LATEST NEWS
‘ಟಿಪ್ಪು ಸುಲ್ತಾನ್ ಪ್ರತಾಪನಂತೆ ಬೆತ್ತಲೆ ಲೇಖನಿ ಸಿಂಹವಲ್ಲ’- ಕೆ.ಅಶ್ರಫ್
ಮಂಗಳೂರು: ಬೆತ್ತಲೆ ಜಗತ್ತಿನಲ್ಲಿ ಸುಳ್ಳುಗಳನ್ನು ಪೋಣಿಸಿ ಬರೆದು ಇಸ್ಲಾಮೂ ಫೋಬಿಯಾದ ಮೂಲಕ ಈ ರಾಜ್ಯದ ಹಿಂದುಳಿದ, ದಲಿತರ, ಪರಿಶಿಷ್ಟರ ಮತ್ತು ಬುಡಕಟ್ಟು ಜನಾಂಗದ ದೃಷ್ಟಿಯಲ್ಲಿ ಈ ದೇಶದ ಮುಸ್ಲಿಮರ ಬಗ್ಗೆ ವೈರತ್ವವನ್ನು ಸೃಷ್ಟಿಸಿ,ಕೇಶವ ಕೃಪಾದಿಗಳಿಂದ ಮೆಚ್ಚಿಸಿಕೊಂಡು, ಸಂಸದ ದೀಕ್ಷೆ ಪಡೆದ ಪ್ರತಾಪ ಬೆತ್ತಲೆ ಲೇಖನಿ ಸಿಂಹನಿಗೆ ಏನು ಅರಿವಿದೆ ಟಿಪ್ಪುವಿನ ಹುಲಿಯ ಖಡ್ಗ ಘರ್ಜನೆ ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಕೆ.ಅಶ್ರಫ್ ಹೇಳಿದ್ದಾರೆ.
ಲೇಖಕ ಪ್ರತಾಪಸಿಂಹನಿಗೆ ತಿರುಗೇಟು ನೀಡಿ ಮಾತನಾಡಿದ ಅವರು ‘ಪ್ರತಾಪನು ಇಂದು ಸಲ್ಲಿಸುತ್ತಿರುವ ವೈದಿಕ ನಿಷ್ಟೆಯಂತೆಯೆ ಅಂದು ಟಿಪ್ಪುವಿನ ಆಚೆಗಿನ ಪ್ರಾಂತ್ಯ ರಾಜರು, ಪೇಶ್ವೆ ವೈದಿಕರಿಗೆ ನಿಷ್ಠೆ ಸೂಚಿಸಿದ ಕಾರಣಕ್ಕೆ ಭಾರತವು ಬ್ರಿಟಿಷರಿಂದ ಸ್ವಾತಂತ್ರ ಹೊಂದಲು ನೂರ ಐವತ್ತು ವರುಷ ತಡವಾಯಿತು.
ಟಿಪ್ಪು ಈ ನಾಡಿನ ನೈಜ ಸ್ವಾತಂತ್ರ್ಯ ಹೋರಾಟಗಾರ,ಟಿಪ್ಪು ಅನುಷ್ಟಾನ ಗೊಳಿಸಿದ ಪೊಲೀಸ್ ವ್ಯವಸ್ಥೆ, ಭೂ ಸುಧಾರಣೆ ಕಾಯ್ದೆ,ಪಾಳೇಗಾರಿಕೆ ರದ್ದತಿ,ಕೃಷಿ ಕ್ಷೇತ್ರದ ಉತ್ತೇಜನ, ಉದ್ದಿಮೆ ಪ್ರಗತಿಯಿಂದಾಗಿಯೆ, ಬಹುಷ್ಯ ಪ್ರತಾಪನ ವೈದಿಕ ಪೂರ್ವಜರಿಗೆ ಸೋಮಾರಿತನದಿಂದ ಜನರನ್ನು ಜೀತದ ಆಳುಗಳಾಗಿ ಮಾಡಿ ಅವರನ್ನು ಪೀಳಿಗೆಗಳಿಂದ ಪೀಳಿಗೆವರೆಗೆ ಲೂಟಿ ಮಾಡಿ ಭಕ್ಷಿಸುವ ವ್ಯವಸ್ಥೆ ತಪ್ಪಿ ಹೋಯಿತೆಂದು ಪರಿತಪಿಸಿ, ಪ್ರತಾಪನಲ್ಲಿ ಹೇಳಿ, ಕೇಶವ ಕೃಪಾದಿಗಳು, ಟಿಪ್ಪುವಿನ ವಿರುದ್ಧ ಹೇಳಿಕೆ ನೀಡಲು ಫರ್ಮಾನು ಹೊರಡಿಸಿರಬಹುದು.
ಅಂದು ಮೈಸೂರಿನ ಚಿಕ್ಕ ದೇವ ಅರಸುರ ವರಿಗೆ ಬೆಂಗಾವಲು ಆಗಿ ಹೈದರ್ ಆಲಿ ನಿಂತರೆ,ಆಮೇಲಿನ ಟಿಪ್ಪು ಆಡಳಿತದ ಇತಿಹಾಸದ ಅದ್ಬುತ. ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಉದ್ದೇಶಿತ ಜಲಾಶಯಕ್ಕೆ ಅಡಿಗಲ್ಲು ಹಾಕಿದ ಅಂದಿನ ಯೋಜನೆ ಟಿಪ್ಪು ಸರಕಾರದ ಕಾರ್ಯಕ್ರಮವಾಗಿದ್ದು ಬ್ರಿಟಿಷ್ ಇತಿಹಾಸಕಾರರಿಂದ ಮೇಕಿಂಗ್ ಹಿಸ್ಟರಿ’ ಆಗಿದ್ದನ್ನು ಪ್ರತಾಪ ಸರಿಯಾಗಿಯೇ ಅರಿಯಲಿ.
ಹೈದರ್ ಪುತ್ರ, ಫತೇ ಮೊಹಮ್ಮದ್ ಎಂಬ ಧೀರ ದಕ್ಷಿಣ ಏಷಿಯಾದ ಜನಪ್ರೆಮಿ ರಾಜನಿಗೆ ‘ ಮೈಸೂರಿನ ಹುಲಿ ‘ ಎಂದು ಬಿರುದು ನೀಡಿದ್ದು, ಭಾರತ ಉಪಖಂಡದ ಯಾವುದೇ ಆರ್ಯರಲ್ಲ,
ಬದಲಾಗಿ ಹದಿನೆಂಟನೇ ಶತಮಾನದಲ್ಲಿ ಒಂದು ಬೃಹತ್ ವಸಾಹತು ಶಾಹಿ ಚಕ್ರಾಧಿಪತ್ಯ ಹೊಂದಿದ್ದ, ಅಂತರ್ ಖಂಡ ಪಾರಮತ್ಯ ಹೊಂದಿದ್ದ, ಸೂರ್ಯ ಮುಳುಗದ ನಾಡಿನ ಆಳ್ವಿಕೆ ಹೊಂದಿದ್ದ,
ಲಕ್ಷ ಗಟ್ಟಲೆ ಭೂ ಕಾಲಾಳು ಸೈನ್ಯ, ಹತ್ತಾರು ಜಲ ಯುದ್ದ ನೌಕೆ,ಸಾವಿರಾರು ಯುದ್ದ ಫಿರಂಗಿಗಳನ್ನು ಹೊಂದಿದ್ದ, ತನ್ನ ಸೇನೆ ಅದೇ ಫತೇ ಮೊಹಮ್ಮದ್ ನಿಂದಾಗಿ ಎರಡು ಬಾರಿ ಸೋತು ಶರಣಾದ, ಅದೇ ಫತೇ ಮೊಹಮ್ಮದ್ ನ ಪರಾಕ್ರಮವನ್ನು ಇತರರಿಂದ ಕೇಳಿ ಬೆಚ್ಚಿ ಬೀಳುತ್ತಿದ್ದ, ಫತೇ ಮೊಹಮ್ಮದ್ ಯುದ್ದ ರಣಾಂಗಣದಲ್ಲಿ ಹೋರಾಡಿ ವೀರ ಮರಣ ಹೊಂದಿ ಹುತಾತ್ಮನಾದ ಎಂದು ನಂಬಲು ತಯಾರಿಲ್ಲದ ಆ ಬೃಹತ್ ಬ್ರಿಟಿಷ್ ಸೇನೆಯ ಉನ್ನತರು ಪ್ರಧಾನಗೈದ ಬಿರುದು ಆಗಿದೆ.
‘ದಿ ಟೈಗರ್ ಆಫ್ ಮೈಸೂರ್ ‘. ಟಿಪ್ಪು ಎಂಬುದು ಅಪೇಕ್ಷಿಸಿ ಪಡೆದ ಬಿರುದು ಅಲ್ಲ, ಬದಲಾಗಿ ಟಿಪ್ಪುವಿನ ಆಡಳಿತ ವೈರಿಗಳು ನೀಡಿದ ಬಿರುದು. ಪ್ರತಾಪ ಟಿಪ್ಪುವನ್ನು ಹುಲಿಯಲ್ಲ ಎಂದು ಹೇಳುವ ಭರದಲ್ಲಿ ಈಗಾಗಲೇ, ಅದೇ ಪ್ರತಾಪ ತನ್ನ ಬೆತ್ತಲೆ ಜಗತ್ತಿನ ತನ್ನ ಲೇಖನಿಯಲ್ಲಿ ತನ್ನ ಸಿಂಹತನವನ್ನು ಕಳೆದುಕೊಂಡು ನರಿ ಆದದ್ದು ವಿಪರ್ಯಾಸ. ಹುಲಿ, ಹುಲಿಯೆ, ನರಿ ನರಿಯೇ,ಪ್ರತಾಪ ಅರಿಯಲಿ.
FILM
ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ
ಉಡುಪಿ: ಇಂದು ಬೆಳಂಬೆಳಗ್ಗೆ ರಾಜಕೀಯ ನಾಯಕರು, ಜನಸಾಮಾನ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸಿದರೆ ಉಡುಪಿಯ ಮತಗಟ್ಟೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತದಾನ ಮಾಡಿದ್ದಾರೆ.
ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 197 ಕ್ಕೆ ಆಗಮಿಸಿ ಮತ ಚಲಾಯಿಸಿದರು. ರಕ್ಷಿತ್ ಶೆಟ್ಟಿ ಮನೆಯ ಮುಂಭಾಗದಲ್ಲೇ ಇರುವ ಮತಗಟ್ಟೆಗೆ ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದರು. ರಕ್ಷಿತ್ ಶೆಟ್ಟಿ ಈ ಸಂದರ್ಭದಲ್ಲಿ ಸೆಲೆಬ್ರೆಟಿಯನ್ನು ಕಂಡ ಇತರ ಮತದಾರರು ಹರ್ಷಚಿತ್ತರಾಗಿ ಸೆಲ್ಫೆ ಕ್ಲಿಕಿಸಲು ಮುಂದಾದ ಘಟನೆ ನಡೆಯಿತು.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
LATEST NEWS
ಅಯೋಧ್ಯೆಯ ಅಂಗಳದಲ್ಲಿ ಶೂಟಿಂಗ್ ಮಾಡಿದ ಮೊಟ್ಟ ಮೊದಲ ಕನ್ನಡ ಸೀರಿಯಲ್ ಇದು?
ಮಹಿಳೆಯರಿಗೆ ಸೀರಿಯಲ್ ನೋಡುವುದಂದರೆ ಒಂತಾರ ಹುಚ್ಚು. ಮನೆಯಲ್ಲೇ ಇರುವ ಮಹಿಳೆಯರು ಕೆಲವೊಮ್ಮೆ ಬೆಳಗ್ಗೆಯಿಂದ ಸಂಜೆಯವರೆಗೆ ಟಿವಿಯಲ್ಲಿ ಸೀರಿಯಲ್ ನೋಡುತ್ತಾ ಇರುತ್ತಾರೆ. ಸೀರಿಯಲ್ ನೋಡೊದು ಮಾತ್ರ ಅಲ್ಲ ಅದರ ಬಗ್ಗೆ ಸಂವಾದ ಕೂಡ ಮನೆಯವರಲ್ಲಿ ಮಾಡುತ್ತಾ ಇರುತ್ತಾರೆ.
ಈ ನಡುವೆ ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ದೇಶದ ಜನರು ತುಂಬಾ ಸಂತೋಷದಲ್ಲಿದ್ದಾರೆ. ಅದೆಷ್ಟೋ ಜನ ಹಿಂದೂಗಳ ಕನಸು ನನಸಾದ ಕ್ಷಣ ಎಂದು ಹೇಳಬಹುದು. ಒಮ್ಮೆಯಾದ್ರೂ ಅಯೋಧ್ಯೆಗೆ ಹೋಗಿಬರಬೇಕು ಅಂತಾ ಪ್ಲಾನ್ ಅಂತೂ ಮಾಡ್ತಾ ಇರೋದು ಕಂಡಿತ. ಕೆಲವರು ಹೋಗಿ ಬಂದಿದ್ದಾರೆ ಕೂಡ ಆದರೆ ಇನ್ನು ಕೆಲವರು ಇನ್ನು ಹೋಗಬೇಕು. ಇದುವರೆಗೆ ಅಯೋಧ್ಯೆ ರಾಮಮಂದಿರದಲ್ಲಿ ಯಾವೂದೇ ರೀತಿದ ಫಿಲ್ಮ್ ಶೂಟಿಂಗ್, ಸೀರಿಯಲ್, ಕಿರುಚಿತ್ರ ಯಾವೂದು ಶೂಟಿಂಗ್ ಆಗಲಿಲ್ಲ. ಆದರೇ ಇದೇ ಮೊದಲ ಬಾರಿಗೇ ಕನ್ನಡ ಸೀರಿಯಲ್ ಇಂಡಸ್ಟ್ರಿಯಲ್ಲಿ ಕನ್ಯಾದಾನ ಸೀರಿಯಲ್ ಹೊಸ ದಾಖಲೆ ಬರೆದಿದೆ.
ಉದಯ ಟಿವಿಯಲ್ಲಿ ಪ್ರಸಾರವಾಗೋ ಕನ್ಯಾದಾನ ಧಾರಾವಾಹಿ ಈಗ ಹೊಸ ದಾಖಲೆ ಬರೆದಿದ್ದಾರೆ. ಕನ್ನಡ ಟೆಲಿವಿಷನ್ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಯೋಧ್ಯೆಯಲ್ಲಿ ಚಿತ್ರೀಕರಣಗೊಂಡ ಮೊಟ್ಟ ಮೊದಲ ಸೀರಿಯಲ್ ಎಂಬ ಹೆಗ್ಗಳಿಕೆಗೆ ಕನ್ಯಾದಾನ ಧಾರಾವಾಹಿ ಪಾತ್ರವಾಗಿದೆ.
ಜನವರಿ 22ರಂದು ಅಂದ್ರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಇಲ್ಲಿಯವೆರೆಗೂ ಯಾವುದೇ ಸಿನಿಮಾವಾಗ್ಲಿ, ಅಥವಾ ಸೀರಿಯಲ್ ಆಗ್ಲಿ ಶೂಟ್ ಮಾಡಿರಲಿಲ್ಲ. ಆದ್ರೆ, ಕನ್ಯಾದಾನ ಧಾರವಾಹಿ ತಂಡ ಫಸ್ಟ್ಟೈಮ್ ಅಯೋಧ್ಯೆಗೆ ಹೋಗಿ ಚಿತ್ರೀಕರಣ ಮಾಡಿದೆ.
ಈ ಸೀರಿಯಲ್ನಲ್ಲಿ ಬಹುತೇಕ ಪಾತ್ರಗಳು ಒಂದಲ್ಲ ಒಂದು ಸಮಸ್ಯೆ ಎದುರಿಸ್ತಿವೆ. ಹಾಗಾಗಿ ರಾಮನ ದರ್ಶನ ಪಡೆದು ಆ ಕಷ್ಟಗಳಿಂದ ಹೊರಬರಬೇಕು ಎಂದು ನಿರ್ಧರಿಸಿ, ರಾಮಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಶೂಟಿಂಗ್ ಮಾಡಿರೋ ಬಗ್ಗೆ ಸೀರಿಯಲ್ ತಂಡ ಸಂತಸ ಹಂಚಿಕೊಂಡಿದೆ.