Connect with us

    UDUPI

     ಕ್ರೀಡಾ ಕ್ಷೇತ್ರದ ಅದ್ಭುತ ಸಾಧಕಿ ತೃಷಾಳಿಗೆ ಉಡುಪಿ ಪೊಲೀಸರ ಗೌರವ..!

    Published

    on

     ಕ್ರೀಡಾ ಕ್ಷೇತ್ರದ ಅದ್ಭುತ ಸಾಧಕಿ ತೃಷಾಳಿಗೆ ಉಡುಪಿ ಪೊಲೀಸರ ಗೌರವ..!

    ಉಡುಪಿ :  ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾಪುವಿನ ಅಮೃತೇಶ್ ಮಗಳಾದ ತೃಷಾ ಅವರನ್ನು ನಿನ್ನೆ ಕಾಪು ವೃತ್ತ ಕಛೇರಿಯಲ್ಲಿ ಸನ್ಮಾನಿಸಲಾಗಿದೆ.

    ತೃಷಾ ಉಡುಪಿಯ ಸೈಂಟ್ ಸಿಸಿಲಿಯಾ ಹೈಸ್ಕೂಲಿನಲ್ಲಿ 9ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕ್ರೀಡಾ ಕ್ಷೇತ್ರದಲ್ಲಿ ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದಲ್ಲಿ ಚಿನ್ನದ ಪದಕ ಪಡೆದು ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದಾರೆ.

    2018-19 ರಲ್ಲಿ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಶಾಲಾ ಮಕ್ಕಳ ಆಟೋಟ ಸ್ಪರ್ಧೆಯಲ್ಲಿ 400 ಮೀಟರ್ ಓಟವನ್ನು 1:02:77 ಸಮಯದಲ್ಲಿ ಪೂರೈಸಿ ರಾಜ್ಯ ಮಟ್ಟದ ದಾಖಲೆ ನಿರ್ಮಿಸಿದ್ದರು.

    ಅಲ್ಲದೇ ರಾಜ್ಯ ಮಟ್ಟದ ಶಾಲಾ ಮಕ್ಕಳ ಆಟೋಟ ಸ್ಪರ್ಧೆಗಳಲ್ಲಿ 100 ಮೀಟರ್, 200 ಮೀಟರ್, ಹಾಗೂ 400 ಮೀಟರ್ ಓಟಗಳಲ್ಲಿ ಬಹುಮಾನಗಳನ್ನು ಪಡೆದು ತೃಷಾ ಅದ್ಭುತವಾದ ಸಾಧನೆಯನ್ನು ಮಾಡಿದ್ದಾರೆ.

    LATEST NEWS

    ಪರಶುರಾಮ ಥೀಂ ಪಾರ್ಕ್‌ ವಿವಾದ : ನಕಲಿ ಪರಶುರಾಮನ ಮೂರ್ತಿ ಸ್ಥಾಪನೆಯಲ್ಲಿ ಮೊದಲ ತಲೆದಂಡ

    Published

    on

    ಉಡುಪಿ : ಕಾರ್ಕಳದ ಉಮಿಕಲ್‌ ಬೆಟ್ಟದ ಪರಶುರಾಮ ಥೀಂ ಪಾರ್ಕ್ ಸಂಬಂಧಿಸಿ ಮಹತ್ವದ ಬೆಳವಣಿಗೆ ಆಗಿದ್ದು, ನಿರ್ಮಿತಿ ಕೇಂದ್ರದ ಉಡುಪಿ ಜಿಲ್ಲೆಯ ಯೋಜನಾ ನಿರ್ದೇಶಕರನ್ನು ಅಮಾನತುಗೊಳಿಸಿ ಜಿಲ್ಲಾಡಳಿತ ಆದೇಶ ನೀಡಿದೆ. ಈಗಾಗಲೇ ಪ್ರಕರಣ ಸಂಬಂಧ ಹೈಕೋರ್ಟ್ ನಲ್ಲಿ ತನಿಖೆ ನಡೆಯುತ್ತಿದೆ. ಜೊತೆಗೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ವಿಚಾರಣಾ ಆಯೋಗವು ತನಿಖೆ ಕೈಗೊಂಡಿದೆ.


    ಈ ನಿಟ್ಟಿನಲ್ಲಿ ತನಿಖೆಯಲ್ಲಿ ಯಾವುದೇ ಹಸ್ತಕ್ಷೇಪ ನಡೆಸದಂತೆ ಹಾಗೂ ಅಡ್ಡಿ ಉಂಟು ಮಾಡುವ ಸಾಧ್ಯತೆ ಹಿನ್ನೆಲೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾಗಿದ್ದ ಅರುಣ್‌ ಕುಮಾರ್‌ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಈ ಪ್ರಕರಣದ ಮೊದಲ ತಲೆದಂಡ ಇದಾಗಿದೆ. ಈ ಮೂಲಕ ಭಾರಿ ವಿವಾದ ಸೃಷ್ಟಿಸಿದ್ದ ಥೀಂ ಪಾರ್ಕ್ ಪ್ರಕರಣ ತನಿಖೆ ಭಾರೀ ಕುತೂಹಲ ಮೂಡಿಸಿದೆ.

    ತೆರವಾದ ಸ್ಥಾನಕ್ಕೆ ನಿರ್ಮಿತಿ ಕೇಂದ್ರದ ಸಹಾಯಕ ಯೋಜನಾ ನಿರ್ದೇಶಕರಾಗಿದ್ದ ದಿವಾಕರ್‌ ಪಿ. ಅವರಿಗೆ ಹೆಚ್ಚುವರಿಯಾಗಿ ಪ್ರಭಾರ ಆದೇಶ ನೀಡಿ ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.

    ಇದನ್ನೂ ಓದಿ : ಸುರತ್ಕಲ್ : ಮನೆ ಮೇಲೆ ತಡೆಗೋಡೆ ಕುಸಿದು ಬಾಲಕ ಸಾ*ವು
    2023ರ ಜನವರಿ 27 ರಂದು ಪರಶುರಾಮ ಥೀಂ ಪಾರ್ಕ್ ಇದನ್ನು ಅಂದಿನ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಉದ್ಘಾಟನೆ ಮಾಡಿದ್ದರು. ನಂತರದ ದಿನಗಳಲ್ಲಿ ಅಲ್ಲಿ ಸ್ಥಾಪಿಸಲಾಗಿದ್ದ ಪರಶುರಾಮನ ಮೂರ್ತಿ ಫೈಬರ್‌ನಿಂದ ಕೂಡಿದ್ದೇ ಹೊರತು ಕಂಚಿನ ಪ್ರತಿಮೆ ಅಲ್ಲ ಎಂದು ಸ್ಥಳೀಯ ಹೋರಾಟಗಾರರು ಆರೋಪಿಸಿದ್ದರು. ಕಾಂಗ್ರೆಸ್‌ ಪಕ್ಷ ಆಡಳಿತಕ್ಕೆ ಬಂದ ಮೇಲೆ ಇದರ ವಿಚಾರಣೆ ಕೈಗೆತ್ತಿಕೊಂಡಿತ್ತು. ಸ್ಥಳೀಯ ಶಾಸಕ ಸುನಿಲ್‌ ಕುಮಾರ್‌ ಅವರ ಮಹತ್ವದ ಈ ಯೋಜನೆಯ ಬಗ್ಗೆ ಭಾರಿ ಟೀಕೆ ವ್ಯಕ್ತವಾಗಿತ್ತು.

    Continue Reading

    LATEST NEWS

    ಉಡುಪಿ: ಪೆರ್ಡೂರು ಸರಕಾರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇ*ಣಿಗೆ ಶರಣು

    Published

    on

    ಉಡುಪಿ: ಪೆರ್ಡೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ನಯನಾ (17) ಆತ್ಮಹ*ತ್ಯೆಗೆ ಮಾಡಿಕೊಂಡ ಘಟನೆ ಪೆರ್ಡೂರು ಗ್ರಾಮದಲ್ಲಿ ನಡೆದಿದೆ.

    ಆತ್ಮಹ*ತ್ಯೆ ಮಾಡಿಕೊಂಡ ನಯನಾ ಅವರು ಪೆರ್ಡೂರು ಗ್ರಾಮದ ಶೋಬಾ (50) ಎಂಬವರ ಮಗಳು. ಈ ಘಟನೆಯು ಜುಲೈ 22, 2024 ರಂದು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 2:20 ರ ನಡುವೆ ಸಂಭವಿಸಿದೆ.

    ನಯನಾ ವೈಯಕ್ತಿಕ ಸಮಸ್ಯೆಗಳಿಂದ ಮಾನಸಿಕವಾಗಿ ನೊಂದು ಫ್ಯಾನ್‌ಗೆ ಚೂಡಿದಾರ್ ಕಟ್ಟಿಕೊಂಡು ಮನೆಯ ಮಹಡಿಯ ಕೋಣೆಯಲ್ಲಿ ನೇ*ಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾಳೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    ಕೊಲ್ಲೂರು : ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಖಾಸಗಿ ಬಸ್

    Published

    on

    ಕೊಲ್ಲೂರು : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ಕೊಲ್ಲೂರು ಸಮೀಪದ ನಾಗೋಡಿ ಎಂಬಲ್ಲಿ ನಡೆದಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ ಚಲಿಸುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಅವಘ*ಡ ಸಂಭವಿಸಿದೆ.

    ಉಡುಪಿ ಜಿಲ್ಲೆಯಲ್ಲಿ ಧಾರಾಕಾರವಾಗಿ‌ ಸುರಿದ ಮಳೆಯಿಂದ ರಸ್ತೆಗಳು ಹದಗೆಟ್ಟಿದ್ದು, ವಿಪರೀತವಾದ ಮಳೆಯಿಂದ ಚಾಲಕನಿಗೆ ‌ರಸ್ತೆ ಕಾಣದೆ ಪಕ್ಕಕ್ಕೆ ಜರಿದಿದೆ. ಬಸ್ ನಲ್ಲಿ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ.

    Continue Reading

    LATEST NEWS

    Trending