆಲ್ಫೆ ಕ್ಲಿಕಿಸಲು ಮುಂದಾದ ಘಟನೆ ನಡೆಯಿತು.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
LATEST NEWS
ಅಯೋಧ್ಯೆಯ ಅಂಗಳದಲ್ಲಿ ಶೂಟಿಂಗ್ ಮಾಡಿದ ಮೊಟ್ಟ ಮೊದಲ ಕನ್ನಡ ಸೀರಿಯಲ್ ಇದು?
ಮಹಿಳೆಯರಿಗೆ ಸೀರಿಯಲ್ ನೋಡುವುದಂದರೆ ಒಂತಾರ ಹುಚ್ಚು. ಮನೆಯಲ್ಲೇ ಇರುವ ಮಹಿಳೆಯರು ಕೆಲವೊಮ್ಮೆ ಬೆಳಗ್ಗೆಯಿಂದ ಸಂಜೆಯವರೆಗೆ ಟಿವಿಯಲ್ಲಿ ಸೀರಿಯಲ್ ನೋಡುತ್ತಾ ಇರುತ್ತಾರೆ. ಸೀರಿಯಲ್ ನೋಡೊದು ಮಾತ್ರ ಅಲ್ಲ ಅದರ ಬಗ್ಗೆ ಸಂವಾದ ಕೂಡ ಮನೆಯವರಲ್ಲಿ ಮಾಡುತ್ತಾ ಇರುತ್ತಾರೆ.
ಈ ನಡುವೆ ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ದೇಶದ ಜನರು ತುಂಬಾ ಸಂತೋಷದಲ್ಲಿದ್ದಾರೆ. ಅದೆಷ್ಟೋ ಜನ ಹಿಂದೂಗಳ ಕನಸು ನನಸಾದ ಕ್ಷಣ ಎಂದು ಹೇಳಬಹುದು. ಒಮ್ಮೆಯಾದ್ರೂ ಅಯೋಧ್ಯೆಗೆ ಹೋಗಿಬರಬೇಕು ಅಂತಾ ಪ್ಲಾನ್ ಅಂತೂ ಮಾಡ್ತಾ ಇರೋದು ಕಂಡಿತ. ಕೆಲವರು ಹೋಗಿ ಬಂದಿದ್ದಾರೆ ಕೂಡ ಆದರೆ ಇನ್ನು ಕೆಲವರು ಇನ್ನು ಹೋಗಬೇಕು. ಇದುವರೆಗೆ ಅಯೋಧ್ಯೆ ರಾಮಮಂದಿರದಲ್ಲಿ ಯಾವೂದೇ ರೀತಿದ ಫಿಲ್ಮ್ ಶೂಟಿಂಗ್, ಸೀರಿಯಲ್, ಕಿರುಚಿತ್ರ ಯಾವೂದು ಶೂಟಿಂಗ್ ಆಗಲಿಲ್ಲ. ಆದರೇ ಇದೇ ಮೊದಲ ಬಾರಿಗೇ ಕನ್ನಡ ಸೀರಿಯಲ್ ಇಂಡಸ್ಟ್ರಿಯಲ್ಲಿ ಕನ್ಯಾದಾನ ಸೀರಿಯಲ್ ಹೊಸ ದಾಖಲೆ ಬರೆದಿದೆ.
ಉದಯ ಟಿವಿಯಲ್ಲಿ ಪ್ರಸಾರವಾಗೋ ಕನ್ಯಾದಾನ ಧಾರಾವಾಹಿ ಈಗ ಹೊಸ ದಾಖಲೆ ಬರೆದಿದ್ದಾರೆ. ಕನ್ನಡ ಟೆಲಿವಿಷನ್ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಯೋಧ್ಯೆಯಲ್ಲಿ ಚಿತ್ರೀಕರಣಗೊಂಡ ಮೊಟ್ಟ ಮೊದಲ ಸೀರಿಯಲ್ ಎಂಬ ಹೆಗ್ಗಳಿಕೆಗೆ ಕನ್ಯಾದಾನ ಧಾರಾವಾಹಿ ಪಾತ್ರವಾಗಿದೆ.
ಜನವರಿ 22ರಂದು ಅಂದ್ರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಇಲ್ಲಿಯವೆರೆಗೂ ಯಾವುದೇ ಸಿನಿಮಾವಾಗ್ಲಿ, ಅಥವಾ ಸೀರಿಯಲ್ ಆಗ್ಲಿ ಶೂಟ್ ಮಾಡಿರಲಿಲ್ಲ. ಆದ್ರೆ, ಕನ್ಯಾದಾನ ಧಾರವಾಹಿ ತಂಡ ಫಸ್ಟ್ಟೈಮ್ ಅಯೋಧ್ಯೆಗೆ ಹೋಗಿ ಚಿತ್ರೀಕರಣ ಮಾಡಿದೆ.
ಈ ಸೀರಿಯಲ್ನಲ್ಲಿ ಬಹುತೇಕ ಪಾತ್ರಗಳು ಒಂದಲ್ಲ ಒಂದು ಸಮಸ್ಯೆ ಎದುರಿಸ್ತಿವೆ. ಹಾಗಾಗಿ ರಾಮನ ದರ್ಶನ ಪಡೆದು ಆ ಕಷ್ಟಗಳಿಂದ ಹೊರಬರಬೇಕು ಎಂದು ನಿರ್ಧರಿಸಿ, ರಾಮಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಶೂಟಿಂಗ್ ಮಾಡಿರೋ ಬಗ್ಗೆ ಸೀರಿಯಲ್ ತಂಡ ಸಂತಸ ಹಂಚಿಕೊಂಡಿದೆ.