Connect with us

    DAKSHINA KANNADA

    ಉಳ್ಳಾಲ : ಟಿಪ್ಪರ್‌ – ಸ್ಕೂಟರ್‌ ಅಪಘಾ*ತ; ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾ*ವು

    Published

    on

    ಉಳ್ಳಾಲ : ಟಿಪ್ಪರ್‌ ಹಾಗೂ ಸ್ಕೂಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂ*ಭೀರ ಗಾ*ಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಇಹಲೋಕ ತ್ಯಜಿಸಿದ್ದಾರೆ. ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್‌ ಆಚಾರ್ಯ ಎಂಬವರ ಪುತ್ರ ಗಣೇಶ್‌ ಆಚಾರ್ಯ ( 27) ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊ*ನೆಯುಸಿರೆಳೆದಿದ್ದಾರೆ.

    ಫಸ್ಟ್‌ ನ್ಯುರೋ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯಲು ಸಹಕರಿಸಿದ ಹಿತೈಷಿಗಳ, ಸಂಬಂಧಿಕರ, ಸ್ನೇಹಿತರ ಪ್ರಾರ್ಥನೆ ಕೊನೆಗೂ ಈಡೇರಲಿಲ್ಲ.

    ಜೂ.೨೮ ರಂದು ಗಣೇಶ ಪಾವೂರು ಹರೇಕಳ ಕಡೆಯಿಂದ ಕೊಣಾಜೆ ಕಡೆಗೆ ತೆರಳುವ ಸಂದರ್ಭ ಬೆಳಿಗ್ಗೆ ೧೧.೫೦ರ ವೇಳೆಗೆ ಹರೇಕಳ ಗ್ರಾಮ ಪಂಚಾಯತ್‌ ಕಚೇರಿಯ ಎದುರುಗಡೆ ಅಪ*ಘಾತ ಸಂಭವಿಸಿದೆ. ಟಿಪ್ಪರ್‌ ವಾಹನ ಚಾಲಕನ ದುಡುಕುತನ ಹಾಗೂ ನಿರ್ಲಕ್ಷ್ಯತನದ ಚಾಲನೆ ನಡೆಸಿ ಹಠಾತ್‌ ಬ್ರೇಕ್‌ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಸ್ಕೂಟರ್‌ ಡಿ*ಕ್ಕಿ ಹೊಡೆದು ಸ್ಕೂಟರ್‌ ಸಮೇತ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀ*ರವಾಗಿ ಗಾ*ಯಗೊಂಡಿದ್ದರು.

    ಗಾ*ಯಾಳುವನ್ನು ತಕ್ಷಣ ಟಿಪ್ಪರ್‌ ಚಾಲಕ ಸೇರಿದಂತೆ ಸ್ಥಳೀಯರು ನಾಟೆಕಲ್‌ ಕಣಚೂರು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಅಡ್ಯಾರ್‌ ಫಸ್ಟ್‌ ನ್ಯುರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಮಂಗಳೂರಿನಲ್ಲಿ ಎ.ಸಿ ಮೆಕ್ಯಾನಿಕ್‌ ಆಗಿದ್ದ ಗಣೇಶ್‌, ಮನೆಯ ಹಿರಿಯ ಪುತ್ರನಾಗಿದ್ದು, ಜೀವನಾಧಾರವಾಗಿದ್ದರು. ಮೃ*ತರು ತಾಯಿ, ತಂದೆ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

    ಇದನ್ನೂ ಓದಿ : ಮಂಗಳೂರು ಸಬ್ ಜೈಲಿನಲ್ಲಿ ಮಾರಾಮಾರಿ..! ಇಬ್ಬರು ಆಸ್ಪತ್ರೆಗೆ ದಾಖಲು

    ಟಿಪ್ಪರ್‌ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಮೃ*ತ ಗಣೇಶ್‌ ಆಚಾರ್ಯ ಶಸ್ತ್ರಚಿಕಿತ್ಸೆಗೆ ರೂ.10 ಲಕ್ಷ ಖರ್ಚಾಗುವುದರಿಂದ ಸ್ನೇಹಿತರು ವಾಟ್ಸ್ಯಾಪ್‌ ಮೂಲಕ ದಾನಿಗಳ ಸಹಕಾರವನ್ನು ಕೋರಿದ್ದರು.

    DAKSHINA KANNADA

    ದ.ಕ.ಜಿಲ್ಲೆಯ ನೂತನ ಎಸ್ ಪಿಯಾಗಿ ಯತೀಶ್. ಎನ್ ಅಧಿಕಾರ ಸ್ವೀಕಾರ‌‌

    Published

    on

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್‌ ಅವರು ಅಧಿಕಾರ ಸ್ವೀಕರಿಸಿದ್ದಾರೆ.

    ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ ಎಸ್‌ಪಿ ಯತೀಶ್ ಎನ್‌ ಅವರಿಗೆ ಗೌರವ ರಕ್ಷೆ ನೀಡುವ ಮೂಲಕ ಸ್ವಾಗತ ಕೋರಲಾಯಿತು. ಬಳಿಕ ಕಛೇರಿಯಲ್ಲಿ ನಿರ್ಗಮಿತ ಎಸ್‌ಪಿ ರಿಶ್ಯಂತ್ ಅವರಿಂದ ಯತೀಶ್ ಎನ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.

    ರಿಶ್ಯಂತ್ ಅವರಿಗೆ ಬೆಂಗಳೂರು ವೈರ್‌ಲೆಸ್‌ ವಿಭಾಗದ ಎಸ್‌ಪಿಯಾಗಿ ವರ್ಗಾವಣೆಯಾಗಿದ್ದು, ಮಂಡ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯತೀಶ್ ಎನ್‌ ಅವರನ್ನು ದಕ್ಷಿಣ ಕನ್ನಡ ಎಸ್‌ಪಿಯಾಗಿ ವರ್ಗಾವಣೆ ಮಾಡಲಾಗಿತ್ತು.

    Continue Reading

    DAKSHINA KANNADA

    ಫ್ರಿಡ್ಜ್​​​ ಮುಟ್ಟುವ ಮುನ್ನ ಹುಷಾರ್.. ವಿದ್ಯುತ್ ಶಾಕ್ ಹೊಡೆದು ತಾಯಿ-ಮಗಳು ಸಾವು

    Published

    on

    ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯಲ್ಲಿ ದಾರುಣ ಘಟನೆ ನಡೆದಿದ್ದು, ವಿದ್ಯುತ್ ಸ್ಪರ್ಶಿಸಿ ತಾಯಿ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    55 ವರ್ಷದ ಶೈದಾ ಅವರು ಫ್ರಿಡ್ಜ್​​​ನಲ್ಲಿಟ್ಟಿದ್ದ ಮಾವಿನ ಹಣ್ಣು ಹೊರತೆಗೆಯಲು ಹೋಗಿದ್ದರು. ಆಗ ವಿದ್ಯುತ್ ಶಾಕ್ ಹೊಡೆದಿದೆ. ಇದನ್ನು ಗಮನಿಸಿದ ಮಗಳು ಅಮ್ಮನ ರಕ್ಷಣೆಗೆ ಓಡಿ ಬಂದಿದ್ದಾಳೆ. ಈ ವೇಳೆ ಆಕೆಯೂ ವಿದ್ಯುತ್ ಶಾಕ್ ಹೊಡೆದಿದ್ದು, ಮಗಳು ಅಫ್ಸನಾ ಕಾತೂನ್ ಕೂಡ ಸಾವನ್ನಪ್ಪಿದ್ದಾಳೆ ಎಂದು ವರದಿಯಾಗಿದೆ.

    ಮೃತ ವ್ಯಕ್ತಿಯ ಮನೆಯಲ್ಲಿ ಮದುವೆ ಸಮಾರಂಭ ಇತ್ತು. ತಂಗಿಯ ಮದುವೆಯಲ್ಲಿ ಭಾಗಿಯಾಗಲು ತಾಯಿ ಮನೆಗೆ ಅಫ್ಸನಾ ಬಂದಿದ್ದಳು. ಬುಧವಾರ ನಡೆದ ಘಟನೆಯಲ್ಲಿ ತಾಯಿ ಮಗಳು ಸಾವನ್ನಪ್ಪಿದ್ದಾರೆ.

    ವಿಷಯ ತಿಳಿದು ಪೊಲೀಸರು ಮನೆಗೆ ಭೇಟಿ ನೀಡಿದ್ದರು. ಆದರೆ ಕುಟುಂಬಸ್ಥರು ಮರಣೋತ್ತರ ಪರೀಕ್ಷೆ ನಡೆಸಲು ನಿರಾಕರಿಸಿದ್ದಾರೆ. ಹೀಗಾಗಿ ಪೊಲೀಸರು ಪಂಚನಾಮೆ ನಡೆಸಿ ತಾಯಿ ಹಾಗೂ ಮಗಳ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.

    Continue Reading

    DAKSHINA KANNADA

    ಮಂಗಳೂರು: ಮಳೆಗಾಲ ಮುಗಿಯುವವರೆಗೆ ಕಟ್ಟಡ ಕಾಮಗಾರಿ ಸ್ಥಗಿತಕ್ಕೆ ಮನಪಾ ಆದೇಶ

    Published

    on

    ಮಂಗಳೂರು: ನಗರದ ಬಲ್ಮಠದಲ್ಲಿ ಕಟ್ಟಡ ಕಾಮಗಾರಿ ಅವಘಡದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ಮಹಾನಗರ ಪಾಲಿಕೆ ಮಳೆಗಾಲ ಮುಗಿಯುವವರೆಗೆ ಎಲ್ಲಾ ಕಟ್ಟಡದ ಕಾಮಗಾರಿ ಸ್ಥಗಿತಕ್ಕೆ ಆದೇಶಿಸಿದೆ.

    ಇಂದಿನಿಂದ ಯಾವುದೇ ಕಟ್ಟಡದ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಪ್ರಾರಂಭಿಸಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ನಿಲ್ಲಿಸುವಂತೆ ಸೂಚನೆ ನೀಡಿದೆ. ಅಗತ್ಯ ಮುನ್ನೆಚ್ಚರಿಕೆ ಕ್ರಮ ಅಳವಡಿಸಿಕೊಂಡು ಕಾಮಗಾರಿಯನ್ನು ಸ್ಥಗಿತಗೊಳಿಸಲು ಸೂಚನೆ ನೀಡಿದೆ.

    ಅವೈಜ್ಞಾನಿಕವಾಗಿ ಭೂಮಿಯನ್ನು ಅಗೆದು ಹಾಕದಂತೆ ಸೂಚನೆ ನೀಡಿದೆ. ಆದೇಶ ಉಲ್ಲಂಘನೆ ಕಂಡುಬಂದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮದ ಎಚ್ಚರಿಕೆ ನೀಡಿ ಮನಾಪ ಆಯುಕ್ತರು ಕಟ್ಟುನಿಟ್ಟಾಗಿ ಆದೇಶಿಸಿದ್ದಾರೆ.

    Continue Reading

    LATEST NEWS

    Trending