Connect with us

LATEST NEWS

ಸೆ. 5 ರ ವರೆಗೆ ರಾಜ್ಯದಲ್ಲಿ ಭಾರಿ ಮಳೆ : ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ..!

Published

on

ಬೆಂಗಳೂರು : ಸೆಪ್ಟೆಂಬರ್ ಆರಂಭದಿಂದಲೇ ಕರ್ನಾಟಕದಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ರಾಮನಗರದಲ್ಲಿ ಸೆಪ್ಟೆಂಬರ್ 3 ರಿಂದ ಮುಂದಿನ ಎರಡು ದಿನ ಹಾಗೂ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಸೆಪ್ಟೆಂಬರ್ 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇಂದು ಮತ್ತು ನಾಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸೆ. 3ರಿಂದ 5ರವರೆಗೂ ಮಳೆಯ ಅಬ್ಬರ ಹೆಚ್ಚಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗಲಿದೆ.
ಇಂದಿನಿಂದ ಸೆಪ್ಟೆಂಬರ್ 2ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

LATEST NEWS

Viral Video; ಸ್ಮೋಕ್ ಬಿಸ್ಕೆಟ್ ತಿನ್ನುತ್ತಿದ್ದಂತೆಯೇ ಬಾಲಕ ಅಸ್ವಸ್ಥ

Published

on

ಸ್ಮೋಕ್ ಬಿಸ್ಕೆಟ್ ತಿಂದು ಬಾಲಕ ಅಸ್ವಸ್ಥಗೊಂಡ ಘಟನೆ ದಾವಣಗೆರೆ ನಗರದ ಪಿಬಿ ರಸ್ತೆ ಬಳಿ ನಡೆದಿದೆ. ಬರ್ಡ್ಸ್ ಎಕ್ಸಿಬಿಷನ್​ನಲ್ಲಿ ಬಾಲಕ ಸ್ಮೋಕ್​ ಬಿಸ್ಕೆಟ್​ ತಿಂದಿದ್ದಾನೆ.

ತಿನ್ನುತ್ತಿದ್ದಂತೆಯೇ ಬಾಲಕ ಪ್ರಜ್ಞೆ ತಪ್ಪಿದ್ದಾನೆ. ಕೂಡಲೇ ಬಾಲಕನನ್ನು ಪೋಷಕರು ಆಸ್ಪತ್ರೆ ಕರೆದುಕೊಂಡು ಹೋಗಿ ಅಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಚಿಕಿತ್ಸೆ ನಂತರ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ಮೋಕ್ ಬಿಸ್ಕೆಟ್ ಬಗ್ಗೆ ಪಾಲಿಕೆ ಅಧಿಕಾರಿಗಳಿಗೆ ದೂರು ನೀಡಲಾಗಿದ್ದು, ದೂರಿನ ಬಳಿಕ ಅಧಿಕಾರಿಗಳು ಸ್ಮೋಕ್ ಬಿಸ್ಕೆಟ್ ಮಾರಾಟ ಬಂದ್ ಮಾಡಿ ಅವುಗಳನ್ನು ವಶಕ್ಕೆ ಪಡೆದಿದ್ದಾರೆ.

ಸ್ಮೋಕ್ ಬಿಸ್ಕೆಟ್ ತಿಂದು ಬಾಲಕ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಅದನ್ನು ತಿನ್ನದಂತೆ ತಂದೆ-ತಾಯಿ ಮನವಿ ಮಾಡಿಕೊಂಡಿದ್ದಾರೆ. ಇನ್ನು ಬಾಲಕ ಅಸ್ವಸ್ಥ ಆಗೋ ದೃಶ್ಯ ತಾಯಿಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Continue Reading

LATEST NEWS

‘ಸಕತ್ತಾಗಿದ್ದೀಯಾ ಡಾರ್ಲಿಂಗ್’ ಎಂದ ನಟನಿಗೆ ಖಡಕ್ ಎಚ್ಚರಿಕೆ ನೀಡಿದ ನಟಿ ನಭಾ ನಟೇಶ್

Published

on

ತೂಕತು ಗಡ ಬಡ ಬಾಯ್ ಬಾಯ್ ಬಡ್ಕಿ…ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೊತೆ ಕುಣಿದು ಕುಪ್ಪಳಿಸಿದ್ದ ‘ಪಟಾಕ’ ನಭಾ ನಟೇಶ್. ‘ವಜ್ರಕಾಯ’ ಮೂಲಕ ಕನ್ನಡ ಸಿನಿಮಾರಂಗದಲ್ಲಿ ಮಿಂಚಿದ ಕಲಾವಿದೆ. ಬಳಿಕ ಲೀ, ಸಾಹೇಬ ಚಿತ್ರದಲ್ಲಿ ನಟಿಸಿದರು. ಬಳಿಕ ತೆಲುಗು ಚಿತ್ರರಂಗ ಅವರನ್ನು ಕೈ ಬೀಸಿ ಕರೆಯಿತು.

ತೆಲುಗು ಸಿನಿರಂಗದಲ್ಲಿ ಗುರುತಿಸಿಕೊಂಡಿರುವ ನಭಾ ತೆಲುಗು ನಟನ ಮೇಲೆ ಕೋಪಗೊಂಡಿದ್ದಾರೆ. ಅಷ್ಟೇ ಅಲ್ಲ, ಎಚ್ಚರಿಕೆಯನ್ನೂ ನೀಡಿದ್ದಾರೆ.

ಗರಂ ಆದ ನಟಿ :
ತೆಲುಗು ಸಿನಿ ರಂಗದಲ್ಲಿ ಡಾರ್ಲಿಂಗ್ ಅಂದ್ರೆ ಪ್ರಭಾಸ್ ಹೆಸರು ಕೇಳಿ ಬರುತ್ತೆ. ಅವರು ಅಭಿಮಾನಿಗಳನ್ನು, ಆಪ್ತರನ್ನು ಡಾರ್ಲಿಂಗ್ ಎಂದೇ ಸಂಬೋಧಿಸುತ್ತಾರೆ. ಸದ್ಯ ಪ್ರಭಾಸ್ ಹಲವು ಸಂದರ್ಭಗಳಲ್ಲಿ ಡಾರ್ಲಿಂಗ್ ಎಂದಿರುವ ಆಡಿಯೋ ಮಿಕ್ಸ್ ಅಪ್ ಮಾಡಿ ಆಡಿಯೋ ಕ್ರಿಯೆಟ್ ಮಾಡಲಾಗಿದೆ. ಈ ಆಡಿಯೋ ರೀಲ್ಸ್ ಆಗಿ ವೈರಲ್ ಆಗುತ್ತಿದೆ. ನಭಾ ನಟೇಶ್ ಕೂಡ ಡಬ್ ಸ್ಮ್ಯಾಶ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

‘ಹಾಯ್ ಡಾರ್ಲಿಂಗ್ಸ್…ಹೌ ಆರ್ ಯೂ’ ಎಂದು ಪೋಸ್ಟ್ ಮಾಡಿದ್ದಾರೆ. ಇದಕ್ಕೆ ನಭಾ ಅಭಿಮಾನಿಗಳು ಮಾತ್ರವಲ್ಲ, ಪ್ರಭಾಸ್ ಫ್ಯಾನ್ಸ್ ಲೈಕ್ಸ್, ಕಮೆಂಟ್ಸ್ ಮಾಡುತ್ತಿದ್ದಾರೆ. ಆದರೆ, ತೆಲುಗು ಹಾಸ್ಯ ನಟ ಪ್ರಿಯದರ್ಶಿ ಪುಲಿಕೊಂಡ ತಮ್ಮ ಎಕ್ಸ್ ಖಾತೆಯಲ್ಲಿ ರೀ-ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ‘ವಾಹ್ ಸೂಪರ್ ಡಾರ್ಲಿಂಗ್, ಸಖತ್ತಾಗಿದ್ದೀಯಾ’ ಎಂದು ಬರೆದಿದ್ದಾರೆ. ಇದರಿಂದ ನಭಾ ಗರಂ ಆಗಿದ್ದಾರೆ.

ಇದನ್ನೂ ಓದಿ : ಅಂದು ಸುಮಲತಾ, ಇಂದು ಸ್ಟಾರ್ ಚಂದ್ರುಗೆ ಜೈ ಎಂದ ದರ್ಶನ್; ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ನಿಂತ ಡಿ ಬಾಸ್ ಏನಂದ್ರು?

ಎಚ್ಚರಿಕೆ ನೀಡಿದ ನಭಾ ನಟೇಶ್ :

ನಭಾ ನಟೇಶ್, ಪ್ರಿಯದರ್ಶಿ ಡಾರ್ಲಿಂಗ್ ಎಂದಿದ್ದಕ್ಕೆ ಸಿಟ್ಟಾಗಿದ್ದಾರೆ. ಇಬ್ಬರ ನಡುವೆ ಎಕ್ಸ್ ನಲ್ಲಿ ಟಾಕ್ ವಾರ್ ಶುರುವಾಗಿದೆ. ಪ್ರಿಯದರ್ಶಿ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿರುವ ನಭಾ, ಪರಿಚಯ ಇಲ್ಲದ ಮಹಿಳೆಯನ್ನು ಡಾರ್ಲಿಂಗ್ ಎಂದು ಕರೆಯುವುದು ಕೂಡ ಲೈಂಗಿಕ ದೌರ್ಜನ್ಯವಾಗುತ್ತದೆ ಎಂದು ಹಿಂದೆ ಕೊಲ್ಕತ್ತಾ ಹೈಕೋರ್ಟ್ ತೀರ್ಪು ನೀಡಿತ್ತು. ಅದಕ್ಕೆ ಸಂಬಂಧಿಸಿ ನ್ಯೂಸ್ ಕ್ಲಿಪ್‌ ಅನ್ನು ಶೇರ್ ಮಾಡಿ “ಮಿಸ್ಟರ್, ಮಾತನಾಡುವಾಗ ಎಚ್ಚರಿಕೆ ಇರಲಿ” ಎಂದು ನಭಾ ಪೋಸ್ಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ನಟ ಪ್ರಿಯದರ್ಶಿ, “ನೀವೇನೊ ಡಾರ್ಲಿಂಗ್ ಎಂದು ಕರೆಯಬಹುದು. ನಾವು ಕರೆದರೆ ಐಪಿಸಿ ಸೆಕ್ಷನ್ ಆಗುತ್ತಾ? ತಲೆ ಕೆಡಿಸಿಕೊಳ್ಳಬೇಡ ಡಾರ್ಲಿಂಗ್” ಎಂದು ಮತ್ತೆ ಕಮೆಂಟ್ ಮಾಡಿದ್ದಾರೆ. ಇದಕ್ಕೆ ನಭಾ, ”ಗೆರೆ ದಾಟಬೇಡ! ನೋಡಿಕೊಳ್ತೇನೆ” ಎಂದು ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಮತ್ತೆ, ಓ…ಯಾಕೆ ಈ ಮಿತಿ ಮೀರಿದ ಕೋಪ?’ ಎಂದು ಪ್ರಿಯದರ್ಶಿ ಕಮೆಂಟ್ ಮಾಡಿದ್ದಾರೆ.

 

ಹೊಸ ಚಿತ್ರದ ಪ್ರಮೋಷನ್? :

ಅಂದಹಾಗೆ ಈ ಟಾಕ್ ವಾರ್ ಬಗ್ಗೆ ಹಲವು ಅನುಮಾನ ಹುಟ್ಟಿಕೊಂಡಿತ್ತು. ಇದು ತಮಾಷೆ ಇರಬಹುದು ಎಂಬ ಅನುಮಾನ ಹುಟ್ಟಿಕೊಂಡಿತ್ತು. ಸದ್ಯ ‘ ಡಾರ್ಲಿಂಗ್ ‘ ಅನ್ನೋದು ನಭಾ ನಟೇಶ್ ಅವರ ಮುಂದಿನ ತೆಲುಗು ಸಿನಿಮಾ ಎನ್ನಲಾಗಿದೆ. ಈ ಸಿನಿಮಾದಲ್ಲಿ ಪ್ರಿಯದರ್ಶಿ ಪುಲಿಕೊಂಡ ಜೊತೆಯಾಗುತ್ತಿದ್ದಾರೆ ಎನ್ನಲಾಗಿದೆ. ಅಬ್ಬಾ! ಹೀಗೂ ಪ್ರಮೋಷನ್ ಮಾಡ್ಬೋದಾ? ಅಂಥ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವ ಸರದಿ ನೆಟ್ಟಿಗರದ್ದು.


ಮೂಲತಃ ಶೃಂಗೇರಿಯವರಾದ ನಭಾ ನಟೇಶ್ ‘ನನ್ನು ದೋಚಕುಂಡುವಾಟೆ’ ಸಿನಿಮಾ ಮೂಲಕ ಟಾಲಿವುಡ್ ಗೆ ಪದಾರ್ಪಣೆ ಮಾಡಿದರು. ಬಳಿಕ ‘ಇಸ್ಮಾರ್ಟ್ ಶಂಕರ್’ ಭಾರೀ ಯಶಸ್ಸು ತಂದು ಕೊಟ್ಟಿತು. ಇತ್ತೀಚೆಗೆ ಕೈಗೆ ಪೆಟ್ಟಾದ ಹಿನ್ನೆಲೆ ಸಿನಿರಂಗದಿಂದ ದೂರ ಉಳಿದಿದ್ದರು.

Continue Reading

FILM

ಶಿಲ್ಪಾ ಶೆಟ್ಟಿಗೆ ಶಾಕ್ ನೀಡಿದ ED; ಜಪ್ತಿ ಮಾಡಿದ ಆಸ್ತಿ ಎಷ್ಟು ಗೊತ್ತಾ!?

Published

on

ಮುಂಬೈ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್‌ ಕುಂದ್ರಾ ದಂಪತಿಗೆ ಜಾರಿ ನಿರ್ದೇಶನಾಲಯ ಅತಿದೊಡ್ಡ ಶಾಕ್‌ ನೀಡಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಿಲ್ಪಾ ಶೆಟ್ಟಿ ದಂಪತಿಗೆ ಸೇರಿದ ಬರೋಬ್ಬರಿ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹಾಗೂ ಫ್ಲಾಟ್‌ ಅನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಉದ್ಯಮಿ ರಾಜ್‌ ಕುಂದ್ರಾ ಅವರನ್ನು ಬಿಟ್‌ಕಾಯಿನ್ ಸೇರಿದಂತೆ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್‌ ಕುಂದ್ರಾ ಅವರಿಗೆ ಸಂಬಂಧಪಟ್ಟ ಸ್ಥಿರ ಮತ್ತು ಚರ ಆಸ್ತಿಯ ಜೊತೆಗೆ ಪುಣೆಯಲ್ಲಿರುವ ಬಂಗ್ಲೆ ಮತ್ತು ಷೇರುಗಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

2017ರಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ರಾಜ್‌ ಕುಂದ್ರಾ ಅವರನ್ನು 6,600 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ತನಿಖೆ ನಡೆಸಿತ್ತು. ಈ ಪ್ರಕರಣದಲ್ಲಿ ಬಿಟ್‌ಕಾಯಿನ್‌ ಮೂಲಕ ಹಲವರಿಗೆ ಶೇಕಡಾ 10 ರಷ್ಟು ಹಣ ರಿಟರ್ನ್‌ ಮಾಡುವ ಭರವಸೆ ನೀಡಿ ಮೋಸ ಮಾಡಿದ ಆರೋಪ ಕೂಡ ಕೇಳಿ ಬಂದಿತ್ತು. ಇದೇ ಹಗರಣದಲ್ಲಿ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ ಇದೀಗ ಆಸ್ತಿಯನ್ನು ವಶಕ್ಕೆ ಪಡೆದುಕೊಂಡಿದೆ ಎನ್ನಲಾಗಿದೆ. ಒಟ್ಟಾರೆ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್‌ ಕುಂದ್ರಾ ದಂಪತಿಯ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಸದ್ಯ ಜಾರಿ ನಿರ್ದೇಶನಾಲಯದ ವಶದಲ್ಲಿದೆ.

Continue Reading

LATEST NEWS

Trending