Connect with us

LATEST NEWS

ಹುಲಿ ಉಗುರು ಬೆನ್ನಲ್ಲೇ ಮತ್ತೊಂದು ವೈರಲ್ ನ್ಯೂಸ್: ಕೇಳಿದ್ರೆ ಬೆಚ್ಚಿಬಿಳೋದು ಗ್ಯಾರಂಟಿ..!

Published

on

ಇಸ್ಲಮಾಭಾದ್: ಇತ್ತಿಚೇಗಷ್ಟೆ ಹುಲಿ ಎಂಬ ಪದ ಕೇಳಿದ್ರೆ ಸಾಕು ಜನ ಬೆಚ್ಚಿಬೀಳ್ತಾ ಇದ್ದಾರೆ. ಹುಲಿ ಉಗುರು ಪ್ರಕರಣ ಯತೇಚ್ಛವಾಗಿ ಸದ್ದು ಮಾಡ್ತಾ ಇರುವುದು ಇದೀಗಲೇ ಗೊತ್ತಿರುವ ವಿಚಾರ. ಕನ್ನಡದ ಅತ್ಯುತ್ತಮ ರಿಯಾಲಿಟಿ ಶೋ ಬಿಗ್ ಬಾಸ್ ಮೂಲಕ ಗ್ರಾಂಡ್ ಎಂಟ್ರಿ ಕೊಟ್ಟ ವರ್ತೂರು ಸಂತೋಷ್ ಇವರಿಂದ ಹಿಡಿದು ದಕ್ಷಿಣ ಕನ್ನಡ ಕರಾವಳಿಯಾದ್ಯಂತ ಕೂಡ ಹುಲಿ ಉಗುರು ಪ್ರಕರಣಕ್ಕೆ ಸಿಕ್ಕಿಬಿದ್ದಿದ್ದಾರೆ.

ಆ ಪ್ರಕರಣದಂತೆ ಪಾಕಿಸ್ತಾನದ ಬ್ಯಾಂಕ್ ಆಫ್ ಖೈಬರ್ ಪ್ರದೇಶದ ಹತ್ತಿರ ಇರುವ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಹುಲಿಯನ್ನು ಸರಪಳಿ ಮೂಲಕ ಎಳೆದುಕೊಂಡು ಹೋಗುತ್ತಿರುವ ದೃಶ್ಯ ಸಿ.ಸಿ.ಟಿವಿ. ಅಲ್ಲಿ ಸೆರೆಯಾಗಿದೆ.. ಹುಲಿ ಉಗುರು ಧರಿಸಿಕೊಂಡಿದ್ದ ವಿಚಾರ ಕಾನೂನು ಭಾಹಿರವೆಂದು ಅರಣ್ಯ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದರು. ಆದರೆ ಈತ ಹುಲಿಯ ಜೊತೆ ಸ್ನೇಹ ಮಾಡಿಕೊಂಡಿದ್ದು, ಈ ವ್ಯಕ್ತಿಯ ಮೂಲಕ ವನ್ಯ ಜೀವಿಗೆ ನಡೆಯುತ್ತಿರುವ ಹಿಂಸೆಯನ್ನು ಕೇಳಲು ಯಾವ ಅಧಿಕಾರಿಗಳು ಬಾರದೆ ಇರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತಾ ಇದೆ.

Click to comment

Leave a Reply

Your email address will not be published. Required fields are marked *

BANTWAL

ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!

Published

on

ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ‌ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.


ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

WATCH : ಕೋಳಿಗೂ ಯುವತಿಗೂ ನಡುವೆ ಫೈಟ್; ಗೆದ್ದವರು ಯಾರು? ವೀಡಿಯೋ ವೈರಲ್

Published

on

ಮಂಗಳೂರು : ಇದೊಂತರ ಸೋಶಿಯಲ್ ಮೀಡಿಯಾ ಯುಗ. ಇಲ್ಲಿ ಎಲ್ಲವೂ ವೈರಲ್ ವೈರಲ್. ದಿನನಿತ್ಯ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋಗಳು ಸದ್ದು ಮಾಡುತ್ತಲೇ ಇರುತ್ತವೆ. ಮನುಷ್ಯರದ್ದೇ ಆಗಿರಲಿ, ಪ್ರಾಣಿ, ಪಕ್ಷಿಗಳದೇ ಆಗಿರಲಿ ಇಲ್ಲಿ ಸುದ್ದಿ ಆಗುತ್ತಲೇ ಇರುತ್ತದೆ. ಸದ್ಯ ಅಂತಹುದೇ ವೀಡಿಯೋವೊಂದು ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿ ಕೋಳಿ ಹಾಗೂ ಯುವತಿಯ ನಡುವೆ ಫೈಟ್ ನಡೆದಿದೆ.


ವೀಡಿಯೋದಲ್ಲಿ ಏನಿದೆ?

ವೀಡಿಯೋ ಆರಂಭದಲ್ಲಿ ಯುವತಿಯೊಬ್ಬಳು ತನ್ನಷ್ಟಕ್ಕೆ ಬರುತ್ತಿರುವುದನ್ನು ಕಾಣಬಹುದು. ಈ ವೇಳೆ, ಪಕ್ಕದಲ್ಲಿದ್ದ ಕೋಳಿ ಸುಖಾಸುಮ್ಮನೆ ಆಕೆಯ ಕಾಲಿಗೆ ಬಂದು ಕುಕ್ಕುತ್ತದೆ. ಇದರಿಂದ ಕೋಪಗೊಂಡ ಯುವತಿ ಆ ಕೋಳಿಗೆ ಒದೆಯುತ್ತಾಳೆ. ಅದು ಮತ್ತೆ ಅಟ್ಯಾಕ್ ಮಾಡಲು ಬಂದಾಗ, ಕೈಯಿಂದ ಚೆನ್ನಾಗಿ ಬಾರಿಸುತ್ತಾಳೆ. ಆದರೆ, ಆ ಕೋಳಿ ಹೆದರಿ ಓಡುವುದಿಲ್ಲ. ಬದಲಿಗೆ ಅದು ಮತ್ತೆ ದಾಳಿ ನಡೆಸುತ್ತದೆ.

ಆಗ ಕೋಪದಲ್ಲಿ ಯುವತಿ ಅದಕ್ಕೆ ಒಂದೇಟು ಬಾರಿಸುತ್ತಾಳೆ. ಅವಳಿಗೆ ಇದರಿಂದ ಸಿಟ್ಟು ಬರುತ್ತದೆ. ಅದನ್ನು ಎತ್ತಿ ನೆಲಕ್ಕೆ ಕುಕ್ಕುತ್ತಾಳೆ. ಅಯ್ಯೋ ಓಡೋಗ್ಹೋಣ ಅಂತ ಯೋಚಿಸದ ಕೋಳಿ ಮತ್ತೆ ಅಟ್ಯಾಕ್ ಗೆ ಬರುತ್ತದೆ. ಆಗ ಆಕೆ ತಿರುಗಿಸಿ ತಿರುಗಿಸಿ ಎಸೆಯುತ್ತಾಳೆ. ಆದರೆ, ಅದು ಮತ್ತೆ ಎದ್ದು ಬರುತ್ತೆ. ಆಕೆ ಅಲ್ಲೇ ಸಿಕ್ಕಿದ ವಸ್ತುವಿನಿಂದ ಹೊಡೆಯುತ್ತಾಳೆ.

ಇದನ್ನೂ ಓದಿ : ತಾಯಿಯನ್ನು ಕೊಂ*ದ ಮಗನಿಗೆ ವಿಶಿಷ್ಟ ಶಿಕ್ಷೆ; ಅಪರೂಪದ ಆದೇಶ ನೀಡಿದ ಹೈಕೋರ್ಟ್

ಸದ್ಯ ಈ ವೀಡಿಯೋ ವೈರಲ್ ಆಗುತ್ತಿದೆ. ಮಿಲಿಯನ್ ಗಟ್ಟಲೆ ವೀಕ್ಷಣೆ ಪಡೆದಿದೆ. ವೀಡಿಯೋ ನೋಡಿದವರು ಕಮೆಂಟ್ಸ್ ಮಾಡುತ್ತಿದ್ದು, ಚಿಕನ್ ವರ್ಸಸ್ ಚಿಕ್ ಎಂದು ಕಮೆಂಟ್ಸ್ ಮಾಡಿದ್ದಾರೆ. ಸೋಲೊಪ್ಪಿಕೊಳ್ಳಬೇಡ ಕೋಳಿ, ನೀನು ಆಕೆಯನ್ನು ಸೋಲಿಸಬಲ್ಲೆ, ಎಂತಹ ಫೈಟ್ ಇದು, ಚಿಕನ್ ಟಕ್ಕರ್ ಎಂದು ಕಮೆಂಟ್ಸ್ ಮಾಡುತ್ತಿದ್ದಾರೆ.

 

 

Continue Reading

DAKSHINA KANNADA

ಕಾಮಿಡಿ ಕಿಲಾಡಿಗಳು ಸೀಸಲ್-7ರಲ್ಲಿ ಮಿಂಚಲಿದ್ದಾರೆ ಪುತ್ತೂರಿನ ಪ್ರತಿಭೆಗಳು .!!

Published

on

ಮಂಗಳೂರು:  ಜೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು  ಪ್ರೀಮಿಯರ್ ಲೀಗ್ ಮೆಗಾ ಆಕ್ಷನ್‌ ಆರಂಭಗೊಂಡಿದ್ದು ಈ ಬಾರಿ ವಿಭಿನ್ನ ರೀತಿಯಲ್ಲಿ ಮೂಡಿ ಬರುತ್ತಿದೆ. ಈ ಶೋನಲ್ಲಿ ನಟ ಜಗ್ಗೇಶ್ ಮಹಾ ತೀರ್ಪುಗಾರರಾಗಿದ್ದರೆ, ಐದು ಸ್ಟಾರ್  ನಿರೂಪಕರುಗಳಾದ ಅನುಶ್ರೀ, ಮಾಸ್ಟರ್‌ ಆನಂದ್‌, ಅಕುಲ್‌ ಬಾಲಾಜಿ, ಶ್ವೇತಾ ಚಂಗಪ್ಪ ಹಾಗೂ ಕುರಿ ಪ್ರತಾಪ್‌ ರವರು ಜಡ್ಜಸ್‌ಗಳಾಗಿದ್ದಾರೆ. ರಾಜ್ಯದ 20 ಪ್ರತಿಭೆಗಳಿಂದ ಪ್ರೇಕ್ಷಕರಿಗೆ ಕಾಮಿಡಿಯ ರಸದೌಣ ನೀಡಲು ತಯಾರುಗುತ್ತಿದೆ.  ಇನ್ನು ಕಿಲಾಡಿ ಪ್ಲೇಯರ್‌ಗಳಲ್ಲಿ ಪುತ್ತೂರಿನ ಪ್ರತಿಭೆ ಪವಿತ್ರಾ ಹೆಗ್ಡೆ ಹಾಗೂ ಗಣರಾಜ್ ಭಂಡಾರಿ ಆಯ್ಕೆಯಾಗಿದ್ದಾರೆ.

comedy kiladi

ಮಂಗಳೂರಿನ 150 ಸ್ಪರ್ಧಿಗಳ ಪೈಕಿ ಪವಿತ್ರಾ ಹೆಗ್ಡೆ ಹಾಗೂ ಗಣರಾಜ್ ಭಂಡಾರಿಯವರು ಆಯ್ಕೆಯಾಗಿದ್ದಾರೆ. ಕರ್ನಾಟಕದ 2,500ಕ್ಕು ಮಿಕ್ಕಿ ಸ್ಪರ್ಧಿಗಳ ಮೂರು ಹಂತದ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾದ 10 ನಟರಲ್ಲಿ ಇವರಿಬ್ಬರು ಆಯ್ಕೆಯಾಗಿದ್ದಾರೆ.

ಮುಂದೆ ಓದಿ..; ಹೊಸ ಅವತಾರದಲ್ಲಿ ZEE ಕನ್ನಡ ‘ಕಾಮಿಡಿ ಕಿಲಾಡಿಗಳು’… ಸ್ಟಾರ್ ನಿರೂಪಕರು ಈಗ ಜಡ್ಜಸ್? ಏನಿದು ಟ್ವಿಸ್ಟ್?

ಪುತ್ತೂರಿನ ಪವಿತ್ರ ಹೆಗ್ಡೆ  ಆಯ್ಕೆ:

ಪವಿತ್ರ ಹೆಗ್ಡೆ ಕಳೆದ 10 ವರ್ಷಗಳಿಂದ ಮಂಗಳೂರಿನಲ್ಲಿ ಕಿಶೋರ್ ಡಿ ಶೆಟ್ಟಿ ನಿರ್ದೇಶನದ ಲಕುಮಿ ತಂಡದ ಕುಸಾಲ್ದ ಕಲಾವಿದರು ಮಂಗಳೂರು ತಂಡದಲ್ಲಿ ಹಾಸ್ಯ ಕಲಾವಿದೆಯಾಗಿ ಅಭಿನಯಿಸುತ್ತಿದ್ದಾರೆ. ಹಲವಾರು ನಾಟಕ, ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟನೆ ಮಾಡಿದ್ದಾರೆ. ಬಾಲ್ಯದಲ್ಲೇ ಕಲಾ ಕ್ಷೇತ್ರಕ್ಕೆ ಧುಮುಕಿದ ಇವರು 6ನೇ ತರಗತಿಯಿಂದ ನಾಟಕ ಅಭಿನಯ, 2012ರಿಂದ ಮಂಗಳೂರಿನ ತಂಡವಾದ ಮಾನಸ ಕಲಾವಿದರು ತಂಡದಲ್ಲಿ 3 ವರ್ಷ ಅಭಿನಯ, ಹೀಗೆ ಹಲವಾರು ತಂಡಳದಲ್ಲಿ ತಮ್ಮ ಅಭಿನಯ ಪಾತ್ರ ಮಾಡಿದ್ದಾರೆ. ತುಳು ಸಿನೆಮಾ ಮತ್ತು ತುಳು ಮತ್ತು ಕನ್ನಡ ಧಾರಾವಾಹಿಯಲ್ಲಿಯೂ ಅಭಿನಯಿಸಿದ್ದಾರೆ. ನಮ್ಮ ಟಿವಿಯಲ್ಲಿ ಪ್ರಸಾರವಾಗುತ್ತಿರುವ ‘ಬಲೆತಲಿಪಾಲೆ’ ಸೀಸನ್ 7ರಲ್ಲಿ ರನ್ನರ್ ಅಪ್ ಆಗಿದ್ದಾರೆ. ವಿ4 ನ್ಯೂಸ್‌ನಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ 2ನಲ್ಲಿ ಮತ್ತು ಸೀಸನ್ 3ಯಲ್ಲಿ ಅಭಿನಯಿಸಿ ಬೆಸ್ಟ್ ಫರ್ಫಾಮೆನ್ಸ್ ಅವಾರ್ಡ್ ಪಡೆದಿದ್ದಾರೆ. ವಿದೇಶದಲ್ಲೂ ನಾಟಕ ಪ್ರದರ್ಶನ ನೀಡಿದ್ದಾರೆ. ಕನ್ನಡ ಕಸ್ತೂರಿ ಚಾನಲ್‌ನಲ್ಲಿ ಪ್ರಸಾರವಾಗುತ್ತಿದ್ದ ಕಂಜೂಸ್ ಕಮಂಗಿರಾಯ, ಪುತ್ತೂರು ಚಾನೆಲ್ ದ ಚಾನಲ್ 9ನಲ್ಲಿ ಪುಸಾರವಾಗುತ್ತಿದ್ದ ಕುಡ ತೆಲಿಪುಗ, ಡಾಯಿಜಿ ವರ್ಲ್ಡ್‌ನಲ್ಲಿ ಪ್ರಸಾರವಾಗುತ್ತಿದ್ದ ಬಾಬಣ್ಣ ಬೂಬಣ್ಣ, ಕಿರುಚಿತ್ರವಾದ ಕಲ್ಕುಡ ಕಲ್ಲುರ್ಟಿ, ವಾತ್ಸಲ್ಯ, ನೋ ಬಾಲ್, ಕೊಕೊನಾಟ್ ಸಹಿತ ಹಲವು ಚಲನಚಿತ್ರದಲ್ಲಿ ಪಾತ್ರ ನಿರ್ವಹಿಸಿದ್ದರು. ಇವರಿಗೆ ಹಲವಾರು ಸನ್ಮಾನ ಪತ್ರಗಳು ಲಭಿಸಿದೆ. ಇವರು ಪುತ್ತೂರು ಚಂದ್ರಶೇಖ‌ರ್ ಹೆಗ್ಡೆ ಮತ್ತು ಮಯಾದೇವಿ ಅವರ ಪುತ್ರಿಯಾಗಿದ್ದು ಪುಜ್ವಲ್ ಹೆಗ್ಡೆಯವರ ಪತ್ನಿಯಾಗಿದ್ದಾರೆ.

ವೈರಲ್ ಸ್ಟಾರ್ ಗಣರಾಜ್ ಭಂಡಾರಿ:

ಪುತ್ತೂರಿನ ಸಂಸಾರ ಕಲಾವಿದೆರ್ ತಂಡದ ವೈರಲ್ ಸ್ಮಾರ್ ಖ್ಯಾತಿಯ ಗಣರಾಜ್ ಭಂಡಾರಿ ಕಾಮಿಡಿ ಕಿಲಾಡಿಗಳು ಶೋಗೆ ಆಯ್ಕೆಯಾಗಿದ್ದಾರೆ. ನಾಗೇಶ್ ಬಲ್ನಾಡು ನಿರ್ದೇಶನದ ಸೂಪರ್ ಹಿಟ್ ನಾಟಕ “ಮಲ್ಲಕ್ಕನ ಇಲ್ಲೊಕ್ಕೆಲ್” ಮೂಲಕ ರಂಗಪ್ರವೇಶ ಮಾಡಿದ ಇವರು ಬದ್‌ರೆ ಕಲ್ಪಿ, ಊರುಗೊರಿ ವಿಶ್ವನಾಥ, ಮಗೆ ಮಲ್ಲಯೆ, ಒವುಲಾ ಒರಿಯುಜಿ, ಸತ್ಯನಾ ಭಕ್ತಿ, ತಪ್ಪು ಎನ್ನೊಡ್ಡಿ, ಭಾಗ್ಯ ಬೋಡು ಅಲ್ಲದೆ ಈ ವರ್ಷದ ಸೂಪರ್ ಹಿಟ್ ಯಶಸ್ವಿ ನಾಟಕ ನಂಬಿಕೆದಾಯೆ ನಾಟಕಗಳಲ್ಲಿ ಪ್ರಮುಖ ಹಾಸ್ಯ ಪಾತ್ರಗಳನ್ನು ನಿರ್ವಹಿಸಿದ್ದಾರೆ.  ಪುತ್ತೂರಿನ ಕೋರ್ಟ್ ರಸ್ತೆಯ ಶ್ರೀನಿಧಿ ಸೆಲೂನ್’ನಲ್ಲಿ ಕ್ಷೌರಿಕ ವೃತ್ತಿ ನಡೆಸುತ್ತಿದ್ದಾರೆ. ಇವರು ತನ್ನ ಸ್ವಂತ ರೀಲ್ಸ್ ಪೇಜ್’ನಲ್ಲಿ 25 ಸಾವಿರ ಕ್ಕು ಅಧಿಕ ಫಾಲೋವರ್ಸ್ ಹೊಂದಿದ್ದಾರೆ.

 

Continue Reading

LATEST NEWS

Trending