Connect with us

LATEST NEWS

ಪಿಲ್ಲರ್‌ಗೆ ಢಿಕ್ಕಿ ಹೊಡೆದು ಹೊತ್ತಿ ಉರಿದ ಟಿಪ್ಪರ್‌: ಚಾಲಕ ಸಜೀವ ದಹನ

Published

on

ಮಂಗಳೂರು: ಫ್ಲೈ ಓವರ್​ನ ಪಿಲ್ಲರ್​ಗೆ ಟಿಪ್ಪರ್‌ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಚಾಲಕನ ಸಮೇತ ಟಿಪ್ಪರ್​ ಲಾರಿ ಸುಟ್ಟು ಕರಕಲಾಗಿರುವ ಘಟನೆ ಮದ್ದೂರು ಪಟ್ಟಣದಲ್ಲಿ ಇಂದು ಬೆಳಗ್ಗಿನ ಜಾವದಲ್ಲಿ ನಡೆದಿದೆ.


ಮದ್ದೂರಿನ ಬೆಂಗಳೂರು-ಮೈಸೂರು ಹೆದ್ದಾರಿಯ ಎಲ್.ಐ.ಸಿ ಕಛೇರಿಯ ಮುಂಭಾಗವೇ ಘಟನೆ ನಡೆದಿದೆ.

ಬಿಡದಿಯಿಂದ ಮೈಸೂರಿಗೆ ಜೆಲ್ಲಿ ತುಂಬಿಕೊಂಡು ಟಿಪ್ಪರ್​ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಫ್ಲೈ ಓವರ್​ ಪಿಲ್ಲರ್​ಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.
ಡಿಕ್ಕಿ ರಭಸಕ್ಕೆ ಟಿಪ್ಪರ್ ನಜ್ಜುಗುಜ್ಜಾದ ಹಿನ್ನಲೆಯಲ್ಲಿ ಚಾಲಕ ವಾಹನದೊಳಗೆ ಸಿಲುಕಿ ಹೊರಬರಲಾಗದೇ ಟಿಪ್ಪರ್​ನಲ್ಲೇ ಸಜೀವ ದಹನವಾಗಿದ್ದಾನೆ.

ಮೃತ ಚಾಲಕನನ್ನು ಹಾಸನ ಮೂಲದ ದಿನೇಶ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಚಾಲಕನ ಶವವನ್ನು ಹೊರ ತೆಗೆದಿದ್ದಾರೆ.

ಈ ಘಟನೆ ಹಿನ್ನೆಲೆಯಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಯಿತು. ಬಳಿಕ ಟಿಪ್ಪರ್ ಪಕ್ಕಕ್ಕೆ ಸರಿಸಿ ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂಬಂಧ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

DAKSHINA KANNADA

ಪತಿ ಇನ್ನಿಲ್ಲ ಅನ್ನೋ ಸುದ್ದಿ ಗೊತ್ತಾಗಿ ಮತದಾನದ ಕೊನೆ ಆಸೆ ತೀರಿಸಿದ ಪತ್ನಿ.‌.!

Published

on

ಮಂಗಳೂರು : ಅವರ ಪತಿ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಅದೇ ದಿನ ರಾಜ್ಯದಲ್ಲಿ ಎರಡನೇ ಹಂತದ ಮತದಾನ ಕೂಡಾ ನಡೆದಿದೆ. ಆಕೆಗೆ ಪತಿ ಇನ್ನಿಲ್ಲ ಅನ್ನೋ ವಿಚಾರವನ್ನು ಯಾರೋ ತಿಳಿಸಿದ್ದಾರೆ. ಆದ್ರೆ ಆಕೆ ಪತಿಯ ಕೊನೆ ಆಸೆ ಈಡೇರಿಸಿದ ಬಳಿಕ ಪತಿಯ ಅಂತಿಮ ದರ್ಶನ ಪಡೆದಿದ್ದಾರೆ‌.

ಇದು ಮತದಾನ ಮಾಡದೇ ಇರುವವರಿಗೆ ಇವರೊಂದು ಪಾಠವಾಗಿದೆ. ಮಂಗಳವಾರ ರಾಜ್ಯದಲ್ಲಿ ನಡೆದ ಎರಡನೇ ಹಂತದ ಮತದಾನದಲ್ಲಿ ನಡೆದ ಘಟನೆ ಇದು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪ ಪಂಚಾಯತ್ ವ್ಯಾಪ್ತಿಯಲ್ಲಿ ಇದು ನಡೆದಿದೆ. ಇಲ್ಲಿನ ಆಡುಗೋಡಿನ ಕಲಾವತಿ ವೆಂಕಟೇಶ್ ಇವರ ಪತಿ ವೆಂಕಟೇಶ್ ಚುನಾವಣೆಯ ದಿನ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ  ಇಹಲೋಕ ತ್ಯಜಿಸಿದ್ದಾರೆ.  ಇನ್ನೇನು ಓಟು ಹಾಕಲು ಹೋಗಬೇಕು ಅನ್ನೋ ಅಷ್ಟರಲ್ಲಿ ಪತಿ ಇಹಲೋಕ ತ್ಯಜಿಸಿದ ಮಾಹಿತಿ ಪತ್ನಿ ಕಲಾವತಿಗೆ ಬಂದಿದೆ. ಆದ್ರೆ ಕಲಾವತಿ ಅವರು ಈ ವೇಳೆ ತಮ್ಮ ಅಮೂಲ್ಯ ಮತ ಚಲಾಯಿಸಿ, ಬಳಿಕ ಪತಿಯ ದೇಹವನ್ನು ನೋಡಲು ತೆರಳಿದ್ದಾರೆ.

ಪತಿ ಒಂದು ಪಕ್ಷದ ಅಭಿಮಾನಿಯಾಗಿದ್ದು ,ಆ ಪಕ್ಷದ ನಾಯಕನನ್ನು ಯಾವಾಗಲು ಜಪಿಸ್ತಾ ಇದ್ರು ಹಾಗಾಗಿ ಪತಿಯ ಕೊ‌‌ನೆಯ ಆಸೆಯಾಗಿ ಅವರ ಪ್ರೀಯಪಟ್ಟವರಿಗೆ ಮತ ಚಲಾಯಿಸಿದೆ ಅಂತ ಕಲಾವತಿ ಹೇಳಿಕೊಂಡಿದ್ದಾರೆ.

Continue Reading

DAKSHINA KANNADA

ಪ್ರಜ್ವಲ್‌ ಅಶ್ಲೀಲ್ ವಿಡಿಯೋ ಡಿಲೀಟ್ ಮಾಡಿ..! ಎಸ್‌ಐಟಿ ವಾರ್ನಿಂಗ್..!

Published

on

ಮಂಗಳೂರು : ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಕರಣ ಬೆಂಬತ್ತಿರುವ ಎಸ್ ಐ ಟಿ ಖಡಕ್ ವಾರ್ನ್ ಮಾಡಿದೆ. ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡದಂತೆ ಹೇಳಿದೆ. ಅಷ್ಟೇ ಅಲ್ಲದೆ, ಅಶ್ಲೀಲ ವಿಡಿಯೋ ಮೊಬೈಲ್ ನಲ್ಲಿ ಸ್ಟೋರ್ ಮಾಡಿಕೊಂಡಿದ್ದರೆ, ಒಂದು ವೇಳೆ ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ, ಯಾವುದೇ ಅಶ್ಲೀಲ ವೀಡಿಯೋ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಇದ್ದರೆ ಅದರ ರಚನಕಾರರು ನೀವು ಎಂದು ಪರಿಗಣಿಸಿ ಕ್ರಿಮಿನಲ್ ಕೇಸ್ ಬೀಳುತ್ತದೆ. ಆದ್ದರಿಂದ, ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

BANTWAL

ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!

Published

on

ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ‌ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.


ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending