DAKSHINA KANNADA
ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಕಾಂಡೋಮ್, ಅಶ್ಲೀಲ ಬರಹ ಹಾಕಿದ ಆರೋಪಕ್ಕೆ ಮೃತ ನವಾಝ್ ಕುಟುಂಬದ ಉತ್ತರ ಇದು,,!
ಮಂಗಳೂರು : ಮಂಗಳೂರು ನಗರದ ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಕಾಂಡೋಮ್, ಅಶ್ಲೀಲ ಬರಹ ಹಾಕಿದ ಆರೋಪದಲ್ಲಿ ಈಗಾಗಲೇ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಆದರೆ ಅದರಲ್ಲಿ ಓರ್ವ ಆರೋಪಿ ಎಂದು ಗುರುತ್ತಿಸಿದ್ದ ನವಾಝ್ ರಕ್ತ ಕಾರಿ ಸತ್ತಿದ್ದಾನೆ ಎಂದು ಪೊಲೀಸ್ ಇಲಾಖೆ ಅಧಿಕಾರಿಗಳು ನೀಡಿದ ಮಾಹಿತಿ ಸಂಪೂರ್ಣ ಸುಳ್ಳೂ ಮತ್ತು ಆಧಾರ ರಹಿತ ಎಂದು ಮೃತ ನವಾಜ್ ಕುಟುಂಬಸ್ತರು ಹಾಗೂ ಸ್ವೇಹಿತರು ಸ್ಪಷ್ಟಪಡಿಸಿದ್ದಾರೆ.
ಸ್ಥಳೀಯ ಖಾಸಾಗಿ ವಾಹಿನಿಗೆ ಈ ಬಗ್ಗೆ ಮಾತನಾಡಿದ ಮೃತ ನವಾಝ್ ಯಾಯಿ ಬೀಫಾತುಮ್ಮ, ಮತ್ತು ಆತನ ಅಕ್ಕ ಝೀನತ್ ಅವರು ಪೊಲೀಸ್ ಅಧಿಕಾರಿಗಳ ಬೇಜಾಬ್ದಾರಿ ಹೇಳಿಕೆಗಳನ್ನು ತೀವ್ರವಾಗಿ ಖಂಡಿದ್ದಾರೆ,
ನವಾಝ್ ಅವರು 40 ದಿನಗಳ ಹಿಂದೆ ಮೃತಪಟ್ಟಿದ್ದಾರೆ. ಅವರು ಕಳೆದ ಒಂದುವರೆ ವರ್ಷದಿಂದ ಏಡ್ಸ್ ಕಾಯಿಲೆಯಿಂದ ಬಳಲುತ್ತಿದ್ದು, ಮನೆಯಿಂದ ಎಲ್ಲಿಗೂ ಹೋಗಲು ಅಶಕ್ತರಾಗಿದ್ದರು.
2 ವರ್ಷ ವಿದೇಶದಲ್ಲಿದ್ದ ನವಾಝ್ ಬಳಿಕ ಊರಿಗೆ ಮರಳಿದ್ದ ಆದರೆ ಅದಾಗಲೇ ಅವನನ್ನು ಮಾರಣಾಂತಿಕ ರೋದ ಹೆಚ್ ಐ ವಿ ಭಾದಿಸಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಿದ್ದರೂ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಆದರೆ ಮಂಗಳೂರು ಪೊಲೀಸ್ ಕಮಿಷನರ್ ಸೇರಿ ಹಿರಿಯ ಅಧಿಕಾರಿಗಳು ಆತ ದೈವ ಕ್ಷೇತ್ರಗಳ ಮಲಿನ ಮಾಡಿದ್ದ ಆರೋಪಿ ಎಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ನಿಜವಾಗಿಯೂ ಆತಂಕಕಾರಿ ಬೆಳವಣಿಗೆಯಾಗಿದೆ.
ಯಾವುದೇ ಪೊಲೀಸ್ ಸಿಬಂದಿಗಳು ಅಥವಾ ಅಧಿಕಾರಿಗಳು ಮನೆಯವರನ್ನು ಇದುವರೆಗೂ ಸಂಪರ್ಕಿಸಲಿಲ್ಲ, ಯಾವುದೇ ಹೇಳಿಕೆ ಪಡೆಯಲಿಲ್ಲ ಆದರೂ ನವಾಝ್ ಹೆಸರನ್ನು ಈ ಪ್ರಕರಣದಲ್ಲಿ ಎಳೆದು ತಂದಿದ್ದಾರೆ ಇದು ನಿಜವಾಗಿಯೂ ಬೇಸರ ಮತ್ತು ಅಘಾತ ತಂದಿದೆ ಎಂದರು.
ಕೊರಗಜ್ಜನ ಕ್ಷೇತ್ರ ಮಲಿನಗೊಳಿಸಿದ ಘಟನೆಗೆ ಸಂಬಂಧಿಸಿ ಇಬ್ಬರು ಯುವಕರು ಎಮ್ಮೆಕೆರೆಯ ಕೊರಗಜ್ಜನ ಕ್ಷೇತ್ರದಲ್ಲಿ ಹಾಜರಾಗಿ ತಪ್ಪೊಪ್ಪಿಕೊಂಡಿರುವುದನ್ನು ಆಧರಿಸಿ ಪೊಲೀಸ್ ಆಯುಕ್ತ ಶಶಿಕುಮಾರ್ ವಸ್ತುಸ್ಥಿತಿ ಅರಿತುಕೊಳ್ಳದೆ ಮಾಧ್ಯಮದ ಮುಂದೆ ಹೇಳಿಕೆ ನೀಡಿರುವ ಕ್ರಮ ಸಮರ್ಥನೀಯವಲ್ಲ.
ಪೊಲೀಸ್ ಆಯುಕ್ತರು ಹೇಳಿಕೆ ನೀಡುವ ಮುನ್ನ ಸೂಕ್ತ ರೀತಿಯಲ್ಲಿ ತನಿಖೆ ನಡೆಸಲಿ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಒತ್ತಾಯಿಸಿದ್ದಾರೆ,
ಕಾರ್ನಿಕಗಳ ಆಚೆಗೆ ವಸ್ತುನಿಷ್ಟ ತನಿಖೆ ನಡೆಸಿ ಕೊರಗಜ್ಜನ ಕ್ಷೇತ್ರ ಮಲಿನ ಪ್ರಕರಣದ ಹಿಂದಿರುವ ಸತ್ಯಗಳನ್ನು ಪೂರ್ಣವಾಗಿ ಹೊರ ತರಬೇಕು.
ಆರೋಪಿಗಳು ದಿಢೀರ್ ತಪ್ಪೊಪ್ಪಿಗೆ ನೀಡಲು ಅಜ್ಜನ ಕ್ಷೇತ್ರಕ್ಕೆ ಆಗಮಿಸಿದುದರ ಹಿಂದೆ ಕಾಣದ ಕೈಗಳೇನಾದರು ಇದೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಸಬೇಕು.
ರಾಜಕೀಯ ಶಕ್ತಿಗಳಿಗೆ ಕೈ ಆಡಿಸಲು ಅವಕಾಶ ನೀಡಬಾರದು ಎಂದು ಮುನೀರ್ ಕಾಟಿಪಳ್ಳ ಮನವಿ ಮಾಡಿದ್ದಾರೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
DAKSHINA KANNADA
ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.
ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್ ಗಾರ್ಡ್ ತಂಡ ಹೆಲಿಕಾಪ್ಟರ್ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್ ಗಾರ್ಡ್ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!
ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.
ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.
ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.
ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.
ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.
- LATEST NEWS4 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ