LATEST NEWS
‘ಟಿಪ್ಪು ಸುಲ್ತಾನ್ ಪ್ರತಾಪನಂತೆ ಬೆತ್ತಲೆ ಲೇಖನಿ ಸಿಂಹವಲ್ಲ’- ಕೆ.ಅಶ್ರಫ್
ಮಂಗಳೂರು: ಬೆತ್ತಲೆ ಜಗತ್ತಿನಲ್ಲಿ ಸುಳ್ಳುಗಳನ್ನು ಪೋಣಿಸಿ ಬರೆದು ಇಸ್ಲಾಮೂ ಫೋಬಿಯಾದ ಮೂಲಕ ಈ ರಾಜ್ಯದ ಹಿಂದುಳಿದ, ದಲಿತರ, ಪರಿಶಿಷ್ಟರ ಮತ್ತು ಬುಡಕಟ್ಟು ಜನಾಂಗದ ದೃಷ್ಟಿಯಲ್ಲಿ ಈ ದೇಶದ ಮುಸ್ಲಿಮರ ಬಗ್ಗೆ ವೈರತ್ವವನ್ನು ಸೃಷ್ಟಿಸಿ,ಕೇಶವ ಕೃಪಾದಿಗಳಿಂದ ಮೆಚ್ಚಿಸಿಕೊಂಡು, ಸಂಸದ ದೀಕ್ಷೆ ಪಡೆದ ಪ್ರತಾಪ ಬೆತ್ತಲೆ ಲೇಖನಿ ಸಿಂಹನಿಗೆ ಏನು ಅರಿವಿದೆ ಟಿಪ್ಪುವಿನ ಹುಲಿಯ ಖಡ್ಗ ಘರ್ಜನೆ ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಕೆ.ಅಶ್ರಫ್ ಹೇಳಿದ್ದಾರೆ.
ಲೇಖಕ ಪ್ರತಾಪಸಿಂಹನಿಗೆ ತಿರುಗೇಟು ನೀಡಿ ಮಾತನಾಡಿದ ಅವರು ‘ಪ್ರತಾಪನು ಇಂದು ಸಲ್ಲಿಸುತ್ತಿರುವ ವೈದಿಕ ನಿಷ್ಟೆಯಂತೆಯೆ ಅಂದು ಟಿಪ್ಪುವಿನ ಆಚೆಗಿನ ಪ್ರಾಂತ್ಯ ರಾಜರು, ಪೇಶ್ವೆ ವೈದಿಕರಿಗೆ ನಿಷ್ಠೆ ಸೂಚಿಸಿದ ಕಾರಣಕ್ಕೆ ಭಾರತವು ಬ್ರಿಟಿಷರಿಂದ ಸ್ವಾತಂತ್ರ ಹೊಂದಲು ನೂರ ಐವತ್ತು ವರುಷ ತಡವಾಯಿತು.
ಟಿಪ್ಪು ಈ ನಾಡಿನ ನೈಜ ಸ್ವಾತಂತ್ರ್ಯ ಹೋರಾಟಗಾರ,ಟಿಪ್ಪು ಅನುಷ್ಟಾನ ಗೊಳಿಸಿದ ಪೊಲೀಸ್ ವ್ಯವಸ್ಥೆ, ಭೂ ಸುಧಾರಣೆ ಕಾಯ್ದೆ,ಪಾಳೇಗಾರಿಕೆ ರದ್ದತಿ,ಕೃಷಿ ಕ್ಷೇತ್ರದ ಉತ್ತೇಜನ, ಉದ್ದಿಮೆ ಪ್ರಗತಿಯಿಂದಾಗಿಯೆ, ಬಹುಷ್ಯ ಪ್ರತಾಪನ ವೈದಿಕ ಪೂರ್ವಜರಿಗೆ ಸೋಮಾರಿತನದಿಂದ ಜನರನ್ನು ಜೀತದ ಆಳುಗಳಾಗಿ ಮಾಡಿ ಅವರನ್ನು ಪೀಳಿಗೆಗಳಿಂದ ಪೀಳಿಗೆವರೆಗೆ ಲೂಟಿ ಮಾಡಿ ಭಕ್ಷಿಸುವ ವ್ಯವಸ್ಥೆ ತಪ್ಪಿ ಹೋಯಿತೆಂದು ಪರಿತಪಿಸಿ, ಪ್ರತಾಪನಲ್ಲಿ ಹೇಳಿ, ಕೇಶವ ಕೃಪಾದಿಗಳು, ಟಿಪ್ಪುವಿನ ವಿರುದ್ಧ ಹೇಳಿಕೆ ನೀಡಲು ಫರ್ಮಾನು ಹೊರಡಿಸಿರಬಹುದು.
ಅಂದು ಮೈಸೂರಿನ ಚಿಕ್ಕ ದೇವ ಅರಸುರ ವರಿಗೆ ಬೆಂಗಾವಲು ಆಗಿ ಹೈದರ್ ಆಲಿ ನಿಂತರೆ,ಆಮೇಲಿನ ಟಿಪ್ಪು ಆಡಳಿತದ ಇತಿಹಾಸದ ಅದ್ಬುತ. ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಉದ್ದೇಶಿತ ಜಲಾಶಯಕ್ಕೆ ಅಡಿಗಲ್ಲು ಹಾಕಿದ ಅಂದಿನ ಯೋಜನೆ ಟಿಪ್ಪು ಸರಕಾರದ ಕಾರ್ಯಕ್ರಮವಾಗಿದ್ದು ಬ್ರಿಟಿಷ್ ಇತಿಹಾಸಕಾರರಿಂದ ಮೇಕಿಂಗ್ ಹಿಸ್ಟರಿ’ ಆಗಿದ್ದನ್ನು ಪ್ರತಾಪ ಸರಿಯಾಗಿಯೇ ಅರಿಯಲಿ.
ಹೈದರ್ ಪುತ್ರ, ಫತೇ ಮೊಹಮ್ಮದ್ ಎಂಬ ಧೀರ ದಕ್ಷಿಣ ಏಷಿಯಾದ ಜನಪ್ರೆಮಿ ರಾಜನಿಗೆ ‘ ಮೈಸೂರಿನ ಹುಲಿ ‘ ಎಂದು ಬಿರುದು ನೀಡಿದ್ದು, ಭಾರತ ಉಪಖಂಡದ ಯಾವುದೇ ಆರ್ಯರಲ್ಲ,
ಬದಲಾಗಿ ಹದಿನೆಂಟನೇ ಶತಮಾನದಲ್ಲಿ ಒಂದು ಬೃಹತ್ ವಸಾಹತು ಶಾಹಿ ಚಕ್ರಾಧಿಪತ್ಯ ಹೊಂದಿದ್ದ, ಅಂತರ್ ಖಂಡ ಪಾರಮತ್ಯ ಹೊಂದಿದ್ದ, ಸೂರ್ಯ ಮುಳುಗದ ನಾಡಿನ ಆಳ್ವಿಕೆ ಹೊಂದಿದ್ದ,
ಲಕ್ಷ ಗಟ್ಟಲೆ ಭೂ ಕಾಲಾಳು ಸೈನ್ಯ, ಹತ್ತಾರು ಜಲ ಯುದ್ದ ನೌಕೆ,ಸಾವಿರಾರು ಯುದ್ದ ಫಿರಂಗಿಗಳನ್ನು ಹೊಂದಿದ್ದ, ತನ್ನ ಸೇನೆ ಅದೇ ಫತೇ ಮೊಹಮ್ಮದ್ ನಿಂದಾಗಿ ಎರಡು ಬಾರಿ ಸೋತು ಶರಣಾದ, ಅದೇ ಫತೇ ಮೊಹಮ್ಮದ್ ನ ಪರಾಕ್ರಮವನ್ನು ಇತರರಿಂದ ಕೇಳಿ ಬೆಚ್ಚಿ ಬೀಳುತ್ತಿದ್ದ, ಫತೇ ಮೊಹಮ್ಮದ್ ಯುದ್ದ ರಣಾಂಗಣದಲ್ಲಿ ಹೋರಾಡಿ ವೀರ ಮರಣ ಹೊಂದಿ ಹುತಾತ್ಮನಾದ ಎಂದು ನಂಬಲು ತಯಾರಿಲ್ಲದ ಆ ಬೃಹತ್ ಬ್ರಿಟಿಷ್ ಸೇನೆಯ ಉನ್ನತರು ಪ್ರಧಾನಗೈದ ಬಿರುದು ಆಗಿದೆ.
‘ದಿ ಟೈಗರ್ ಆಫ್ ಮೈಸೂರ್ ‘. ಟಿಪ್ಪು ಎಂಬುದು ಅಪೇಕ್ಷಿಸಿ ಪಡೆದ ಬಿರುದು ಅಲ್ಲ, ಬದಲಾಗಿ ಟಿಪ್ಪುವಿನ ಆಡಳಿತ ವೈರಿಗಳು ನೀಡಿದ ಬಿರುದು. ಪ್ರತಾಪ ಟಿಪ್ಪುವನ್ನು ಹುಲಿಯಲ್ಲ ಎಂದು ಹೇಳುವ ಭರದಲ್ಲಿ ಈಗಾಗಲೇ, ಅದೇ ಪ್ರತಾಪ ತನ್ನ ಬೆತ್ತಲೆ ಜಗತ್ತಿನ ತನ್ನ ಲೇಖನಿಯಲ್ಲಿ ತನ್ನ ಸಿಂಹತನವನ್ನು ಕಳೆದುಕೊಂಡು ನರಿ ಆದದ್ದು ವಿಪರ್ಯಾಸ. ಹುಲಿ, ಹುಲಿಯೆ, ನರಿ ನರಿಯೇ,ಪ್ರತಾಪ ಅರಿಯಲಿ.
kerala
5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.
ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.
ಆನ್ ಲೈನ್ ಗೇಮಿಂಗ್ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?
ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್ಲೈನ್ ಗೇಮಿಂಗ್ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
LATEST NEWS
WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.
ಸೀಟ್ ಗಾಗಿ ಎಡವಟ್ಟು :
ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.
ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್ಗೆ 60 ರೂ., ಹಾಲ್ಫ್ಗೆ 40 ರೂ.
ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.
ರೋಹಿತ್ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.
ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ