Connect with us

LATEST NEWS

ಮೋದಿಯ ಮೇಲೆ ವಿಶಿಷ್ಟ ಪ್ರೀತಿ ಈ ಬಾಲೆಗೆ.. ಆಧುನಿಕ ಶಬರಿಯಾಗಿ ಕಾದಿದ್ದಾಳೆ ಈ ಪುಟ್ಟ ಹರಣಿ..!

Published

on

ವಿಜಯನಗರ ಕೂಡ್ಲಿಗಿ : ನರೇಂದ್ರ ಮೋದಿ ನಮ್ಮ ಮನೆಗೆ ಬಂದು ಪಾಯಸ ಅನ್ನ ಸಾರು ಉಂಡು ಟೀ ಕುಡಿದು ಹೋಗಬೇಕು ಅದೇ ನನ್ನಾಸೆ..ಎಂದು ಮೂರು ವರ್ಷದ ಬಾಲೆ ಹೇಳುತ್ತಿರುವುದನ್ನು ಕೇಳಿದರೆ..!? ಎಂಥವರೂ ಕೂಡ ಅಚ್ಚರಿ ಪಡುವ ಸಂಗತಿಯಾಗಿದೆ.

ಕಾರಣ ‍ಅವಳಿಗೆ ನರೇಂದ್ರ ಮೋದಿ ಯಾವ ಪಕ್ಷ ಯಾವ ಜಾತಿ ಗೊತ್ತಿಲ್ಲ, ಆತ ಬಾರತದ ಪ್ರಧಾನಿ ಅಂತಾನು ತಿಳಿದಿಲ್ಲ ಆದ್ರೆ ಆತ ಅವಳಿಗೆ ಇಷ್ಟವಂತೆ ತುಂಬಾನೆ ಇಷ್ಟವಂತೆ.

ಬಾಲೆ ಹರಣಿಯ ಮನೆಯಲ್ಲಿ ಟಿವಿ ಕೂಡ ಇಲ್ಲ, ಆದ್ರೆ ನರೇಂದ್ರ ಮೋದಿ ಪರಿಚಯ ಹೇಗಾಯ್ತು..!?

ತನ್ನ ಹಳೆಯ ಸ್ನೇಹಿತನೇನೋ ಅನ್ನೋ ರೀತಿಯಲ್ಲಿ, ನರೇಂದ್ರ ಮೋದಿ ಬಗ್ಗೆ ವಿಚಾರ ಮಾಡುತ್ತಾಳೆ ಆತಿಥ್ಯ ಸ್ವೀಕರಿಸುವಂತೆ ತಮ್ಮ ಮನೆಗೆ ಆಹ್ವಾನಿಸುತ್ತಾಳೆ ಈ ಮೂರು ವರ್ಷದ ಪೋರಿ.

ನರೇಂದ್ರ ಗೊತ್ತಾ.. ಅವನು ನಮ್ಮ ಮನಗೆ ಊಟಕ್ಕೆ ಬರಬೇಕು ಅಷ್ಟೇ…ಅದೇ ನರೇಂದ್ರ ಮೋದಿ ಅವನೇ ನಮ್ಮ ಮನೆಗೆ ಬಂದು ಪ‍ಾಯಸ‍ಾ…ಅನ್ನ ಸಾರು ಉಂಡು ಟೀ ಕುಡಿದು ಹೋಗಬೇಕು..ಅಷ್ಟೇ ..ಅದು ನನ್ನಿಷ್ಟ.. ಅವನು ಬಂದೇ ಬರುತ್ತಾನೆ ಅದು ಅವನಿಷ್ಟ ಎನ್ನುತ್ತಾಳೆ ಹರಣಿ.

ದಿನಕ್ಕೊಮ್ಮೆಯಾದರೂ ಮೋದಿ ಬಗ್ಗೆ ತನ್ನ ತಾಯಿ ರೇಣುಕಮ್ಮಳೊಂದಿಗೆ ವಿಚಾರಿಸುತ್ತಿರುತ್ತಾಳೆ ಈ ಹರಣಿ,

ಆಕೆ ತನ್ನ ಸ್ನೇಹಿತರೊಂದಿಗೆ ಆಟ ಆಡುವಾಗ ಕೂಡ ಸ್ನೇಹಿತರಲ್ಲಿ ಯಾರಾದರೂ ಒಬ್ಬ ಹುಡುಗನಿಗೆ ನರೇಂದ್ರ ಮೋದಿ ಹೆಸರನ್ನಿಡುತ್ತಾಳೆ.

ಇದನ್ನ ಕಂಡ ನೆರೆ ಹೊರೆಯವರು ಬೆರಗಾಗಿದ್ದಾರೆ, ಆಟ ಆಡುವಾಗಲೂ ಕೂಡ ನರೇಂದ್ರ ಮೋದಿ ಯ ಬಗ್ಗೆ ಗುನುಗುಡುವ ಈ ಬಾಲೆ.

ಅವನು ತುಂಬಾ ಒಳ್ಳೆಯವನು ಅದಕ್ಕೇ ನನಗಿಷ್ಟ ಅವನು ತುಂಬಾ ಗೊತ್ತು ನನಗೆ.

ನಾನು ಅವನು ಎಲ್ಲರೂ ಆಟ ಆಡೀವಿ ಈಗ ಬರುವಲ್ಲ ಅಷ್ಟೇ.. ಅವನು ಒಳ್ಳೆವನು ಅದಕ್ಕೇ ಇಷ್ಟ ತುಂಬಾ ಇಷ್ಟ ನನಗೆ ಅನ್ನುತ್ತಾಳೆ ಮೂರರ ಪೋರಿ ಹರಣಿ.

ಬಾಲೆ ಹರಣಿಯ ತಂದೆ ಎರೆಡು ವರ್ಷದ ಹಿಂದೆಯಷ್ಟೇ, ಕೋವಿಡ್ ನಲ್ಲಿ ನಿಧನರಾಗಿದ್ದಾರೆ.

ತಾಯಿ ರೇಣುಕಾ ಹಾಗೂ ಇವಳ ಸಹೋದರ ಬಾಲಕ ವಿನಾಯಕ ಸೇರಿದಂತೆ, ಮೂರೇ ಮೂರು ಜನರಿರುವ ಪುಟ್ಟ ಬಡ ಕುಟುಂಬದಲ್ಲಿ ಜೀವಿಸುವ ಈ ಬಾಲೆಗೆ ನರೇಂದ್ರ ಮೋದಿ ಹೇಗೆ ಸ್ನೇಹಿತನಾದ ತಿಳಿಯದಾಗಿದೆ..

FILM

ಮೊದಲ ಬಾರಿ ಮದುವೆ ರಹಸ್ಯ ಬಿಚ್ಚಿಟ್ಟ ಹಳ್ಳಿಕಾರ್‌ ಒಡೆಯ ವರ್ತೂರು ಸಂತೋಷ್

Published

on

ಬೆಂಗಳೂರು : ಬಿಗ್‌ಬಾಸ್‌ ಕನ್ನಡ ಸೀಸನ್‌ 10ರಲ್ಲಿ ಹಲವು ಸ್ಪರ್ಧಿಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದಾರೆ. ಇದರಲ್ಲಿ ಹುಲಿ ಉಗುರು ಧರಿಸಿದ ಕಾರಣಕ್ಕೆ ಪೊಲೀಸರಿಂದ ಹಳ್ಳಿಕಾರ್‌ ಒಡೆಯ ವರ್ತೂರು ಸಂತೋಷ್‌ ಅವರ ಬಂಧನವಾಗಿತ್ತು. ಈಗ ಮದುವೆ ವಿಚಾರ ಮತ್ತೆ ಮುನ್ನೆಲೆಗೆ ಬಂದು ನಿಂತಿದೆ.

ಬಿಗ್ ಬಾಸ್ ಮನೆಯಲ್ಲಿಯೇ ತಮ್ಮ ಮದುವೆ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ವರ್ತೂರು ಸಂತೋಷ್ ಅವರಿಗೆ ಮದುವೆ ಆಗಿದೆ. ಒಬ್ಬಳು ಹೆಣ್ಣು ಮಗು ಕೂಡ ಇದೆ. ಆದರೆ ಅವರು ಮದುವೆ ಆಗಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಕೆಲದಿನಗಳ ಹಿಂದೆ ಸೋಷಿಯಲ್‌ಮೀಡಿಯಾದಲ್ಲಿ ಗುಲ್ಲೆದ್ದಿತ್ತು. ಈಗ ಬಿಗ್ ಬಾಸ್ ಮನೆಯಲ್ಲಿ ಸ್ವತಃ ವರ್ತೂರ್ ಅವರೇ ತಮ್ಮ ಮದುವೆ, ಪತ್ನಿ ಜೊತೆಗಿನ ಭಿನ್ನಾಭಿಪ್ರಾಯಗಳ ಕುರಿತು ಮನಸ್ಸು ಬಿಚ್ಚಿ ಮಾತನಾಡಿದ್ದಾರೆ.

ಬಿಗ್‌ಬಾಸ್ ಮನೆ ಸೇರಿದಾಗಿನಿಂದ ಈ ವರೆಗೂ ತನಗೆ ಮದುವೆ ಆಗಿದೆ ಎಂಬ ಒಂದೇ ಒಂದು ಸಣ್ಣ ಸುಳಿವನ್ನೂ ಬಿಟ್ಟುಕೊಟ್ಟಿರಲಿಲ್ಲ ವರ್ತೂರು ಸಂತೋಷ್.  ಈಗ ಗುಟ್ಟು ರಟ್ಟಾಗಿದೆ.

‘ವರ್ತೂರ ಸಂತೋಷ್‌ ಒಳಗಡೇ ಏನೈತೆ ಅನ್ನೋದನ್ನು ಹೇಳ್ತಿದ್ದೇನೆ. ನೋಡು ದೊಡ್ಡಪ್ಪ ನೀನು ಹೀಗು ತಾಳಿಕಟ್ಟು ಅಂದ್ರೆ ಕಟ್ಟಿಬಿಡ್ತಿನಿ. ನಾನು ಅವರಿಗೆ ಮಾತು ಕೊಟ್ಟು ಒಪ್ಪಿಕೊಂಡು ಬಿಟ್ಟೆ. ಮದುವೆಯೂ ಆಯ್ತು, ದಿನ ಕಳೆದಂತೆ, ಅಮ್ಮನನ್ನು ಇಗ್ನೋರ್‌ ಮಾಡೋಕೆ ಶುರು ಮಾಡಿದ್ರು. ನಾನು ಸಂಪಾದನೆ ಮಾಡಿದ ಜನರನ್ನು ತೊರೆದು ಇವರ ಹಿಂದೆ ಹೋಗಬೇಕು ಎಂದರೆ ಅದು ಸಾಧ್ಯವಾಗದ ಮಾತು. ಆಗ ಹೆಂಡತಿ ಮನೆ ಹತ್ತಿರ ಹೋಗ್ತಿನಿ. ನನ್ನ ಮಾತಿನ ಪ್ರಕಾರ ಬಂದ್ರೆ, ನೀನು ರಾಣಿನೇ ಎಂದು ಕರೆದೆ. ಮೊದಲು ನೀನು ಗೇಟಿಂದ ಆಚೆ ಹೋಗು ಎನ್ನುತ್ತಾರೆ. ಆವತ್ತು ನಾನು ಮಾತು ಕೊಟ್ಟು ಬಂದಿದ್ದೀನಿ ಇವತ್ತು ಆ ಮಾತಿನ ಮೇಲೆ ನಿಂತಿದ್ದೀನಿ’ ಎಂದಿದ್ದಾರೆ ವರ್ತೂರು.

ಮುಂದೇನಾಗುತ್ತೆ ಅನ್ನುವುದನ್ನ ಇವತ್ತಿನ ಎಪಿಸೋಡ್ ನಲ್ಲಿ ನೋಡ್ಬೇಕಷ್ಟೆ..

Continue Reading

Ancient Mangaluru

ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

Published

on

ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.

ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು.  ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ  ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು.  ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ  ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Continue Reading

DAKSHINA KANNADA

ಉಡುಪಿ : ಬೈಕ್ ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ

Published

on

ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್‌ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.

ಪ್ರೀತಮ್‌ ಅವರು ಬೈಕ್‌ ಚಲಾಯಿಸಿಕೊಂಡು ಬ್ರಹ್ಮಾವರ ಆಕಾಶವಾಣಿ ಪೆಟ್ರೋಲ್‌ ಪಂಪ್‌ ಕಡೆಯಿಂದ ಸರ್ವಿಸ್‌ ರೋಡ್‌ನ‌ಲ್ಲಿ ಆಗಮಿಸಿ ಉಪ್ಪಿನಕೋಟೆಗೆ ತೆರಳಲು ಡಿವೈಡರ್‌ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್‌ ಢಿಕ್ಕಿ ಹೊಡೆಯಿತು. ಅವಿವಾಹಿತರಾಗಿದ್ದ ಪ್ರೀತಮ್‌ ಕೆಟರಿಂಗ್‌ ಉದ್ಯಮ ನಡೆಸುತ್ತಿದ್ದರು. ಪ್ರೀತಮ್‌ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Continue Reading

LATEST NEWS

Trending