LATEST NEWS
ಇದು ಪುರುಷರು ಮಾತ್ರ ಭಾಗವಹಿಸುವ ಜಾತ್ರೆ..! ಮಾಂಸದೂಟ ಇಲ್ಲಿನ ವಿಶೇಷ..!
ಮಂಗಳೂರು / ಮಧುರೈ : ಅದು ಹತ್ತೂರಿನ ಜನರು ಭಾಗವಹಿಸುವ ಊರ ಜಾತ್ರೆಯಾಗಿದ್ದು ಕನಿಷ್ಟ ಅಂದ್ರೂ ಹತ್ತರಿಂದ ಹದಿನೈದು ಸಾವಿರ ಜನರು ಭಾಗವಹಿಸ್ತಾರೆ. ಆದ್ರೆ, ವಿಶೇಷ ಅಂದ್ರೆ ಈ ಜಾತ್ರೆಯಲ್ಲಿ ಎಲ್ಲೂ ಒಂದೇ ಒಂದು ಹೆಣ್ಣು ಮಕ್ಕಳು ಕಾಣೋದಿಕ್ಕೆ ಸಿಗೋದಿಲ್ಲ. ಹೆಣ್ಣು ಮಕ್ಕಳು ಈ ಜಾತ್ರೆ ಗದ್ದೆಗೆ ಇಳಿಬೇಕು ಅಂದ್ರೆ ಇಲ್ಲಿ ಪುರುಷರು ಊಟ ಮಾಡಿ ಬಿಟ್ಟು ಹೋದ ಬಾಳೆ ಎಲೆಗಳು ಒಣಗಿ ಹೋಗಬೇಕು. ಅಂದ್ರೆ ಕನಿಷ್ಟ ಅಂದ್ರೂ ಒಂದು ವಾರದ ಬಳಿಕವಷ್ಟೇ ಹೆಣ್ಣು ಮಕ್ಕಳು ಈ ಜಾತ್ರೆಗೆ ಬರಬಹುದು.
ಇದು ತಮಿಳುನಾಡಿನ ಮಧುರೈ ಜಿಲ್ಲೆಯ ತಿರುಮಂಗಲಂ ಬಳಿಯ ಸೂರಿಕಂಬಟ್ಟಿ ಪಂಚಾಯತ್ನಲ್ಲಿ ನಡೆಯುವ ವಿಶೇಷ ಜಾತ್ರೆ. ಪೆರುಮಾಳ್ಕೋವಿಲ್ಪಟ್ಟಿ ಗ್ರಾಮ ದೇವರಾದ ಕರುಂಪರೈ ಮುತ್ತಯ್ಯ ದೇವಸ್ಥಾನದಲ್ಲಿ ಈ ಜಾತ್ರೆ ನಡೆಯುತ್ತದೆ. ಇದು ಮಾಂಸಾಹಾರಿ ಊಟದ ಜಾತ್ರೆಯಾಗಿದ್ದು, ಉತ್ಸವದ ಸಂಪ್ರದಾಯದಂತೆ ಪುರುಷರು ಮಾತ್ರ ಭಾಗವಹಿಸುತ್ತಾರೆ.
ದೇವರಿಗೆ ಮೇಕೆ ಬ*ಲಿ :
ಗ್ರಾಮ ದೇವರಿಗೆ ಭಕ್ತರು ತಮ್ಮ ಕೃಷಿ ಸಮೃದ್ಧಿಯಾಗಲು, ರೋಗ ರುಜಿನಗಳು ಬಾರದೇ ಇರಲು ಇಲ್ಲಿಗೆ ಕಪ್ಪು ಆಡುಗಳನ್ನು ಹರಕೆ ಹೇಳಿರುತ್ತಾರೆ. ಹರಕೆ ಹೇಳಿದ ಆಡುಗಳನ್ನು ಈ ಪರಿಸರದಲ್ಲಿ ತಂದು ಬಿಟ್ಟ ಬಳಿಕ ಆ ಆಡುಗಳಿಗೆ ಯಾರೂ ತೊಂದರೆ ಕೊಡುವಂತಿಲ್ಲ. ಯಾವ ತೋಟಕ್ಕೆ ಹೋಗಿ ಮೇವು ತಿಂದ್ರೂ ಅದು ಸಾಕ್ಷಾತ್ ಮುತ್ತಯ್ಯ ಕರುಪ್ಪು ಸ್ವಾಮಿಯೇ ಮೇವು ತಿನ್ನುತ್ತಿದ್ದಾರೆ ಅಂತ ಭಕ್ತರು ನಂಬಿಕೆ ಇಟ್ಟಿದ್ದಾರೆ. ಮುತ್ತಯ್ಯ ಸ್ವಾಮಿಗೆ ನಡೆಯುವ ವಾರ್ಷಿಕ ಜಾತ್ರೆಯಲ್ಲಿ ಇದೇ ಮೇಕೆಗಳನ್ನು ಬ*ಲಿ ಕೊಡಲಾಗುತ್ತದೆ. ಹಬ್ಬಕ್ಕೆ ಒಂದು ವಾರ ಮೊದಲು ಗ್ರಾಮಾಂತರ ಪ್ರದೇಶದಲ್ಲಿ ತಿರುಗಾಡುವ ಎಲ್ಲ ಮೇಕೆಗಳನ್ನು ಸಂಗ್ರಹಿಸಿ ಸ್ವಾಮಿಗೆ ಬ*ಲಿ ಕೊಡುತ್ತಾರೆ.
ಈ ಹಿನ್ನೆಲೆಯಲ್ಲಿ ಇಂದು ( ಮೆ 18 ) ಬೆಳಗ್ಗೆ ಉತ್ಸವ ಆರಂಭವಾಗಿದ್ದು, ದೇವಸ್ಥಾನದಲ್ಲಿ ಮುತ್ತಯ್ಯ ಸ್ವಾಮಿಗೆ ಪೊಂಗಲ್ ಹಾಕಿ ಪೂಜೆಗೆ ಚಾಲನೆ ನೀಡಲಾಯಿತು. ನಂತರ 125 ಮೇಕೆಗಳನ್ನು ಬ*ಲಿ ನೀಡಿ 2500 ಕೆಜಿ ಅಕ್ಕಿಯನ್ನು ಬೇಯಿಸಲಾಯಿತು. ನಂತರ ಬೇಯಿಸಿದ ಅನ್ನ ಮತ್ತು ಮಾಂಸವನ್ನು ಸ್ವಾಮಿಗೆ ಅರ್ಪಿಸಿ ಪೂಜೆ ಸಲ್ಲಿಸಲಾಯಿತು. ಬಳಿಕ ಭಕ್ತರಿಗೆ ಅನ್ನದಾನ ಮಾಡಲಾಯಿತು.
ಮಹಿಳೆಯರಿಗಿಲ್ಲ ಪ್ರವೇಶ :
ಈ ಜಾತ್ರೆಯಲ್ಲಿ ಈ ಬಾರಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಪುರುಷರು ಭಾಗವಹಿಸಿ ಅನ್ನ ಪ್ರಸಾದ ಸ್ವೀಕರಿಸಿದ್ದಾರೆ. ಇವರು ಆಹಾರ ಸೇವಿಸಿದ ಎಲೆಗಳನ್ನು ಹಾಗೆ ಬಿಟ್ಟು ಬಿಡುವುದು ಕೂಡಾ ಇಲ್ಲಿನ ಪ್ರಮುಖ ಸಂಪ್ರದಾಯದಲ್ಲಿ ಒಂದು. ಹೀಗೇ ಬಿಟ್ಟು ಹೋದ ಎಲೆಗಳು ಒಣಗುವ ತನಕ ಈ ಪ್ರದೇಶಕ್ಕೆ ಮಹಿಳೆಯರು ಎಂಟ್ರಿ ಕೊಡುವಂತಿಲ್ಲ. ಎಲೆಗಳು ಒಣಗಿದೆ ಎಂದು ದೇವಸ್ಥಾನದ ಪೂಜಾರರು ಹೇಳಿದ ಬಳಿಕ ಮಹಿಳೆಯರು ಜಾತ್ರೆಯಲ್ಲಿ ಭಾಗವಹಿಸಲು ಅವಕಾಶ ಸಿಗುತ್ತದೆ.
ಇದನ್ನೂ ಓದಿ : ಬಾಲಕನ ಹ*ತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತಮ್ಮನನ್ನೇ ಕೊಂದ ಅಣ್ಣ; ಮೊಬೈಲ್ ನಿಂದ ಹೋಯ್ತು ಪ್ರಾಣ!
ಮಾಂಸದೂಟದ ಹಬ್ಬದಲ್ಲಿ ತಿರುಮಂಗಲಂ, ಸೊರಿಕಂ ಪಟ್ಟಿ, ಪೆರುಮಾಳ್ ಕೋವಿಲ್ಪಟ್ಟಿ, ಕರಡಿಕ್ಕಲ್. ಮಾವಿಲಿಪಟ್ಟಿ, ಚೇಕನುರಾಣಿ, ಚೋಳವಂತನ್, ಕರುಮತ್ತೂರು, ಚೆಲ್ಲಂಪಟ್ಟಿ ಸೇರಿದಂತೆ ವಿವಿಧ ಪ್ರದೇಶಗಳ ಪುರುಷ ಭಕ್ತರು ಮಾತ್ರ ಭಾಗವಹಿಸಿದ್ದರು.
DAKSHINA KANNADA
ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ
ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.
ಜುಲೈ 19 ರಂದು ಗುಜರಾತ್ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.
ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್ಗಾರ್ಡ್ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
kerala
5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.
ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.
ಆನ್ ಲೈನ್ ಗೇಮಿಂಗ್ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?
ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್ಲೈನ್ ಗೇಮಿಂಗ್ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ