Connect with us

    LATEST NEWS

    ಇದು ಭಾರತದಲ್ಲಿರುವ ದೇವಸ್ಥಾನ… ಆದ್ರೆ ಭಾರತ ಸರ್ಕಾರಕ್ಕಿಲ್ಲ ಇದರ ಮೇಲೆ ಹಕ್ಕು…!

    Published

    on

     

    ಕಾಶಿ ವಿಶ್ವನಾಥನ ಸನ್ನಿಧಿಗೆ ಹೋಗುವ ಭಕ್ತರು ಅಲ್ಲೇ ಪಕ್ಕದಲ್ಲಿ ಗಂಗಾ ನದಿಯ ದಡದಲ್ಲಿರುವ ಪಶುಪತಿನಾಥ ದೇವಸ್ಥಾನಕ್ಕೂ ಭೇಟಿ ನೀಡ್ತಾರೆ. ಲಲಿತ್ ಘಾಟ್‌ನಲ್ಲಿರುವ ಈ ದೇವಸ್ಥಾನ ಭಾರತದಲ್ಲೇ ಇದ್ರೂ ಇದರ ಮೇಲೆ ದೇಶದ ಯಾವ ಕಾನೂನು ಅನ್ವಯ ಆಗೋದಿಲ್ಲ. ಈ ದೇವಸ್ಥಾನದ ವಿಚಾರದಲ್ಲಿ ಭಾರತ ದೇಶದ ಯಾವುದೇ ಪ್ರಾಧಿಕಾರವಾಗಲಿ ಅಧಿಕಾರ ಚಲಾಯಿಸುವಂತೆಯೂ ಇಲ್ಲ. ಈ ದೇವಸ್ಥಾನ ಕಾಶಿಯಿಂದ ಸುಮಾರು 400 ಕಿಲೋ ಮೀಟರ್ ದೂರದ ನೇಪಾಳ ಸರ್ಕಾರದ ಹಿಡಿತದಲ್ಲಿದೆ. ಹೀಗಾಗಿ ಭಾರತ ದೇಶದಲ್ಲೇ ಈ ದೇವಸ್ಥಾನ ಇದ್ರೂ ದೇವಸ್ಥಾನದ ಒಂದು ಹುಲ್ಲು ಕಡ್ಡಿ ಅಲುಗಾಡಿಸಬೇಕಾದ್ರೂ ನೇಪಾಳದ ಒಪ್ಪಿಗೆ ಪಡೆಯಬೇಕು.

    ದೇವಸ್ಥಾನದ ಸಂಪೂರ್ಣ ಅಧಿಕಾರ ನೇಪಾಳದ್ದು

     


    ದೇವಸ್ಥಾನದ ನಿರ್ವಹಣೆಯಿಂದ ಹಿಡಿದು, ಪೂಜೆ ಪುನಸ್ಕಾರ, ಅರ್ಚಕರಿಗೆ ನೀಡುವ ಸೌಲಭ್ಯ ಎಲ್ಲವೂ ನೇಪಾಳ ಸರ್ಕಾರವೇ ಭರಿಸುತ್ತದೆ. ಈ ದೇವಸ್ಥಾನವನ್ನು ನೇಪಾಳದ ರಾಜ ರಾಣಾ ಬಹದ್ದೂರ್ ನಿರ್ಮಿಸಿರೋದೇ ಇದಕ್ಕೆ ಕಾರಣ. 1800 -1804 ರ ನಡುವೆ ಕಾಶಿಯಲ್ಲಿ ತಂಗಿದ್ದ ರಾಣಾ ಬಹದ್ದೂರು ಈ ದೇವಾಲಯವನ್ನು ನಿರ್ಮಾಣ ಮಾಡಿದ ಅನ್ನೋ ಐತಿಹಾಸಿಕ ದಾಖಲೆಗಳು ಇದೆ.

    1843 ರಲ್ಲಿ ಪೂರ್ಣಗೊಂಡ ನಿರ್ಮಾಣ ಕಾರ್ಯ

    ರಾಣಾ ಬಹದ್ದೂರ್ ಸಹಾ ನಾಲ್ಕು ವರ್ಷ ಕಾಶಿಯಲ್ಲಿ ಇದ್ದಾಗ ದೇವಸ್ಥಾನ ನಿರ್ಮಾಣ ಆರಂಭಿಸಿದ್ದರೂ, 1843 ರಲ್ಲಿ ಈ ದೇವಸ್ಥಾನ ಪೂರ್ಣಗೊಂಡಿತ್ತು. ರಾಣಾ ಬಹದ್ದೂರು ಸಹಾ ಅವರ ಮಗ ರಾಜ ರಾಜೇಂದ್ರ ವೀರ್ ಈ ದೇವಾಲಯದ ಕಾರ್ಯವನ್ನು ಪೂರ್ಣಗೊಳಿಸಿದ್ದರು. ಕಠ್ಮಂಡುವಿನ ಪಶುಪತಿನಾತ ದೇವಾಲಯದಂತೆಯೇ ಈ ದೇವಸ್ಥಾನವನ್ನು ನಿರ್ಮಾಣಮಾಡಲಾಗಿದೆ. ಈ ದೇವಸ್ಥಾನದ ಸಂಪೂರ್ಣ ನಿರ್ಮಾಣ ಕಾರ್ಯವನ್ನೂ ನೇಪಾಳಿ ಕುಶಲಕರ್ಮಿಗಳೇ ಮಾಡಿದ್ದಾರೆ.

    ಇದನ್ನೂ ಓದಿ…ಈ ದೇವಸ್ಥಾನದಲ್ಲಿ ಒಂದು ಲಿಂಬೆಹಣ್ಣಿಗೆ ಲಕ್ಷಾಂತರ ರೂ. ಬೇಡಿಕೆ..! ಅಂತದ್ದೇನಿದೆ ಈ ಲಿಂಬೆ ಹಣ್ಣಲ್ಲಿ?

    ಮರದಿಂದ ಮಾಡಿದ ವಿಶೇಷ ದೇವಾಲಯ

    ಈ ದೇವಾಲಯದ ವಿಶೇಷವೆಂದರೆ ಈ ದೇವಾಲಯವು ಕಲ್ಲಿನಿಂದ ಮಾಡಲಾಗಿಲ್ಲ, ಆದರೆ ಮರದಿಂದ ಮಾಡಲ್ಪಟ್ಟಿದೆ ಮತ್ತು ಸುಂದರವಾದ ಕೆತ್ತನೆಗಳನ್ನು ಸಹ ಕೆತ್ತಲಾಗಿದೆ. ಜನರು ಈ ದೇವಾಲಯವನ್ನು ಮಿನಿ ಖಜುರಾಹೋ ಎಂದೂ ಕರೆಯುತ್ತಾರೆ. ಕಾಶಿಯಲ್ಲಿ ನಿರ್ಮಿಸಲಾದ ಈ ದೇವಾಲಯವು ಭಾರತ ಮತ್ತು ನೇಪಾಳ ನಡುವಿನ ಸ್ನೇಹಕ್ಕೆ ಒಂದು ವಿಶಿಷ್ಟ ಉದಾಹರಣೆಯಾಗಿದೆ. ಈ ದೇವಾಲಯದಲ್ಲಿ, ಪೂಜೆ ಸೇರಿದಂತೆ ಎಲ್ಲಾ ಆಚರಣೆಗಳನ್ನು ನೇಪಾಳದ ಜನರು ಮಾತ್ರ ಮಾಡುತ್ತಾರೆ.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending