Connect with us

    BELTHANGADY

    ಮತ್ಸ್ಯ ತೀರ್ಥಕ್ಕೆ ವಿಷ ಚೆಲ್ಲಿ ಸಾವಿರಾರು ಮತ್ಸ್ಯ ಮಾರಣ ದುರಂತಕ್ಕೆ ಇಂದಿಗೆ 25 ವರ್ಷ..!

    Published

    on

    ಬೆಳ್ತಂಗಡಿ: ನಾಡಿನ ಪ್ರಸಿದ್ಧ ಮತ್ಸ್ಯ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲದ ಶಿಶಿಲೇಶ್ವರನ ಸನ್ನಿಧಿಯ ಕಪಿಲಾ ನದಿಯಲ್ಲಿರುವ  ಮತ್ಸ್ಯ ಸಂಕುಲವೆಂದರೆ ಭಕ್ತರಿಗೆ ಅದೆಷ್ಟೋ ಪ್ರೀತಿ.ಶಿಶಿಲೇಶ್ವರನ ಸಾನಿಧ್ಯಕ್ಕೆ ಬರುವ ಭಕ್ತರಿಗಿಂತಲೂ ದೇವರ ಮೀನುಗಳಿಗೆ ಆಹಾರಗಳನ್ನು ಹಾಕಿ ಅದರ ನರ್ತನವನ್ನು ಕಂಡು ಖುಷಿಪಡುವವರೇ ಹೆಚ್ಚು ಎಂದರೆ ತಪ್ಪಾಗಲಾರದು.ಆದರೆ ಇಂದಿಗೆ ಸರಿಯಾಗಿ 25 ವರ್ಷಗಳ ಹಿಂದೆ ಶಿಶಿಲದ ಕಪಿಲ ನದಿಗೆ ರಾಕ್ಷಸಿ ಮನಸ್ಥಿತಿಯ ವ್ಯಕ್ತಿಗಳು ವಿಷಹಾಕಿ ಲಕ್ಷಾಂತರ ಮೀನುಗಳ ಮಾರಣಹೋಮ ನಡೆಯಿತು. ಶಿಶಿಲದಲ್ಲಿ ಅಂದು ನಡೆದಿದ್ದ ಮೀನುಗಳ ಮಾರಣಹೋಮಕ್ಕೆ ಇಂದಿಗೆ 25 ವರ್ಷ..  

    1996ರ ಮೇ 25ರಂದು ಮಧ್ಯಾಹ್ನ 12ಗಂಟೆ ಹೊತ್ತಿಗೆ ಮೀನುಗಳು ವಿಲ ವಿಲ ಒದ್ದಾಡಿ ಸಾಯುತ್ತಿದ್ದವು. ದೇವರ ಮೀನುಗಳು ಸಂಪೂರ್ಣ ನಾಶವಾಗುತ್ತಿದ್ದವು. ಹೃದಯ ವಿದ್ರಾವಕ ದೃಶ್ಯ ಕಂಡು ಸಾವಿರಾರು ಮಂದಿ ಸಂಕಟ ಪಟ್ಟಿದ್ದರು.

    ಯಾರೋ ದುಷ್ಕರ್ಮಿಗಳು ಶಿಶಿಲ ದೇವಾಲಯದ ಕಪಿಲಾ ನದಿಗೆ ವಿಷ ಹಾಕಿದ್ದರು ಎಂದು ತಡವಾಗಿ ತಿಳಿದು ಬಂದಿದೆ. ಇದರಿಂದ   ಲಕ್ಷಾಂತರ ಮೀನುಗಳು ಸಾವನ್ನಪ್ಪಿದ್ದುವು. ಇಡೀ ಕಪಿಲಾ ನದಿಯೆ ವಿಷದಿಂದ ತುಂಬಿತ್ತು. ಪರಿಣಾಮ ಇಡೀ ಗ್ರಾಮದಲ್ಲು ವಿಷಗಾಳಿ, ಕುಡಿಯುವ ನೀರಿಗಾಗಿ ಟ್ಯಾಂಕರ್ ಗಳು ಬಂದಿತ್ತು, ದಿನ ನಿತ್ಯ ಸಾವಿರಾರು ವಾಹನಗಳು ಶಿಶಿಲದ ಪುಟ್ಟ ಗ್ರಾಮಕ್ಕೆ ಬಂದಿದ್ದುವು.ಜನಸಾಗರವೇ ದೇವಾಲಯಕ್ಕೆ ಬಂದು ದುಷ್ಕರ್ಮಿಗಳಿಗೆ ಹಿಡಿಶಾಪ ಹಾಕುತ್ತಿದ್ದರು.. ರಾಜ್ಯದಲ್ಲಿಯೆ ಅದು ದೊಡ್ದ ಸುದ್ಧಿಯಾಗಿತ್ತು. ದೇವಾಲಯದ ಆಡಳಿತ ಮಂಡಳಿ, ಮತ್ಸ್ಯ ಹಿತರಕ್ಷಣಾ ವೇದಿಕೆ, ವಿಶ್ವಹಿಂದೂ ಪರಿಷತ್ತು, ಮೊದಲಾದ ಸಂಘಟನೆಗಳು ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಹೋರಾಟದ ನೇತೃತ್ವ ವಹಿಸಿದ್ದುವು.

    ಪತ್ರಿಕಾ ತಂಡಗಳು, ಟಿ ವಿ ಮಾದ್ಯಮದವರು, ಜಿಲ್ಲಾಧಿಕಾರಿ, ಸಹಾಯಕ ಕಮೀಶನರ್ ಪುತ್ತೂರು, ಜಿಲ್ಲಾ  ಪೊಲೀಸ್ ಅಧಿಕಾರಿ, ಪೊಲೀಸ್ ವ್ಯಾನ್ ಗಳು, ಸರಕಾರಿ ಅಧಿಕಾರಿಗಳು, ಧಾರ್ಮಿಕ ಮುಖಂಡರು, ಜನಪ್ರತಿನಿಧಿಗಳು, ಸುತ್ತಮುತ್ತಲಿನ ಸಾವಿರಾರು ಭಕ್ತರ ದಂಡೇ ಶಿಶಿಲಕ್ಕೆ ಆಗಮಿಸಿತ್ತು..

    ಬಾಲಕೃಷ್ಣ ಭಟ್ ವಿಧಾನ ಪರಿಷತ್ ನಲ್ಲಿ ಹೋರಾಟ ನಡೆಸಿದ್ದರು.  ಧರ್ಮಸ್ಥಳದ ಧರ್ಮಾಧಿಕಾರಿಗಳು ಆಗಮಿಸಿ ಆ ದೃಶ್ಯ ನೋಡಿ ಮಮ್ಮಲ ಮರುಗಿದ್ದರು.

    ಪೇಜಾವರ ಶ್ರೀಗಳು ಆಗಮಿಸಿ ಮತ್ಸ್ಯಗಳ ಮರು ಹುಟ್ಟಿಗೆ ಬಂದು ಕಪಿಲೆಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಇದೇ ವೇಳೆ ದುರುಳರ ಬಂಧನಕ್ಕಾಗಿ ದೊಡ್ದ ಹೋರಾಟ ಮಾಡಲಾಗಿತ್ತು.

    ಬೆಳ್ತಂಗಡಿ ತಾಲೂಕು ಕಚೇರಿ ಮುಂದೆ ತೀವ್ರ ಹೋರಾಟ ಮಾಡಲಾಗಿತ್ತು. ಸುಮಾರು 15 ದಿನ ನಿರಂತರ ಮಡಿದ ಮತ್ಸ್ಯಗಳನ್ನು ನೀರಿನಿಂದ ತೆಗೆದು  ಶ್ರಮದಾನದ ಮೂಲಕ ಮಣ್ಣು ಮಾಡಲಾಗಿತ್ತು.ಸುಮಾರು ಒಂದು ಸಾವಿರಕ್ಕೂ ಅಧಿಕ ಸ್ವಯಂ ಸೇವಕರು ಈ ಕಾರ್ಯದಲ್ಲಿ ಭಾಗವಹಿಸಿದ್ದರು.  ವಿಶೇಷ ಅಂದ್ರೆ ಈಗ್ಲೂ ಮಡಿದ ಮುದ್ದು ಮತ್ಸ್ಯಗಳಿಗೆ ” ಮತ್ಸ್ಯ ಸ್ಮಾರಕ “ಮಾಡಿ  ಪೂಜೆ ಸಲ್ಲಿಸಲಾಗುತ್ತದೆ.

    ಆ 25 ವರ್ಷಗಳ ಕರಾಳ ನೆನಪು ಮಾತ್ರ ಇಂದಿಗೂ ಆ ಶಿಶಿಲ ಗ್ರಾಮಸ್ಥರಲ್ಲಿ ಜೀವಂತವಾಗಿದೆ.

    BELTHANGADY

    ಎರಡು ತಿಂಗಳಿನಿಂದ ಆತಂಕ ಸೃಷ್ಟಿ ಮಾಡಿದ್ದ ಚಿರತೆ ಸೆರೆ

    Published

    on

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದಲ್ಲಿ ಸ್ಥಳೀಯರಿಗೆ ಆತಂಕ ಸೃಷ್ಟಿ ಮಾಡಿದ್ದ ಚಿರತೆಯೊಂದು ಬೋನಿಗೆ ಬಿದ್ದಿದೆ. ಎರಡು ತಿಂಗಳ ಹಿಂದೆ ಚಿರತೆ ಸ್ಥಳೀಯರಿಗೆ ಕಾಣಿಸಿಕೊಂಡಿದ್ದು ಭಯವನ್ನು ಸೃಷ್ಟಿಮಾಡಿತ್ತು. ಇದೀಗ ಈ ಚಿರತೆ ಬೋನಿಗೆ ಬಿದ್ದಿದ್ದು ಜನರ ಆತಂಕ ದೂರವಾಗಿದೆ.

    ಊರಿನಲ್ಲಿ ಚಿರತೆ ಕಾಣಿಸಿಕೊಂಡಿರುವುದಾಗಿ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದು ಈ ಕುರಿತು ಇಲಾಖಾ ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸಿದ್ದಾರೆ. ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆಯ ಬಳಿ ಎರಡು ತಿಂಗಳ ಹಿಂದೆ ಚಿರತೆ ಹಿಡಿಯಲು ಬೋನ್ ಅಳವಡಿಸಿ ಅದರಲ್ಲಿ ಕೋಳಿ ಇಡಲಾಗಿತ್ತು.

    ಕುಡ್ಲ ತುಳುಕೂಟದ ಅಧ್ಯಕ್ಷ ದಾಮೋದರ ನಿಸರ್ಗ ವಿಧಿವಶ

    ಕಳೆದ ಮಧ್ಯರಾತ್ರಿ ಚಿರತೆ ಕೋಳಿ ಹಿಡಿಯಲು ಬೋನಿನೊಳಗೆ ನುಗ್ಗಿ ಸೆರೆಯಾಗಿದೆ. ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.  ಚಿರತೆ ಸೆರೆಯಾಗಿದ್ದು ಸ್ಥಳೀಯ ಆತಂಕ ಕೊಂಚ ಮಟ್ಟಿಗೆ ದೂರವಾಗಿದೆ.

    Continue Reading

    BELTHANGADY

    ಅಳದಂಗಡಿ ಗ್ರಾ.ಪಂ. ಮಾಜಿ ಸದಸ್ಯೆ ಕಮಲಮ್ಮ ನಿಧನ

    Published

    on

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಅಳದಂಗಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ, ಕೃಷಿ ತಜ್ಞರೂ ಆಗಿದ್ದ ಅಳದಂಗಡಿ ನಿವಾಸಿ ಕಮಲಮ್ಮ ಅವರು ಆಗಸ್ಟ್‌  30ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 80 ವರ್ಷವಾಗಿತ್ತು. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

    ಮಾವು ಮತ್ತು ಗುಲಾಬಿ ಕಸಿ ಕಟ್ಟುವಿಕೆಗೆ ಹೆಸರಾಗಿದ್ದ ಅವರು, ಮಾವಿನ ತೋಟ ಅಭಿವೃದ್ಧಿ ಪಡಿಸಿದ್ದರು. ವೈವಿಧ್ಯಮಯ ಕೃಷಿ ಸಾಧನೆಗಾಗಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು. ಹಲವು ವರ್ಷ ಅಂಗನವಾಡಿ ಸಹಾಯಕಿಯಾಗಿ ಕೂಡಾ ಕೆಲಸ ಮಾಡಿದ್ದರು. ಅವರು ಉದಯವಾಣಿ ಮಣಿಪಾಲ ಆವೃತ್ತಿಯ ಸ್ಥಾನೀಯ ಸಂಪಾದಕ ಕೃಷ್ಣ ಭಟ್‌ ಅವರ ತಾಯಿ ಆಗಿದ್ದರು.

    Continue Reading

    BANTWAL

    ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲಿ?

    Published

    on

    ಮಂಗಳೂರು : ರಾಜ್ಯದ ಹಲವು ಭಾಗಗಳು ಭಾರಿ ಮಳೆಯಿಂದ ಹೈರಾಣಾಗಿದ್ದವು. ಆ ಬಳಿಕ ಕೊಂಚ ವಿರಾಮ ಪಡೆದಿದ್ದ ಮಳೆ ಮತ್ತೆ ಆರ್ಭಟಿಸುವ ಲಕ್ಷಣ ಕಾಣುತ್ತಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
    ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

    ಎಲ್ಲೆಲ್ಲಿ ಮಳೆ ?

    ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ.

    ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ರಭಸವಾಗಿ ಗಾಳಿ ಬೀಸಲಿದೆ. ಜೊತೆಗೆ ಭಾರೀ ಮಳೆ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ.

    ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ ನೀಡಿದೆ.

    Continue Reading

    LATEST NEWS

    Trending