Connect with us

    BANTWAL

    ನವೆಂಬರ್ 26 ರಿಂದ ಈ ಬಾರಿಯ ಕಂಬಳ ಸೀಸನ್ ಪ್ರಾರಂಭ..! ಪಿಲಿಕುಳ ಈ ಬಾರಿಯೂ ಡೌಟ್…

    Published

    on

    ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಬಿಡುಗಡೆಗೊಳಿಸಿದ್ದ ವೇಳಾಪಟ್ಟಿಯಂತೆ ಇದೇ ವಾರ ಆರಂಭವಾಗಬೇಕಿದ್ದ ಕಂಬಳ ಸೀಸನ್ ಮುಂದೂಡಲಾಗಿದ್ದು ನ.26ರಂದು ಕಕ್ಯಪದವು ಸತ್ಯಧರ್ಮ ಜೋಡುಕರೆ ಕಂಬಳದೊಂದಿಗೆ ಆರಂಭವಾಗಲಿದೆ.

    ಈ ಋತುವಿನ ಮೊದಲ ಮೂರು ಕಂಬಳಗಳು ಮುಂದೂಡಲ್ಪಟ್ಟಿರುವುದರಿಂದ ಕಂಬಳ ಆರಂಭ ಮೂರು ವಾರ ವಿಳಂಬವಾಗಲಿದೆ. ಇದರೊಂದಿಗೆ ಒಟ್ಟು ಕಂಬಳಗಳ ಸಂಖ್ಯೆ 24ರಿಂದ 21ಕ್ಕೆ ಇಳಿಕೆಯಾಗಲಿದೆ.

    ಸಾಂಪ್ರದಾಯಿಕ ಕಂಬಳವಾಗಿರುವ ಶಿರ್ವ ಕಂಬಳ ಹಗಲು ಮಾತ್ರ ನಡೆಯುತ್ತದೆ.

    ಈ ಬಾರಿ ಗದ್ದೆಯಲ್ಲಿ ಭತ್ತ ನಾಟಿ ವಿಳಂಬವಾಗಿ, ಮಳೆಯ ನಡುವೆ ಕಟಾವು ಇನ್ನಷ್ಟೇ ನಡೆಯಬೇಕಿರುವುದರಿಂದ ಶಿರ್ವ ಕಂಬಳವನ್ನು ಒಂದು ತಿಂಗಳು ಮುಂದೂಡಲಾಗಿದ್ದು, ಡಿ.13ರಂದು ಮಂಗಳವಾರ ನಡೆಯಲಿದೆ.

    ನ.19ರಂದು ನಿಗದಿಯಾಗಿದ್ದ ಪಜೀರು ಕಂಬಳ ಕರೆಗೆ ಮೊನ್ನೆಯಷ್ಟೇ ಶಿಲಾನ್ಯಾಸ ನಡೆದಿದೆ.

    ಕರೆ ಇನ್ನಷ್ಟೇ ಸಿದ್ಧವಾಗಬೇಕಿರುವುದರಿಂದ ಹೊಸ ದಿನಾಂಕ ನೀಡಲಾಗಿಲ್ಲ. ಈ ನಡುವೆ, ಈ ಪ್ರದೇಶದ ಮೂರ್ನಾಲ್ಕು ಕಂಬಳ ಸಮಿತಿಗಳು ಸೇರಿಕೊಂಡು ಈ ಬಾರಿ ಪಜೀರಿನಲ್ಲಿ ಕಂಬಳ ನಡೆಸುವ ಮಾತುಕತೆಯೂ ನಡೆಯುತ್ತಿದೆ.

    ಕಟಪಾಡಿ, ಜೆಪ್ಪು ಸಹಿತ ಇತರ ಕೆಲವು ಕಂಬಳಗಳ ದಿನಾಂಕಗಳಲ್ಲೂ ಸಣ್ಣಪುಟ್ಟ ಬದಲಾವಣೆಯಾಗಿದೆ.

    ಇಂತಹ ದಿನಾಂಕ ಹೊಂದಾಣಿಕೆ ಮುಂದೆಯೂ ನಡೆಯಬಹುದು ಎಂದು ಸಮಿತಿ ಅಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ ತಿಳಿಸಿದ್ದಾರೆ.

    ಆನೇಕ ವರ್ಷಗಳಿಂದ ಸ್ಥಗಿತಗೊಂಡಿದ್ದ ಪಿಲಿಕುಳ ಕಂಬಳ ಈ ಬಾರಿ ಆರಂಭವಾಗುವ ಸೂಚನೆಗಳು ದೊರಕಿದ್ದು ನ.12ರ ದಿನಾಂಕ ನಿಗದಿಯಾಗಿತ್ತು.

    ಆದರೆ ‘ಈ ಬಾರಿ ಕಂಬಳ ನಡೆಸಲು ಭಾರಿ ಆಸಕ್ತಿ ವಹಿಸಿದ್ದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ವರ್ಗಾವಣೆಗೊಂಡಿದ್ದಾರೆ.

    ಹೊಸ ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ಇನ್ನಷ್ಟೇ ಅಧಿಕಾರ ವಹಿಸಿಕೊಳ್ಳಬೇಕಿದೆ.

    ಜೊತೆಗೆ ಕಂಬಳಕ್ಕೆ ಬೇಕಾದ ಸಿದ್ದತೆಗಳು ಇನ್ನೂ ಆರಂಭವಾಗಿಲ್ಲ ಹೀಗಾಗಿ ಪಿಲಿಕುಳದಲ್ಲಿ ಈ ಬಾರಿಯೂ ಕಂಬಳ ನಡೆಯುವುದು ಡೌಟ್.. ಎಂದೇ ಹೇಳಲಾಗುತ್ತಿದೆ.

    BANTWAL

    ಹಿರಿಯ ಸಾಮಾಜಿಕ ಮುಂದಾಳು ಉದ್ಯಮಿ ರಘು ಸಪಲ್ಯ ನಿ*ಧನ

    Published

    on

    ಮಂಗಳೂರು: ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯದಲ್ಲಿ ಸಕ್ರೀಯರಾಗಿದ್ದ ಮತ್ತು ಹಲವು ದೇವಸ್ಥಾನಗಳ ಅಧ್ಯಕ್ಷರಾಗಿ, ದೇವಸ್ಥಾನಗಳ ಅಭಿವೃದ್ದಿಗೆ ಕಾರಣೀಕರ್ತರಾಗಿದ್ದ ಉದ್ಯಮಿ ರಘು ಸಪಲ್ಯ ನಿ*ಧನರಾಗಿದ್ದಾರೆ.

    ಬಂಟ್ವಾಳ ತಾಲೂಕು ಗಾಣಿಗ ಸಂಘದ ಅಧ್ಯಕ್ಷರಾಗಿ, ಸುಮಂಗಲ ಹಾಲ್ ಹಾಗೂ ಸುಮಂಗಲ ಕೋ ಅಪರೇಟ್‌ ಬ್ಯಾಂಕ್ ಸ್ಥಾಪನೆಯ ಮೂಲಕ ಸಹಕಾರಿ ಕ್ಷೇತ್ರಕ್ಕೂ ತಮ್ಮ ಕೊಡುಗೆ ನೀಡಿದ್ದಾರೆ. ಜ್ಯೋತಿ ಬೀಡಿ ಎಂಬ ಬೀಡಿ ಉದ್ಯಮದ ಮೂಲಕ ಅನೇಕ ಬಡ ಕುಟುಂಬಗಳಿಗೆ ಬದುಕು ಕಟ್ಟಿಕೊಟ್ಟ ಹೆಗ್ಗಳಿಕೆ ಇವರದ್ದು. ಬಡವರಿಗೆ ಅಶಕ್ತರಿಗೆ ಹಾಗೂ ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಗಳಿಗೆ ಕೊಡುಗೈ ಧಾನಿಯಾಗಿ ಇವರು ಗುರುತಿಸಿಕೊಂಡಿದ್ದರು.

    ಅಪಾರ ದೈವ ಭಕ್ತರಾಗಿದ್ದ ರಘು ಸಪಲ್ಯ ಅವರು ಜಿಲ್ಲೆಯಲ್ಲಿ ಮಾತ್ರವಲ್ಲದೆ ಹೊರ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳ ಅಭಿವೃದ್ದಿಗೆ ಸಹಕಾರ ನೀಡಿದ್ದರು. ನೇರ ನಡೆನುಡಿಯವರಾಗಿದ್ದರೂ ಅಜಾತ ಶತ್ರು ಎಂಬ ಹೆಸರು ಗಳಿಸಿದ್ದ ಇವರು ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂಘದ ಸ್ವಯಂ ಸೇವಕರಾಗಿ ಹೋರಾಟದಲ್ಲಿ ಭಾಗಿಯಾಗಿದ್ದರು.

    ಪಾಣೆ ಮಂಗಳೂರು ಭಯಂಕೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಟ್ರಸ್ಟ್, ಉಳಿಯ ಕ್ಷೇತ್ರ, ಅತ್ತಾವರ ಉಮಾಮಹೇಶ್ವರ ಕ್ಷೇತ್ರ, ಕೀರ್ತಿಶ್ವರ ಕ್ಷೇತ್ರ ಮಂಜೇಶ್ವರ, ಕೋದಂಡ ರಾಮ ಭಜನಾ ಮಂದಿರ ಹೀಗೆ ಹಲವಾರು ಧಾರ್ಮಿಕ ಕ್ಷೇತ್ರದಲ್ಲಿ ಇವರು ಸೇವೆ ಸಲ್ಲಿಸಿದ್ದಾರೆ.

    Continue Reading

    BANTWAL

    ವಗ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬಸ್; ಹಲವರಿಗೆ ಗಾಯ

    Published

    on

    ಬಂಟ್ವಾಳ ತಾಲೂಕಿನ ವಗ್ಗದ ಸಮೀಪ ಕೊಪ್ಪಳ ಎಂಬಲ್ಲಿ ಸರ್ಕಾರಿ ಬಸ್‌ ಉರುಳಿ ಬಿದ್ದಿದ್ದು, ಹಲವರು ಗಾಯಗೊಂಡಿದ್ದಾರೆ.

    ಧರ್ಮಸ್ಥಳ ಮಂಗಳೂರು ನಡುವೆ ಸಂಚರಿಸುವ ಸರ್ಕಾರಿ ಬಸ್ ಇದಾಗಿದ್ದು, ಕೊಪ್ಪಳ ಎಂಬಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ರಸ್ತೆಯ ಪಕ್ಕದ ಗುಂಡಿಗೆ ಬಸ್ ಉರುಳಿ ಬಿದ್ದಿದ್ದು ಬಸ್‌ನಲ್ಲಿದ್ದ ಹಲವರಿಗೆ ಗಾಯಗಳಾಗಿದೆ. ತಕ್ಷಣ ಸ್ಥಳೀಯ ಯುವಕರು ಸೇರಿ ಬಸ್‌ ಒಳಗಿದ್ದ ಪ್ರಯಾಣಿಕರನ್ನು ಬಸ್‌ ನಿಂದ ಹೊರ ತೆಗೆದಿದ್ದಾರೆ.

    ಗಾಯಾಳುಗಳನ್ನು ಖಾಸಗಿ ವಾಹನಗಳ ಮೂಲಕ ಸಮೀಪದ ಆಸ್ಪತ್ರೆಗೆ ರವಾನಿಸುವ ಕೆಲಸ ಮಾಡಿದ್ದಾರೆ. ಬಸ್ ಬರುತ್ತಿರುವ ವೇಳೆ ಬೈಕ್‌ ಒಂದು ಅಡ್ಡ ಬಂದಿದ್ದು ಈ ವೇಳೆ ಬಸ್ ನಿಯಂತ್ರಿಸುವ ವೇಳೆ ರಸ್ತೆಯಿಂದ ಪಕ್ಕಕ್ಕೆ ಉರುಳಿದೆ ಎಂದು ಬಸ್ ಚಾಲಕ ಮಾಹಿತಿ ನೀಡಿದ್ದಾರೆ . ಆದರೆ ಸ್ಥಳಿಯರು ಇದನ್ನು ನಿರಾಕರಿಸಿದ್ದು ಬಸ್ ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಿದ್ದಾರೆ.

    ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿದ್ದು, ಮಾಹಿತಿ ಪಡೆದುಕೊಂಡು ಘಟನೆಗೆ ಕಾರಣ ಏನು ಎಂಬ ಬಗ್ಗೆ ವಿಚಾರಣೆ ಮುಂದುವರೆಸಿದ್ದಾರೆ.

    Continue Reading

    BANTWAL

    VIDEO: ಕೆಸರುಗದ್ದೆಯಲ್ಲಿ ಜಿಲ್ಲಾಧಿಕಾರಿಯ ಪಿಲಿ ನಲಿಕೆ

    Published

    on

    ಬಂಟ್ವಾಳ: ತಾಲೂಕಿನ ಅನಂತಾಡಿ ಗ್ರಾಮದ ನವ ಭಾರತ್ ಯುವಕ ಸಂಘ ( ರಿ ) ಅನಂತಾಡಿ ವತಿಯಿಂದ ಪಡಿಪಿರೆ ಗದ್ದೆಯಲ್ಲಿ ಜರಗಿದ 6 ನೇ ವರ್ಷದ “ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಅನೀಶ್ ಅಶ್ವತ್ತಾಡಿ ವಹಿಸಿದ್ದರು.

    ಕಾರ್ಯಕ್ರಮದ ಧ್ವಜಾರೋಹಣವನ್ನು ಡಾ.ರೂಪಲತಾ ಕೊಂಗಲಾಯಿ ನೆರವೇರಿಸಿ , ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಲಯನ್ಸ್ ಕ್ಲಬ್ ಮಾಣಿ ವಲಯ ಅಧ್ಯಕ್ಷ ರಾಮ್ ಕಿಶಾನ್ ರೈ ನೆರವೇರಿಸಿದರು. ಕ್ರೀಡಾಕೂಟದ ಕೆಸರುಗದ್ದೆಯ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರ ಸಂಘದ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಹಾಗೂ ವಿಠಲ ಕೋಟ್ಯಾನ್ ಪೊಯ್ಯೇ ನೆರವೇರಿಸಿದರು.

    ಕೆಸರು ಗದ್ದೆಯಲ್ಲಿ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ, ವಿವಿಧ ಕ್ರೀಡಾಕೂಟಗಳನ್ನು ನಡೆಸಲಾಯಿತು.  ಈ ಸಂದರ್ಭದಲ್ಲಿ ನಮ್ಮ ತುಳುವ ಸಂಸ್ಕೃತಿಯ ಚಾಪೆ ಹೆಣೆಯುವುದು, ಬುಟ್ಟಿ ಹೆಣೆಯುವುದು, ಮುಟ್ಟಾಲೆ ಕಟ್ಟುವುದು, ತೆಂಗಿನಗರಿ ಹೆಣೆಯುವುದು,  ಅಕ್ಕಿ ಮುಡಿ ಕಟ್ಟುವ ಪ್ರಾತ್ಯಕ್ಷತೆ ನಡೆಸಲಾಯಿತು. 

    ಕತ್ತಲು ಆವರಿಸಿದ ಬ್ರಹ್ಮಗಿರಿಯ ಪ್ರವಾಸಿತಾಣ..! ಮೆಸ್ಕಾಂ ಅಧಿಕಾರಿಗಳಿಂದ ವಿದ್ಯುತ್ ಕಡಿತ

    ವೇದಿಕೆಯಲ್ಲಿ ಮಾಣಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ, ನಿವೃತ್ತ ಶಿಕ್ಷಕ ರಾಮಣ್ಣ ಗೌಡ ಕೋಂಗಲಾಯಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನಾರ್ಶ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ನೇರಳಕಟ್ಟೆ, ಸರಕಾರಿ ಪದವಿ ಪೂರ್ವ ಕಾಲೇಜು ವಾಮದಪದವಿನ ರಾಧಾಕೃಷ್ಣಮೂಲ್ಯ, ಮಲ್ಲರಾಯ ದೈವ ಪರಿಚರಕರುಗಳಾದ ರಾಮಣ್ಣ ಗೌಡ, ಬಾಲಪ್ಪ ಮಡಿವಾಳ, ಲಕ್ಷ್ಮಣ ಪೂಜಾರಿ ಬಾಕಿಲ, ಪದ್ಮನಾಭ ಪೂಜಾರಿ ಈಡೆಮುಂಡೆವು ಮೊದಲಾದವರು ಉಪಸ್ಥಿತರಿದ್ದರು.

    ಮಕ್ಕಳೊಂದಿಗೆ ಹೆಜ್ಜೆ ಹಾಕಿದ ಜಿಲ್ಲಾಧಿಕಾರಿ
    ಈಗಾಗಲೇ ಶಾಲಾ ಮಕ್ಕಳಿಗೆ ರಜೆ ನೀಡುವ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ಫೇವರೆಟ್ ಆಗಿರುವ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಅನಂತಾಡಿಯಲ್ಲಿ ಸಂಘಟನೆಯವರು ಆಯೋಜನೆ ಮಾಡಿದ್ದ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಭಾಗವಹಿಸಿ, ಮಕ್ಕಳೊಂದಿಗೆ ಮಕ್ಕಳಾಗಿ ಕೆಸರಿನಲ್ಲಿ ಆಟವಾಡಿದ್ದಾರೆ. ಅಲ್ಲದೇ ಕರಾವಳಿಯ ಪಿಲಿ ನಲಿಕೆಗೆ ಹೆಜ್ಜೆ ಹಾಕಿ ಎಲ್ಲರ ಹುಬ್ಬೆರಗಾಗುವಂತೆ ಮಾಡಿದ್ದಾರೆ. ಮಕ್ಕಳ ಜೊತೆ ತಾನೂ ಮಗುವಾಗಿ ಮೈಮರೆತು ಹಾಡಿನ ನೃತ್ಯ ಮಾಡಿದ ಜಿಲ್ಲಾಧಿಕಾರಿಗಳ ನಡೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಇದರ ಜೊತೆಗೆ ಯುವಕರ ಜೊತೆ ವಾಲಿಬಾಲ್ ಆಡುವ ಮೂಲಕವೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರವರು ಎಲ್ಲರ ಗಮನ ಸೆಳೆದಿದ್ದಾರೆ.

     

    Continue Reading

    LATEST NEWS

    Trending