Connect with us

    DAKSHINA KANNADA

    ಇನ್​ಸ್ಟಾಗ್ರಾಂನಲ್ಲಿ ಈ ರೀಲ್ಸ್​ ನೋಡುವುದರಿಂದಲೂ ನಿಮ್ಮ ತೂಕ ಹೆಚ್ಚಾಗಬಹುದು!

    Published

    on

    ಫೇಸ್​ಬುಕ್, ಇನ್​ಸ್ಟಾಗ್ರಾಂ ಮತ್ತು ಸ್ನಾಪ್​ಚಾಟ್​ನಲ್ಲಿ ನಾವು ನೋಡುವ ರೀಲ್‌ಗಳು ಹೆಚ್ಚು ವ್ಯಸನಕಾರಿ ಎಂದು ಎಲ್ಲಾ ವಯಸ್ಸಿನ ಜನರು ಒಪ್ಪಿಕೊಳ್ಳುತ್ತಾರೆ. ಪ್ರತಿಯೊಬ್ಬರೂ ತಾವು ವೀಕ್ಷಿಸಲು ಇಷ್ಟಪಡುವದನ್ನು ತಮ್ಮ ಆದ್ಯತೆಗಳನ್ನು ಹೊಂದಿದ್ದರೂ, ಒಮ್ಮೆ ನೀವು ಸ್ಕ್ರೋಲಿಂಗ್ ಮಾಡಲು ಪ್ರಾರಂಭಿಸಿದರೆ, ಸಮಯ ಕಳೆಯುವುದೇ ಗೊತ್ತಾಗುವುದಿಲ್ಲ. ನಾವು ಆಹಾರಕ್ಕೆ ಸಂಬಂಧಿಸಿದಂತೆ ಅತಿಯಾಗಿ ರೀಲ್ಸ್ ನೋಡುವುದರಿಂದಲೂ ನಮ್ಮ ತೂಕ ಹೆಚ್ಚಾಗುತ್ತದೆ ಎಂದು ಹೇಳಲಾಗಿದೆ.

    “ಆಹಾರದ ವೀಡಿಯೊಗಳು ವ್ಯಸನಕಾರಿಯಾಗಿದೆ. ಏಕೆಂದರೆ ಅವು ನಮ್ಮ ಆಹಾರದ ಕಡುಬಯಕೆಗಳೊಂದಿಗೆ ಸಂಯೋಜಿಸಲ್ಪಟ್ಟ ಉತ್ಪನ್ನಕ್ಕೆ ಹಂತ-ಹಂತದ ಪ್ರಕ್ರಿಯೆಯನ್ನು ಪ್ರದರ್ಶಿಸುತ್ತವೆ” ಎಂದು ತಜ್ಞರು ಹೇಳುತ್ತಾರೆ. ನೀವು ರೀಲ್ಸ್​ನಲ್ಲಿ ರುಚಿಯಾದ ಅಡುಗೆ ತಯಾರಿಸುವುದನ್ನು ಹೆಚ್ಚಾಗಿ ನೋಡುತ್ತಿದ್ದರೆ, ಫುಡ್ ವ್ಲಾಗ್​​ಗಳನ್ನು ನೋಡುತ್ತಿದ್ದರೆ ನಿಮಗೂ ಆ ತಿನಿಸನ್ನು ತಿನ್ನಬೇಕೆಂಬ ಬಯಕೆಯಾಗುವುದು ಸಹಜ. ಅದು ನಿಮಗೇ ಗೊತ್ತಿಲ್ಲದಂತೆ ನಿಮ್ಮಲ್ಲಿ ತಿನ್ನುವ ಹಪಹಪಿಯನ್ನು ಹೆಚ್ಚಿಸುತ್ತದೆ.

    ದೆಹಲಿ ಮೂಲದ ಮನಶ್ಶಾಸ್ತ್ರಜ್ಞರಾದ ಶಿವಂಗಿ ರಜಪೂತ್ ಪ್ರಕಾರ, ಆಹಾರದ ರೀಲ್‌ಗಳನ್ನು ನೋಡುವುದು ನಿಮ್ಮ ಮನಸ್ಸಿನ ಮೇಲೆ ಹಲವಾರು ರೀತಿಯಲ್ಲಿ ಪರಿಣಾಮ ಬೀರುತ್ತದೆ. ಈ ರೀಲ್‌ಗಳು ನಿಮ್ಮ ಮನಸ್ಥಿತಿಯನ್ನು ಹೆಚ್ಚಿಸಬಹುದು, ವಿಶ್ರಾಂತಿ ನೀಡಬಹುದು ಮತ್ತು ಅಡುಗೆಮನೆಯಲ್ಲಿ ಸೃಜನಶೀಲತೆಯನ್ನು ಪ್ರೇರೇಪಿಸಬಹುದು. ಇದು ಬಲವಾದ ಕಡುಬಯಕೆಗಳನ್ನು ಪ್ರಚೋದಿಸಬಹುದು, ಇದು ಅತಿಯಾಗಿ ತಿನ್ನುವುದು ಅಥವಾ ಅನಾರೋಗ್ಯಕರ ತಿನ್ನುವ ಮಾದರಿಗಳಿಗೆ ಕಾರಣವಾಗುತ್ತದೆ.

    ಪ್ರಲೋಭನಗೊಳಿಸುವ ಆಹಾರ ಚಿತ್ರಗಳಿಗೆ ನಿರಂತರ ಒಡ್ಡಿಕೊಳ್ಳುವಿಕೆಯು ಮೆದುಳಿನ ಡೋಪಮೈನ್ ವ್ಯವಸ್ಥೆಯನ್ನು ಸಕ್ರಿಯಗೊಳಿಸುತ್ತದೆ ಮತ್ತು ಆಹ್ಲಾದಕರ ಭಾವನೆಗಳನ್ನು ಸೃಷ್ಟಿಸುತ್ತದೆ. ನೀವು ಹಲವಾರು ವಿಭಿನ್ನ ವೀಡಿಯೊಗಳನ್ನು ನೋಡುವುದರಿಂದ, ನಿಮ್ಮ ಬೆರಳುಗಳು ಸ್ಕ್ರೋಲಿಂಗ್ ಮಾಡುತ್ತಲೇ ಇರುತ್ತವೆ, ಇದು ಹೆಚ್ಚಿದ ಪರದೆಯ ಸಮಯ ಮತ್ತು ದೈಹಿಕ ಚಟುವಟಿಕೆಯ ಕೊರತೆಗೆ ಕಾರಣವಾಗುತ್ತದೆ. ನಿಷ್ಕ್ರಿಯತೆಯು ನಿಮ್ಮ ಸಾಮಾನ್ಯ ಹಸಿವಿನ ಸಂಕೇತವನ್ನು ಅಡ್ಡಿಪಡಿಸುತ್ತದೆ ಮತ್ತು ತಿನ್ನಲು ಕಾರಣವಾಗಬಹುದು.

    DAKSHINA KANNADA

    ಬಂಟ್ವಾಳ :ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾ*ತ; ಪತ್ನಿ ಸಾ*ವು; ಪತಿ ಗಂಭೀ*ರ

    Published

    on

    ಬಂಟ್ವಾಳ : ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪತ್ನಿ ಸಾ*ವನ್ನಪ್ಪಿದ್ದು, ಪತಿ ಗಂ*ಭೀರವಾಗಿ ಗಾ*ಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾ*ವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಅನಿಶ್ ಕೃಷ್ಣ ಗಂಭೀ*ರವಾಗಿ ಗಾ*ಯಗೊಂಡಿದ್ದಾರೆ.

    ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವದಂಪತಿಯ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿದೆ. ಬಳಿಕ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿ*ಕ್ಕಿ ಹೊಡೆದಿದೆ.

    ಡಿ*ಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

    ಎರಡು ದಿನದ ಹಿಂದಷ್ಟೇ ಮದುವೆ : 

    ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮಾನಸ ಹಾಗೂ ಅನಿಶ್ ಕೃಷ್ಣ  ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈ ‌ಘ‌ಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ

    Continue Reading

    DAKSHINA KANNADA

    ಯಕ್ಷಗಾನ ಕಲಾವಿದ ಕುಪ್ಪೆಪದವು ಉಮೇಶ್ ಸಾಲ್ಯಾನ್ ರಿಗೆ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ

    Published

    on

    ಮಂಗಳೂರು : ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಹಿರಿಯ ಅರ್ಚಕ ದಿ.ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಪ್ರಯುಕ್ತ ಕಟೀಲು ಮೇಳದ ಹಿರಿಯ ಯಕ್ಷಗಾನ ವೇಷಧಾರಿ ಕುಪ್ಪೆಪದವು ಉಮೇಶ್ ಸಾಲ್ಯಾನ್ ಅವರಿಗೆ ಈ ವರ್ಷದ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ ನೀಡಲಾಗುವುದು.

    ಆಸ್ರಣ್ಣ ಅಭಿಮಾನಿ ಬಳಗ ಕದ್ರಿ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಚಿನ್ನದ ಪದಕದೊಂದಿಗೆ ಕುಪ್ಪೆಪದವು ಉಮೇಶ್ ಸಾಲ್ಯಾನ್ ರವರನ್ನು ಗೌರವಿಸಲಾಗುವುದು.

    ಇದನ್ನೂ ಓದಿ : ಮಂಗಳೂರು: ‘ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಗಿ ಹಿಂಪಡೆಯುವುದಿಲ್ಲ’ – ಡಿಸಿ ಮುಗಿಲನ್

    ಕಟೀಲು ಲಕ್ಷ್ಮಿ ನಾರಾಯಣ ಆಸ್ರಣ್ಣ ಮತ್ತು ಬಂಧುಗಳು ಸೆಪ್ಟೆಂಬರ್ 14 ರ ಶನಿವಾರ ಸಂಜೆ ಶ್ರೀ ಗೋಪಾಲಕೃಷ್ಣ ಆಸ್ರ ಣ್ಣ ಸಭಾಭವನದಲ್ಲಿ ಹಮ್ಮಿಕೊಡಿರುವ ಸಂಸ್ಮರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಆಸ್ರಣ್ಣ ಅಭಿಮಾನಿ ಬಳಗದ, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಹಾಗೂ ನವನೀತ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Continue Reading

    DAKSHINA KANNADA

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಸೆ. 12 ರವರೆಗೆ ಕರಾವಳಿಯಲ್ಲಿ ಭಾರೀ ಮಳೆ

    Published

    on

    ಮಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಸೆಪ್ಟೆಂಬರ್ 12 ರವರೆಗೆ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

    ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಇಂದು ಮೋಡಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

    Continue Reading

    LATEST NEWS

    Trending