BELTHANGADY
ರಾಜ್ಯದ ಈ ಏಕೈಕ ಗ್ರಾಮದಲ್ಲಿ ಕೊರೊನಾಕ್ಕೆ ನೋಎಂಟ್ರಿ..! ಯಾಕೆ ಗೊತ್ತಾ..!?
ಬೆಳ್ತಂಗಡಿ : ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಸರಕಾರಗಳು ಇನ್ನಿಲ್ಲದ ಪ್ರಯತ್ನವನ್ನು ನಡೆಸುತ್ತಿದೆ. ಎಷ್ಟೋ ಕೊರೊನಾ ವಾರಿಯರ್ಸ್ ಗಳು ಕೊರೊನಾ ವಿರುದ್ಧ ಹೋರಾಟ ಮಾಡುತ್ತಲೇ ಪ್ರಾಣ ತೆತ್ತಿದ್ದಾರೆ.
ನಾಡಿನಾದ್ಯಂತ ಅಸಂಖ್ಯಾತ ರೋಗಿಗಳು ಕೊರೊನಾದಿಂದ ಸಾವನ್ನಪಿದ್ದಾರೆ. ಇಡೀ ವಿಶ್ವವನ್ನು ಇನ್ನಿಲ್ಲದಂತೆ ಕೊರೊನಾ ಭಾದಿಸಿದರೂ ಕರಾವಳಿ ಜಿಲ್ಲೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಬಾಂಜಾರು ಮಲೆ ಎಂಬ ಪುಟ್ಟ ಗ್ರಾಮಕ್ಕೆ ಈ ಮಹಾಮಾರಿಯ ಎಂಟ್ರಿಯೇ ಇಲ್ಲ ಅಂದ್ರೇ ನಂಬ್ತೀರಾ..?.
ನಾಡು ಹಾಗೂ ವಿಶ್ವಕ್ಕೆ ಕೊರೊನಾ ಮೊದಲನೇ ಹಾಗೂ ಇದೀಗ 2 ನೇ ಅಲೆ ಕೂಡ ಗಂಭೀರ ರೂಪದಲ್ಲಿ ಬಾಧಿಸಿದ್ದು ಅಪಾರ ಪ್ರಮಾಣದಲ್ಲಿ ಸಾವು ನೋವುಗಳು ಸಂಭವಿಸಿದೆ ಆದ್ರೂ ಕರಾವಳಿಯ ಈ ಪುಟ್ಟ ಬಾಂಜಾರು ಮಲೆ ಗ್ರಾಮ ಮಾತ್ರ ಕೊರೊನಾ ಫ್ರೀ ಗ್ರಾಮವಾಗಿದ್ದು ಇಲ್ಲಿನ ಜನ ನೆಮ್ಮದಿಯ ಬದುಕು ಬದುಕುತ್ತಿದ್ದಾರೆ.
ಆದರೆ ಮಹಾಮಾರಿ ಕೊರೋನಾ ಸೋಂಕಿನ ವಿರುದ್ಧ ಹಳ್ಳಿಯ ಜನ ಮಾತ್ರ ಒಗ್ಗಟ್ಟಿನ ಹೋರಾಟ ಮುಂದುವರೆಸಿದ್ದಾರೆ. ಸದ್ಯ ಈ ಗ್ರಾಮದಲ್ಲಿ 40 ಕ್ಕೂ ಹೆಚ್ಚು ಕುಟುಂಬಗಳು 170ಕ್ಕೂ ಹೆಚ್ಚು ಜನ ವಾಸ ಮಾಡಿಕೊಂಡಿದ್ದಾರೆ.
ಸ್ವಾವಲಂಬಿಯ ಬದುಕು ಸಾಗಿಸುತ್ತಿರುವ ಇಲ್ಲಿಯ ಜನರು ಕೊರೊನಾ ಸಾಂಕ್ರಾಮಿಕ ರೋಗದ ಕಾರಣ ಪೇಟೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಗ್ರಾಮದ ಇಬ್ಬರು ಮಾತ್ರ ಪೇಟೆಗೆ ಹೋಗಿ ಎಲ್ಲಾ ಗ್ರಾಮಸ್ಥರಿಗೆ ದಿನಸಿ ಇತರ ಅಗತ್ಯ ವಸ್ತುಗಳನ್ನು ತರುತ್ತಾರೆ.
ಇದಕ್ಕೂ ಮುನ್ನ ಗ್ರಾಮದಲ್ಲಿ ಸಂಚಾರ ಮಾಡಿ ಮನೆ ಮನೆಗಳಿಂದ ದಿನಸಿ ಚೀಟಿ ಸಂಗ್ರಹಿಸುತ್ತಾರೆ. ಇನ್ನು ಎಷ್ಟು ಶಿಸ್ತು ಅಳವಡಿಸಿದ್ದಾರೆ ಅಂದ್ರೆ ಗ್ರಾಮದೊಳಗೆ ಹೊರಗಿನಿಂದ ಯಾರೂ ಬರುವಂತಿಲ್ಲ ಮತ್ತು ಯಾರೂ ಗ್ರಾಮಸ್ಥರು ಕೂಡ ಹೊರಹೋಗುವಂತಿಲ್ಲ.
ಈ ಸ್ವಯಂ ಶಿಸ್ತನ್ನು ಬಂಜಾರು ಗ್ರಾಮ ಪ್ರತಿಯೊಬ್ಬ ಗ್ರಾಮಸ್ಥ ಕೂಡ ಯಾತಾವತ್ತಾಗಿ ಪಾಲಿಸಿಕೊಂಡು ಬರುತ್ತಿದ್ದಾರೆ. ಇದೇ ಶಿಸ್ತು ಕೊರೊನಾ ಮುಕ್ತ ಗ್ರಾಮ ಮಾಡಲು ಸಹಕಾರಿಯಾಗಿದೆ.
ಗ್ರಾಮ ಪಾಲಿಸಿಕೊಂಡು ಬರುತ್ತಿರುವ ಸಾಮಾಜಿಕ ಕಾಳಜಿ ಕೂಡ ಎಲ್ಲೆಡೆ ಮಚ್ಚುಗೆ ಪಾತ್ರವಾಗಿದೆ…
BELTHANGADY
ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.
ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.
BELTHANGADY
ಬೆಳ್ತಂಗಡಿ: ವಿದ್ಯುತ್ ತಗುಲಿ ಯುವಕ ಮೃ*ತ್ಯು
ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.
ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.
BELTHANGADY
ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ
ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.
ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.
ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ